ಕರಾವಳಿ

ತಲಪಾಡಿ: ಪಾದಚಾರಿಗೆ ಬೈಕ್ ಢಿಕ್ಕಿ|ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆಯೊಂದು ತಲಪಾಡಿಯಲ್ಲಿ ನಡೆದಿದೆ. ರಾಜೇಶ್ ಶೆಟ್ಟಿ (49) ಮೃತಪಟ್ಟ ವ್ಯಕ್ತಿ. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ ತಂಗುದಾಣದ ಬಳಿ ಬೇಕರಿ ಇದೆ. ಎದುರು ಭಾಗದಲ್ಲೇ ಹೆದ್ದಾರಿ ಸಮೀಪ ಮನೆ ಕೂಡಾ ಇದೆ. ಭಾನುವಾರ ತಲಪಾಡಿ ದೇವಿಪುರದಲ್ಲಿ ರಥೋತ್ಸವ ಇದ್ದ ಕಾರಣ ರಾಜೇಶ್ ಅವರು ತಮ್ಮ ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿದ್ದು, ಮಧ್ಯಾಹ್ನದ ಸಮಯದಲ್ಲಿ

ತಲಪಾಡಿ: ಪಾದಚಾರಿಗೆ ಬೈಕ್ ಢಿಕ್ಕಿ|ವ್ಯಕ್ತಿ ಮೃತ್ಯು Read More »

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ – ಲಾರಿ ಢಿಕ್ಕಿ

ಸಮಗ್ರ ನ್ಯೂಸ್ : ಬಿ.ಸಿ.ರೋಡಿನ ಕೈಕಂಬದಲ್ಲಿ ಇತ್ತೀಚೆಗೆ ಕೆಎಸ್ಸಾರ್ಟಿಸಿ ಬಸ್ ಹಾಗೂ ಲಾರಿ ಢಿಕ್ಕಿ ಹೊಡೆದುಕೊಂಡ ಪರಿಣಾಮ ಬಸ್ ಪ್ರಯಾಣಿಕ ತೆಲಂಗಾಣದ ಸಿಕಂದರ್‌ಬಾದ್ ಮಲ್ಕಜ್‌ಗಿರಿ ನಿವಾಸಿ ಆರ್. ದೇದೀಪ್ ಶರ್ಮಾ ಗಾಯಗೊಂಡಿದ್ದು, ಅವರನ್ನು ಬಿ.ಸಿ. ರೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಬಸ್ಸನ್ನು ಚಾಲಕ ಅಂಬರೀಷ್ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಹೋಗಿ ಕೈಕಂಬದಲ್ಲಿ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ನೀಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ – ಲಾರಿ ಢಿಕ್ಕಿ Read More »

ಕಾರ್ಕಳ: ಆನ್‌ಲೈನ್ ವಂಚನೆ- ಲಕ್ಷಾಂತರ ರೂ ಕಳೆದಕೊಂಡ ಯುವಕ

ಸಮಗ್ರ ನ್ಯೂಸ್ : ಬೈಕ್ ಖರೀದಿಯ ಕನಸು ಕಂಡ ಕಾರ್ಕಳದ ಯುವಕನೊಬ್ಬ ಓಎಲ್‌ಎಕ್ಸ್ ನಲ್ಲಿ ಇದ್ದ ಮೊಬೈಲ್ ನಂಬರ್‌ಗೆ ಕರೆ ಮಾಡಿ ಮೋಸದ ಜಾಲಕ್ಕೆ ಬರೋಬರಿ ರೂ. 1,18,139 ಕಳೆದುಕೊಂಡು ನ್ಯಾಯ ಕೋರಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಮೆಟ್ಟಲೇರಿದ ಘಟನೆ ನಡೆದಿದೆ. ಇರ್ಫಾನ್ (27) ಎಂಬಾತ ಮೋಸ ಹೋದ ವ್ಯಕ್ತಿ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ದಾಖಲಿಸಿದ್ದಾರೆ. ಇವರು ಬೈಕ್ ಖರೀದಿ ಮಾಡಲು ಸಾಮಾಜಿಕ ಜಾಲತಾಣವಾದ olx ನಲ್ಲಿ ಹುಡುಕಾಟ ನಡೆಸುತ್ತಿರುವ ಸಮಯ

ಕಾರ್ಕಳ: ಆನ್‌ಲೈನ್ ವಂಚನೆ- ಲಕ್ಷಾಂತರ ರೂ ಕಳೆದಕೊಂಡ ಯುವಕ Read More »

ಬಿಸಿಲ ಬೇಗೆಗೆ ತಂಪೆರೆದ ವರುಣ| ಮಲೆನಾಡು ಸೇರಿ ಹಲವೆಡೆ ಮಳೆ ಸಿಂಚನ

ಸಮಗ್ರ ನ್ಯೂಸ್: ಬರ ಮತ್ತು ಬಿಸಿಲಿನ ಬೇಗೆಯಿಂದ ತತ್ತರಿಸಿದ ರಾಜ್ಯದ ಕೆಲವು ಭಾಗದಲ್ಲಿ ಮಾರ್ಚ್ ನಲ್ಲಿಯೇ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಬಸವನಹಳ್ಳಿ, ಐದಳ್ಳಿ, ಮಾಕೋಡು, ಹುಣಸೆಹಳ್ಳಿ ಮೊದಲಾದ ಕಡೆ ಮಳೆಯಾಗಿದೆ. ಬೀದರ್ ಜಿಲ್ಲೆಯ ಔರಾದ, ಬಾಲ್ಕಿ ತಾಲೂಕಿನ ಹಲವು ಕಡೆ ಭಾನುವಾರ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಹಲವು ಕಡೆ ಇನ್ನೊಂದು ವಾರ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಬೀದರ್, ಧಾರವಾಡ, ವಿಜಯಪುರ, ಕಲಬುರಗಿ ಸೇರಿದಂತೆ ವಿವಿಧೆಡೆ ಮಳೆ

ಬಿಸಿಲ ಬೇಗೆಗೆ ತಂಪೆರೆದ ವರುಣ| ಮಲೆನಾಡು ಸೇರಿ ಹಲವೆಡೆ ಮಳೆ ಸಿಂಚನ Read More »

ಪುತ್ತೂರು: ಶಾಸಕ ಅಶೋಕ್ ರೈ ಬೆಂಬಲಿಗರಿಂದ ದಾಂಧಲೆ ಪ್ರಕರಣ| 15ಮಂದಿ ವಿರುದ್ಧ ಕೇಸು ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಕೆ. ಅವರ ಮನೆಗೆ ಶಾಸಕ ಅಶೋಕ್ ರೈ ಬೆಂಬಲಿಗರು ನುಗ್ಗಿ ಪುಂಡಾಟ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿರುವ ಜಯಾನಂದ ಮನೆಗೆ ರೌಡಿಶೀಟರ್ ಪ್ರಜ್ವಲ್ ರೈ ಮತ್ತು ಕಾಂಗ್ರೆಸ್ ಬೆಂಬಲಿಗರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ. ಘಟನೆ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ‌ ದಾಖಲಾಗಿದೆ. ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್ ನಡೆದಿದ್ದು ಪುತ್ತೂರು ಶಾಸಕರು ಅತೀ ಹೆಚ್ಚು

ಪುತ್ತೂರು: ಶಾಸಕ ಅಶೋಕ್ ರೈ ಬೆಂಬಲಿಗರಿಂದ ದಾಂಧಲೆ ಪ್ರಕರಣ| 15ಮಂದಿ ವಿರುದ್ಧ ಕೇಸು ದಾಖಲು Read More »

ಕೊಡಗು ದಕ್ಷಿಣ ಕನ್ನಡ ಗಡಿಭಾಗವಾದ ಕೂಜಿಮಲೆ ವ್ಯಾಪ್ತಿಯಲ್ಲಿ  ನಕ್ಸಲರು ಪ್ರತ್ಯಕ್ಷ|5 ವರ್ಷದ ಬಳಿಕ ಮತ್ತೆ ಅದೇ ಭಾಗದಲ್ಲಿ  ಪ್ರತ್ಯಕ್ಷಗೊಂಡ ಕೆಂಪು ಉಗ್ರರು

ಸಮಗ್ರ ನ್ಯೂಸ್: ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡಿದ್ದಾರೆ8 ಜನರ ನಕ್ಸಲ್ ತಂಡ ಮಾ.16ರಂದು ಸಂಜೆ ಕೂಜಿಮಲೆ, ಕಲ್ಮುಖರ್  ಅಂಗಡಿಯೊಂದರಿಂದ 3500 ಸಾವಿರದಷ್ಟು ದಿನಸಿ ಖರಿದಿಸಿದ್ದಾರೆ.ನಗದುಹಣ ನೀಡಿ ಸಾಮಗ್ರಿಗಳನ್ನು  ಖರೀದಿಸಿದ ನಕ್ಸಲರ ತಂಡದಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಇರಬಹುದಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ. *ಕಾಲೂರು ಗ್ರಾಮದ ಗಡಿ ಗ್ರಾಮ ಕೂಜಿಮಲೆ* ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಾಲೂರು ಗ್ರಾಮದ ಗಡಿ ಪ್ರದೇಶವಾದ ಕೂಜಿಮಲೆಯಲ್ಲಿ ಮಾ.16

ಕೊಡಗು ದಕ್ಷಿಣ ಕನ್ನಡ ಗಡಿಭಾಗವಾದ ಕೂಜಿಮಲೆ ವ್ಯಾಪ್ತಿಯಲ್ಲಿ  ನಕ್ಸಲರು ಪ್ರತ್ಯಕ್ಷ|5 ವರ್ಷದ ಬಳಿಕ ಮತ್ತೆ ಅದೇ ಭಾಗದಲ್ಲಿ  ಪ್ರತ್ಯಕ್ಷಗೊಂಡ ಕೆಂಪು ಉಗ್ರರು Read More »

ಮಂಗಳೂರು: ಖಾಸಗಿ ಬಸ್ ಚಾಲಕನಿಗೆ ಹಲ್ಲೆ: ಆರೋಪಿಗಳ ಸೆರೆ

ಸಮಗ್ರ ನ್ಯೂಸ್ : ಖಾಸಗಿ ಬಸ್ ಚಾಲಕನಿಗೆ ಒಂದು ತಂಡದಿಂದ ಹಲ್ಲೆ ನಡೆದಿರುವ ಘಟನೆ ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಭಾಸ್ಕರ್ ಹಲ್ಲೆಗೊಳಗಾದ ಬಸ್ ಚಾಲಕ ಎಂದು ತಿಳಿದುಬಂದಿದೆ. ರಾತ್ರಿ 8ರ ಸುಮಾರಿಗೆ ಬಸ್‌ನಲ್ಲಿ ಚಾಲಕನು ಹುಡುಗಿಯ ಜತೆ ಮಾತನಾಡುತ್ತಿದ್ದನೆಂಬ ಕಾರಣಕ್ಕೆ ಕೆಲವರು ಆಯುಧದಿಂದ ಕೂಡ ಹಲ್ಲೆ ನಡೆಸಿದ್ದು, ಚಾಲಕ ಮತ್ತು ಹುಡುಗಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಘಟನೆ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಖಾಸಗಿ ಬಸ್ ಚಾಲಕನಿಗೆ ಹಲ್ಲೆ: ಆರೋಪಿಗಳ ಸೆರೆ Read More »

ಪುತ್ತೂರು: ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್| ಬಿಜೆಪಿ ಜಾಲತಾಣ ಪ್ರಮುಖ್ ಮನೆಗೆ ತೆರಳಿ ಶಾಸಕ ರೈ ಬೆಂಬಲಿಗರ ದಾಂಧಲೆ!?

ಸಮಗ್ರ ನ್ಯೂಸ್: ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ನಡೆಸಿರುವುದಾಗಿ ಜಾಲತಾಣಗಳಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗರು‌ ಹಾಕಿರುವ ಪೋಸ್ಟ್ ಗಳ ಬಗ್ಗೆ ಅನುದಾನ ಬಳಕೆ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಕೇಳಿಕೊಂಡಿದ್ದು, ಇದೇ ವಿಚಾರವಾಗಿ ಶಾಸಕ ಅಶೋಕ್ ರೈ ಬೆಂಬಲಿಗರೆನ್ನಲಾದ ತಂಡ ದಾಂಧಲೆ ನಡೆಸಿರುವ ಘಟನೆ ಪುತ್ತೂರಿನಿಂದ ವರದಿಯಾಗಿದೆ. ದಕ್ಷಿಣ ಕನ್ನಡ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಬಂಗೇರ ಮನೆಗೆ ತೆರಳಿ ಕಾಂಗ್ರೆಸ್ ಕಾರ್ಯಕರ್ತರು ಕಿರಿಕ್ ಮಾಡಿದ್ದು, ಚುನಾವಣಾ

ಪುತ್ತೂರು: ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್| ಬಿಜೆಪಿ ಜಾಲತಾಣ ಪ್ರಮುಖ್ ಮನೆಗೆ ತೆರಳಿ ಶಾಸಕ ರೈ ಬೆಂಬಲಿಗರ ದಾಂಧಲೆ!? Read More »

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ

ಸಮಗ್ರ ನ್ಯೂಸ್ : ಸರಕಾರಿ ಬಸ್ ಮತ್ತು ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಬಾಂಬಿಲ ಎಂಬಲ್ಲಿ ಸಂಭವಿಸಿದೆ. ಕಾರು ಚಾಲಕ, ಕಾವಳಪಡೂರು ಗ್ರಾಮದ ಮಧ್ವಪಲ್ಕೆ ನಿವಾಸಿ ಸಿರಿಲ್ ಡಿಸೋಜ ಅವರು ಗಾಯಾಳುವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ ಬಸ್, ವಗ್ಗ ಕಡೆಗೆ ಸಾಗುತ್ತಿದ್ದ ಕಾರ್‌ಗೆ ಬಾಂಬಿಲ ಸೇತುವೆ ಬಳಿಯ ತಿರುವಿನಲ್ಲಿ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಯಲ್ಲಿ ಕಾರಿನ ಮುಂಭಾಗ ಬಸ್‌ನ

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ Read More »

ಮಂಗಳೂರು: ಮೊಹಮ್ಮದ್ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು

ಸಮಗ್ರ ನ್ಯೂಸ್ : ಮಂಗಲಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಜೈಲಿನಲ್ಲಿದ್ದ ಮೂವರು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುರತ್ಕಲ್ ಪೊಲೀಸರು ಈ ಮೂವರನ್ನು ಎ1, ಎ2, ಎ3 ಆರೋಪಿಗಳೆಂದು ಗುರುತಿಸಿ ಮಂಗಳೂರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಪ್ರಮುಖ ಆರೋಪಿಗಳಾದ ಬಂಟ್ವಾಳ ತಾಲೂಕಿನ ಕಾವಳಮಾಡೂರು ಗ್ರಾಮದ ಸುಹೇಲ್ ಶೆಟ್ಟಿ ಅಲಿಯಾಸ್ ಸುಭಾಷ್, ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಭಿಫೀಕ್ ಯಾನೆ ಮತ್ತು ಕುಳಾಯಿ ನಿವಾಸಿ ಮೋಹನ್ ಸಿಂಗ್

ಮಂಗಳೂರು: ಮೊಹಮ್ಮದ್ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು Read More »