ಕ್ರೈಂ

ಆಶ್ರಮದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಕಾಮಿಸ್ವಾಮಿ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ತಾನು ನಡೆಸುತ್ತಿದ್ದ ಆಶ್ರಮದಲ್ಲಿ ಹಲವು ತಿಂಗಳುಗಳ ಕಾಲ ಅನಾಥ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಂಧ್ರಪ್ರದೇಶದ ದಾರ್ಶನಿಕನೊಬ್ಬನನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ. ವಿಶಾಖಪಟ್ಟಣಂನ ವೆಂಕೋಜಿಯಲ್ಲಿರುವ ಜ್ಞಾನಾನಂದ ಆಶ್ರಮದ ಆಡಳಿತಾಧಿಕಾರಿ ಪೂರ್ಣಾನಂದ ಸರಸ್ವತಿ ಅವರನ್ನು ವಿಜಯವಾಡದಲ್ಲಿ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ. ಪೋಲೀಸರ ಪ್ರಕಾರ, ಪೂರ್ಣಾನಂದ ಸರಸ್ವತಿ ತನ್ನನ್ನು ಪದೇ ಪದೇ ಹಿಂಸಿಸುತ್ತಿದ್ದರು. ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆಶ್ರಮದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ ಬಾಲಕಿ […]

ಆಶ್ರಮದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಕಾಮಿಸ್ವಾಮಿ| ಆರೋಪಿಯ ಬಂಧನ Read More »

ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು

ಸಮಗ್ರ ನ್ಯೂಸ್: ರಾಜ್ಯದ ಬೆಂಗಳೂರು, ಮಂಡ್ಯ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ ಸೇರಿದಂತೆ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬೀರುವಳ್ಳಿಯ ರೈತ ಮಂಜುನಾಥ್ ಮೃತಪಟ್ಟಿದ್ದು, ಮತ್ತೊಬ್ಬ ರೈತ ರಾಜು ಗಾಯಗೊಂಡಿದ್ದಾರೆ. ದಾವಣಗೆರೆ, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಉತ್ತಮ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದ ಬಳಿಕ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಸೇರಿದಂತೆ ಕೆಲವೆಡೆ

ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು Read More »

ಪಾರ್ಶ್ವವಾಯು ಪೀಡಿತ ತಂದೆಗೆ ಚಿಕಿತ್ಸೆ ಕೊಡಿಸಲು ಹೋಗಿ ಉಸಿರುಚೆಲ್ಲಿದ ಮಗಳು| ಕಾರಣವಿಲ್ಲದೇ ಸಾವಿನ ದಾರಿ ಹಿಡಿದ ಪುತ್ರಿಯ ದಾರುಣ ಕಥೆ!!

ಸಮಗ್ರ ನ್ಯೂಸ್: ಪಾರ್ಶ್ವವಾಯು ಪೀಡಿತ ತಂದೆಗೆ ಚಿಕಿತ್ಸೆ ಕೊಡಿಸಲು ಬಂದ ಮಹಿಳೆಯೋರ್ವಳು ತಾನು ಪಾರ್ಶ್ವವಾಯು ಬರದಂತೆ ಮುಂಚೆಯೇ ನೀಡುವ ಇಂಜೆಕ್ಷನ್ ಪಡೆದು ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಹಳಗಾದ ಸೇಂಟ್ ಮೇರಿಸ್ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ಕೊಪ್ಪಳ ಮೂಲದ ಸ್ವಪ್ನ ರಾಯ್ಕರ್ (32) ಮೃತ ಮಹಿಳೆ. ಘಟನೆಯ ವಿವರ: ಸ್ವಪ್ನ ಕುಟುಂಬದ ಜತೆ ಗೋವಾ ಹಾಗೂ ಉತ್ತರ ಕನ್ನಡ ಪ್ರವಾಸಕ್ಕಾಗಿ ಅವರು ಆಗಮಿಸಿದ್ದರು. ಗೋವಾದ ಕಾಮಾಕ್ಷಿ ದೇವಸ್ಥಾನಕ್ಕೆ ತೆರಳಿ ಸೋಮವಾರ ಕಾರವಾರಕ್ಕೆ ಆಗಮಿಸಿದ್ದರು.

ಪಾರ್ಶ್ವವಾಯು ಪೀಡಿತ ತಂದೆಗೆ ಚಿಕಿತ್ಸೆ ಕೊಡಿಸಲು ಹೋಗಿ ಉಸಿರುಚೆಲ್ಲಿದ ಮಗಳು| ಕಾರಣವಿಲ್ಲದೇ ಸಾವಿನ ದಾರಿ ಹಿಡಿದ ಪುತ್ರಿಯ ದಾರುಣ ಕಥೆ!! Read More »

ಪುತ್ತೂರು:ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತನಿಂದ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪುತ್ತೂರಿನಲ್ಲಿ ಮಂಗಳವಾರ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ, ಪುರುಷಕಟ್ಟೆಯಲ್ಲಿ ನಡೆದಿದೆ. ಕುತ್ತಿಗೆ, ಹೊಟ್ಟೆ, ತುಟಿಗೆ ಕೈಯಿಂದ ಜಜ್ಜಿ ಗಂಭೀರ ಹಲ್ಲೆ ನಡೆಸಲಾಗಿದ್ದು, ಹಲ್ಲೆಗೊಳಗಾದ ವ್ಯಕ್ತಿಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ತಿಳಿದು ಬಂದಿದೆ. ರಾಜಕೀಯ ವೈಷಮ್ಯದಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಹಲ್ಲೆಗೊಳಗಾದ ವ್ಯಕ್ತಿ ಕಳೆದ ಕೆಲವು ತಿಂಗಳಿನ ಹಿಂದೆ

ಪುತ್ತೂರು:ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತನಿಂದ ಮಾರಣಾಂತಿಕ ಹಲ್ಲೆ Read More »

Express highway: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ| ದಂಪತಿ ಸೇರಿ ಮೂವರು ದುರ್ಮರಣ

ಸಮಗ್ರ ನ್ಯೂಸ್: ಅತಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಅಪ್ಪಳಿಸಿದ ಪರಿಣಾಮ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು ಮೈಸೂರು ಹೆದ್ದಾರಿಯ ಕಿಟ್ಟಿ ಡಾಬಾ ಬಳಿ ಇಂದು(ಜೂ.20l ಬೆಳಗ್ಗೆ ನಡೆದಿದೆ. ಉತ್ತರ ಪ್ರದೇಶ ಲಕ್ನೋದ ನಿವಾಸಿಗಳಾದ ಧೀರಜ್‌ಕುಮಾರ್ (55) ಆತನ ಪತ್ನಿ ಶೈಲ್ವಿ (50) ಹಾಗೂ ಕಾರು ಚಾಲಕ ಮಂಡ್ಯದ ಗಾಂಧಿನಗರ ನಿವಾಸಿ ನಿರಂಜನ್‌ಕುಮಾರ್ (30) ಮೃತರು ಎಂದು ಗುರುತಿಸಲಾಗಿದೆ. ಇನ್ನು

Express highway: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ| ದಂಪತಿ ಸೇರಿ ಮೂವರು ದುರ್ಮರಣ Read More »

ಹಿಂದೂ ಯುವಕನ ಜೊತೆ ಹಸೆಮಣೆ ಏರಿದ ಮುಸ್ಲಿಂ ಯುವತಿ| ವಿಲನ್ ಗಳಾದ ಪೊಲೀಸರು

ಸಮಗ್ರ ನ್ಯೂಸ್:‌ ಹಿಂದೂ ಯುವಕ ಜೊತೆಗೆ ಮುಸ್ಲಿಂ ಯುವತಿಯ ಮದುವೆಯನ್ನು ಪೊಲೀಸರು ತಡೆದ ಘಟನೆ ಕೇರಳದ ಕಾಯಂಕುಲಂದಲ್ಲಿ ನಡೆದಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಖಿಲ್ ಮತ್ತು ಅಲ್ಫಿಯಾ ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರು. ಇವರಿಬ್ಬರು ಭಾನುವಾರ ಸಂಜೆ 5 ಗಂಟೆಗೆ ಕೋವಲಂನ ಕೆಎಸ್ ರಸ್ತೆಯಲ್ಲಿರುವ ಮಲವಿಲಾ ಪನಮೂಟ್‌ನಲ್ಲಿರುವ ಶ್ರೀ ಮದನ್ ತಂಪುರಾನ್ ದೇವಸ್ಥಾನವನ್ನು ತಲುಪಿದ್ದಾರೆ ಕಾಯಂಕುಲಂ ಪೊಲೀಸರು ಸ್ಥಳಕ್ಕೆ ಆಗಮಿಸಿ ವರನನ್ನು ಹಿಡಿದು ವಧುವಿನ ಬಳಿ ಹೋಗಲು ಬಿಡಲಿಲ್ಲ. ವಧುವನ್ನೂ ವಾಪಾಸ್ಸು ಕರೆದುಕೊಂಡು

ಹಿಂದೂ ಯುವಕನ ಜೊತೆ ಹಸೆಮಣೆ ಏರಿದ ಮುಸ್ಲಿಂ ಯುವತಿ| ವಿಲನ್ ಗಳಾದ ಪೊಲೀಸರು Read More »

ಸುಳ್ಯ:ಯುವಕ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.20ರಂದು ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ನಾಗಪಟ್ಟಣದಲ್ಲಿ ನಡೆದಿದೆ. ನಾಗಪಟ್ಟಣದ ನಿವಾಸಿ ಮಣಿಕಂಠ (29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಜಾಲ್ಸೂರು ಗೇರು ಬೀಜ ಕಾರ್ಖಾನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಜಾಲ್ಸೂರಿನಿಂದ ನಿನ್ನೆ ತಡ ರಾತ್ರಿ ಮನೆಗೆ ಬಂದ ಯುವಕ ತಾಯಿಯ ಸೀರೆಯನ್ನು ಹಗ್ಗವನ್ನಾಗಿಸಿ ಮನೆ ಸಮೀಪದ ಮಾವಿನ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಆತನ ಬೈಕ್ ಮನೆ ಎದುರು ನಿಂತಿದ್ದು ಆತನಿಗಾಗಿ

ಸುಳ್ಯ:ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಪುತ್ತೂರು: ಕಾರು-ದ್ವಿಚಕ್ರ‌ ವಾಹನ ನಡುವೆ ಅಪಘಾತ; ಸವಾರ ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಪುತ್ತೂರು ಹೊರವಲಯದ ಕಲ್ಲರ್ಪೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ನೈತಾಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದ ಅವರು ದಾರಿಮಧ್ಯೆ ಕೊನೆಯುಸಿರೆಳೆದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಕಾರು-ದ್ವಿಚಕ್ರ‌ ವಾಹನ ನಡುವೆ ಅಪಘಾತ; ಸವಾರ ಸಾವು Read More »

ಉಡುಪಿ: ಬಸ್- ಬೈಕ್ ಅಪಘಾತ| ಗಂಭೀರ ಗಾಯಗೊಂಡಿದ್ದ ಯುವತಿ ಸಾವು

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮಣಿಪಾಲದ ಮೃತಪಟ್ಟಿದ್ದಾಳೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಿರ್ಮಿತಾ (19) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿರ್ಮಿತಾ ಹಾಗೂ ಶಶಾಂಕ್ ಜೂನ್ 18 ರಂದು ಬೈಕನಲ್ಲಿ ತೆರಳುತಿದ್ದಾಗ ಆಗುಂಬೆ ಘಾಟ್‌ನಲ್ಲಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದರು. ಈ ದುರ್ಘಟನೆ ವೇಳೆ ಶಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದರು.ಇನ್ನೂ ಶಶಾಂಕ್ ಮತ್ತು ನಿರ್ಮಿತಾ ಇವರಿಬ್ಬರು ಉಡುಪಿಯ ಬಾರ್ಕೂರಿನ ನಾಗರಮಠದವರು. ಶಶಾಂಕ್ ಇಂಜಿನಿಯರಿಂಗ್

ಉಡುಪಿ: ಬಸ್- ಬೈಕ್ ಅಪಘಾತ| ಗಂಭೀರ ಗಾಯಗೊಂಡಿದ್ದ ಯುವತಿ ಸಾವು Read More »

ಪೊನ್ನಂಪೇಟೆ: ಹುಲಿ ದಾಳಿಗೆ ಎಮ್ಮೆ ಬಲಿ

ಸಮಗ್ರ ನ್ಯೂಸ್:‌ ಹುಲಿ ದಾಳಿಗೆ ಎಮ್ಮೆ ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಬಾಡಗರಕೇರಿ ಗ್ರಾಮದಲ್ಲಿ ನಡದಿದೆ, ರೈತ ಚಂದ್ರಶೇಖರ್ ಅವರಿಗೆ ಸೇರಿದ ಎಮ್ಮೆಯನ್ನು ಮೇಯಲು ಗದ್ದೆಯಲ್ಲಿ ಕಟ್ಟಿದ್ದ ಸಂದರ್ಭ ಜೂ.18ರಂದು ಸಂಜೆ ಹುಲಿ ದಾಳಿ ನಡೆಸಿದೆ. ಎಮ್ಮೆ ಕಳೆದುಕೊಂಡಿರುವ ರೈತನಿಗೆ ಹೆಚ್ಚಿನ ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪೊನ್ನಂಪೇಟೆ: ಹುಲಿ ದಾಳಿಗೆ ಎಮ್ಮೆ ಬಲಿ Read More »