ಕ್ರೈಂ

ಕೇರಳದಲ್ಲಿ ಆನೆ ದಂತ ಮಾರಾಟಕ್ಕೆ ಯತ್ನ| 6 ಮಂದಿ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್: ಕೇರಳದ ಮಾನಂದವಾಡಿಯಲ್ಲಿ ಆನೆ ದಂತ ಮಾರಾಟಕ್ಕೆ ಯತ್ನ. ಗೋಣಿಕೊಪ್ಪಲು ಹಾಗೂ ವಯನಾಡಿನ ಆರು ಮಂದಿ, ದಂತ ಸಹಿತ ಪೋಲಿಸ್ ವಶಕ್ಕೆ. ರಾಜ್ಯದಿಂದ ದಂತ ತೆಗೆದುಕೊಂಡು ಕೇರಳದಲ್ಲಿ ಮಾರಾಟಕ್ಕೆ ಯತ್ನ. ಮಾನಂದವಾಡಿ ಲಾಡ್ಜ್ ನಲ್ಲಿದ್ದ ಆರೋಪಿಗಳು ಕೇರಳ ಅರಣ್ಯ ಇಲಾಖೆಯ ಗುಪ್ತಚರ ಮತ್ತು ಫ್ಲೈಯಿಂಗ್ ಸ್ಕ್ವಾಡ್ ತಂಡಗಳ ಜಂಟಿ ಕಾರ್ಯಾಚರಣೆ. ಆನೆ ದಂತ ಸಹಿತ ಲಾಡ್ಜ್ ನಲ್ಲಿ ತಂಗಿದ್ದ ಆರೋಪಿಗಳು ವಶಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಕೊಪ್ಪಲು ಪಟ್ಟಣದಲ್ಲಿ ಕೇರಳ ಪೊಲೀಸರಿಂದ ತನಿಖೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರರ […]

ಕೇರಳದಲ್ಲಿ ಆನೆ ದಂತ ಮಾರಾಟಕ್ಕೆ ಯತ್ನ| 6 ಮಂದಿ ಪೊಲೀಸರ ವಶಕ್ಕೆ Read More »

ಲುಲು ಮಾಲ್ ನಲ್ಲಿ ಯುವತಿಯ ಪೃಷ್ಠ ಸ್ಪರ್ಶಿಸಿ ವಿಕೃತಿ ಮೆರೆದಾತನ ಗುರುತು ಪತ್ತೆ| ಪ್ರಸಿದ್ಧ ಶಾಲೆಯ ಮುಖ್ಯೋಪಾಧ್ಯಾಯನಿಗೆ ಇದೇನು ತೀಟೆ!!

ಸಮಗ್ರ ನ್ಯೂಸ್: ಬೆಂಗಳೂರಿನ ಲುಲು ಮಾಲ್​ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ಇತ್ತೀಚೆಗಷ್ಟೇ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ ವೀಡಿಯೊ ದೃಶ್ಯ ಆಧರಿಸಿ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಲುಲು ಮಾಲ್ ನಲ್ಲಿ ಯವತಿಯರ ಜೊತೆ ಅಸಭ್ಯವಾಗಿ ಅಶ್ವಥ್ ನಾರಾಯಣ್ ವರ್ತಿಸಿದ್ದ. ಈ ವೇಳೆ ಯುವಕ ಯಶವಂತ್ ವೀಡಿಯೊ ಚಿತ್ರೀಕರಿಸಿದ್ದ. ವೀಡಿಯೊ ವೈರಲ್ ಬಳಿಕ ಲುಲು

ಲುಲು ಮಾಲ್ ನಲ್ಲಿ ಯುವತಿಯ ಪೃಷ್ಠ ಸ್ಪರ್ಶಿಸಿ ವಿಕೃತಿ ಮೆರೆದಾತನ ಗುರುತು ಪತ್ತೆ| ಪ್ರಸಿದ್ಧ ಶಾಲೆಯ ಮುಖ್ಯೋಪಾಧ್ಯಾಯನಿಗೆ ಇದೇನು ತೀಟೆ!! Read More »

ಮಡಿಕೇರಿ:ಕೊಂಗಣ ಹೊಳೆಯಲ್ಲಿ ಯುವಕನ ಮೃತದೇಹ ಪತ್ತೆ

ಸಮಗ್ರ ನ್ಯೂಸ್:ಪೊನ್ನಂಪೇಟೆ ತಾಲೂಕು ಬಿ.ಶೆಟ್ಟಿಗೇರಿ ಗ್ರಾಮದ ಕೊಂಗಣ ಹೊಳೆಯಲ್ಲಿ ಯುವಕನೋರ್ವನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಮಡಿಕೇರಿ ತಾಲೂಕು ಚೆಟ್ಟಳ್ಳಿಯ ಪುತ್ತರಿರ ಗಗನ್ ಎಂದು ಗುರುತಿಸಲಾಗಿದೆ. ವಿವಾಹಿತರಾಗಿರುವ ಅವರು ಬಿ.ಶೆಟ್ಟಿಗೇರಿ ಸಮೀಪ ಕಾಫಿ ಎಸ್ಟೇಟ್ ಒಂದರಲ್ಲಿ ವ್ಯವಸ್ಥಾಪಕ ಹುದ್ದೆಯನ್ನು ನಿರ್ವಹಿಸುತ್ತಿದ್ದರು.

ಮಡಿಕೇರಿ:ಕೊಂಗಣ ಹೊಳೆಯಲ್ಲಿ ಯುವಕನ ಮೃತದೇಹ ಪತ್ತೆ Read More »

ಮಂಗಳೂರು: ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನೇ ಕೊಲೆಗೈದ ಪಾಪಿ ಮಗ| ಶಿಕ್ಷಿತರ ಜಿಲ್ಲೆಯಲ್ಲೊಂದು ಪೈಶಾಚಿಕ ಘಟನೆ

ಸಮಗ್ರ ನ್ಯೂಸ್: ಸುಶಿಕ್ಷಿತರ ಜಿಲ್ಲೆಯೆಂಬ ಹೆಗ್ಗಳಿಕೆಯಿರುವ ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರ ಸ್ಥಾನವಾದ ಮಂಗಳೂರಿನಲ್ಲೊಂದು ಮೃಗೀಯ ಘಟನೆ ಬೆಳಕಿಗೆ ಬಂದಿದೆ. ಮಗನೇ ಹೆತ್ತ ತಾಯಿಯನ್ನು ಅತ್ಯಾಚಾರ ಮಾಡಲು ಯತ್ನಿಸಿ, ತಾಯಿ ಅದನ್ನು ವಿರೋಧಿಸಿದಾಗ ಆಕೆಯನ್ನೆ ಹತ್ಯೆಗೈದ ಆಘಾತಕಾರಿ ಘಟನೆ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ನಡೆದಿದೆ. ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ(62) ಹತ್ಯೆಯಾದವರು. ಆಕೆಯ ಪುತ್ರ ರವಿರಾಜ್ ಶೆಟ್ಟಿ ಕೃತ್ಯ ಎಸಗಿದ ಪಾಪಿ. ಅಕ್ಟೋಬರ್ 26 ರ ರಾತ್ರಿ ಈತ ತಾಯಿಯನ್ನು ಕೊಂದು ಬಳಿಕ

ಮಂಗಳೂರು: ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನೇ ಕೊಲೆಗೈದ ಪಾಪಿ ಮಗ| ಶಿಕ್ಷಿತರ ಜಿಲ್ಲೆಯಲ್ಲೊಂದು ಪೈಶಾಚಿಕ ಘಟನೆ Read More »

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ/ ಕರ್ಪ್ಯೂ ಜಾರಿ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಧರಾಶಿವ್ ಮತ್ತು ಬೀಡ್ ಜಿಲ್ಲೆಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ. ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತೆ ಇಲ್ಲ ಎಂದು ಸ್ಥಳೀಯ ಆಡಳಿತ ಆದೇಶ ನೀಡಿದೆ. ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಅವಶ್ಯಕ ವಸ್ತುಗಳನ್ನು ಹೊರತುಪಡಿಸಿ ಇತರೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸತ್ಯಾಗ್ರಹ ಮತ್ತು ಪ್ರತಿಭಟನೆಗಳು ನಡೆಯುತ್ತಿದ್ದು, ಪ್ರತಿಭಟನಾಕಾರರು ಎನ್‍ಸಿಪಿ ಶಾಸಕ

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ/ ಕರ್ಪ್ಯೂ ಜಾರಿ Read More »

ಮರಾಠಾ ಮೀಸಲಾತಿ ಹೋರಾಟಕ್ಕೆ ರಾಜ್ಯ ಸಾರಿಗೆ ಬಸ್ ಗೆ ಬೆಂಕಿ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಕೆ.ಎ-38 ಎಫ್-1201 ಬಸ್‌ಗೆ ಬೆಂಕಿ ಹಚ್ಚಿದ್ದರಿಂದ ಸುಟ್ಟು ಕರಕಲಾಗಿದೆ. ಕಿಡಿಗೇಡಿಗಳು, ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದಿಂದ ಬಸ್‌ನಲ್ಲಿದ್ದ 39 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನಂತರ ಪ್ರಯಾಣಿಕರಿಗೆ ಸುರಕ್ಷಿತವಾಗಿ ಅವರ ತಲುಪುವ

ಮರಾಠಾ ಮೀಸಲಾತಿ ಹೋರಾಟಕ್ಕೆ ರಾಜ್ಯ ಸಾರಿಗೆ ಬಸ್ ಗೆ ಬೆಂಕಿ Read More »

ಮೀಸಲಾತಿ ವಿವಾದಕ್ಕೆ ಶಾಸಕರ ಮನೆಯೇ ಭಸ್ಮ!!

ಸಮಗ್ರ ನ್ಯೂಸ್: ಮರಾಠ ಮೀಸಲಾತಿ ಹೋರಾಟಗಾರರು ಮಹಾರಾಷ್ಟ್ರದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಶಾಸಕರ ಮನೆ ಹೊತ್ತಿ ಉರಿದಿದೆ. ಮನೆಗೆ ಬೆಂಕಿ ಹಚ್ಚಿದ್ದ ವೇಳೆ ಶಾಸಕರು, ಅವರ ಕುಟುಂಬ ಮತ್ತು ಸಿಬ್ಬಂದಿ ಮನೆಯೊಳಗಡೆ ಇದ್ದರೂ ಅದೃಷ್ಟವಶಾತ್ ಬಚಾವಾಗಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಏಕನಾಥ್ ಶಿಂದೆ, ನಿಮ್ಮ ಹೋರಾಟ ದಾರಿ ತಪ್ಪುತ್ತಿದೆ ಎಂದು ಮರಾಠ ಮೀಸಲಾತಿ ಹೋರಾಟದ ನೇತೃತ್ವ ವಹಿಸಿರುವ ಮನೋಜ್

ಮೀಸಲಾತಿ ವಿವಾದಕ್ಕೆ ಶಾಸಕರ ಮನೆಯೇ ಭಸ್ಮ!! Read More »

ಮನೆ ಬಿಟ್ಟು ಹೋದ ತಂದೆಯ ಕಾರಣ ಖಿನ್ನತೆಗೊಳಗಾದ ಮಗ| ವೇದನೆ ಸಹಿಸದೆ ಆತ್ಮಹತ್ಯೆಗೈದ ಪುತ್ರ|

ಸಮಗ್ರ ನ್ಯೂಸ್: ಒಣಗಿದ ಅಡಕೆ ರಾಶಿ ಮಧ್ಯೆ ಯುವಕನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯ ಎಂಬವರ ಪುತ್ರ ಸೈಬಿನ್ ಮೃತರು. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಶುಕ್ರವಾರ(ಅ.27) ಮಧ್ಯಾಹ್ನದ ವೇಳೆಗೆ ಪತ್ತೆಯಾಗಿತ್ತು. ಈ ಮಧ್ಯೆ ಮೂರು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಸೈಬಿನ್ ತಂದೆ ಸಿರಿಯಾಕ್ ಮ್ಯಾಥ್ಯೂ ಗುತ್ತಿಗಾರಿಗೆ ಬಂದಿರುವುದಾಗಿ ತಿಳಿದುಬಂದಿದೆ ಸಿರಿಯಾಕ್ ಮಾಥ್ ಅವರು 3 ತಿಂಗಳ ಹಿಂದೆ

ಮನೆ ಬಿಟ್ಟು ಹೋದ ತಂದೆಯ ಕಾರಣ ಖಿನ್ನತೆಗೊಳಗಾದ ಮಗ| ವೇದನೆ ಸಹಿಸದೆ ಆತ್ಮಹತ್ಯೆಗೈದ ಪುತ್ರ| Read More »

ಸುಳ್ಯ: ಒಣ ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆ

ಸಮಗ್ರ ನ್ಯೂಸ್: ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಲಾಗಿದೆ. ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಇಂದು ಮಧ್ಯಾಹ್ನದ ವೇಳೆಗೆ ಘಟನೆ ಬೆಳಕಿಗೆ

ಸುಳ್ಯ: ಒಣ ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆ Read More »

ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ‌ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!!

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ‌ ಮುಲ್ಕಿ ಕುಬೆವೂರು ರೈಲು ಸೇತುವೆ ಬಳಿ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆಯಾದ ಬಗ್ಗೆ ಮೂಲ್ಕಿ ಠಾಣೆಯ ಪೊಲೀಸ್‌ ಸಿಬ್ಬಂದಿ ಮಹಜರು ನಡೆಸುವಾಗ ರೈಲೊಂದು ಧಾವಿಸಿ ಬಂದಿದ್ದು, ಸಿಬ್ಬಂದಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮೂಲ್ಕಿ ರೈಲು ನಿಲ್ದಾಣದ ಸಿಬ್ಬಂದಿ ಕುಮಾರ್ ಅವರ ಪುತ್ರ ವಿಶ್ಲೇಷ್ (26) ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಮಾಹಿತಿ ಪಡೆದ ಮೂಲ್ಕಿ ಠಾಣೆಯ ಎಎಸ್‌ಐ ಸಂಜೀವ, ಚಂದ್ರಶೇಖರ, ಶಂಕರ, ಬಸವರಾಜ್

ಮಂಗಳೂರು: ಹಳಿಯಲ್ಲಿ ಮೃತದೇಹ ಮಹಜರು ವೇಳೆ ಧಾವಿಸಿ ಬಂದ‌ ರೈಲು| ಪೊಲೀಸರು ಪ್ರಾಣಾಪಾಯದಿಂದ ಜಸ್ಟ್ ಮಿಸ್!! Read More »