ಕ್ರೈಂ

ನೆಲ್ಯಾಡಿ: ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ […]

ನೆಲ್ಯಾಡಿ: ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್| ಸವಾರ ಸ್ಥಳದಲ್ಲೇ ಸಾವು Read More »

ಹುಣಸೂರು:ವಾಹನ ಡಿಕ್ಕಿ ಪಾದಾಚಾರಿ ಸಾವು

ಸಮಗ್ರ ನ್ಯೂಸ್: ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರಗಾಯಗೊಂಡಿದ್ದ ವೃದ್ದರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ನಗರದ ನರಸಿಂಹಸ್ವಾಮಿ ತಿಟ್ಟಿನ ಬಳಿ ನಡೆದಿದೆ. ಎಚ್.ಡಿ. ಕೋಟೆ ಪಟ್ಟಣದ ನಿವಾಸಿ ಪುಟ್ಟಸ್ವಾಮಿ (65) ಮೃತ ವ್ಯಕ್ತಿ. ವೃದ್ದ ಪುಟ್ಟಸ್ವಾಮಿಯವರು ಶನಿವಾರ ಸಂಜೆ ಎಚ್.ಡಿ. ಕೋಟೆಯಿಂದ ಸಾರಿಗೆ ಸಂಸ್ಥೆ ಬಸ್ ನಲ್ಲಿ ಹುಣಸೂರಿಗೆ ಬಂದು ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯಲ್ಲಿರುವ ಅವರ ತಮ್ಮನ ಮಗಳ ಮನೆಗೆ ನಡೆದು ಹೋಗುತ್ತಿದ್ದರು. ವೇಳೆ ಹೆದ್ದಾರಿಯಲ್ಲಿ ಬಂದ ಅಪರಿಚಿತ ವಾಹನ ಡಿಕ್ಕಿಕೊಡೆದ ಪರಿಣಾಮ ತಲೆ,

ಹುಣಸೂರು:ವಾಹನ ಡಿಕ್ಕಿ ಪಾದಾಚಾರಿ ಸಾವು Read More »

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ಮರು ತನಿಖೆ ನಡೆಸಲು ಸಿಎಂ‌ಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಮನವಿ

ಸಮಗ್ರ ನ್ಯೂಸ್: ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಧರ್ಮಸ್ಥಳದ ಸೌಜನ್ಯಾ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರಿಗೆ ಲಿಖಿತ ದೂರು ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೌಜನ್ಯಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. 2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು, ಅದರ ವಿಚಾರವಾಗಿ ಹಲವು ತನಿಖೆ ನಡೆದು ತಮ್ಮ ನೇತೃತ್ವದ ಸರಕಾರ ಈ ಪ್ರಕರಣವನ್ನು

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ಮರು ತನಿಖೆ ನಡೆಸಲು ಸಿಎಂ‌ಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಮನವಿ Read More »

ವಿಟ್ಲ: ಪೆರುವಾಯಿ ಕೋಳಿ ಅಂಕಕ್ಕೆ ಧಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್|ಯುವಕನ ಮೇಲೆ ಕಿಡಿಗೇಡಿಗಳಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಯುವಕನೊಬ್ಬನಿಗೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ವಿಟ್ಲದ ಕಾವೇರಿ ಬಾರ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಪೆರುವಾಯಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ವರುಣ್ ರೈ ಅಂತರಗುತ್ತು ನೇತೃತ್ವದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಧಾಳಿ ಮಾಡಿದ್ದು ಈ ವಿಚಾರವಾಗಿ ನಿನ್ನೆ ರಾತ್ರಿ ಬಾರ್‌ನಲ್ಲಿ ಯುವಕರ ನಡುವೆ ಮಾತಿನ ಚಕಾಮಕಿ ಬೆಳೆದಿದೆ. ಹಲ್ಲೆಗೊಳಗಾದ ಸುರೇಶ್ ಗಂಭೀರ ಗಾಯಗೊಂಡಿದ್ದು ಕೂಡಲೇ ವಿಟ್ಲ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ

ವಿಟ್ಲ: ಪೆರುವಾಯಿ ಕೋಳಿ ಅಂಕಕ್ಕೆ ಧಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್|ಯುವಕನ ಮೇಲೆ ಕಿಡಿಗೇಡಿಗಳಿಂದ ಹಲ್ಲೆ: ಆಸ್ಪತ್ರೆಗೆ ದಾಖಲು Read More »

ಬ್ಯಾಡ್ಮಿಂಟನ್ ಆಡುತ್ತಿದ್ದ ಲೋಕಾಯುಕ್ತ ಡಿವೈಎಸ್ಪಿ ಕುಸಿದು ಬಿದ್ದು ಸಾವು

ಸಮಗ್ರ ವಾರ್ತೆ: ಲೋಕಾಯುಕ್ತದಲ್ಲಿ ಡಿವೈಎಸ್‌ಪಿ ಆಗಿದ್ದ ಅಧಿಕಾರಿಯೊಬ್ಬರು ಬ್ಯಾಡ್ಮಿಂಟನ್‌ ಆಡುವಾಗ ಕುಸಿದುಬಿದ್ದು ಮೃತಪಟ್ಟ ಘಟನೆ ವಿಜಯಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ. ಬುಧವಾರ ಸಂಜೆ ಲೋಕಾಯುಕ್ತ ಡಿವೈಎಸ್‌ಪಿ ಅರುಣ್‌ ನಾಯಕ್‌ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಈ ವೇಳೆ ಎದೆನೋವಿನಿಂದ ಕುಸಿದುಬಿದ್ದಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅರುಣ್‌ ನಾಯಕ್‌ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದಾನೆ. ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ

ಬ್ಯಾಡ್ಮಿಂಟನ್ ಆಡುತ್ತಿದ್ದ ಲೋಕಾಯುಕ್ತ ಡಿವೈಎಸ್ಪಿ ಕುಸಿದು ಬಿದ್ದು ಸಾವು Read More »

ಸೌಜನ್ಯ ಕೊಲೆ ಪ್ರಕರಣ| ಮೌನ ಮುರಿದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಮೌನ ಮುರಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಈ ಬಗ್ಗೆ ಮಾತನಾಡಿದ್ದು, ಅಮಾಯಕ ಹೆಣ್ಣುಮಗಳ ಹತ್ಯೆಯ ತನಿಖೆಗೆ ಮೊದಲು ಆಗ್ರಹಿಸಿದ್ದೇ ನಾನು, ಸಿಬಿಐಗೆ ಒಪ್ಪಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್ದೇ ನಾನು ಅಂತ ಹೇಳಿರುವ ವಿಡಿಯೋವೊಂದು ಈಗ ವೈರಲ್‌ ಆಗಿದೆ. ಶ್ರೀ ಕ್ಷೇತ್ರದ ನೌಕರರ ವಿಭಾಗದ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿರುವ ಅವರು ಸುಮಾರು ದಿನದಿಂದ ತಮ್ಮ ಹಾಗೂ ತಮ್ಮ ಕುಟುಂಬದ ಮೇಲೆ ಕೇಳಿ ಬರುತ್ತಿರುವ ಆರೋಪಕ್ಕೆ ಕೊನೆಗೂ ಉತ್ತರ ನೀಡುವ ಪ್ರಯತ್ನವನ್ನು

ಸೌಜನ್ಯ ಕೊಲೆ ಪ್ರಕರಣ| ಮೌನ ಮುರಿದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಜಾಗ್ವಾರ್ ಕಾರು ಹರಿದು 9 ಜನ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಹೆದ್ದಾರಿಯಲ್ಲಿ ಅಪಘಾತ ನೋಡುತ್ತಾ ನಿಂತಿದ್ದ ಜನರ ಮೇಲೆ ಜಾಗ್ವಾರ್ ಕಾರ್ ಹರಿದು 9 ಜನ ಸಾವು ಕಂಡಿದ್ದು, ಹಲವರು ಗಾಯಗೊಂಡ ಘಟನೆ ಗುಜರಾತಿನ ಅಹ್ಮದಾಬಾದ್ -ಎಸ್‌ಜಿ ಹೆದ್ದಾರಿಯಲ್ಲಿ ನಡೆದಿದೆ. ಟ್ರಕ್ ಮತ್ತು ಥಾರ್ ನಡುವೆ ಅಪಘಾತ ಸಂಭವಿಸಿದ ನಂತರ ಜನರು ಹೆದ್ದಾರಿಯಲ್ಲಿ ನೋಡುತ್ತಾ ನಿಂತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಅಪಘಾತದ ನಂತರ ಹೆದ್ದಾರಿಯಲ್ಲಿ ಜನ ಜಮಾಯಿಸಿದ್ದರು. ಅಷ್ಟರಲ್ಲಿ ಹಿಂದಿನಿಂದ ಜಾಗ್ವಾರ್ ಕಾರು ಬಂದು ಜನರ ಮೇಲೆ

ಜಾಗ್ವಾರ್ ಕಾರು ಹರಿದು 9 ಜನ ಸಾವು; ಹಲವರು ಗಂಭೀರ Read More »

ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ  |ಆರೋಪಿ ಪತಿ ಬಂಧನ

ಸಮಗ್ರ ನ್ಯೂಸ್:  ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ  ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೀಲಾಬಾಯಿ (38) ಮೃತಪಟ್ಟ ದುರ್ದೈವಿ.                             ಕಲ್ಲಕ್ಕಿ ಎಸ್ಟೇಟ್ ಲೈನಿನಲ್ಲಿ ದಾವಣಗೆರೆ ಮೂಲದ  ಶಿವ ಹಾಗೂ ಪತ್ನಿ ಲೀಲಾಬಾಯಿ ಕಾರ್ಮಿಕರಾಗಿ ಎರಡು ವರ್ಷದಿಂದ  ತೋಟದ ಕೆಲಸಕ್ಕೆ ಸೇರಿದ್ದರು. ಆಕೆಯ ಪತಿ ಸೋಮವಾರ ರಾತ್ರಿ ಕುಡಿದ ಅಮಲಿನಲ್ಲಿ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡಿ ದೊಣ್ಣೆಯಿಂದ ಪತ್ನಿಯ ತಲೆಗೆ ಹೊಡಿದಿದ್ದು ಪತ್ನಿ ಲೀಲಾಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಂಗಳವಾರ ಸಹಜ

ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ  |ಆರೋಪಿ ಪತಿ ಬಂಧನ Read More »

ಪತಿಯ ಕಿರುಕುಳಕ್ಕೆ ಮನನೊಂದು ನೇಣಿಗೆ ಶರಣಾದ ಟೆಕ್ಕಿ

ಸಮಗ್ರ ನ್ಯೂಸ್: ಕೌಟುಂಬಿಕ ಕಲಹಕ್ಕೆ ಮನನೊಂದು ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30 ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿಪಾಳ್ಯ ಪತಿಯ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2014ರಲ್ಲಿ ಟೆಕ್ಕಿ ಅರವಿಂದ್ ಜೊತೆಗೆ ದಿವ್ಯಾ ಮದುವೆಯಾಗಿತ್ತು. ಮದುವೆಯ ಬಳಿಕ ಗಂಡನ ಕುಟುಂಬದವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿತ್ತು. ಗಂಡ ಮತ್ತು ಆತನ ಕುಟುಂಬದವರು ಮಗಳನ್ನು ಕೊಲೆ ಮಾಡಿದ್ದಾರೆ

ಪತಿಯ ಕಿರುಕುಳಕ್ಕೆ ಮನನೊಂದು ನೇಣಿಗೆ ಶರಣಾದ ಟೆಕ್ಕಿ Read More »

ಬೆಂಕಿಹಚ್ಚಿ ಸ್ವಂತ ಮಗನನ್ನೇ ಕೊಲೆಗೈದ ತಾಯಿ!! ಬೆದರಿಸುವ ತಂತ್ರ ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ತಾಯಿಯೊಬ್ಬಳು ತನ್ನ ಮಗನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೈದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಕುಡಿದು ಬಂದು ದಿನವೂ ಗಲಾಟೆ ಮಾಡುತ್ತಿದ್ದ ಚಾಂದ್ ಪಾಷಾ(40) ಎಂಬ ಪುತ್ರನಿಗೆ, ತಾಯಿ ಸೋಫಿಯಾಬಿ(60) ಹೆದರಿಸೋ ಸಲುವಾಗಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚುವ ಡ್ರಾಮಾ ಮಾಡಿದ್ದಾರೆ. ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆಯು, ನಿಜವಾದ ಕಾರಣ, ನೋಡನೋಡುತ್ತಿದ್ದಂತೆ ತಾಯಿ ಎದುರೇ ಸುಟ್ಟು ಚಾಂದ್ ಪಾಷಾ ಹೋಗಿದ್ದಾನೆ. ಪುತ್ರ ಚಾಂದ್

ಬೆಂಕಿಹಚ್ಚಿ ಸ್ವಂತ ಮಗನನ್ನೇ ಕೊಲೆಗೈದ ತಾಯಿ!! ಬೆದರಿಸುವ ತಂತ್ರ ಕೊಲೆಯಲ್ಲಿ ಅಂತ್ಯ Read More »