ಕ್ರೈಂ

ಪುತ್ತೂರು:ಪಿಕಪ್- ಬೈಕ್ ಡಿಕ್ಕಿ| ಸುಳ್ಯದ ವ್ಯಕ್ತಿ ಸಾವು

ಸಮಗ್ರ ನ್ಯೂಸ್:ಪುತ್ತೂರಿನ ಕಲ್ಲರ್ಪೆಯಲ್ಲಿ ಮಧ್ಯಾಹ್ನ ಪಿಕಪ್ ಹಾಗೂ ಬೈಕ್ ಪರಸ್ಪರ ಢಿಕ್ಕಿ ಹೊಡೆದುಕೊಂಡು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ.28 ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಎಂದು ತಿಳಿದು ಬಂದಿದೆ. ಮೃತದೇಹ ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪುತ್ತೂರು:ಪಿಕಪ್- ಬೈಕ್ ಡಿಕ್ಕಿ| ಸುಳ್ಯದ ವ್ಯಕ್ತಿ ಸಾವು Read More »

ತಹಶೀಲ್ದಾರ್ ಸೊರಕೆ ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ದಾಳಿ| ಬೃಹತ್ ಪ್ರಮಾಣದ ನೋಟಿನ ಕಂತೆ ಪತ್ತೆ

ಸಮಗ್ರ ನ್ಯೂಸ್: ಕೆ.ಆರ್.ಪುರ ತಹಶೀಲ್ದಾರ್ ರಾಗಿದ್ದ ಅಜಿತ್ ಕುಮಾರ್ ರೈ ಸೊರಕೆ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಬೃಹತ್ ಪ್ರಮಾಣದ ಹಣದ ಕಂತೆಯೇ ಪತ್ತೆಯಾದ ಬಗ್ಗೆ ವರದಿಯಾಗಿದೆ. ಇವರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಅಜಿತ್ ಕುಮಾರ್ ರೈ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಲೋಕಾಯುಕ್ತ ಎಸ್

ತಹಶೀಲ್ದಾರ್ ಸೊರಕೆ ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ದಾಳಿ| ಬೃಹತ್ ಪ್ರಮಾಣದ ನೋಟಿನ ಕಂತೆ ಪತ್ತೆ Read More »

ಸುಳ್ಯ: ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ!?

ಸಮಗ್ರ ನ್ಯೂಸ್: ಕೋವಿಯಿಂದ ತಾನೇ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ‌ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ‌ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು‌ ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ. ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದು ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ. ಕಳೆದ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ‌ ತಲೆಗೆ ಗುಂಡು ಹೊಡೆದುಕೊಂಡಿದ್ದಾನೆ

ಸುಳ್ಯ: ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ!? Read More »

ಕಡಬ: ಆಡನ್ನು ನುಂಗಲು ಯತ್ನಿಸಿದ ಹೆಬ್ಬಾವು !

ಸಮಗ್ರ ನ್ಯೂಸ್: ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರ ಸಂಜೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ನಡೆದಿದೆ. ಸ್ಥಳೀಯ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಆಡಿನ ತಲೆಯ ಭಾಗವನ್ನು ಹೆಬ್ಬಾವು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು ಸತ್ತ ಆಡನ್ನು ಸ್ಥಳದಲ್ಲೇ

ಕಡಬ: ಆಡನ್ನು ನುಂಗಲು ಯತ್ನಿಸಿದ ಹೆಬ್ಬಾವು ! Read More »

ವಿಟ್ಲ: ನಿಯಂತ್ರಣ ತಪ್ಪಿ ಪಲ್ಟಿಯಾದ ರಿಕ್ಷಾ| ಪಂಜ ಮೂಲದ ಚಾಲಕ ಸಾವು

ಸಮಗ್ರ ನ್ಯೂಸ್: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಇನ್ನೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಪಲ್ಟಿಯಾಗಿದ್ದು , ಗಂಭೀರ ಗಾಯಗೊಂಡು ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ. ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪ ಸ್ವಲ್ಪ ಗಾಯವಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಿಟ್ಲ ಠಾಣೆಗೆ

ವಿಟ್ಲ: ನಿಯಂತ್ರಣ ತಪ್ಪಿ ಪಲ್ಟಿಯಾದ ರಿಕ್ಷಾ| ಪಂಜ ಮೂಲದ ಚಾಲಕ ಸಾವು Read More »

ಕಡಬ: ಕೆಲಸ‌ ಕೊಟ್ಟ ಮಾಲೀಕನಿಗೆ ಹನಿಟ್ರ್ಯಾಪ್ ಹಳ್ಳ ತೋಡಿದ ಚಾಲಕ| ಫೋಟೋ ತೆಗೆದು 5 ಲಕ್ಷಕ್ಕೆ ಬೇಡಿಕೆ ಇಟ್ಟ ಕಿರಾತಕ!

ಸಮಗ್ರ ನ್ಯೂಸ್: ಕೆಲಸ ನೀಡಿದ್ದ ಮಾಲಕನನ್ನೇ ಮತ್ತಿಬ್ಬರ ಸಹಕಾರದೊಂದಿಗೆ ಚಾಲಕನೋರ್ವ ಹನಿಟ್ರ್ಯಾಪ್ ಹಳ್ಳಕ್ಕೆ ಕೆಡವಿರುವ ಘಟನೆ ಕಡಬದಲ್ಲಿ ನಡೆದಿದ್ದು ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಕಡಬ ತಾಲೂಕಿನ ಹೊಸ್ಮಠ ನಿವಾಸಿ, ಪ್ರಸ್ತುತ ಮಂಗಳೂರಿನ ಬಲ್ಮಠದಲ್ಲಿ ವಾಸವಾಗಿರುವ ಕೃಷಿಕರೋರ್ವರು ಜೂನ್ 14 ರಂದು ತನ್ನ ಕಾರಿನಲ್ಲಿ ಚಾಲಕನ ಜೊತೆಗೆ ಮಂಗಳೂರಿನಿಂದ ಹೊಸ್ಮಠದ ತನ್ನ ಮನೆಗೆ ಆಗಮಿಸಿ ಮಧ್ಯಾಹ್ನದ ವೇಳೆಗೆ ಬಟ್ಟೆ ಬದಲಾಯಿಸಿ ತೋಟಕ್ಕೆ ತೆರಳಲು ಸಿದ್ಧರಾಗಿದ್ದ ಸಮಯದಲ್ಲಿ ಅಪರಿಚಿತ ಮುಸ್ಲಿಂ ಯುವತಿಯೋರ್ವಳು ಓರ್ವ ಯುವಕನೊಂದಿಗೆ

ಕಡಬ: ಕೆಲಸ‌ ಕೊಟ್ಟ ಮಾಲೀಕನಿಗೆ ಹನಿಟ್ರ್ಯಾಪ್ ಹಳ್ಳ ತೋಡಿದ ಚಾಲಕ| ಫೋಟೋ ತೆಗೆದು 5 ಲಕ್ಷಕ್ಕೆ ಬೇಡಿಕೆ ಇಟ್ಟ ಕಿರಾತಕ! Read More »

ಕಾಗವಾಡ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ| ಓರ್ವ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಹಾಗೂ ಉಗಾರ ಖುರ್ದ ಗ್ರಾಮದ ರಸ್ತೆ ನಡುವೆ ಕಾರು ಹಾಗೂ ಆಟೋ ರೀಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಟೋ ರಿಕ್ಷಾ ಐನಾಪುರದಿಂದ ಉಗಾರ ಖುರ್ದ ಗ್ರಾಮದ ಕಡೆ ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು ಆಟೋದಲ್ಲಿ ಪ್ರಯಾಣಿಸುತ್ತಿದ್ದ ಕೃಷ್ಣ ಕಿತ್ತೂರ್ ಗ್ರಾಮದ ನಿವಾಸಿ ವಿನೋದ್ ಕಾಂಬಳೆ (24)ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಎಂಟು ಜನರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ

ಕಾಗವಾಡ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ| ಓರ್ವ ಸ್ಥಳದಲ್ಲೇ ಸಾವು Read More »

ಉಪ್ಪಿನಂಗಡಿ: ಉದ್ಯಮಿ ಹಾಜಿ ಮುಸ್ತಾಫಾ ಕೆಂಪಿ ಇನ್ನಿಲ್ಲ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಯ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ(ಜೂ.26) ಸಂಜೆ ನಿಧನರಾದರು. ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಉದ್ಯಮಿಯಾಗಿದ್ದರು. ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಉಪ್ಪಿನಂಗಡಿ: ಉದ್ಯಮಿ ಹಾಜಿ ಮುಸ್ತಾಫಾ ಕೆಂಪಿ ಇನ್ನಿಲ್ಲ Read More »

ಪಂಜ: ಹೃದಯಾಘಾತಕ್ಕೆ ಮೆಕ್ಯಾನಿಕ್ ಬಲಿ

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ಘಟನೆ‌ ಸುಳ್ಯ ತಾಲೂಕಿನಪಂಜ ಸಮೀಪದ ಕರಿಕ್ಕಳದಲ್ಲಿ ನಡೆದಿದೆ. ಕಳೆದ ಜೂ.25 ರಾತ್ರಿ ಘಟನೆ ಸಂಭವಿಸಿದ್ದು ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ. ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ,ಪಂಜದ ಶಿವಕೃಪಾ ಮೋಟಾರ್ಸ್ ನಮೆಕಾನಿಕ್ ಭಾಸ್ಕರ ಗೌಡ ಮೃತಪಟ್ಟ ದುರ್ದೈವಿ. ಅವರು ಜೂ.25 ರಾತ್ರಿ10 ಗಂಟೆಗೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪಂಜದಲ್ಲಿ ಅವರು ಸುಮಾರು 20 ವರುಷಗಳಿಂದ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಭಾಸ್ಕರ್ ಅವಿವಾಹಿತರಾಗಿದ್ದು,

ಪಂಜ: ಹೃದಯಾಘಾತಕ್ಕೆ ಮೆಕ್ಯಾನಿಕ್ ಬಲಿ Read More »

ಅಪಘಾತದಲ್ಲಿ ಬಲಗಾಲನ್ನೇ ಕಳೆದುಕೊಂಡ ನಟ ಸೂರಜ್|

ಸಮಗ್ರ ನ್ಯೂಸ್: ವರನಟ ರಾಜ್​ಕುಮಾರ್ ಅವರ ಪತ್ನಿ, ಕನ್ನಡ ಚಿತ್ರರಂಗದ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಪಾರ್ವತಮ್ಮ ರಾಜ್​ಕುಮಾರ್ ಅವರ ತಮ್ಮನ ಮಗ, ಯುವ ನಟ ಧೀರಜ್​​ಗೆ ಅಪಘಾತ ಆಗಿದೆ. ಅಪಘಾತದಲ್ಲಿ ಯುವ ನಟ ಬಲಕಾಲನ್ನೇ ಕಳೆದು ಕೊಂಡಿದ್ದಾರೆ. ಮೈಸೂರು- ನಂಜನಗೂಡು ರಸ್ತೆಯಲ್ಲಿ ಅಪಘಾತ ನಡೆದಿದ್ದು ಶನಿವಾರ ರಾತ್ರಿ ಘಟನೆ ನಡೆದಿದೆ. ಬೈಕ್​ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತವಾಗಿದ್ದು ಧೀರಜ್​​ ಬಲ​ ಕಾಲಿನ ಮೇಲೆ ಟಿಪ್ಪರ್ ಹರಿದಿದೆ. ಧೀರಜ್​ ಬಲಗಾಲಿಗೆ ಗಂಭೀರ ಗಾಯ ಆಗಿದ್ದ ಕಾರಣ ವೈದ್ಯರು ಮಂಡಿವರೆಗೂ ಬಲಗಾಲನ್ನು ಕತ್ತರಿಸಿ

ಅಪಘಾತದಲ್ಲಿ ಬಲಗಾಲನ್ನೇ ಕಳೆದುಕೊಂಡ ನಟ ಸೂರಜ್| Read More »