ಕ್ರೈಂ

ಪಾಣತ್ತೂರಿನ ಪೆರಿಯಾರಂ ಬಳಿ ಟ್ಯಾಂಕರ್ ಪಲ್ಟಿ

ಸಮಗ್ರ ನ್ಯೂಸ್: ಮಂಗಳೂರಿಂದ ಡಿಸೇಲ್ ಹೇರಿಕೊಂಡು ಕರಿಕೆ ಬಾಗಕ್ಕೆ ಬರತ್ತಿದ್ದ ಟ್ಯಾಂಕರ್ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಇಬ್ಬರು ಗಂಭೀರ ಸ್ವರೂಪದ ಗಾಯಗೊಂಡಿದ್ದಾಗಿ ತಿಳಿದುಬಂದಿದೆ. ಗಾಯಾಳುಗಳ ಹೇಳಿಕೆಯಂತೆ ಮತ್ತೋರ್ವನಿಗೆ ಹುಡುಕಾಟ ನಡೆಸಲಾಗುತ್ತಿದೆ, ಗಂಭೀರ ಗಾಯಗೊಂಡಿರುವ ಟ್ಯಾಂಕರ್ ಚಾಲಕ ಮತ್ತು ಮತ್ತೋರ್ವನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಹಲವು ಪಲ್ಟಿ ಹೊಡೆದಿದ್ದು ಅಪಘಾತದಲ್ಲಿ ಟ್ಯಾಂಕರ್ ನಜ್ಜುಗುಜ್ಜಾಗಿದ್ದು , ತುಂಬಿರುವ ಡೀಸೆಲ್ ಅಲ್ಪ ಪ್ರಮಾಣದಲ್ಲಿ ಸೋರಿಕೆಯಾಗುತ್ತಿರುವುದಾಗಿ ತಿಳಿದು ಬಂದಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಸುಳ್ಯದಿಂದ ತೆರಳುತ್ತಿದ್ದ ಕೇರಳ […]

ಪಾಣತ್ತೂರಿನ ಪೆರಿಯಾರಂ ಬಳಿ ಟ್ಯಾಂಕರ್ ಪಲ್ಟಿ Read More »

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಫಾಝಿಲ್, ಮಸೂದ್, ಜಲೀಲ್, ದೀಪಕ್ ರಾವ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು. ರಾಜ್ಯ

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಫಾಝಿಲ್, ಮಸೂದ್, ಜಲೀಲ್, ದೀಪಕ್ ರಾವ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ Read More »

ಸೌಜನ್ಯ ಕೊಲೆ ಪ್ರಕರಣ| ಆರೋಪಿ ಸಂತೋಷ್ ರಾವ್ ದೋಷಮುಕ್ತ| ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು|

ಸಮಗ್ರ ನ್ಯೂಸ್: ರಾಷ್ಟ್ರಮಟ್ಟದಲ್ಲಿ ಬಾರೀ ಸುದ್ದಿಯಾಗಿದ್ದ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ ಬರೋಬ್ಬರಿ 11 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಪ್ರಕರಣದ ಪ್ರಮುಖ ಆರೋಪಿ ಸಂತೋಷ್‌ ರಾವ್‌ ದೋಷಮುಕ್ತ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಳಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಕರಾವಳಿಯಾದ್ಯಂತ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಕಾಲೇಜು ಮುಗಿಸಿ

ಸೌಜನ್ಯ ಕೊಲೆ ಪ್ರಕರಣ| ಆರೋಪಿ ಸಂತೋಷ್ ರಾವ್ ದೋಷಮುಕ್ತ| ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು| Read More »

ಕೊಡಗು: ಸ್ಕೂಟಿ-ಬೈಕ್​ ಅಫಘಾತ| ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್ : ಸ್ಕೂಟಿ-ಬೈಕ್​ ಅಫಘಾತದಲ್ಲಿ ಕಾಲೇಜ್ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಿಂದ ವರದಿಯಾಗಿದೆ. ಕೊಡಗಿನ ಎಫ್ಎಂಸಿ(FMC)ಕಾಲೇಜಿನ ಭಾವನಾ(21) ಮೃತ ವಿದ್ಯಾರ್ಥಿನಿ ತಿಳಿದು ಬಂದಿದೆ. ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್​ ಸ್ಕೂಟಿಗೆ ಅಪ್ಪಳಿಸಿದೆ.ಈ ವೇಳೆ ಬೈಕ್ ಅಪಘಾತ (Accident) ಸಂಭವಿಸಿದೆ. ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗು: ಸ್ಕೂಟಿ-ಬೈಕ್​ ಅಫಘಾತ| ವಿದ್ಯಾರ್ಥಿನಿ ಸಾವು Read More »

15 ವೃದ್ಧರನ್ನು ಬಲಿತೆಗೆದುಕೊಂಡ ಟ್ರಕ್| ಕ್ಯಾಸಿನೋಗೆ ತೆರಳುತ್ತಿದ್ದವರು ಮಸಣಕ್ಕೆ

ಸಮಗ್ರ ನ್ಯೂಸ್: ಕ್ಯಾಸಿನೊಗೆ ತೆರಳುತ್ತಿದ್ದ ಹಿರಿಯ ನಾಗರಿಕರ ಮೇಲೆ ಟ್ರಕ್ ಹರಿದು, ಕನಿಷ್ಠ 15 ಮಂದಿ ವೃದ್ಧರು ಸಾವನ್ನಪ್ಪಿದ್ದ ಘಟನೆ ಕೆನಡಾದಲ್ಲಿ ನಡೆದಿದೆ. ಗುರುವಾರ ವೃದ್ಧರ ತಂಡ ಪ್ರಯಾಣಿಸುತ್ತಿದ್ದ ವಾಹನಕ್ಕೆ ಸೆಮಿ ಟ್ರೈಲರ್ ಟ್ರಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ವಿನ್ನಿಪೆಗ್ ಫ್ರೀ ಪ್ರೆಸ್ ಪತ್ರಿಕೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಕೆನಡಾದಲ್ಲಿ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಕನಿಷ್ಠ 15 ವೃದ್ಧರು ಸಾವನ್ನಪ್ಪಿದ್ದಾರೆ, ವಿನ್ನಿಪೆಗ್‌ನ ಪಶ್ಚಿಮಕ್ಕೆ 170 ಕಿಮೀ ದೂರದ ನೈಋತ್ಯ

15 ವೃದ್ಧರನ್ನು ಬಲಿತೆಗೆದುಕೊಂಡ ಟ್ರಕ್| ಕ್ಯಾಸಿನೋಗೆ ತೆರಳುತ್ತಿದ್ದವರು ಮಸಣಕ್ಕೆ Read More »

ಸೌಜನ್ಯ ಕೊಲೆ ಪ್ರಕರಣ| ಇಂದು(ಜೂ.16) ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಕೊಲೆ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಜೂನ್‌ 16ರಂದು ಪ್ರಕಟಿಸಲಿದೆ. ಉಜಿರೆ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯಾ ಅವರು 2012ರ ಅಕ್ಟೋಬರ್‌ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿಯ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.

ಸೌಜನ್ಯ ಕೊಲೆ ಪ್ರಕರಣ| ಇಂದು(ಜೂ.16) ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು Read More »

ಅನ್ನ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಸಮಗ್ರ ನ್ಯೂಸ್: ಊಟ ಮಾಡುವಾಗ ಅನ್ನದ ತುತ್ತು ಗಂಟಲಲ್ಲಿ ಸಿಲುಕಿ 14 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಆಂಜನೇಯ ಎಂದು ಗುರುತಿಸಲಾಗಿದೆ. ತಾಯಿ ರುದ್ರಮ್ಮ ಬುದ್ಧಿಮಾಂದ್ಯ ಮಗನಿಗೆ ಊಟ ಬಡಿಸಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಅನ್ನದ ತುತ್ತು ಗಂಟಲಿಗೆ ಸಿಲುಕಿಕೊಂಡು ಆಂಜನೇಯ ಸಾವನ್ನಪ್ಪಿದ್ದಾನೆ.

ಅನ್ನ ಗಂಟಲಲ್ಲಿ ಸಿಲುಕಿ ಬಾಲಕ ಸಾವು Read More »

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ಗೌಪ್ಯವಾಗಿ ನಡೆಯುತ್ತಿದೆ 9ದಿನಗಳ ವಿಶಿಷ್ಟ ಹವನ

ಸಮಗ್ರ ನ್ಯೂಸ್:‌ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸೇರಿದ ಪುತ್ತೂರು ಸಮೀಪದ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಜೂ.11ರಂದು ಪ್ರಾರಂಭವಾಗಿ ಜೂ.18ರವರೆಗೆ 9 ದಿನಗಳ ಕಾಲ ನಡೆಯುವ ಈ ಹೋಮದ ನೇತ್ರತ್ವವನ್ನು ವಿದ್ವಾನ್ ಬಾಲಕೃಷ್ಣ ಕಾರಂತ್ ವಹಿಸಿದ್ದಾರೆ ಎನ್ನಲಾಗಿದೆ. ಅತ್ಯಂತ ಗೌಪ್ಯವಾಗಿ ಈ ಹವನವನ್ನು ನಡೆಸಲಾಗುತ್ತಿದ್ದು, ಯಾವ ಉದ್ದೇಶ ಪ್ರಾಪ್ತಿಗಾಗಿ ಈ ಹೋಮ ನಡೆಸಲಾಗುತ್ತಿದೆ ಎಂಬ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ. ಒಳಗೆ ನಡೆಸಲಾಗುತ್ತಿರುವ ಧಾರ್ಮಿಕ

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ಗೌಪ್ಯವಾಗಿ ನಡೆಯುತ್ತಿದೆ 9ದಿನಗಳ ವಿಶಿಷ್ಟ ಹವನ Read More »

ಮಂಗಳೂರು:ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಅಪಘಾತ| ಕಡಬದ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಕಡಬ ತಾಲೂಕಿನ ಇಚಿಲಂಪಾಡಿಯ ಯುವಕ ಮೃತಪಟ್ಟ ಘಟನೆ ಮಂಗಳೂರಿನ ಪಂಪ್ ವೆಲ್ ನಲ್ಲಿ ಬುಧವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತ ಸವಾರನನ್ನು ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ಓಮನ ದಂಪತಿ ಪುತ್ರ ಸಂದೇಶ್ (25) ಎಂದು ಗುರುತಿಸಲಾಗಿದೆ. ಈತ ಬೆಂದೂರ್ ವೆಲ್ ನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ರೂಮ್ ಗೆ ತೆರಳುತ್ತಿದ್ದ

ಮಂಗಳೂರು:ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಅಪಘಾತ| ಕಡಬದ ಯುವಕ ದಾರುಣ ಸಾವು Read More »

ಮದುವೆ ಮುಗಿಸಿ ಮರಳುತ್ತಿದ್ದ 103 ಮಂದಿ ದೋಣಿ ಮುಳುಗಿ ಸಾವು

ಸಮಗ್ರ ನ್ಯೂಸ್:ಮದುವೆ ಮುಗಿಸಿ ವಾಪಾಸ್ಸಾಗುತ್ತಿದ್ದ 103 ಮಂದಿ ದೋಣಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಆಫ್ರಿಕಾದ ಉತ್ತರ ನೈಜೀರಿಯಾದಲ್ಲಿ ಸಂಭವಿಸಿದೆ. ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ (AP) ಪ್ರಕಾರ, ಉತ್ತರ ನೈಜೀರಿಯಾದಿಂದ 103 ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಈ ವೇಳೆ ದೋಣಿ ಮಗುಚಿದ ಘಟನೆ ನಡೆದಿದೆ. ಎಪಿ ಪ್ರಕಾರ, 100 ಕ್ಕೂ ಹೆಚ್ಚು ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಇದೇ ವೇಳೆ ಹಠಾತ್ ಓವರ್ ಲೋಡ್ ನಿಂದಾಗಿ ಬೋಟ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಸುಮಾರು 103

ಮದುವೆ ಮುಗಿಸಿ ಮರಳುತ್ತಿದ್ದ 103 ಮಂದಿ ದೋಣಿ ಮುಳುಗಿ ಸಾವು Read More »