ಕ್ರೈಂ

ಹೃದಯಾಘಾತದಿಂದ ಕುಸಿದು ಬಿದ್ದು 20 ವರ್ಷದ ಯುವಕ ಸಾವು

ಸಮಗ್ರ ನ್ಯೂಸ್: ಇತ್ತೀಚೆಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಗುಜರಾತ್ ನ ಅರಾವಳಿ ಜಿಲ್ಲೆಯಲ್ಲಿ ದುರಂತ ಘಟನೆಯೊಂದು ನಡೆದಿದ್ದು. ಕ್ರಿಕೆಟ್ ಆಡುತ್ತಿದ್ದ 20 ವರ್ಷದ ಯುವಕನೊಬ್ಬ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಾವಳಿ ಜಿಲ್ಲೆಯ ಮೊಡಸಾ ನಿವಾಸಿ ಪರ್ವ್ ಸೋನಿ ಕ್ರಿಕೆಟ್ ಆಡುವಾಗ ಮೈದಾನದಲ್ಲಿ ಮೂರ್ಛೆ ಹೋಗಿದ್ದಾನೆ. ಅಲ್ಲಿದ್ದ ಸಹೋದ್ಯೋಗಿಗಳು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದರು ಮತ್ತು ಅವರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಆಸ್ಪತ್ರೆಯ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಎಂಜಿನಿಯರಿಂಗ್ […]

ಹೃದಯಾಘಾತದಿಂದ ಕುಸಿದು ಬಿದ್ದು 20 ವರ್ಷದ ಯುವಕ ಸಾವು Read More »

ಸಂಪಾಜೆ: ಸಹೋದರರಿಂದ ಅಣ್ಣನ ಕೊಲೆ ಪ್ರಕರಣ| ಆರೋಪಿಗಳು ಕೇರಳದಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಸಂಪಾಜೆ ಸಮೀಪದ ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಸಹೋದರರಿಂದ ಕೊಲೆಯಾದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳನ್ನು ಕೇರಳದಲ್ಲಿ ಪತ್ತೆ ಹಚ್ಚಿ ಪೊಲೀಸರು ಹಿಡಿದಿದ್ದಾರೆಂದು ತಿಳಿದುಬಂದಿದೆ. ಉಸ್ಮಾನ್‌ರ ಸಹೋದರರಾದ ರಫೀಕ್ ಮತ್ತು ಸತ್ತಾರ್ ಆಸ್ತಿ ವಿವಾದಕ್ಕೆ ಸಂಬಂಧಿಸಿ ಅಣ್ಣ ಉಸ್ಮಾನ್‌ರನ್ನು ಚೂರಿಯಿಂದ ಇರಿದು ಜು. 14ರಂದು ಕೊಲೆ ಮಾಡಿದ್ದರು. ಬಳಿಕ ಇವರಿಬ್ಬರು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು ಮತ್ತೊಂದು ರಿಕ್ಷಾದಲ್ಲಿ ಸುಳ್ಯಕ್ಕೆ ಬಂದು ಕೇರಳ ಕಡೆಗೆ ಪರಾರಿಯಾಗಿದ್ದರು. ಆರೋಪಗಳ ಜಾಡು ಹಿಡಿದ

ಸಂಪಾಜೆ: ಸಹೋದರರಿಂದ ಅಣ್ಣನ ಕೊಲೆ ಪ್ರಕರಣ| ಆರೋಪಿಗಳು ಕೇರಳದಲ್ಲಿ ಅರೆಸ್ಟ್ Read More »

ಪ್ರೀತಿಸಿದ ಯುವಕನಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಪ್ರೀತಿ ಮಾಡಿದ್ದಕ್ಕೆ ಕಾಲೇಜು ವಿಧ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರ್​ಆರ್‌ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರನಾದ ಮನು, ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತಿದ್ದ. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಜುಲೈ 3 ರಂದು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯ‌ನ್ನು‌ ಮನೆಗೆ ಕರೆದೊಯ್ದಿದ್ದ. ಈ ವೇಳೆ ಯುವತಿಯ ಪೋಷಕರು ಮನು ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು

ಪ್ರೀತಿಸಿದ ಯುವಕನಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು Read More »

ಸುಳ್ಯ: ಬುದ್ದಿಮಾಂದ್ಯ ಸಹೋದರಿಯನ್ನೇ ಗರ್ಭಿಣಿಯನ್ನಾಗಿಸಿದ ಅಣ್ಣ!! ವಿಕೃತಕಾಮಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ದೂರು ನೀಡಿದ್ದು ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಸುಳ್ಯ: ಬುದ್ದಿಮಾಂದ್ಯ ಸಹೋದರಿಯನ್ನೇ ಗರ್ಭಿಣಿಯನ್ನಾಗಿಸಿದ ಅಣ್ಣ!! ವಿಕೃತಕಾಮಿಯನ್ನು ಬಂಧಿಸಿದ ಪೊಲೀಸರು Read More »

ಚೆಂಬು: ಸಹೋದರನಿಗೆ ಚೂರಿ ಇರಿತ ಪ್ರಕರಣ|ಆರೋಪಿಗಳು ಸೆರೆ

ಸಮಗ್ರ ನ್ಯೂಸ್:‌ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಹೋದರನಿಗೆ ಚೂರಿ ಇರಿದ ನಾಪತ್ತೆಯಾಗಿದ್ದ ಆರೋಪಿಗಳು ಕೇರಳದಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಕೊಲೆಯಾದ ಉಸ್ಮಾನ್ ಹಾಗೂ ಅವರ ಸಹೋದರರು ಹತ್ಯೆ ಆರೋಪಿಗಾಳಾಗಿದ್ದ ಸತ್ತಾರ್ ಮತ್ತು ರಫೀಕ್ ರವರು ಚೂರಿಯಿಂದ ಇರಿದು ರಿಕ್ಷಾದಲ್ಲಿ ಪರಾರಿಯಾಗಿದ್ದರು. ಘಟನೆಗೆ ಸಂಭಂದಿಸಿ ಸಹಕರಿಸಿದ ರಿಕ್ಷಾ ಚಾಲಕನನ್ನು ಬಂದಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು, ಆದರೆ ಆರೋಪಿಗಳು ನಾಪತ್ತೆಯಾಗಿದ್ದರೂ ಪೋಲಿಸರು ಆರೋಪಿಗಳ ಜಾಡು ಹಿಡಿದು ಶೋಧಕಾರ್ಯ ನಡೆಸಿದ್ದಾರೆ. ಬಳಿಕ

ಚೆಂಬು: ಸಹೋದರನಿಗೆ ಚೂರಿ ಇರಿತ ಪ್ರಕರಣ|ಆರೋಪಿಗಳು ಸೆರೆ Read More »

ಬ್ರಹ್ಮಾವರ: ಬೈಕಿನಿಂದ ಬಿದ್ದು ಗ್ರಂಥಪಾಲಕಿ ಮೃತ್ಯು

ಸಮಗ್ರ ನ್ಯೂಸ್: ಬೈಕಿನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ ಪಿ.(59) ಎಂದು ಗುರುತಿಸಲಾಗಿದೆ. ಕಾಲೇಜು ಬಿಟ್ಟ ನಂತರ ಇವರು ಕಾಲೇಜಿನ ಲ್ಯಾಬ್ ಟೆಕ್ನಿಷಿಯನ್ ಸುಧೀಂದ್ರ ಎಂಬವರ ಬೈಕಿ ನಲ್ಲಿ ಬ್ರಹ್ಮಾವರದ ಬಸ್ ನಿಲ್ದಾಣದವರೆಗೆ ಹೊರಟಿದ್ದರು. ಕೊಳಂಬೆ ಬಳಿ ಬರುವಾಗ ಜೋರಾಗಿ ಮಳೆ ಬಂದುಬೈಕಿನಿಂದ ಆಯತಪ್ಪಿ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಬ್ರಹ್ಮಾವರ ಖಾಸಗಿ

ಬ್ರಹ್ಮಾವರ: ಬೈಕಿನಿಂದ ಬಿದ್ದು ಗ್ರಂಥಪಾಲಕಿ ಮೃತ್ಯು Read More »

ಕಾರ್ಕಳ: ಠಾಣೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಎಚ್.ಸಿ.ಪ್ರಶಾಂತ್ ಎಂದು ಗುರುತಿಸಲಾಗಿದೆ. ರಜೆಯಲ್ಲಿದ್ದ ಇವರು ಕಾರ್ಕಳದ ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಘಟನೆ ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಕಾರ್ಕಳ: ಠಾಣೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ ಆರೋಪಿಗಳಿಗೆ ಮತ್ತೆ ಎಚ್ಚರಿಕೆ

ಸಮಗ್ರ ನ್ಯೂಸ್: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎನ್ನುವ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಮತ್ತೊಮ್ಮೆ ಎನ್‌ಐಎ (NIA) ಹೊರಡಿಸಿದೆ. ಇದು ತಲೆಮರೆಸಿಕೊಂಡಿರುವ ಹಂತಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದೆ. ಸುಳ್ಯ‌ ನಗರ ಹಾಗೂ ಬೆಳ್ಳಾರೆಯಲ್ಲಿ ಈ ಕುರಿತಂತೆ ಮೈಕ್ ಮೂಲಕ ಅನೌನ್ಸ್ ಮೆಂಟ್ ಮಾಡಿದ ಎನ್ಐಎ ಅಧಿಕಾರಿಗಳು,ಈ ಎಚ್ಚರಿಕೆಗೂ ಬಗ್ಗದಿದ್ದರೆ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಆ ಎಚ್ಚರಿಕೆಯ ಸಂದೇಶದಲ್ಲೂ ಶರಣಾಗದೆ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ ಆರೋಪಿಗಳಿಗೆ ಮತ್ತೆ ಎಚ್ಚರಿಕೆ Read More »

ಕೊಡಗು: ಅಕ್ರಮ ಗಾಂಜಾ ಮಾರಾಟ| 9. ಕೆ.ಜಿ ಗಾಂಜಾ, 6.2 ಗ್ರಾಂ ಎಂ.ಡಿ.ಎಂ.ಎ. ಮಾದಕವಸ್ತು ಪತ್ತೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ಪತ್ತೆ ಮಾಡಿದೆ. ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ಬಂಧಿತರಿಂದ 9 ಕೆ.ಜಿ 500 ಗ್ರಾಂ ಗಾಂಜಾ ಮತ್ತು 6.2 ಗ್ರಾಂ ಎಂ.ಡಿ.ಎಂ.ಎ. ಮಾದಕವಸ್ತು, ನಗದು, ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್‌ ಪೋನ್‌, ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ಈ ಪ್ರಕರಣವನ್ನು ಆರ್.ವಿ.ಗಂಗಾಧರಪ್ಪ, ಡಿವೈಎಸ್‌ಪಿ, ಸೋಮವಾರಪೇಟೆ ಉಪ ವಿಭಾಗ, ಮಹೇಶ್.ಬಿ.ಜಿ, ಸಿಪಿಐ, ಕುಶಾಲನಗರ

ಕೊಡಗು: ಅಕ್ರಮ ಗಾಂಜಾ ಮಾರಾಟ| 9. ಕೆ.ಜಿ ಗಾಂಜಾ, 6.2 ಗ್ರಾಂ ಎಂ.ಡಿ.ಎಂ.ಎ. ಮಾದಕವಸ್ತು ಪತ್ತೆ Read More »

ಶಿವಮೊಗ್ಗ: ನ್ಯಾಯಾಧೀಶರ ಕಾರು ಸೇರಿದಂತೆ ಸರಣಿ ಅಪಘಾತ| ಕಾರಿನಲ್ಲಿ ದನದ ಮಾಂಸ ಪತ್ತೆ..!

ಸಮಗ್ರ ನ್ಯೂಸ್:‌ ಎರಡು ಕಾರುಗಳು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಐಗಿನಬೈಲು ಕ್ರಾಸ್ ಬಳಿ ಸಂಭವಿಸದೆ. ಹೈಕೋರ್ಟ್ ನ್ಯಾಯಾಧೀಶರು ಹಾಗೂ ಶಿವಮೊಗ್ಗ ನ್ಯಾಯಾಧೀಶರು ಪ್ರತ್ಯೇಕ ಕಾರುಗಳಲ್ಲಿ ಸಿಗಂದೂರು ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದರು. ಹೈಕೋರ್ಟ್ ಜಡ್ಜ್ ಕಾರ್ ಮೊದಲು ಮುಂದೆ ಹೋಗಿದೆ. ಇದರ ಹಿಂದಿನಿಂದ ಹೋಗುತ್ತಿದ್ದ ಶಿವಮೊಗ್ಗ ಕೋರ್ಟ್​​ ನ್ಯಾಯಾಧೀಶರ ಕಾರಿಗೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಖಾಸಗಿ

ಶಿವಮೊಗ್ಗ: ನ್ಯಾಯಾಧೀಶರ ಕಾರು ಸೇರಿದಂತೆ ಸರಣಿ ಅಪಘಾತ| ಕಾರಿನಲ್ಲಿ ದನದ ಮಾಂಸ ಪತ್ತೆ..! Read More »