ಕರಾವಳಿ

ಬಂಟ್ವಾಳ: ಕಾರು-ಬೈಕ್ ಢಿಕ್ಕಿ

ಸಮಗ್ರ ನ್ಯೂಸ್ : ಕೊಯಿಲ ಗ್ರಾಮದ ಅಣ್ಣಳಿಕೆಯಲ್ಲಿ ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದು ಸವಾರ, ಪಿಲಿಮೊಗರು ಗ್ರಾಮ ನಿವಾಸಿ ಸುರೇಶ್ ಅವರು ಗಾಯಗೊಂಡ ಘಟನೆ ಮಾ. 14ರಂದು ಸಂಭವಿಸಿದೆ. ಗಾಯಾಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸ್ನೇಹಿತ ಪುಷ್ಪೇಂದ್ರ ಸಿಂಗ್ ಅವರನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಚಾಲಕ ಉಮೇಶ್ ತನ್ನ ಕಾರನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಕಾರು-ಬೈಕ್ ಢಿಕ್ಕಿ Read More »

ಬಜಪೆ: ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

ಸಮಗ್ರ ನ್ಯೂಸ್ : ಎಲ್ಲಿಂದಲೋ ಕದ್ದು ವಾಹನದಲ್ಲಿ ಮರಳು ಮತ್ತು ಕೆಂಪು ಕಲ್ಲು ಸಾಗಿಸುತ್ತಿದ್ದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ 2014ರ ಜು.12ರಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸುಲ್ತಾಡಿ ಮನೆಯ ನಿತಿನ್ (37) ನನ್ನು ಬಂಧಿಸಲಾಗಿದೆ. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆತನನ್ನು ಬಜಪೆ ಪೊಲೀಸ್ ನಿರೀಕ್ಷಕರ ನಂದೇಶ್ ಬಿ. ಕುಂಬಾರ್ ನೇತೃತ್ವದ ತಂಡ ಗುರುವಾರ ಕಡಬದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಜಪೆ: ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ Read More »

ಉಡುಪಿ: ರಬ್ಬರ್ ಸ್ಟಾಂಪ್ ಅಂಗಡಿಯ ಮಾಲಕ ಕುಸಿದು ಬಿದ್ದು ಮೃತ್ಯು

ಸಮಗ್ರ ನ್ಯೂಸ್ : ರಬ್ಬರ್ ಸ್ಟಾಂಪ್ ಅಂಗಡಿಯ ಮಾಲಕ, ದೊಡ್ಡಣಗುಡ್ಡೆಯ ಕೇಶವ ಶೇರಿಗಾರ (68) ಅವರು ಕೆಲಸ ನಿರ್ವಹಿಸುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬಡಗುಪೇಟೆಯಲ್ಲಿ ಸಂಭವಿಸಿದೆ. ಮೃತರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು. ಮೃತರನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದು, ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.

ಉಡುಪಿ: ರಬ್ಬರ್ ಸ್ಟಾಂಪ್ ಅಂಗಡಿಯ ಮಾಲಕ ಕುಸಿದು ಬಿದ್ದು ಮೃತ್ಯು Read More »

ಬೆಳ್ಳಾರೆ: ಮಹಮ್ಮದ್ ಇಂಜಿನಿಯರ್ ನಿಧನ|ಸುಳ್ಯ ಎಸ್‌ಡಿಪಿಐ ಸಂತಾಪ

ಸಮಗ್ರ ನ್ಯೂಸ್:ಮಾ 13;ಬೆಳ್ಳಾರೆ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಬೆಳ್ಳಾರೆ ನಿವಾಸಿ ಇಂಜಿನಿಯರ್ ಆರಿಫ್ ರವರ ತಂದೆ ಹಿರಿಯರಾದ ಮಹಮ್ಮದ್ ಇಂಜಿನಿಯರ್ ರವರು ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಹಲವಾರು ದೀನಿ ಸಂಘ ಸಂಸ್ಥೆಗಳಲ್ಲಿ ನೇತೃತ್ವ ವಹಿಸಿದ್ದ ಸಾಮಾಜಿಕ ಹಾಗೂ ಉಲಾಮ ನೇತಾರರು ಕೊಡುಗೈ ದಾನಿಯೂ ಆಗಿದ್ದ ಇವರ ಅಗಲಿಕೆಯು ಸಮುದಾಯಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.ಇವರ ಬಂದು ಬಳಗಕ್ಕೆ

ಬೆಳ್ಳಾರೆ: ಮಹಮ್ಮದ್ ಇಂಜಿನಿಯರ್ ನಿಧನ|ಸುಳ್ಯ ಎಸ್‌ಡಿಪಿಐ ಸಂತಾಪ Read More »

ಪಡುಬಿದ್ರಿ: 30 ವರ್ಷಗಳಿಂದ “ತಲೆಮರೆಸಿಕೊಂಡಿದ್ದ” ಆರೋಪಿ ಸಾವು

ಸಮಗ್ರ ನ್ಯೂಸ್ : ಸರಕಾರಿ ಜಾಗದಿಂದ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದಾಗ ನಂದಿಕೂರು ಪೇಟೆಯಲ್ಲಿ 1981ರಲ್ಲಿ ಲಾರಿ ಸಮೇತ ಸಿಕ್ಕಿಬಿದ್ದ ಆರೋಪಿಗಳಲ್ಲಿ ಓರ್ವನಾದ ಮಂಜರಪಲ್ಕೆಯ ಸುಧಾಕರ ಶೆಟ್ಟಿ 1994ರಲ್ಲಿ ಯಾವುದೋ ಕಾಯಿಲೆಯಿಂದ ಸಾವನ್ನಪ್ಪಿರುವುದನ್ನು ಪಡುಬಿದ್ರಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಹಳಷ್ಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ಇದ್ದ ಕಾರಣದಿಂದ ಸುಧಾಕರ ಶೆಟ್ಟಿ ವಿರುದ್ಧ ವಾರಂಟ್ ಜಾರಿಯಾಗಿತ್ತು. ಪಡುಬಿದ್ರಿ ಎಎಸ್‌ಐ ರಾಜೇಶ್ ಪಿ. ಅವರು ಆರೋಪಿ ಮೃತಪಟ್ಟಿರುವ ಬಗ್ಗೆ ಕಾರ್ಕಳ ಸರಕಾರಿ ಆಸ್ಪತ್ರೆಯಿಂದ ದಾಖಲೆಗಳನ್ನು ಪಡೆದು, ಕಾರ್ಕಳ ಪುರಸಭೆಯಿಂದ ಮರಣ

ಪಡುಬಿದ್ರಿ: 30 ವರ್ಷಗಳಿಂದ “ತಲೆಮರೆಸಿಕೊಂಡಿದ್ದ” ಆರೋಪಿ ಸಾವು Read More »

ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ

ಸಮಗ್ರ ನ್ಯೂಸ್ : ಇನ್ನೋವಾ ಮತ್ತು ಫೋರ್ಡ್ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಪುತ್ತೂರಿನ ಸಂಟ್ಯಾರಿನಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋವಾ ಕಾರು ಚಾಲಕ, ಉಪ್ಪಿನಂಗಡಿ ಮೂಲದ ವ್ಯಕ್ತಿ ಸಹಿತ ಹಲವರಿಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಸ್ತೆ ಮಧ್ಯದಲ್ಲಿ ಈ ಅಪಘಾತ ಸಂಭವಿಸಿದ ಕಾರಣ ಕಿಲೋಮೀಟರ್ ಗಟ್ಟಲೆ ರಸ್ತೆ ಬ್ಲಾಕ್ ಆಗಿದ್ದು, ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿ, ಟ್ರಾಫಿಕ್ ಜಾಮ್ ಸಂಭವಿಸಿದೆ.

ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ Read More »

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಬಿಜೆಪಿ ವಿರುದ್ಧ ಬಂಡಾಯ ಸಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಪುತ್ತೂರಿನ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.‌ ಈ ಮೂಲಕ ಮತ್ತೆ ಮರಳಿ ಗೂಡಿಗೆ ವಾಪಾಸ್ಸಾಗಿದ್ದಾರೆ. ಮಾ.14ರ ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ವೇಳೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಸುನಿಲ್ ಕುಮಾರ್ ಕಾರ್ಕಳ ಅವರು ಉಪಸ್ಥಿತರಿದ್ದರು. ಪಕ್ಷದ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅರುಣ್ ಕುಮಾರ್ ಪುತ್ತಿಲ

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ Read More »

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್ : ಕಸಬಾ ಗ್ರಾಮದ ದೇವಸ್ಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಸುಮಾರು ನಾಲ್ಕೈದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದ್ದು, ಮೃತ ದೇಹದ ಮುಖ ಗುರುತು ಹಿಡಿಯಲಾರದಷ್ಟು ಕೊಳೆತು ಹೋಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಹಾಗೂ ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ ತಂಡ ಆಗಮಿಸಿದೆ.

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಕೂದಲೆಳೆಯ ಅಂತರದಲ್ಲಿ ಸವಾರ ಪಾರು

ಸಮಗ್ರ ನ್ಯೂಸ್: ನಗರದ ಕರಿಯಕಲ್ಲು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಕೂದಲೆಳೆಯ ಅಂತರದಲ್ಲಿ ಜೀವಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬಜಗೋಳಿ ಕಡೆಯಿಂದ ಕಾರೊಂದು ಅತೀ ವೇಗವಾಗಿ ಕಾರ್ಕಳ ಕಡೆಗೆ ಬರುತ್ತಿದ್ದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಘಟನೆಯ ತೀವ್ರತೆಗೆ ಸವಾರನು ಕಾರಿನ ಗಾಜಿನ ಮೇಲೆ ಹಾರಿಬಿದ್ದು ತಲೆಗೆ ಗಾಯವಾಗಿದೆ. ನಿಯಂತ್ರಣ ತಪ್ಪಿದ ಕಾರಿನ ಚಕ್ರ ರಸ್ತೆ ನಿರ್ಮಾಣಕ್ಕೆ ಹಾಕಲಾಗಿದ್ದ ಮಣ್ಣಿನ ಹೂತು ಹೋಗಿರುವುದಿಂದ

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಕೂದಲೆಳೆಯ ಅಂತರದಲ್ಲಿ ಸವಾರ ಪಾರು Read More »

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಸಹಕಾರಿ ಸಂಘದಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ ಕಾರ್ಯ ಪ್ರಗತಿಯಲ್ಲಿದೆ. ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ. 31 ರವರೆಗೆ ಕಾಲವಕಾಶವನ್ನು ನೀಡಲಾಗಿದೆ.

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ Read More »