ಕರಾವಳಿ

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ

ಸಮಗ್ರ ನ್ಯೂಸ್‌ : ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನುಗ್ಗಿದ ಕಳ್ಳನೋರ್ವ ಹಣಕ್ಕಾಗಿ ತಡಕಾಡಿದ ಘಟನೆ ಮಾ. 20ರಂದು ಬೆಳಕಿಗೆ ಬಂದಿದೆ. ಮಾ. 19ರ ಸಂಜೆ ಸಂಘದ ಕಚೇರಿಯನ್ನು ಬಂದ್‌ ಮಾಡಿ ಸಿಬಂದಿ ತೆರಳಿದ್ದು, ಬೆಳಗ್ಗೆ ಬರುವಾಗ ಕಚೇರಿಯ ಷಟರ್‌ನ ಬೀಗ ಮುರಿದು ಕಳ್ಳನೋರ್ವ ಒಳಗೆ ನುಗ್ಗಿದ್ದಾನೆ. . ಈತ ಹಣಕ್ಕಾಗಿ ಮೇಜಿನ ಡ್ರಾವರ್‌ಗಳನ್ನು ಮುರಿದು ಸುಮಾರು ಒಂದೂವರೆ ಸಾವಿರ ರೂ. ಎಗರಿಸಿ, ಪರಾರಿಯಾಗಿದ್ದಾನೆ. ಸ್ಥಳೀಯ ಮನೆಯೊಂದರಿಂದ ಪಿಕ್ಕಾಸನ್ನು ತಂದು ಷಟರ್‌ನ ಬೀಗ ಮುರಿಯಲು ಬಳಸಿದ್ದ

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ Read More »

ಮಂಗಳೂರು: 3 ಲಕ್ಷ ಮೌಲ್ಯದ 1.65 ಕೆಜಿ ಡ್ರಗ್ ವಶ

ಸಮಗ್ರ ನ್ಯೂಸ್:‌ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಒಟ್ಟು 8 ಖರ್ಚು ವೆಚ್ಚ ಪರೀವೀಕ್ಷಕರರನ್ನು, 72 ಪ್ಲೈಯಿಂಗ್ ಸ್ವ್ಯಾಡ್ (ಎಫ್.ಎಸ್.ಟಿ), 69 ಎಸ್.ಎಸ್.ಟಿ ತಂಡಗಳು ಮತ್ತು 8 ಅಬಕಾರಿ ತಂಡಗಳನ್ನು

ಮಂಗಳೂರು: 3 ಲಕ್ಷ ಮೌಲ್ಯದ 1.65 ಕೆಜಿ ಡ್ರಗ್ ವಶ Read More »

ಉಡುಪಿ: ಬಾಡಿಗೆ ಹಣ ಪಾವತಿಸುವಂತೆ ಜೀವ ಬೆದರಿಕೆ|ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಜೀವ ಬೆದರಿಕೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಳಂಬೆಯ ಸುರೇಶ್‌ ಅವರು ಪ್ರಶಾಂತ್‌ ಅವರಿಗೆ ಅಂಗಡಿಯನ್ನು ಬಾಡಿಗೆಗೆ ನೀಡಿದ್ದರು. ಆದರೆ ಅವರು ಅಂಗಡಿಯ ಬಾಡಿಗೆ ಹಣವನ್ನು ಪಾವತಿಸಿರಲಿಲ್ಲ. ಡಿ. 4ರಂದು ರಾತ್ರಿ ಪ್ರಶಾಂತ್‌ ಅವರು ಸುರೇಶ್‌ ಅವರಿಗೆ ಕರೆಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಇದೇ ಕಾರಣದಿಂದ ಆಘಾತಕ್ಕೊಳಗಾಗಿ ಸುರೇಶ್‌ ಅವರು ಡಿ. 8ರಂದು ಸಾವನ್ನಪ್ಪಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಬಾಡಿಗೆ ಹಣ ಪಾವತಿಸುವಂತೆ ಜೀವ ಬೆದರಿಕೆ|ಯುವಕ ಆತ್ಮಹತ್ಯೆ Read More »

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ| ವೇಣೂರು ಪೊಲೀಸರ ದಾಳಿ

ಸಮಗ್ರ ನ್ಯೂಸ್ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ, ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣಾ ಪಿಎಸ್ಟ್ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 90

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ| ವೇಣೂರು ಪೊಲೀಸರ ದಾಳಿ Read More »

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಎಲ್ಎ, ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಾಗಾರ

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾ.14ರಂದು ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ನ ಬಿಎಲ್ಎ ಗಳಿಗೆ ಹೊಸ ಮತದಾರರ ಪಟ್ಟಿಯ ಸೇರ್ಪಡೆ ಹಾಗೂ ತಿದ್ದುಪಡಿಯ ತರಬೇತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರುಗಳಿಗೆ ಪಕ್ಷ ಸಂಘಟನೆಯ ತರಬೇತಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರ ನಿರ್ದೇಶನದಂತೆ ಹಾಗೂ ಬಿಎಲ್ಎ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿಯವರ ಉಪಸ್ಥಿತಿಯಲ್ಲಿ ಮಹಮ್ಮದ್ ಬಡಗನ್ನೂರು

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಎಲ್ಎ, ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಾಗಾರ Read More »

ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ

ಸಮಗ್ರ ನ್ಯೂಸ್‌ : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದಿದ್ದಾರೆ. ಮಾರ್ಚ್ 12 ತಮಿಳುನಾಡು ಮೂಲದ MSV ವರದರಾಜು ಎಂಬ ಸರಕು ಸಾಗಣೆಯ ನೌಕೆ ಮಂಗಳೂರು ಹಳೇ ಬಂದರಿಂದ ಸರಕು ತುಂಬಿಸಿ ಲಕ್ಷದ್ವೀಪದತ್ತ ಅಗತಿ ದ್ವೀಪದತ್ತ ಪ್ರಯಾಣ ಬೆಳೆಸಿತ್ತು. ಹಡಗಿನಲ್ಲಿ ಕ್ಯಾಪ್ಟನ್ ಭಾಸ್ಕರನ್, ಸಿಬಂದಿಗಳಾದ

ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ Read More »

ಬಂಟ್ವಾಳ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಎಂದು ಗುರುತಿಸಲಾಗಿದೆ. ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ಯಾದರೂ ಸ್ವಲ್ಪ

ಬಂಟ್ವಾಳ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು Read More »

ಕೊಣಾಜೆ: ಗಾಂಜಾ ಮಾರಾಟ|ಆರೋಪಿ ವಶ

ಸಮಗ್ರ ನ್ಯೂಸ್:‌ ಲವ ಕುಶ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೃದ್ಧರೋರ್ವರನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಕೊಣಾಜೆ ನರಿಂಗಾನ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮೂಲತಃ ಕಾಟಿಪಳ್ಳ ನಿವಾಸಿ, ಪ್ರಸಕ್ತ ನೆತ್ತಿಲಪದವಿನಲ್ಲಿ ವಾಸವಿರುವ ಉಮ್ಮರ್ ಫಾರೂಕ್ ಯಾನೆ ಮಂಗಳ್ ಫಾರೂಕ್ ಯಾನೆ ಕುಶ್‌ಮೋನು (68) ಎಂದು ಗುರುತಿಸಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು, 20 ಸಾವಿರ ಮೌಲ್ಯದ 998 ಗ್ರಾಂ ಗಾಂಜಾ ಹಾಗೂ ಆಕ್ಟಿವಾ ಸ್ಕೂಟರ್‌ನ್ನು ವಶಪಡಿಸಿಕೊಂಡಿದ್ದಾರೆ.

ಕೊಣಾಜೆ: ಗಾಂಜಾ ಮಾರಾಟ|ಆರೋಪಿ ವಶ Read More »

ಬೆಳ್ತಂಗಡಿ :ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್ : ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವ್ಯಕ್ತಿಗೆ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವೀಸಾ ನೀಡದೆ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು, ಅರಸಿನಮಕ್ಕಿ ನಿವಾಸಿ ರೆಜಿ ಕೆ ಎ ಎಂಬವರ ಮಗ ಆಲ್ವಿನ್ ಕೆ.ಆರ್ ಎಂಬವರೇ ಲಕ್ಷಾಂತರ ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ವ್ಯಕ್ತಿ. ಆರೋಪಿಯನ್ನು ಮನೋಜ್ ಎಂದು ಗುರುತಿಸಲಾಗಿದೆ. ಆಲ್ವಿನ್ ಕೆ ಎ ಅವರಿಗೆ ಮನೋಜ್

ಬೆಳ್ತಂಗಡಿ :ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣಿಕೆ : ಭಟ್ಕಳದ ವ್ಯಕ್ತಿಯ ಬಂಧನ

ಸಮಗ್ರ ನ್ಯೂಸ್‌ : ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಟ್ಕಳ ಮೂಲದ ಪ್ರಯಾಣಿಕನೊಬ್ಬ 6 ಲಕ್ಷ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್‌ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್‌ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಈ ವ್ಯಕ್ತಿ 6,19,200 ರೂಪಾಯಿ ಮೌಲ್ಯದ 96 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದನ್ನು ಕಸ್ಟಮ್‌ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು. ಇದನ್ನು ಕಳ್ಳಸಾಗಣೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣಿಕೆ : ಭಟ್ಕಳದ ವ್ಯಕ್ತಿಯ ಬಂಧನ Read More »