ಕ್ರೈಂ

ಸಾರಿಗೆ ಬಸ್ ಡಿಕ್ಕಿ ಹೊಡೆದು ಮೂವರು ಸ್ಪಾಟ್ ಡೆತ್

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತದಲ್ಲಿ ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರ್ ಅತಿ ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್‌ಆರ್ಟಿಸಿ ಬಸ್ […]

ಸಾರಿಗೆ ಬಸ್ ಡಿಕ್ಕಿ ಹೊಡೆದು ಮೂವರು ಸ್ಪಾಟ್ ಡೆತ್ Read More »

ಉಡುಪಿ: ಆನ್ ಲೈನ್ ಟಾಸ್ಕ್| ಮಹಿಳೆಗೆ 31 ಲಕ್ಷ ರೂ ವಂಚನೆ

ಸಮಗ್ರ ನ್ಯೂಸ್: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29ರಂದು ಫೇಸ್‌ಬುಕ್ ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತಿಗೆ ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪೆನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್ ಟೈಮ್ ಕೆಲಸ ಮಾಡಲು ಆಸಕ್ತಿ ಇದ್ದರೆ ಫಾರ್ಮ್ ಫಿಲ್ ಮಾಡಿ ಕಳುಹಿಸಿ

ಉಡುಪಿ: ಆನ್ ಲೈನ್ ಟಾಸ್ಕ್| ಮಹಿಳೆಗೆ 31 ಲಕ್ಷ ರೂ ವಂಚನೆ Read More »

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 23 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಚಿವ ದಹನವಾಗಿದ್ದಾರೆ. ಕ್ಲಬ್ ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ Read More »

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಉಡುಪಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪುತ್ತೂರು ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಅವರ ಪೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶಾ ತಿಮ್ಮಪ್ಪ ಗೌಡ ಅವರ ಪೋಟೋವನ್ನು ಬಳಸಿಕೊಂಡು, ಉಡುಪಿಗೆ ಪ್ರಧಾನಿ ಮೋದಿ ಬಂದಿದ್ದ ಸಂದರ್ಭದಲ್ಲಿ ಅವರನ್ನು ನೋಡುವ ಭಾಗ್ಯ ಸಿಗಬಹುದು ಅಂದುಕೊಂಡಿದ್ದೆ. ಆದರೆ ಈಗ ನಾನು ಪಕ್ಷಕ್ಕೆ ಬೇಡವಾಗಿದ್ದೇನೆ ಎಂದು ಬರೆದಿರುವ

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು Read More »

ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ನಾಯಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ. ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ ಶುಕ್ರವಾರ 2 ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಡೆದ ಮತ್ತೊಂದು ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ

ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ Read More »

ಶಿವಮೊಗ್ಗ: ಜೊತೆಯಾಗಿ ಆತ್ಮಹತ್ಯೆಗೆ ಶರಣಾದ ವೈದ್ಯೆ ಮತ್ತು ಮಗ!!

ಸಮಗ್ರ ನ್ಯೂಸ್: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ‌ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು. ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್

ಶಿವಮೊಗ್ಗ: ಜೊತೆಯಾಗಿ ಆತ್ಮಹತ್ಯೆಗೆ ಶರಣಾದ ವೈದ್ಯೆ ಮತ್ತು ಮಗ!! Read More »

ಶಾಸಕನ ಕಾಮಕಾಂಡದ ವಿಡಿಯೋ ವೈರಲ್| ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳನ್ನು ವಾಟ್ಸಪ್ ನಲ್ಲಿ ಹರಿಬಿಟ್ಟ ಶಾಸಕ

ಸಮಗ್ರ ನ್ಯೂಸ್: ಜನಪ್ರತಿನಿಧಿಗಳ ಕಾಮಪುರಾಣ ಪ್ರಕರಣಗಳ ಸರಣಿ ಹಸಿರಾಗಿರುವಂತೆಯೇ ಅಂತಹುದೇ ಮತ್ತೋರ್ವ ಜನಪ್ರತಿನಿಧಿಯ ಖಾಸಗಿ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಈ ಬಾರಿ ಆಂಧ್ರ ಪ್ರದೇಶದ ವೈಸಿಪಿ ಶಾಸಕನ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಚ್ಚರಿ ಎಂದರೆ ಆ ವಿಡಿಯೋವನ್ನು ಆ ಶಾಸಕನೇ ಹರಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಆಂಧ್ರ ಪ್ರದೇಶದ ಅನಂತಪುರದ ಶಿಂಗನಮಲ ಕ್ಷೇತ್ರದ ವೈಸಿಪಿ ಪಕ್ಷದ ಶಾಸಕ ಫಣೀಂದ್ರ ಎಂದು ಹೇಳಲಾಗಿದೆ. ಈ ಫಣೀಂದ್ರ ವೈಸಿಪಿ ಪಕ್ಷದ ಬಿಸಿ ಸೆಲ್ ಅಧ್ಯಕ್ಷರೂ ಕೂಡ

ಶಾಸಕನ ಕಾಮಕಾಂಡದ ವಿಡಿಯೋ ವೈರಲ್| ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳನ್ನು ವಾಟ್ಸಪ್ ನಲ್ಲಿ ಹರಿಬಿಟ್ಟ ಶಾಸಕ Read More »

ಸುಬ್ರಹ್ಮಣ್ಯ: ಬಿಳಿನೆಲೆ ಪ್ರಾ.ಕೃ.ಪ ಸ.ಸಂಘದಲ್ಲಿ ಭಾರೀ ಅವ್ಯವಹಾರ| ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರೀ ಅವ್ಯವಹಾರ ನಡೆದ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಸಮಗ್ರ ತನಿಖೆಗೆ ಲೋಕಾಯುಕ್ತಕ್ಕೆ ಸದಸ್ಯರೋರ್ವರು ದೂರು ನೀಡಿದ್ದಾರೆ. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪುನೀತ್ ಕೆ ಎಸ್ ಅವರು ಮಾಡಿರುವ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರದ ಕುರಿತು 2024-25 ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ ಕಂಡುಬಂದಿದ್ದು ಈ ವರದಿಯನ್ನು ಆಧರಿಸಿ ಸಂಘದ ಸದಸ್ಯರೊಬ್ಬರು ಈ ಬಗ್ಗೆ ಸಹಕಾರಿ ಇಲಾಖೆಯ ನಿಬಂಧಕರಿಗೆ ದೂರು ನೀಡಿದ್ದಾರೆ. ಈ ಬಗ್ಗೆ

ಸುಬ್ರಹ್ಮಣ್ಯ: ಬಿಳಿನೆಲೆ ಪ್ರಾ.ಕೃ.ಪ ಸ.ಸಂಘದಲ್ಲಿ ಭಾರೀ ಅವ್ಯವಹಾರ| ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ Read More »

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ

ಸಮಗ್ರ ನ್ಯೂಸ್: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಚಿಕ್ಕಪೇಟೆ ಮಾಜಿ ಶಾಸಕ ಮತ್ತು

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ Read More »

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ

ಸಮಗ್ರ ನ್ಯೂಸ್: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ ಮಂಡಳಿ ವಾದಿಸಿದರೆ, ಇದು ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಬಜರಂಗದಳ ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದಕ್ಕೆ

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ Read More »