ಕರಾವಳಿ

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಸಹಕಾರಿ ಸಂಘದಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ ಕಾರ್ಯ ಪ್ರಗತಿಯಲ್ಲಿದೆ. ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ. 31 ರವರೆಗೆ ಕಾಲವಕಾಶವನ್ನು ನೀಡಲಾಗಿದೆ.

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ Read More »

ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ

ಸಮಗ್ರ ಸಮಾಚಾರ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಲೋಕಸಬಾ ಸ್ಪರ್ಧೆ ಅವಕಾಶ ಈ ಬಾರಿ ಬ್ರಿಜೇಶ್ ಚೌಟರಿಗೆ ಒಲಿದು ಬಂದಿದೆ. ಈ ಕ್ಷೇತ್ರದಲ್ಲಿ ಜೈನ್ ಸಮುದಾಯದಿಂದ ಧನಂಜಯ ಕುಮಾರ್ ಬಿಜೆಪಿಯಿಂದ ಒಕ್ಕಲಿಗ ಸದಾನಂದ ಗೌಡ ಒಂದು ಬಾರಿ, ಬಂಟ್ಸ್ ನಳಿನ್ 3 ಬಾರಿ ಅದ ಬಳಿಕ ಮತ್ತೇ ಬಿಜೆಪಿ ಬಂಟ ಸಮುದಾಯಕ್ಕೆ ಮಣೆ ಹಾಕಿದೆ‌. 1990 ಅಯೋಧ್ಯೆ ರಾಮ ಮಂದಿರ,ಹಿಂದುತ್ವ ಈ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆ ಪೂರಕವಾಗಿತ್ತು. ನಾಲ್ಕನೇ ಬಾರಿ ಕಟೀಲ್ ಟಿಕೆಟ್ ಖಂಡಿತ ಅವರ ಆಪ್ತ ವಲಯದಲ್ಲಿ

ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ Read More »

ಮಣಿಪಾಲ: ಚಾಲಕನ ನಿರ್ಲಕ್ಷ್ಯದಿಂದ ಚಕ್ರಕ್ಕೆ ಸಿಲುಕಿ ಬಸ್ ಮಾಲಕ ಸಾವು

ಸಮಗ್ರ ನ್ಯೂಸ್: ಬಸ್‍ವೊಂದನ್ನು ಗ್ಯಾರೇಜ್‍ನಲ್ಲಿ ರಿಪೇರಿಗೆ ನೀಡಿದ್ದರು. ಈ ವೇಳೆ ಬಸ್‍ನ ಎದುರು ಮಾಲಕ ನಿಂತಿದ್ದನ್ನು ಚಾಲಕ ಗಮನಿಸದೆ ಬಸ್ ಚಲಾಯಿಸಿದ ಪರಿಣಾಮ ಮಾಲಕ ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ಬುಧವಾರ ಅವಘಡದಲ್ಲಿ ಸಂಭವಿಸಿದೆ. ಖಾಸಗಿ ಬಸ್‍ನ ಮಾಲಕ ದಯಾನಂದ ಶೆಟ್ಟಿ (65) ಮೃತಪಟ್ಟವರು. ತತ್‍ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಮಣಿಪಾಲ: ಚಾಲಕನ ನಿರ್ಲಕ್ಷ್ಯದಿಂದ ಚಕ್ರಕ್ಕೆ ಸಿಲುಕಿ ಬಸ್ ಮಾಲಕ ಸಾವು Read More »

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕನಿಗೆ ಸೆರೆವಾಸ

ಸಮಗ್ರ ನ್ಯೂಸ್ : ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕು ವಾಯಿಕಡವು ಗ್ರಾಮದ ಅಡಕ್ಕರ ನಿವಾಸಿ ಅಬಿನ್ ಸಿಬಿ (22) ತನ್ನ ಊರಿನಿಂದ ರೈಲಿನ ಮೂಲಕ ತಮಿಳುನಾಡಿನ ಕೊಯಮತ್ತೂರಿಗೆ ತೆರಳಿ ಆ್ಯಸಿಡ್ ಖರೀದಿಸಿ

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕನಿಗೆ ಸೆರೆವಾಸ Read More »

ನೆಲ್ಯಾಡಿ: ಅನಾರೋಗ್ಯದಿಂದ ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ಬಿದ್ದು ತಲೆಗೆ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ ಘಟನೆ ನೆಲ್ಯಾಡಿಯ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಶೀನ ಮುಗೇರ(50) ಎಂದು ಗುರುತಿಸಲಾಗಿದೆ. ಮಾ.10ರಂದು ಸಾಯಂಕಾಲ ನೆಲ್ಯಾಡಿ ಪೇಟೆಗೆ ಹೋದವರು ವಾಪಾಸು ಮನೆಗೆ ಬಂದಾಗ ಅವರ ತಲೆಯ ಹಿಂಬದಿ ಗಾಯವಾಗಿತ್ತು. ಮನೆಯವರು ವಿಚಾರಿಸಿದಾಗ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಬಿದ್ದು ಗಾಯವಾಗಿದೆ ಎಂದು ತಿಳಿಸಿದ್ದರು. ಬಳಿಕ ಅವರಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿ ಕಳುಹಿಸಿಕೊಟ್ಟಿದ್ದರು.

ನೆಲ್ಯಾಡಿ: ಅನಾರೋಗ್ಯದಿಂದ ವ್ಯಕ್ತಿ ಸಾವು Read More »

ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಮಹಿಳಾ ಕವಿಗೋಷ್ಠಿ

ಸಮಗ್ರ ನ್ಯೂಸ್: ಬೆಳ್ಳಾರೆ ಪೆರುವಾಜೆಯ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ಜರುಗಿತು. ಡಾ.ಕೆ.ಶಿವರಾಮ ಕಾರಂತ ಸರಕಾರಿ ಫುಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ಪ್ರಾಂಶುಪಾಲ ದಾಮೋದರ ಕಣಜಾಲು ಅವರು ಸಭಾಧ್ಯಕ್ಷತೆ ವಹಿಸಿದ್ದರು. ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಹೆಚ್. ಭೀಮರಾವ್

ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಮಹಿಳಾ ಕವಿಗೋಷ್ಠಿ Read More »

ಮಂಗಳೂರು ಮಹಾನಗರ ಪಾಲಿಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಭರವಸೆ

ಸಮಗ್ರ ನ್ಯೂಸ್ : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಈ ಬೇಸಿಗೆಯಲ್ಲಿ ಕುಡಿಯುವ ನೀರಿನ ಪಡಿತರವನ್ನು ಜಾರಿಗೊಳಿಸುವುದಿಲ್ಲ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸಾರ್ವಜನಿಕರಿಗೆ ಭರವಸೆ ನೀಡಿದರು, ನಗರದ ನೀರಿನ ಲಭ್ಯತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್ ಕಣ್ಣೂರು, ಕೊಂಚ ಇಳಿಕೆಯಾಗಿದ್ದರೂ, ಕುಡಿಯುವ ನೀರಿನ ಪ್ರಾಥಮಿಕ ಮೂಲವಾದ ನೇತ್ರಾವತಿಯ ಒಳಹರಿವು ಸಂಪೂರ್ಣವಾಗಿ ನಿಂತಿಲ್ಲ. ಮಂಗಳೂರು, ಉಳ್ಳಾಲ ಮತ್ತು ಮೂಲ್ಕಿಗೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಂ ಪ್ರಸ್ತುತ 6 ಮೀಟರ್ ತೃಪ್ತಿದಾಯಕ

ಮಂಗಳೂರು ಮಹಾನಗರ ಪಾಲಿಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಭರವಸೆ Read More »

ಮಂಗಳೂರು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ-ಆತ್ಮಹತ್ಯೆ ಶಂಕೆ

ಸಮಗ್ರ ನ್ಯೂಸ್ : ಕುಂಪಲದ ಕುಜುಮಗದ್ದೆ ಬಳಿ ಅಧಿಕಾರಿಗಳು ವಾಸಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿರುವ ಆತಂಕಕಾರಿ ದೃಶ್ಯ ಕಂಡು ಬಂದಿದೆ. ಆತ್ಮಹತ್ಯೆಯ ಪ್ರಕರಣವೆಂದು ಶಂಕಿಸಲಾಗಿದೆ, ವ್ಯಕ್ತಿಯ ಅವಶೇಷಗಳು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿವೆ, ಇದು ದುರಂತ ಘಟನೆ ಸಂಭವಿಸಿದ ಅಂದಾಜು ಮೂರು ದಿನಗಳನ್ನು ಸೂಚಿಸುತ್ತದೆ. ಘಟನೆಯಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಕಿರಣ್ ಕುಮಾರ್ (48) ಎಂದು ಗುರುತಿಸಲಾಗಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಹೌಸ್ ಕೀಪಿಂಗ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದಾರೆ. ಕಿರಣ್ ಕೊನೆಯದಾಗಿ ಮಾರ್ಚ್ 7

ಮಂಗಳೂರು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ-ಆತ್ಮಹತ್ಯೆ ಶಂಕೆ Read More »

ಬಂಟ್ವಾಳ: ಜಮೀನಿನ ಮಾಲಕನಿಗೆ ಜೀವ ಬೇದರಿಕೆ- ಹಲ್ಲೆ..!

ಸಮಗ್ರ ನ್ಯೂಸ್ : ವ್ಯಕ್ತಿಯೋರ್ವರ ಕೃಷಿಯೇತರ ಜಾಗದಲ್ಲಿ ಸುತ್ತಲೂ ಅಳವಡಿಸಿದ್ದ ಬೇಲಿ ಹಾಳಾಗಿದ್ದ ಬೇಲಿಯ ಕಂಬಗಳನ್ನು ರಿಪೇರಿ ಮಾಡುತ್ತಿದ್ದ ವೇಳೆ ತಂಡವೊಂದು ಅಕ್ರಮ ಪ್ರವೇಶಿಸಿ ಜಮೀನಿನ ಮಾಲಿಕನಿಗೆ ಜೀವ ಬೇದರಿಕೆ ಒಡ್ಡಿ, ಹಲ್ಲೆ ನಡೆಸಿ ಕೃಷಿ ಕೃತಗಳಿಗೆ ಹಾನಿ ಮಾಡಿದ ಘಟನೆ ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ಜೆರಾಲ್ಡ್ ಗ್ರೇಶನ ಡಿ ಸೋಜ, ಆಂದ್ರು ಡಿ ಸೋಜ, ಚಾಲ್ಸ್ ಡಿ ಸೋಜ, ಅಸ್ಟಿನ್ ಡಿ ಸೋಜ ಎಂದು ಗುರುತಿಸಲಾಗಿದೆ. ಕಳ್ಳಿಗೆ ಗ್ರಾಮ, ಬಂಟ್ವಾಳ ನಿವಾಸಿ

ಬಂಟ್ವಾಳ: ಜಮೀನಿನ ಮಾಲಕನಿಗೆ ಜೀವ ಬೇದರಿಕೆ- ಹಲ್ಲೆ..! Read More »

ಪುತ್ತೂರು : ಮಾ.14 ರಂದು ವಿದ್ಯುತ್ ನಿಲುಗಡೆ

ಸಮಗ್ರ ನ್ಯೂಸ್ : ಉಪ್ಪಿನಂಗಡಿ- ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‍ಪ್ರೆಸ್, ಕಾಂಚನ ಮತ್ತು ವಾಟರ್ ಸಪ್ಲೈ ಫೀಡರ್ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‍ನಲ್ಲಿ ಮಾ.14 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5.30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್

ಪುತ್ತೂರು : ಮಾ.14 ರಂದು ವಿದ್ಯುತ್ ನಿಲುಗಡೆ Read More »