ಕ್ರೈಂ

ಗದಗ: ಬಾಲ್ಯವಿವಾಹ ತಡೆದ ಅಧಿಕಾರಿಗಳು|ಪೋಷಕರಿಂದ ಮುಚ್ಚಳಿಕೆ ಪತ್ರ

ಸಮಗ್ರ ನ್ಯೂಸ್: ಬಾಲ್ಯ ವಿವಾಹ ಅಪರಾಧ. ಹಿಂದೆ ಈ ಅನಿಷ್ಠ ಪದ್ಧತಿ ಇತ್ತು. ಆದರೆ ಈಗ ಈ ಪದ್ಧತಿಗೆ ಬ್ರೇಕ್ ಬಿದ್ದಿದೆ. ಆದ್ರೆ ಅಲ್ಲೊಂದು ಇಲ್ಲೊಂದು ಈ ವಿಚಾರ ಬೆಳಕಿಗೆ ಬರುವುದು ಮಾತ್ರ ತಪ್ಪಿಲ್ಲ. ಹೌದು, ಇಂದು ಗದಗದಲ್ಲಿ ನಡೀತಿದ್ದ ಬಾಲ್ಯ ವಿವಾಹವೊಂದಕ್ಕೆ ಅಧಿಕಾರಿಗಳು ಭೇಟಿ ನೀಡಿ ನಿಲ್ಲಿಸಿದ್ದಾರೆ. ನಗರದ ಕರ್ನಾಟಕ ಭವನದಲ್ಲಿ ಗದಗ ತಾಲೂಕಿನ ಕೊಟುಮಚಗಿ ಗ್ರಾಮದ ಇಬ್ಬರು ಸಹೋದರರ ಮದುವೆ ನಿಶ್ಚಿಯ ಮಾಡಲಾಗಿತ್ತು. ಆದ್ರೆ, ಕಿರಿಯ ಸಹೋದರನ ಮದುವೆ ಆಗುತ್ತಿರುವ ಬಾಲಕಿಗೆ ಇನ್ನೂ 18 […]

ಗದಗ: ಬಾಲ್ಯವಿವಾಹ ತಡೆದ ಅಧಿಕಾರಿಗಳು|ಪೋಷಕರಿಂದ ಮುಚ್ಚಳಿಕೆ ಪತ್ರ Read More »

ದೇವರಕೊಲ್ಲಿಯಲ್ಲಿ ಭೀಕರ ಅಪಘಾತ| ಬೈಕ್ ಸವಾರ‌ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಸಮೀಪದ ದೇವರಕೊಲ್ಲಿ ಬಳಿ ಕಾರು ಮತ್ತು ಬೈಕ್ ಮಧ್ಯೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣವನ್ನಪ್ಪಿದ ಘಟನೆ ಇಂದು (ಎ.26) ನಡೆದಿದೆ. ಮಡಿಕೇರಿಯಿಂದ ವಿಟ್ಲಕ್ಕೆ ಮತ ಚಲಾಯಿಸಲು ಬರುತ್ತಿದ್ದ ದೀಕ್ಷಿತ್ ಶೆಟ್ಟಿ ಎಂಬವರು ಚಲಾಯಿಸುತ್ತಿದ್ದ ಕಾರು ದೇವರಕೊಲ್ಲಿಯ ಗಾರೆಮುರಿ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದು ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಡಿಕೇರಿಯ ಚೇರಂಬಾಣೆ ನಿವಾಸಿ

ದೇವರಕೊಲ್ಲಿಯಲ್ಲಿ ಭೀಕರ ಅಪಘಾತ| ಬೈಕ್ ಸವಾರ‌ ಸ್ಥಳದಲ್ಲೇ ದುರ್ಮರಣ Read More »

ಮದುವೆ ಊಟ ತಿಂದು 150ಕ್ಕೂ ಹೆಚ್ಚು ಜನರಿಗೆ ಅಸ್ವಸ್ಥ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಊಟ ಮಾಡಿದ ಸಂಜೆ ವೇಳೆ ಎಲ್ಲರೂ ವಾಂತಿ ಹಾಗೂ ಇನ್ನಿತರ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಎಲ್ಲ ಆಸ್ಪತ್ರೆಗಳು ಏಕಾಏಕಿ ತುಂಬಿದ್ದ ಕಾರಣ ಒಂದು ರೀತಿಯ ಗೊಂದಲ ಉಂಟಾಯಿತು. ಅಸ್ವಸ್ಥಗೊಂಡವರು ಆರಂಭದಲ್ಲಿ ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು

ಮದುವೆ ಊಟ ತಿಂದು 150ಕ್ಕೂ ಹೆಚ್ಚು ಜನರಿಗೆ ಅಸ್ವಸ್ಥ| ಆಸ್ಪತ್ರೆಗೆ ದಾಖಲು Read More »

ಮಾದಕವಸ್ತು ಸಾಗಾಟ ಹಿನ್ನಲೆ| ಮಾಲು ಸಮೇತ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು

ಸಮಗ್ರ ನ್ಯೂಸ್: ಮಾದಕ ವಸ್ತುವಿನ ಸಾಗಾಟ ನಡೆಸಿದ ಸುಳ್ಯ ಮೂಲದ ಇಬ್ಬರು ಯುವಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಗೆ ಸೇರಿದ 1.5 ಲಕ್ಷ ರೂ. ಮೌಲ್ಯದ ಎಂಡಿಎಂಎಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಸುಳ್ಯದ ಅಲೆಟ್ಟಿ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂದು ಗುರುತಿಸಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಮಿಂಚಿನ ದಾಳಿ ನಡೆಸುವ ಮೂಲಕ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಎಂಡಿಎಂಎಯನ್ನು ಪ್ರತಿ ಗ್ರಾಂಗೆ

ಮಾದಕವಸ್ತು ಸಾಗಾಟ ಹಿನ್ನಲೆ| ಮಾಲು ಸಮೇತ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು Read More »

ಸುಬ್ರಹ್ಮಣ್ಯ: ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದ ಸುಂಕದಕಟ್ಟೆಯ ಮಂಜುನಾಥ ಮೃತರು. ಎ. 22ರಂದು ಮಂಜುನಾಥ ಅವರು ಪತ್ನಿ ಜತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಯಾಣಿಸಿದ್ದರು. ಬಸ್‌ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತಲಪುವಾಗ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ಮತ್ತು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೇ ಇದ್ದುದರಿಂದ ಮಂಜುನಾಥ ಅವರು ಕೆಳಗೆ ಬಿದ್ದು ಗಂಭೀರ ಗಾಯಗೊಂಡರು. ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ

ಸುಬ್ರಹ್ಮಣ್ಯ: ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು Read More »

ಆಕಸ್ಮಿಕವಾಗಿ ಕಾರು ಹರಿದು ಸ್ಥಳದಲ್ಲೇ ಮಗು ಸಾವು

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಮಗುವಿನ ಮೇಲೆ ಕಾರು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಮಗು ಕಾರಿನ ಡೋರ್ ಬಳಿಯೇ ನಿಂತಿತ್ತು, ಆದರೆ ಮಗುವಿನ ತಂದೆ ನೋಡದೆ ಕಾರು ಚಲಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ. ಸಂಬಂಧಿಗಳ ಮದುವೆ ಇದ್ದ ಕಾರಣ ಮಗುವಿನ ಕುಟುಂಬಸ್ಥರು ಚನ್ನಪಟ್ಟಣಕ್ಕೆ ಹೋಗಿದ್ದರು. ರಾತ್ರಿ ಹಿಂದಿರುಗಿದಾಗ ಮಗುವಿನ ತಂದೆ ಲಗೇಜ್‌ ತೆಗೆದು ಮನೆಯೊಳಗೆ

ಆಕಸ್ಮಿಕವಾಗಿ ಕಾರು ಹರಿದು ಸ್ಥಳದಲ್ಲೇ ಮಗು ಸಾವು Read More »

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು

ಸಮಗ್ರ ನ್ಯೂಸ್: ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಪ್ರವಾಸಕ್ಕೆ ಎಂದು ಹೋಗಿದ ಇವರೆಲ್ಲ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ನಜೀರ್ ಅಹ್ಮದ್(40), ಅಲ್ಛೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ‌ ಅಹ್ಮದ್(15),

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು Read More »

ಕೊಲೊಂಬೊ: ಕಾರ್ ರೇಸ್ ವೇಳೆ ಅಪಘಾತ|ಏಳು ಮಂದಿ ಸಾವು

ಸಮಗ್ರ ನ್ಯೂಸ್ : ಮೋಟಾರ್ ಕಾರ್ ರೇಸಿಂಗ್ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 8 ವರ್ಷದ ಬಾಲಕ ಹಾಗೂ ನಾಲ್ವರು ಟ್ರ್ಯಾಕ್ ಸಹಾಯಕರು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ದೀಯತಲಾವದ ಸೆಂಟ್ರಲ್ ಹಿಲ್ ರೆಸಾರ್ಟ್ನಲ್ಲಿ ನಡೆದ ರೇಸ್ನಲ್ಲಿ ಕಾರೊಂದು ಟ್ರ್ಯಾಕ್ನಿಂದ ಪಲ್ಟಿಯಾಗಿ ಪ್ರೇಕ್ಷಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 23 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ

ಕೊಲೊಂಬೊ: ಕಾರ್ ರೇಸ್ ವೇಳೆ ಅಪಘಾತ|ಏಳು ಮಂದಿ ಸಾವು Read More »

ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಬಾಪೂಜಿನಗರದ ಗಂಗಮ್ಮ ದೇವಾಲಯದ ಬಳಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ. ಮೂವರು ದುಷ್ಕರ್ಮಿಗಳು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮೆಂಟಲ್ ಸೂರಿ ಅಲಿಯಾಸ್ ಸುರೇಶ್ (45) ಕೊಲೆಯಾದ ವ್ಯಕ್ತಿ. ಈತ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿನ್ನೆಲೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳ ಸಹಾಯದಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಂದ

ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ Read More »

ಸುಳ್ಯ: ಪಯಸ್ವಿನಿಯಲ್ಲಿ ಮುಳುಗಿ ಯುವಕ ಸಾವು

ಸಮಗ್ರ ನ್ಯೂಸ್: ಸ್ನಾನ ಮಾಡುವ ವೇಳೆ ಮಂಡೆಕೋಲು ಗ್ರಾಮದ ಪಯಸ್ವಿನಿ ನದಿಯಲ್ಲಿ ಮುಳುಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಎ.17ರಂದು ಸಂಜೆ ಬಳಿಕ ಸಂಭವಿಸಿದೆ. ಮೃತನನ್ನು ಈಶ್ವರಮಂಗಲದ ಪ್ರವೀಣ್‌(38) ಎಂದು ಗುರುತಿಸಲಾಗಿದೆ. ಪ್ರವೀಣ್‌ ಅವರು ಎ.17ರಂದು ತನ್ನ ಸ್ನೇಹಿತರೊಂದಿಗೆ ಮಂಡೆಕೋಲು ಗ್ರಾಮದ ಪರಪೆಗಮಂನ್‌ ಗಾಯ ಎಂಬಲ್ಲಿ ಹರಿಯುವ ಪಯಸ್ವಿನಿ ನದಿಗೆ ಮೀನು ಹಿಡಿಯಲು ತೆರಳಿದ್ದವರು, ನದಿಯಲ್ಲಿ ಸ್ನಾನ ಮಾಡಲು ಇಳಿದಿದ್ದು, ಈ ವೇಳೆ ಪ್ರವೀಣ್‌ ಅವರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದು, ಕೂಡಲೇ ಅಲ್ಲಿದ್ದವರು ಇತರರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ

ಸುಳ್ಯ: ಪಯಸ್ವಿನಿಯಲ್ಲಿ ಮುಳುಗಿ ಯುವಕ ಸಾವು Read More »