ಕ್ರೈಂ

ಸುಂಟಿಕೊಪ್ಪ: ಕಾರು-ಲಾರಿ ಡಿಕ್ಕಿ|ಮುಂಬೈ ಮೂಲದ ಮಹಿಳೆ ದುರ್ಮರಣ

ಸಮಗ್ರ ನ್ಯೂಸ್: ಕಾರು ಮತ್ತು ಲಾರಿಯ ನಡುವೆ ಅವಘಡ ಸಂಭವಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಧಾರುಣವಾಗಿ ಅಂತ್ಯಗೊಂಡಿರುವ ಘಟನೆ ಜೂ.3ರ ರಾತ್ರಿ ಸುಂಟಿಕೊಪ್ಪ ಗದ್ದೆಹಳ್ಳದಲ್ಲಿರುವ ವಂದನಾ ಬಾರ್ ಸಮೀಪ ಸಂಭವಿಸಿದೆ. ಮಡಿಕೇರಿ ಕಡೆಯಿಂದ ಸುಂಟಿಕೊಪ್ಪದತ್ತ ಬರುತ್ತಿದ್ದ ಕಾರು ಮತ್ತು ಸುಂಟಿಕೊಪ್ಪದಿಂದ ಮಡಿಕೇರಿ ಯತ್ತ ತೆರಳುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದು, ಆಕೆಯ ಪತಿ ಮತ್ತು ಚಾಲಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಂಟಿಕೊಪ್ಪ: ಕಾರು-ಲಾರಿ ಡಿಕ್ಕಿ|ಮುಂಬೈ ಮೂಲದ ಮಹಿಳೆ ದುರ್ಮರಣ Read More »

ಸೌಜನ್ಯ ಅತ್ಯಾಚಾರ ಪ್ರಕರಣ| ನ್ಯಾಯಕ್ಕಾಗಿ ಕಾನತ್ತೂರು, ಧರ್ಮಸ್ಥಳದ ಕಾರಣಿಕ ಶಕ್ತಿಗಳಿಗೆ ಹರಕೆ ಹೊತ್ತ ವಿಠಲ ಗೌಡ

ಸಮಗ್ರ ನ್ಯೂಸ್: ಧರ್ಮಸ್ಥಳದ ಸಮೀಪ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದ ಸೌಜನ್ಯ ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಸಿಬಿಐ ವಿಶೇಷ ಕೋರ್ಟ್‌ ನಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಎದ್ದಿದೆ. ಈ ನಡುವೆಯೇ ಸೌಜನ್ಯಳ ಮಾವ ಇದೀಗ ದೈವ ದೇವರಿಗೆ ಹರಕೆ ಹೊತ್ತಿರುವುದು ಸುದ್ದಿಯಾಗಿದ್ದು, ಕೊಲೆಗೆ ಕಾರಣವಾದ ಅಪರಾಧಿಗಳಿಗೆ ಇನ್ನು ಆರು ತಿಂಗಳ ಒಳಗಾಗಿ ಸರಿಯಾದ ಶಿಕ್ಷೆಯಾಗಬೇಕು ಎಂದು ವಿಠಲ ಗೌಡ

ಸೌಜನ್ಯ ಅತ್ಯಾಚಾರ ಪ್ರಕರಣ| ನ್ಯಾಯಕ್ಕಾಗಿ ಕಾನತ್ತೂರು, ಧರ್ಮಸ್ಥಳದ ಕಾರಣಿಕ ಶಕ್ತಿಗಳಿಗೆ ಹರಕೆ ಹೊತ್ತ ವಿಠಲ ಗೌಡ Read More »

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲೇ ಹೃದಯಾಘಾತ| ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಸಾವು

ಸಮಗ್ರ ವಾರ್ತೆ: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲೇ ಸಭೆಯೊಂದರ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಅವರ ಅಕಾಲಿಕ ನಿಧನ ಹೊಂದಿದ್ದಾರೆ. ಅವರ ನಿಧನ ಆಘಾತಕಾರಿಯಾದದ್ದು ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದಿದ್ದ ರಾಜ್ಯ ವಿಶೇಷ ಸಭೆಯಲ್ಲಿ ಪಾಲ್ಗೊಂಡಿದ್ದ ಯಾದವ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅದರಂತೆ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ನಿಧನ

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲೇ ಹೃದಯಾಘಾತ| ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಸಾವು Read More »

ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ| ಮುರಿದು ಬಿದ್ದ ಕಂಬ

ಸಮಗ್ರ ನ್ಯೂಸ್: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್‌ ಪಾರಾಗಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರ್ತಿಪ್ಪಾಡಿ ಬಳಿ ನಡೆದಿದೆ. ವಿದ್ಯುತ್‌ ಕಂಬಕ್ಕೆ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬವೇ ಕಿತ್ತು ಬಂದಿದೆ.ಕಾರಿನ ಮೇಲೆಯೇ ವಿದ್ಯುತ್‌ ಕಂಬ ಮುರಿದು ಬಿದ್ದಿದ್ದು ಅದೃಷ್ಟವಶಾತ್‌ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ| ಮುರಿದು ಬಿದ್ದ ಕಂಬ Read More »

ಪೆರುವಾಜೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಉಪನ್ಯಾಸಕಿ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ವಿದ್ಯಾರ್ಥಿ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿದ್ದಾರೆಂಬ ಕಾರಣಕ್ಕೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಘಟನೆ ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದಿದೆ. ಸಂಸ್ಥೆಯ ಎಚ್‌ಒಡಿ ದೀಕ್ಷಿತ್ ಎಂಬ ವಿದ್ಯಾರ್ಥಿಯ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತದೆ. ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೆರುವಾಜೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಉಪನ್ಯಾಸಕಿ ವಿರುದ್ಧ ಪ್ರತಿಭಟನೆ Read More »

ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ|ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಗ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫುರುಷರಕಟ್ಟೆಯ ಇಂದಿರಾನಗರದಲ್ಲಿ ಬೆಳಕಿಗೆ ಬಂದಿದೆ. ಇಂದಿರಾನಗರದ ದಿ.ಪ್ರವೀಣ್‌ ಅವರ ಪತ್ನಿ ಕಾವ್ಯಾ(38) ಆತ್ಮಹತ್ಯೆ ಮಾಡಿಕೊಂಡವರು. 7ವರ್ಷದ ಹಿಂದೆ ಕಾವ್ಯಾ ಅವರ ಪತಿ ಪ್ರವೀಣ್‌ ಕೂಡ ಯಾವುದೋ ಕಾರಣಕ್ಕೆ ಅತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕಾವ್ಯಾ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದ್ದು, ಅವರ ಪುತ್ರ ಪ್ರತೀಕ್‌ ಜೂ 30 ರಂದು ಬೆದ್ರಾಳ ಸಮೀಷ ಸಂಭವಿಸಿದ

ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ|ತಾಯಿ ಆತ್ಮಹತ್ಯೆ Read More »

ತಿರುಪತಿಯಲ್ಲಿ ರೀಲ್ಸ್ ಮಾಡಲು ಹೋಗಿ ಪ್ರಮಾದ| ಜಲಪಾತದಲ್ಲಿ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿ ಸಾವು!!

ಸಮಗ್ರ ನ್ಯೂಸ್: ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಮಂಗಳೂರು ಮೂಲದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಸುಮಂತ್ ಎಂದು ಗುರುತಿಸಲಾಗಿದೆ. ಚೆನ್ನೈನ 22 ವರ್ಷದ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಸುಮಂತ್ ಈ ವೇಳೆ ನೀರಿಗೆ ಜಿಗಿಯಲು ಹೋಗಿದ್ದರು. ಈ ಸಮಯದಲ್ಲಿ, ಅವರು Instagram ರೀಲ್ಸ್‌ಗಾಗಿ ನೀರಿಗೆ ಹಾರಿ ವೀಡಿಯೊವನ್ನು ಶೂಟ್ ಮಾಡಲು ತಮ್ಮ ಸ್ನೇಹಿತರನ್ನು ಕೇಳಿದರು. ಅದರಂತೆ

ತಿರುಪತಿಯಲ್ಲಿ ರೀಲ್ಸ್ ಮಾಡಲು ಹೋಗಿ ಪ್ರಮಾದ| ಜಲಪಾತದಲ್ಲಿ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿ ಸಾವು!! Read More »

ಸುಳ್ಯ: ಶರಣಾಗದ ಪ್ರವೀಣ್ ಹತ್ಯೆ‌ ಆರೋಪಿಗಳು| ಆಸ್ತಿ ಮುಟ್ಟುಗೋಲಿಗೆ ಮುಂದಾದ ಎನ್ಐಎ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಶರಣಾಗುವಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನೀಡಿರುವ ಅವಧಿ ಮುಕ್ತಾಯಗೊಂಡಿದೆ. ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗದೇ ಇರುವ ಕಾರಣಕ್ಕೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಎನ್‌ಐಎ ಮುಂದಾಗಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ನೀಡಲಾದ ಆಸ್ತಿ ಮುಟ್ಟುಗೋಲು ಎಚ್ಚರಿಕೆಗೂ ಆರೋಪಿಗಳು ಮನ್ನಣೆ ನೀಡಿಲ್ಲ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು

ಸುಳ್ಯ: ಶರಣಾಗದ ಪ್ರವೀಣ್ ಹತ್ಯೆ‌ ಆರೋಪಿಗಳು| ಆಸ್ತಿ ಮುಟ್ಟುಗೋಲಿಗೆ ಮುಂದಾದ ಎನ್ಐಎ Read More »

ವಿಟ್ಲ: ಏಕಕಾಲಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಗಂಡ-ಹೆಂಡತಿ| ಪತಿ ಸಾವು; ಪತ್ನಿ ಗಂಭೀರ| ತಬ್ಬಲಿಯಾದ ಅವಳಿ ಕಂದಮ್ಮಗಳು

ಸಮಗ್ರ ನ್ಯೂಸ್: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಪತಿ‌ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬಾಕಿಲ ಎಂಬಲ್ಲಿ ನಡೆದಿದೆ . ಬಾಕಿಲ ನಿವಾಸಿಗಳಾದ ಪ್ರತಾಪ್‌ ಹಾಗೂ ವೀಣಾ ದಂಪತಿ‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದಂಪತಿಗೆ ಐದು ವರ್ಷದ ಅವಳಿ ಜವಳಿ ಮಕ್ಕಳಿದ್ದಾರೆ‌. ಎದುರು ಮನೆಯಲ್ಲಿದ್ದ ಮಕ್ಕಳು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ನೆರೆಮನೆಯವರಿಗೆ ತಿಳಿಸಿದ್ದಾರೆ ‌. ಕೂಡಲೇ ಇವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ

ವಿಟ್ಲ: ಏಕಕಾಲಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಗಂಡ-ಹೆಂಡತಿ| ಪತಿ ಸಾವು; ಪತ್ನಿ ಗಂಭೀರ| ತಬ್ಬಲಿಯಾದ ಅವಳಿ ಕಂದಮ್ಮಗಳು Read More »

ಸೋಮವಾರಪೇಟೆ: ಭೀಕರ ರಸ್ತೆ ಅಪಘಾತ ಹಿರಿಕರ ದಂಪತಿ ದಾರುಣ ಸಾವು

ಸಮಗ್ರ ನ್ಯೂಸ್: ಕಾರು ಮತ್ತು ಕೆ.ಎಸ್.ರ್ .ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿಗಳು ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ. ನಿವೃತ್ತ ಪ್ರಾಂಶುಪಾಲರಾದ ಹೆಚ್.ಬಿ.ಬೆಳ್ಳಿಯಪ್ಪ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಅವರ ಪತ್ನಿ ವೀಣಾ ರವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಮಯದಲ್ಲಿ ಮಾರ್ಗಮಧ್ಯೆ ಕೊನೆಯುಸಿರು ಏಳದಿದ್ದಾರೆ. ಜುಲೈ 1ರಂದು ಮಧ್ಯಾಹ್ನ ಕಾರಿನಲ್ಲಿ ಬೆಳ್ಳಿಯಪ್ಪ ದಂಪತಿಗಳು ಮೈಸೂರಿಗೆ ತೆರಳುತ್ತಿದ್ದ ಸಮಯದಲ್ಲಿ ದುರ್ಘಟಣೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜು-ಗುಜ್ಜಾಗಿದೆ. ಬಿಳಿಕೆರೆ ಪೊಲೀಸ್

ಸೋಮವಾರಪೇಟೆ: ಭೀಕರ ರಸ್ತೆ ಅಪಘಾತ ಹಿರಿಕರ ದಂಪತಿ ದಾರುಣ ಸಾವು Read More »