ಕ್ರೈಂ

ಸುಳ್ಯ: ಎರಡು ಮನೆಗಳಿಂದ ದರೋಡೆ| ನಗದು ಸಹಿತ ಚಿನ್ನಾಭರಣ ಎಗರಿಸಿದ ಕಳ್ಳರು

ಸಮಗ್ರ ನ್ಯೂಸ್: ಎರಡು ಮನೆಗಳಿಂದ ನಗ-ನಗದು ಕದ್ದೊಯ್ದ ಕಳ್ಳರು ಕೈಚಳಕ ತೋರಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಮಜಲು ಹಾಗೂ ಜಾಲ್ಸೂರು ಎಂಬಲ್ಲಿ ನಡೆದಿದೆ. ಪ್ರಕರಣ.೧:ಸಂಬಂಧಿಕರ ಮನೆಗೆ ಮನೆಮಂದಿ ತೆರಳಿದ್ದ ವೇಳೆ ಮನೆಯಲ್ಲಿ ನಗದು ಸಹಿತ ಚಿನ್ನಾಭರಣ ಕಳವು ಮಾಡಿರುವ ಸುಳ್ಯ ತಾಲೂಕಿನ ಕನಕಮಜಲು ಎಂಬಲ್ಲಿ ನಡೆದಿದೆ. ಇಲ್ಲಿನ ಕನಕಮಜಲು ಗ್ರಾಮದ ಸಣ್ಣಮೂಲೆ ಕೆ.ಮೂಸಾ. ಎಂಬವರ ಪುತ್ರ ಕೆ.ಮಹಮ್ಮದ್ ಹಸನ್ ಎಮಬವರ ಮನೆಯಲ್ಲಿ ಕಳವು ಕೃತ್ಯ ನಡೆದಿದೆ. ಮಹಮ್ಮದ್ ಹಸನ್ ಅವರು ಜೂ.17ರಂದು ತಮ್ಮ ಹೆಂಡತಿಯ […]

ಸುಳ್ಯ: ಎರಡು ಮನೆಗಳಿಂದ ದರೋಡೆ| ನಗದು ಸಹಿತ ಚಿನ್ನಾಭರಣ ಎಗರಿಸಿದ ಕಳ್ಳರು Read More »

ಕಡಬ: ರೈಲ್ವೆ ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡುಕೊಂಡಿರುವ ಘಟನೆ ಬುಧವಾರ ರಾತ್ರಿ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಎಲಿಮಲೆ ರಬ್ಬರ್ ಪ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು ಆದರೆ ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ ಇವರು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಡಬ: ರೈಲ್ವೆ ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ Read More »

‌ಮಂಗಳೂರು: ರಸ್ತೆಗೆ ಅಡ್ಡ ಬಂದ ಮಹಿಳೆ ಪ್ರಾಣ ರಕ್ಷಿಸಿದ ಬಸ್‌ ಚಾಲಕ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ರಸ್ತೆಗೆ ಅಡ್ಡ ಬಂದ ಮಹಿಳೆ ಪ್ರಾಣ ರಕ್ಷಿಸಿದ ಬಸ್‌ ಚಾಲಕ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು,

‌ಮಂಗಳೂರು: ರಸ್ತೆಗೆ ಅಡ್ಡ ಬಂದ ಮಹಿಳೆ ಪ್ರಾಣ ರಕ್ಷಿಸಿದ ಬಸ್‌ ಚಾಲಕ ವಿರುದ್ಧ ಪ್ರಕರಣ ದಾಖಲು Read More »

ಕಡಬ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯಯಕ್ತ ಬಲೆಗೆ

ಸಮಗ್ರ ನ್ಯೂಸ್: ಪಿಡಿಓನೋರ್ವ ಅರ್ಜಿದಾರನ್ನು ಸತಾಯಿಸಿ ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ ಬಲೆಗೆ ಬಿದ್ದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಮಹೇಶ್ ಎಂಬಾತ ಅರ್ಜಿದಾರರಿಂದ ಖಾತೆ ಬದಲಾವಣೆಗೆ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ನೊಂದು ನೇರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜೂನ್ 22 ರಂದು ಲಂಚದ 20 ಸಾವಿರ ರೂಪಾಯಿ ಹಣ ಅರ್ಜಿದಾರರಿಂದ ಪಡೆಯುತ್ತಿದ್ದ ವೇಳೆ

ಕಡಬ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯಯಕ್ತ ಬಲೆಗೆ Read More »

ಕಡಬ: ನೂತನ ಚಿನ್ನದ ಅಂಗಡಿ ಮಾಲಕ ಅಪಘಾತದಲ್ಲಿ ಮೃತ್ಯು..?|ಬೆಳ್ತಂಗಡಿಗೆಂದು ಹೋದವನ ಶವ ಗುಂಡ್ಯದ ಗುಂಡಿಯಲ್ಲಿ ಪತ್ತೆ…!

ಸಮಗ್ರ ನ್ಯೂಸ್: ನೂತನ ಚಿನ್ನದ ಅಂಗಡಿ ಉದ್ಘಾಟನೆಯ ದಿನ ಮಾಲಕ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರದಂದು ಬೆಂಗಳೂರು-ಮಂಗಳೂರು ರಾ.ಹೆದ್ದಾರಿಯ ಗುಂಡ್ಯ ಬಳಿ ಸಂಭವಿಸಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ಈತನ ಮಾಲೀಕತ್ವದಲ್ಲಿ ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಜೂ.22 ರಂದು ‘ಐಶ್ವರ್ಯ ಗೋಲ್ಡ್’ ಹೆಸರಿನ ಚಿನ್ನದಂಗಡಿ ಶುಭಾರಂಭದ ತಯಾರಿ ನಡೆಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಜೂ.21 ರಂದು ಆಹ್ವಾನ ಪತ್ರ ಕೊಡಲು ಬೆಳ್ತಂಗಡಿ ಕಡೆ ಹೋಗಿ ಬರುವುದಾಗಿ ಮನೆಯಲ್ಲಿ ಮತ್ತು ಗೆಳೆಯರಲ್ಲಿ ಹೇಳಿ ಹೊಗಿದ್ದ.

ಕಡಬ: ನೂತನ ಚಿನ್ನದ ಅಂಗಡಿ ಮಾಲಕ ಅಪಘಾತದಲ್ಲಿ ಮೃತ್ಯು..?|ಬೆಳ್ತಂಗಡಿಗೆಂದು ಹೋದವನ ಶವ ಗುಂಡ್ಯದ ಗುಂಡಿಯಲ್ಲಿ ಪತ್ತೆ…! Read More »

ಸಂಪಾಜೆ: ದೇವರಕೊಲ್ಲಿ ಅಪಘಾತ ಪ್ರಕರಣ| ಗಾಯಾಳುಗಳ ಪೈಕಿ ಓರ್ವ ಸಾವು

ಸಮಗ್ರ ನ್ಯೂಸ್: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪ ದೇವರಕೊಲ್ಲಿ ಎಂಬಲ್ಲಿ ಬುಧವಾರ ರಾತ್ರಿ ಕಾರಿಗೆ ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತಪ್ರಕರಣದಲ್ಲಿ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ವರದಿಯಾಗಿದೆ. ಮೃತರನ್ನು ಬೆಂಗಳೂರು ಮೂಲದ ರವಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಇತರ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಪಾಜೆ: ದೇವರಕೊಲ್ಲಿ ಅಪಘಾತ ಪ್ರಕರಣ| ಗಾಯಾಳುಗಳ ಪೈಕಿ ಓರ್ವ ಸಾವು Read More »

ಸಂಪಾಜೆ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ| ಮೂವರು ಗಂಭೀರ

ಸಮಗ್ರ ನ್ಯೂಸ್: ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ದೇವರಕೊಲ್ಲಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ ಮೂರು ಮಂದಿಗೆ ತೀವ್ರ ಗಾಯಗಳಾಗಿದ್ದು,ಗಾಯಾಳುಗಳನ್ನು ಸಂಪಾಜೆ ಪ್ರಾ.ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಕಾರು

ಸಂಪಾಜೆ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ| ಮೂವರು ಗಂಭೀರ Read More »

ಬೆಳ್ತಂಗಡಿ: ಬರ್ತ್ ಡೇ ದಿನವೇ ಅಪಘಾತಕ್ಕೆ ಯುವಕ ಬಲಿ| ದೇವಸ್ಥಾನಕ್ಕೆ ಹೋಗಿ ಬಂದರೂ ಪಾಶ ಹಾಕಿದ ಯಮ!!

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ: ಬರ್ತ್ ಡೇ ದಿನವೇ ಅಪಘಾತಕ್ಕೆ ಯುವಕ ಬಲಿ| ದೇವಸ್ಥಾನಕ್ಕೆ ಹೋಗಿ ಬಂದರೂ ಪಾಶ ಹಾಕಿದ ಯಮ!! Read More »

ಪುತ್ತೂರು:ಹೆರಿಗೆ ವೇಳೆ ತೀವ್ರ ರಕ್ತಸ್ರಾವ|ಆಶಾ ಕಾರ್ಯಕರ್ತೆ ಮೃತ್ಯು

ಸಮಗ್ರ ನ್ಯೂಸ್: ಹೆರಿಗೆ ವೇಳೆ ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆ ಬೆಳ್ತಂಗಡಿಯ ಕರಾಯ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಆಶಾ ಕಾರ್ಯಕರ್ತೆ ಭವ್ಯ (29) ಹೆರಿಗೆಗಾಗಿ ಪುತ್ತೂರಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದು, ಈ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದರು ತಕ್ಷಣ ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಜೂ. 21ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಮೃತರು ಪತಿ

ಪುತ್ತೂರು:ಹೆರಿಗೆ ವೇಳೆ ತೀವ್ರ ರಕ್ತಸ್ರಾವ|ಆಶಾ ಕಾರ್ಯಕರ್ತೆ ಮೃತ್ಯು Read More »

ಚಿಕ್ಕಮಗಳೂರು : ಲಾರಿ ಹಾಗೂ ಬೈಕ್ ಅಫಘಾತ| ಇಬ್ಬರ ಸಾವು

ಸಮಗ್ರ ನ್ಯೂಸ್ : ಲಾರಿ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಇಬ್ಬರ ಸಾವನಪ್ಪಿದ ಘಟನೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ಸಂಭವಿಸಿದೆ. ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ (24) ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ (22) ಮೃತರು.

ಚಿಕ್ಕಮಗಳೂರು : ಲಾರಿ ಹಾಗೂ ಬೈಕ್ ಅಫಘಾತ| ಇಬ್ಬರ ಸಾವು Read More »