ಕ್ರೈಂ

ನೇಪಾಳದಲ್ಲಿ ಬೆಳಗಾವಿಯ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಂದ ರೂಂಮೇಟ್

ಸಮಗ್ರ ನ್ಯೂಸ್: ಉದ್ಯೋಗಕ್ಕಾಗಿ ನೇಪಾಳದಲ್ಲಿ ನೆಲೆಸಿದ್ದ ಕರ್ನಾಟಕದ ಬೆಳಗಾವಿ ಮೂಲದ 25 ವರ್ಷದ ಯುವಕನೊಬ್ಬನನ್ನು ತನ್ನ ರೂಂಮೇಟ್‌ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಕೊಲೆಯಾಗಿರುವ ಯುವಕ ಭಾರತೀಯ ಮೂಲದವನಾಗಿದ್ದು, ಕರ್ನಾಟಕದ ಬೆಳಗಾವಿ ಜಿಲ್ಲೆಯ ಖಾನಾಪುರ ನಿವಾಸಿ 25 ವರ್ಷದ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ ಎಂದು ಗುರುತಿಸಲಾಗಿದೆ. ಈತ ನೇಪಾಳದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡಲೆಂದು ಅಲ್ಲಿಗೆ ಕೇವಲ 25 ದಿನಗಳ ಹಿಂದೆಯೇ ತೆರಳಿದ್ದಾನೆ ಎಂದು ತಿಳಿದುಬಂದಿದೆ. […]

ನೇಪಾಳದಲ್ಲಿ ಬೆಳಗಾವಿಯ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಂದ ರೂಂಮೇಟ್ Read More »

ಗಡಿಪಾರು ‌ಆದೇಶ ಪ್ರಶ್ನಿಸಿ ಮೇಲ್ಮನವಿ| ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲೂ ಹಿನ್ನಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸೌಜಸ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹಿನ್ನಡೆಯಾಗಿದೆ. ಪುತ್ತೂರು ವಿಭಾಗಾಧಿಕಾರಿ ಅವರ ಆದೇಶವನ್ನು ಎತ್ತಿಹಿಡಿರುವ ಸುಪ್ರೀಂ ಕೋರ್ಟ್ ಮಹೇಶ್ ಶೆಟ್ಟಿ ಅವರ ಮೇಲ್ಮನವಿಯನ್ನು ವಜಾಗೊಳಿಸಿದೆ. ಪುತ್ತೂರು ಉಪವಿಭಾಗಾಧಿಕಾರಿಗಳು 2026ರ ಮಾರ್ಚ್ 13ರಂದು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು

ಗಡಿಪಾರು ‌ಆದೇಶ ಪ್ರಶ್ನಿಸಿ ಮೇಲ್ಮನವಿ| ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲೂ ಹಿನ್ನಡೆ Read More »

ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ

ಸಮಗ್ರ ನ್ಯೂಸ್: ರಾಯಚೂರು ನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ (74) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸೈಯದ್ ಯಾಸೀನ್ ಅವರು ಪತ್ನಿ, ನಾಲ್ಕು ಜನ ಗಂಡು ಮಕ್ಕಳು ಹಾಗೂ ಅಪಾರ ಬಂಧು – ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಸೈಯದ್ ಯಾಸೀನ್ ಅವರು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫ‌ರ್ ಷರೀಫ ಅವರ ಅಳಿಯರಾಗಿದ್ದು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಸ್ಪರ್ಧಿಸಿದ್ದರು, ರಾಯಚೂರು

ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಶಂಕಿತರು ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಕಳೆದ ನಾಲ್ಕು ವರ್ಷಗಳಿಂದ ಕಾನೂನಿನ ಕಣ್ಣಿಗೆ ಮಣ್ಣೆರಚಿ ನಾಪತ್ತೆಯಾಗಿದ್ದ ಇಬ್ಬರು ಪ್ರಮುಖ ಶಂಕಿತರನ್ನು ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಸೆರೆಹಿಡಿಯಲಾಗಿದೆ. ಬಂಧಿತರಾದ ಅಬ್ದುಲ್ ನಾಸೀರ್ ಹಾಗೂ ನೌಷದ್ ಎಂಬುವವರನ್ನು ಮುಂದಿನ ಕಾನೂನು ಪ್ರಕ್ರಿಯೆಗಳಿಗಾಗಿ ತನಿಖಾ ತಂಡ ಸದ್ಯ ಬೆಂಗಳೂರಿಗೆ ಕರೆತರುತ್ತಿದೆ. ನಿಷೇಧಿತ ಸಂಘಟನೆಯಾದ ಪಿಎಫ್‌ಐಗೆ ಸೇರಿದ ದುಷ್ಕರ್ಮಿಗಳು 2022ರ ಜುಲೈ 26ರಂದು ಸುಳ್ಯದ ಬೆಳ್ಳಾರೆಯಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಶಂಕಿತರು ಎನ್ಐಎ ವಶಕ್ಕೆ Read More »

ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್

ಸಮಗ್ರ ನ್ಯೂಸ್: “ಪುತ್ತೂರಿನ ನರಿಮೊಗರಿನಲ್ಲಿ ನಡೆದ ಸಣ್ಣ ಮಿಸ್‌ಅಂಡರ್‌ಸ್ಟ್ಯಾಂಡಿಂಗ್ ಘಟನೆಯನ್ನು ಇಟ್ಟುಕೊಂಡು ರಾಜಕೀಯ ವಲಯದಲ್ಲಿ ಅದಕ್ಕೆ ಕೋಮು ಬಣ್ಣ ಹಚ್ಚುವ ಕೆಲಸ ನಡೆಯುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೆಣಗಳ ಮೇಲೆ ರಾಜಕೀಯ ಮಾಡುವುದೇ ಬಿಜೆಪಿಯವರ ಮುಖ್ಯ ಉದ್ದೇಶವಾಗಿದೆ” ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಮರಳಿದ ತಕ್ಷಣ ನರಿಮೊಗರು ಘಟನೆಯ ಬಗ್ಗೆ ಶನಿವಾರ ಬೆಳಿಗ್ಗೆ ದೂರು ಮತ್ತು ಪ್ರತಿ ದೂರು ನೀಡಿರುವ ಎರಡೂ ಕುಟುಂಬಗಳ ಮನೆಗೆ ಖುದ್ದಾಗಿ ಭೇಟಿ ನೀಡಿ

ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್ Read More »

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ

ಸಮಗ್ರ ನ್ಯೂಸ್: ಸುರತ್ಕಲ್ ನ‌ ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಗುರುವಾರ ರಾತ್ರಿ ವಶಕ್ಕೆ ಪಡೆದುಕೊಂಡು ವಿಚಾರಣೆಯ ಬಳಿಕ ಬಂಧಿಸಿದ್ದಾರೆ. ಬಂಧಿತರನ್ನು ಮುಹಮ್ಮದ್‌ ಮುಖ್ತಾರ್‌ ಅಲಿ ( 36), ಮುಹಮ್ಮದ್‌ ರಾಕಿಬುರ್‌ ಹುಸೈನ್‌ (44), ಮುಹಮ್ಮದ್‌ ಅಝರುಲ್‌ ಇಸ್ಲಾಂ ( 36), ಮುಹಮ್ಮದ್‌ ಝೈದ್‌ ಹುಸನ್‌ (18), ಮುಹಮ್ಮದ್‌ ಬಿಲಾಲ್‌ ಹುಸೈನ್‌ (36), ಮುಹಮ್ಮದ್‌ ಹಾಸಿಬುಲ್‌ ಹಸನ್‌ ಶನ್ಟೊ ( 37), ಮುಹಮ್ಮದ್‌

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ Read More »

ಫೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ‌6 ಮಂದಿಯ ಕಗ್ಗೊಲೆ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ಆರೋಪಿ ಒಬ್ಬ ಆರು ಜನರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪೋಕ್ಸೋ ಕೇಸ್ ಆರೋಪಿಯಿಂದ ಆರು ಜನರ ಸಾಮೂಹಿಕ ಕೊಲೆ ನೆಡೆದಿದ್ದು ದೈವಲಗೂಡು ಗ್ರಾಮದಲ್ಲಿ 28 ವರ್ಷದ ರಾಜಕುಮಾರ ಎಂಬಾತನಿಂದ ಈ ಕೊಲೆ ನಡೆದಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲಮ್ಮನ ದೈವಲಗೂಡ ಎಂಬಲ್ಲಿ ಈ ಒಂದು ಘಟನೆ ನಡೆದಿದ್ದು, ಆರೋಪಿ ರಾಜಕುಮಾರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪೋಕ್ಸೋ ಕೇಸ್ ನ ಅಪ್ರಾಪ್ತ ಬಾಲಕಿ, ಆಕೆಯ

ಫೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ‌6 ಮಂದಿಯ ಕಗ್ಗೊಲೆ Read More »

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ

ಸಮಗ್ರ ನ್ಯೂಸ್: “ನನ್ನ ಪತಿ ಟಿ.ಎಂ.ಶಹೀದ್ ತೆಕ್ಕಿಲ್ ರವರು ನನ್ನ ಮದುವೆಯ ಸಂದರ್ಭದಲ್ಲಿ ನನ್ನ ತಂದೆ ನನಗಾಗಿ ನೀಡಿದ್ದ 110 ಪವನ್ ಚಿನ್ನ ಮತ್ತು ನನಗೆ ನೀಡಿರುವ ಆಸ್ತಿಯನ್ನು ಕಬಳಿಸಿ, ಇದೀಗ ನನಗೆ ಮತ್ತು ನನ್ನ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ಅದರ ಬಗ್ಗೆ ಅವರಲ್ಲಿ ಮಾತನಾಡಿದರೆ ‘ ನೀನು ಸಿ.ಎಂ. ಅಲ್ಲ ಪಿ.ಎಂ. ಬಳಿ ಹೋದರೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಗದರಿಸುತ್ತಿದ್ದಾರೆ”, ಅಲ್ಲದೇ ರಾಜಕೀಯ ಪ್ರಭಾವ ಬಳಸಿಕೊಂಡು ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ” ಎಂದು

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ Read More »

ಯಲ್ಲಾಪುರ ಬಳಿ ಭೀಕರ ಅಪಘಾತ| ಆರು ಮಂದಿ ದಾರುಣ ಸಾವು

ಸಮಗ್ರ ನ್ಯೂಸ್: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ಸಮೀಪ ಬಳಗಾರ್ ಬಳಿ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಹೊರಟಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿದೆ. ಕ್ರೂಸರ್ ವಾಹನದಲ್ಲಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಧಾರವಾಡ ಮೂಲದವರು ಎನ್ನಲಾಗಿದೆ. ಕ್ರೂಸರ್ ವಾಹನದ ಚಾಲಕ ಸಂಜೀವ್(33), ಬಸವರಾಜ್(48), ಅಭಿಷೇಕ್ ಈಶ್ವರ್(28), ಅಕ್ಷಯ್(26), ಅಭಿಷೇಕ್(26), ಮಂಜುನಾಥ್ ಅಶೋಕ್ ಚುಲಕಿ(32) ಮೃತಪಟ್ಟವರು ಎಂದು

ಯಲ್ಲಾಪುರ ಬಳಿ ಭೀಕರ ಅಪಘಾತ| ಆರು ಮಂದಿ ದಾರುಣ ಸಾವು Read More »

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ. ಕಲ್ಪೆಟ್ಟಾದಿಂದ ಅಗ್ನಿ ಶಾಮಕದ ದಳವು ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡಿದೆ. ಸುರಂಗ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಅ ಪ್ರದೇಶದಲ್ಲಿಯೇ ತಾತ್ಕಾಲಿಕ ಕ್ಯಾಂಪ್‌ಗಳಲ್ಲಿ

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ Read More »