ಕ್ರೈಂ

ಪುತ್ತೂರು: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲ ತಾಣಗಳಲ್ಲಿ ವೀಡಿಯೋ ಹರಿಯಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ಯುವಕನನ್ನು ಕಟ್ಟತ್ತಾರು ನಿವಾಸಿ ನಾ‌ಸಿರ್ ಎಂದು ಗುರುತಿಸಲಾಗಿದೆ. ತಾನು ಡ್ರೈವರ್ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕರು ತನ್ನನ್ನು ಕರೆಸಿ ಹಲ್ಲೆ ನಡೆಸಿದ್ದಾರೆ ಎಂದು ವೀಡಿಯೋ ಮೂಲಕ ಹೇಳಿದ್ದು ತದನಂತರ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ […]

ಪುತ್ತೂರು: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು Read More »

ಧರ್ಮಸ್ಥಳ: ಕುಸುಮಾವತಿಯವರಿಗಾಗಿ ನಾವು ಅಣ್ಣಪ್ಪ ಬೆಟ್ಟದಲ್ಲಿ ಕಾಯುತ್ತಿರುತ್ತೇವೆ| ಉದಯ್ ಜೈನ್, ಮಲ್ಲಿಕ್ ಜೈನ್, ಧೀರಜ್ ಕೆಲ್ಲ ವಾಟ್ಸಪ್ ಸಂದೇಶ ವೈರಲ್

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಧರ್ಮಸ್ಥಳದ ಬಳಿಯ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಮರು ತನಿಖೆಗೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಅದೀಗ ರಾಜ್ಯದ ಎಲ್ಲೆಯನ್ನು ದಾಟಿ ಮುನ್ನುಗುತ್ತಿದೆ. ಕಳೆದ 3- 4 ದಿನಗಳಿಂದ ಈ ಹೋರಾಟ ವೇಗವನ್ನು ಹೆಚ್ಚಿಸಿಕೊಂಡಿದ್ದು ಮುಂದಿನ ಒಂದು ವಾರಗಳ ಕಾಲ ಬೆಳ್ತಂಗಡಿಯನ್ನು ಕೇಂದ್ರಿಕರಿಸಿ ಹಲವು ಹೋರಾಟಗಳು ನಡೆಯುತ್ತಿವೆ. ಆ 27 ರಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಧರ್ಮಸ್ಥಳಕ್ಕೆ ಪಾದಯಾತ್ರೆಯೊಂದನ್ನು ಆಯೋಜಿಸಿದೆ. ಇದರಲ್ಲಿ ಸೌಜನ್ಯ ತಾಯಿ

ಧರ್ಮಸ್ಥಳ: ಕುಸುಮಾವತಿಯವರಿಗಾಗಿ ನಾವು ಅಣ್ಣಪ್ಪ ಬೆಟ್ಟದಲ್ಲಿ ಕಾಯುತ್ತಿರುತ್ತೇವೆ| ಉದಯ್ ಜೈನ್, ಮಲ್ಲಿಕ್ ಜೈನ್, ಧೀರಜ್ ಕೆಲ್ಲ ವಾಟ್ಸಪ್ ಸಂದೇಶ ವೈರಲ್ Read More »

ಚಿಕ್ಕಮಗಳೂರು: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ತಹಶೀಲ್ದಾರ್ ಬಂಧನ

ಸಮಗ್ರ ನ್ಯೂಸ್: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಉಮೇಶ್ ಬಂಧನ. ಕಡೂರಿನಲ್ಲಿ 3500 ಎಕರೆ ಭೂಮಿ, ಮೀಸಲು ಅರಣ್ಯವನ್ನು 8 ಜನರಿಗೆ ಪರಭಾರೆ ಮಾಡಿದ್ದ ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕಡೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದು, ಅವರು ಪ್ರಮೋಷನ್ ಆಗಿ ಕಾರವಾರ ಸೀಬರ್ಡ್ ನೌಕನೆಲೆಯಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಚಿಕ್ಕಮಗಳೂರು: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ತಹಶೀಲ್ದಾರ್ ಬಂಧನ Read More »

ಬೆಳ್ತಂಗಡಿ: ಕಡವೆ ಬೇಟೆಯಾಡಿದ ಮೂರು ಮಂದಿ ಬಂಧನ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿ ಕಪಿಲಾ ನದಿ ತೀರದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿದ ಮೂವರನ್ನು ಬಂದೂಕು ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಉಪ್ಪಿನಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯ ದಡಂತಮಲೆ ಬಟ್ಟಾಡಿ ಕಪಿಲ ನದಿ‌ ಪಕ್ಕದಲ್ಲಿ ನಾಲ್ಕು ವರ್ಷ ಪ್ರಾಯದ ಕಡವೆಯನ್ನು ಆರೋಪಿಗಳು ಮಂಗಳವಾರ ರಾತ್ರಿ ಬೇಟೆಯಾಡಿದ್ದರು. ಅರಣ್ಯ ಇಲಾಖೆಯ ಸಿಬಂದಿ ರಾತ್ರಿ ಗಸ್ತು ತಿರುಗುವಾಗ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ

ಬೆಳ್ತಂಗಡಿ: ಕಡವೆ ಬೇಟೆಯಾಡಿದ ಮೂರು ಮಂದಿ ಬಂಧನ Read More »

ಧರ್ಮಸ್ಥಳ:ಸ್ನಾನಕ್ಕೆಂದು ಬಂದ ಮಹಿಳೆಯ ಜೊತೆ ಯುವಕನ ಅಸಭ್ಯ ವರ್ತನೆ

ಸಮಗ್ರ ನ್ಯೂಸ್: ಸ್ನಾನಕ್ಕೆ ತೆರಳಿದ್ದ ಮಹಿಳೆಯ ಜೊತೆ ಯುವಕನೋರ್ವ ಅಸಭ್ಯ ವರ್ತಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮನೋಜ್ ಓ.ಆರ್. ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಸ್ನಾನ ಮಾಡಲೆಂದು ಬಚ್ಚಲು ಮನೆಗೆ ಹೋದಾಗ ನೆರೆ ಮನೆಯ ಯುವಕ ಬಚ್ಚಲು ಮನೆಗೆ ಪ್ರವೇಶ ಮಾಡಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಬೊಬ್ಬೆ ಹಾಕಿದಾಗ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

ಧರ್ಮಸ್ಥಳ:ಸ್ನಾನಕ್ಕೆಂದು ಬಂದ ಮಹಿಳೆಯ ಜೊತೆ ಯುವಕನ ಅಸಭ್ಯ ವರ್ತನೆ Read More »

ಸುಳ್ಯ: ತಮಿಳುನಾಡು ಮೂಲದ ದಂಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ತಾಲೂಕಿನ ದೇವಚಳ್ಳ ಗ್ರಾಮದ ಎಲಿಮಲೆಯ‌ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ‌ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರಿಯರು,

ಸುಳ್ಯ: ತಮಿಳುನಾಡು ಮೂಲದ ದಂಪತಿ ಆತ್ಮಹತ್ಯೆ Read More »

ಚಿಕ್ಕಮಗಳೂರು: ಮಲೆನಾಡಿನಲ್ಲಿ ವನ್ಯಜೀವಿಗಳಿಗೆ ಆಪತ್ತು| ಅಕ್ರಮ ಶಿಕಾರಿಗೆ ವನ್ಯಜೀವಿಗಳು ಬಲಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ತಾಲೂಕಿನ ಮೇಲಿನ ಹಲುವತ್ತಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಬೃಹತ್ ಗಾತ್ರದ ಜಿಂಕೆ ಶಿಕಾರಿ ಮಾಡಿರುವ ಪ್ರಕರಣ ದಾಖಲಾಗಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೊಡಿ ಪ್ರಾದೇಶಿಕ ವಲಯದಲ್ಲಿ ಬೃಹತ್ ಗಾತ್ರದ ಜಿಂಕೆ ಬೇಟೆ ಮಾಡಿರುವುದು ಬೆಳಕಿಗೆ ಬಂದಿದೆ. ಶಿಕಾರಿ ಮಾಡಿ ಅಲ್ಲೇ ಬಾಡೂಟ ಮಾಡಿದ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದು ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 25ಕೆಜಿ ತೂಕದ ಜಿಂಕೆಯನ್ನು ಶಿಕಾರಿ ಮಾಡಿರುವ ಆರೋಪ ವ್ಯಕ್ತವಾಗಿದೆ. ಈ

ಚಿಕ್ಕಮಗಳೂರು: ಮಲೆನಾಡಿನಲ್ಲಿ ವನ್ಯಜೀವಿಗಳಿಗೆ ಆಪತ್ತು| ಅಕ್ರಮ ಶಿಕಾರಿಗೆ ವನ್ಯಜೀವಿಗಳು ಬಲಿ Read More »

ಹಾಸನ: ಜೈಲಿನಲ್ಲೇ ಗಾಂಜಾ ಮಾರಾಟ|ಕೈದಿಗಳಿಂದಲೆ ಮಾಹಿತಿ ಬೆಳಕಿಗೆ

ಸಮಗ್ರ ನ್ಯೂಸ್: ಹಾಸನದ ಜೈಲಿನೊಳಗೆ ಗಾಂಜಾ, ಚರಸ್ ಅನ್ನು ಮಾರಾಟ ಮಾಡುತ್ತಿರುವ ಬಗ್ಗೆ ಕೈದಿಗಳೇ ಮಾಹಿತಿಯನ್ನು ಹೊರಗೆಡವಿದ್ದಾರೆ. ಜೈಲಿನ ಕೈದಿಗಳಿಗೆ ಒಂದು ಪಾಕೆಟ್ ಗಾಂಜಾಕ್ಕೆ 5ರಿಂದ 10 ಸಾವಿರಕ್ಕೆ ಮಾರುತಿದ್ದು, ಕಡಿಮೆ ಹಣಕ್ಕೆ ಗಾಂಜಾ ತರಿಸಿ ದುಬಾರಿ ಬೆಲೆಗೆ ಜೈಲಿನೊಳಗೆ ಗಾಂಜಾ ಮಾರಾಟ ಮಾಡ್ತಿದ್ದಾರೆ ಎನ್ನಲಾಗಿದೆ. ಜೈಲು ಸಿಬ್ಬಂದಿ ಹಾಗು ಅಧಿಕಾರಿಗಳ ವಿರುದ್ದವೇ ವಿಚಾರಣಾಧೀನ ಕೈದಿಗಳು ಈ ಆರೋಪ ಮಾಡಿದ್ದಾರೆ.

ಹಾಸನ: ಜೈಲಿನಲ್ಲೇ ಗಾಂಜಾ ಮಾರಾಟ|ಕೈದಿಗಳಿಂದಲೆ ಮಾಹಿತಿ ಬೆಳಕಿಗೆ Read More »

ಉಪ್ಪಿನಂಗಡಿ: ಡ್ರಗ್ಸ್ ಸಾಗಾಟದಲ್ಲಿ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಅವರಿಂದ 6 ಸಾವಿರ ಮೌಲ್ಯದ 3.2 ಮಿಲಿ ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಬಜತ್ತೂರು ಗ್ರಾಮದ ಲತೀಫ್ ಬಿ.ಎ. (35) ಹಾಗೂ ಕೊಕ್ಕಡ ಗ್ರಾಮದ ಬಿ.ಜುನೈದ್‌ (30) ಎಂದು ಗುರುತಿಸಲಾಗಿದೆ. ಇವರಿಬ್ಬರು ಇಲ್ಲಿನ ಕೂಟೇಲು ಬಳಿ ಆ. 15ರಂದು ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಸ್ಕಾರ್ಪಿಯೋ ವಾಹನವೊಂದನ್ನು ಪೊಲೀಸರು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ವಾಹನವನ್ನು

ಉಪ್ಪಿನಂಗಡಿ: ಡ್ರಗ್ಸ್ ಸಾಗಾಟದಲ್ಲಿ ಇಬ್ಬರು ಅರೆಸ್ಟ್ Read More »

ಅರಂತೋಡು:ಆಧಾರ್ ಕಾರ್ಡ್ ಬದಲಾವಣೆಗೆ ತಂಭ್ ಕೊಡಲು ಹೋದ ವ್ಯಕ್ತಿ ನಾಪತ್ತೆ

ಸಮಗ್ರ ನ್ಯೂಸ್:ಆಧಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಅರಂತೊಡಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಆ. 8ರಂದು ವರದಿಯಾಗಿದೆ. ಚೆಂಬುಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ (65) ಅವರು ಅರಂತೋಡಿಗೆ ತೆರಳಿದ್ದರು. ಅಲ್ಲಿಂದ ಸುಳ್ಯ ಕಡೆಗೆ ಬರುವ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಮರಳಿ ಹಿಂತಿರುಗದೆ ಇರುವುದರಿಂದ ಮನೆಯವರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾವಚಿತ್ರದಲ್ಲಿರುವ ವ್ಯಕ್ತಿಯು ಕಂಡುಬಂದಲ್ಲಿ ಸುಳ್ಯ ಠಾಣೆಗೆ ತಿಳಿಸುವಂತೆ ಅಥವಾ 9731435253, 7760505928 ಸಂಖ್ಯೆಗೆ ತಿಳಿಸುವಂತೆ ಕೋರಲಾಗಿದೆ.

ಅರಂತೋಡು:ಆಧಾರ್ ಕಾರ್ಡ್ ಬದಲಾವಣೆಗೆ ತಂಭ್ ಕೊಡಲು ಹೋದ ವ್ಯಕ್ತಿ ನಾಪತ್ತೆ Read More »