ಕ್ರೈಂ

ರಾಮನಗರ: ಜಾಲಿಮೂಡ್ ನಲ್ಲಿದ್ದ ಗೆಳೆಯರು ಭೀಕರ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿದ್ದು, ಸಾಯುವ ಕೆಲ‌ ನಿಮಿಷಗಳ ಮೊದಲು ನಾಲ್ಕು ಮಂದಿ ಸ್ನೇಹಿತರು ಕುಚುಕು, ಕುಚುಕು ಹಾಡು ಹಾಕಿಕೊಂಡು ಜಾಲಿ ಮೂಡ್ ನಲ್ಲಿ ಬರುತ್ತಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಮನಗರದ ವಿನಯ್,ವಿಜಯ್, ಮಂಜೇಶ್ ಮತ್ತು ನಿಖಿಲ್ ಕೆಲಸ‌ನಿಮ್ಮಿತ್ತ ಮದ್ದೂರು ತಾಲೂಕಿನ ಬೆಸಗರಹಳ್ಳಿಗೆ ಹೋಗಿ ರಾಮನಗರಕ್ಕೆ ಹಿಂದಿರುಗುತ್ತಿದ್ದರು. ಹಿಂದಿರುಗುವಾಗ ಕುಚುಕ್ಕೂ ಹಾಡು ಹೇಳಿಕೊಂಡು ಬರುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. […]

ರಾಮನಗರ: ಜಾಲಿಮೂಡ್ ನಲ್ಲಿದ್ದ ಗೆಳೆಯರು ಭೀಕರ ಅಪಘಾತದಲ್ಲಿ ಸಾವು Read More »

ಚಿಕ್ಕಮಗಳೂರು : ಸಿಡಿಲು ಬಡಿದು ಓರ್ವ ಸಾವು| ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಸಿಡಿಲು ಬಡಿದು ಓರ್ವ ಸಾವನಪ್ಪಿದ್ದು ನಾಲ್ವರಿಗೆ ಗಾಯವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಂಭವಿಸಿದೆ. ಮೃತರನ್ನು ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ವ್ಯಕ್ತಿ ಮುಖೇಶ್ (40) ಎಂದು ಗುರುತಿಸಲಾಗಿದೆ. ಈತ ದೇವಸ್ಥಾನಕ್ಕೆ ಆಗಮಿಸಿ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದೆ ಎನ್ನಲಾಗಿದೆ. ಈ ವೇಳೆ ಜೊತೆಗಿದ್ದ ನಾಲ್ವರಿಗೂ ಸಿಡಿಲು ಬಡಿದಿದ್ದ ಗಾಯಳುಗಳಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವಾಪಸ್ಸು ಕಳುಹಿಸಿದ್ದಾರೆ.

ಚಿಕ್ಕಮಗಳೂರು : ಸಿಡಿಲು ಬಡಿದು ಓರ್ವ ಸಾವು| ನಾಲ್ವರಿಗೆ ಗಾಯ Read More »

ಉಪ್ಪಿನಂಗಡಿ: ಟ್ಯಾಂಕರ್ ಲಾರಿ ಚಾಲಕನ ಮೇಲೆ ಹಲ್ಲೆ; ನಗದು ದೋಚಿ ಪರಾರಿ

ಸಮಗ್ರ ನ್ಯೂಸ್: ಟ್ಯಾಂಕರ್ ಲಾರಿಯನ್ನು ತಡೆದ ತಂಡವೊಂದು ಚಾಲಕನ‌ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ. ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ. ವಿನ್ಸೆಂಟ್ ಕುಳೂರಿನಿಂದ ಟ್ಯಾಂಕರ್ ಲಾರಿಯಲ್ಲಿ ಬರುತ್ತಿದ್ದ ವೇಳೆ ಉಪ್ಪಿನಂಗಡಿ ಬಳಿ ಖಾಸಗಿ ಬಸ್‌ನಿಂದ ಇಳಿದ ವ್ಯಕ್ತಿಯೊಬ್ಬ ಟ್ಯಾಂಕರ್ ನಿಲ್ಲಿಸುವಂತೆ ಸೂಚಿಸಿದ್ದಾನೆ. ಟ್ಯಾಂಕರ್ ನಿಲ್ಲಿಸದೆ ಮುಂದೆ ಹೋದಾಗ ಕಾರೊಂದು ಬಂದು ಲಾರಿಗೆ ಅಡ್ಡ ಹಾಕಿ ಮೂವರು ವ್ಯಕ್ತಿಗಳು ಕಾರಿನಿಂದ ಇಳಿದು ಹಲ್ಲೆ ನಡೆಸಿದ್ದಾರೆ

ಉಪ್ಪಿನಂಗಡಿ: ಟ್ಯಾಂಕರ್ ಲಾರಿ ಚಾಲಕನ ಮೇಲೆ ಹಲ್ಲೆ; ನಗದು ದೋಚಿ ಪರಾರಿ Read More »

ಹನಿಮೂನ್ ಫೋಟೋ ಶೂಟ್ ವೇಳೆ ನಡೆಯಿತು ಅವಘಡ| ಮದುವೆಯಾಗಿ ಹತ್ತೇ ದಿನಕ್ಕೆ ನವದಂಪತಿಯ ದುರಂತ ಸಾವು

ಸಮಗ್ರ ನ್ಯೂಸ್: ಮದುವೆಯಾಗಿ ಹತ್ತು ದಿನಗಳೂ ಆಗಿಲ್ಲ. ಇನ್ನೂ ಮದುವೆ ಸಮಾರಂಭ ಮುಗಿದಿಲ್ಲ. ಅಷ್ಟರಲ್ಲಿ ನವದಂಪತಿ ಇಹಲೋಕ ತ್ಯಜಿಸಿದ್ದಾರೆ. ಇಬ್ಬರೂ ಜೂನ್ 1 ರಂದು ವಿವಾಹವಾಗಿ ಹನಿಮೂನ್‌ಗೆಂದು ಬಾಲಿಗೆ ಹೋಗಿದ್ದರು. ತಮ್ಮ ವೈಯಕ್ತಿಕ ಜೀವನ ಎಂಜಾಯ್‌ ಮಾಡುತ್ತಾ ವೈದ್ಯ ದಂಪತಿ ಸ್ಪೀಡ್ ಬೋಟ್ ರೈಡ್‌ನಲ್ಲಿ ಚಿತ್ರಗಳನ್ನು ಕ್ಲಿಕ್ಕಿಸಲು ಸಮುದ್ರಕ್ಕೆ ಇಳಿದಿದ್ದಾರೆ. ಬಹುಶಃ ಇದು ತಮ್ಮ ಕೊನೆಯ ಸವಾರಿ ಎಂದು ಅವರು ಊಹಿಸಿರಲಿಲ್ಲ. ಮೃತ ವೈದ್ಯ ದಂಪತಿಯನ್ನು ಲೋಕೇಶ್ವರನ್ ಮತ್ತು ವಿಭೂಷಣಾ ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಜೂನ್ 1ರಂದು

ಹನಿಮೂನ್ ಫೋಟೋ ಶೂಟ್ ವೇಳೆ ನಡೆಯಿತು ಅವಘಡ| ಮದುವೆಯಾಗಿ ಹತ್ತೇ ದಿನಕ್ಕೆ ನವದಂಪತಿಯ ದುರಂತ ಸಾವು Read More »

ಹೆಬ್ರಿ: ಕಾರು-ಖಾಸಗಿ ಬಸ್ ನಡುವೆ ಭೀಕರ ಅಪಘಾತ| ಇಬ್ಬರು ಶಿಕ್ಷಕರ ದಾರುಣ ಸಾವು

ಸಮಗ್ರ ನ್ಯೂಸ್: ಹೆಬ್ರಿ ಸಮೀಪದ ಸೀತಾನದಿ ಎಂಬಲ್ಲಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ದಾರುಣವಾಗಿ ಮೃತಪಟ್ಟ ಘಟನೆ ಜೂ.11ರ ಮಧ್ಯಾಹ್ನ ನಡೆದಿದೆ. ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ, ಸೋಮಶೇಖರ್ ಎಂದು ಗುರುತಿಸಲಾಗಿದೆ. ಇವರೊಂದಿಗೆ ಕಾರಿನಲ್ಲಿದ್ದ ಶಿಕ್ಷಕ ಸುದರ್ಶನ ಹಾಗೂ ಕಾರು ಚಾಲಕ ಸತೀಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಿಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ದಾವಣಗೆರೆ

ಹೆಬ್ರಿ: ಕಾರು-ಖಾಸಗಿ ಬಸ್ ನಡುವೆ ಭೀಕರ ಅಪಘಾತ| ಇಬ್ಬರು ಶಿಕ್ಷಕರ ದಾರುಣ ಸಾವು Read More »

ಕಾಪು: ಬಸ್ – ಬೈಕ್ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್: ಬಸ್ ಮತ್ತು ಬೈಕ್ ನಡುವೆ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಜೂ.11 ರಂದು ಬೆಳಿಗ್ಗೆ ನಡೆದಿದೆ. ಮೃತರು ಹೂವಿನ ವ್ಯಾಪಾರಸ್ಥರಾದ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ. ಬಸ್‌ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕ ಆಗಮಿಸಿ ಪರಿಶೀಲನೆ

ಕಾಪು: ಬಸ್ – ಬೈಕ್ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಗುಂಡ್ಯ: ನಿಯಂತ್ರಣ ತಪ್ಪಿ ಹೊಳೆಗೆ ಉರುಳಿದ ಕಾರು| ಓರ್ವ ಸಾವು; ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹೊಸೂರು ನಿವಾಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಶ್ವಿನಿ ಆಂಬ್ಯುಲೆನ್ಸ್ ಮೂಲಕ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದೆ ಎಂದು ತಿಳಿದುಬಂದಿದೆ.

ಗುಂಡ್ಯ: ನಿಯಂತ್ರಣ ತಪ್ಪಿ ಹೊಳೆಗೆ ಉರುಳಿದ ಕಾರು| ಓರ್ವ ಸಾವು; ಮತ್ತೊಬ್ಬ ಗಂಭೀರ Read More »

ಬೆಳ್ತಂಗಡಿ: ಮಳೆಯಿಂದಾಗಿ ಚಾಲಕರ ಹತೋಟಿ ತಪ್ಪಿ ಸರಣಿ ವಾಹನ ಪಲ್ಟಿ

ಸಮಗ್ರನ್ಯೂಸ್: ಕೊಟ್ಟಿಗೆಹಾರ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಟೆಂಪೋ ಟ್ರಾವೆಲರ್ ಮತ್ತು ತರಕಾರಿ ಸಾಗಾಟದ ವಾಹನ ಚಾರ್ಮಾಡಿ ಪೇಟೆಯಲ್ಲಿ ಪಲ್ಟಿಯಾದ ಘಟನೆ ಜೂ.10 ರಂದು ನಡೆದಿದೆ. ಮಧ್ಯಾಹ್ನದ ವೇಳೆಗೆ ಅಂಗಡಿಯೊಂದರ ಮುಂಭಾಗ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಟಿಟಿ ಅಂಗಡಿಯಿಂದ ಅನತಿ ದೂರದಲ್ಲಿ ಪಲ್ಟಿಯಾದ ಕಾರಣ ಹೆಚ್ಚಿನ ಅನಾಹುತ ಉಂಟಾಗುವುದು ತಪ್ಪಿದೆ. ಈ ಘಟನೆ ನಡೆದ ಕೊಂಚ ಹೊತ್ತಿನಲ್ಲಿ ಇಲ್ಲಿಂದ 100ಮೀ. ಮುಂಭಾಗದಲ್ಲಿ ತರಕಾರಿ ಸಾಗಾಟದ ವಾಹನ ರಸ್ತೆ ಬದಿಗೆ ಜಾರಿ ಚರಂಡಿಗೆ

ಬೆಳ್ತಂಗಡಿ: ಮಳೆಯಿಂದಾಗಿ ಚಾಲಕರ ಹತೋಟಿ ತಪ್ಪಿ ಸರಣಿ ವಾಹನ ಪಲ್ಟಿ Read More »

ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಜಡಿಮಳೆ

ಸಮಗ್ರ ನ್ಯೂಸ್: ಬಣಕಲ್,ಚಾರ್ಮಾಡಿ ಘಾಟ್,ಕೊಟ್ಟಿಗೆಹಾರ ಸುತ್ತಮುತ್ತ ಮಳೆಗಾಲದಂತೆ ಮೋಡ ಕವಿದ ವಾತಾವರಣ ಉಂಟಾಗಿ ದಿನವಿಡೀ ದಾರಾಕಾರ ಮಳೆಯಾಗುತ್ತಿದೆ. ಕೊಟ್ಟಿಗೆಹಾರ,ಚಾರ್ಮಾಡಿ ಘಾಟ್ ಭಾಗದಲ್ಲೂ ಮಂಜುಮುಸುಕಿನ ವಾತಾವರಣವಿದ್ದು ಮುಂಗಾರು ಮಳೆ ಆರಂಭವಾದಂತೆ ಭಾಸವಾಗಿದೆ. ಸುರಿಯುತ್ತಿರುವ ಜಡಿ ಮಳೆಯಿಂದ ವಾತಾವರಣ ತಂಪಾಗಿದ್ದು ಕೃಷಿಗೆ ಅನುಕೂಲವಾಗಿದೆ.ಹದ ಮಳೆಯಾಗುತ್ತಿರುವುದರಿಂದ ಮನೆ ನಿರ್ಮಾಣ ಕಾರ್ಯಗಳು ವಿಳಂಬವಾಗಿದೆ. ಕೊಟ್ಟಿಗೆಹಾರದಲ್ಲಿ ಜಡಿ ಮಳೆ ಸುರಿಯುತ್ತಿರುವುದರಿಂದ ಕಾಫಿ ತೋಟಗಳಿಗೆ ಗೊಬ್ಬರ ಹಾಕಲು ಸಕಾಲವಾಗಿದೆ.ಚಾರ್ಮಾಡಿ ಘಾಟ್ನಲ್ಲೀ ಮಂಜು ಮುಸುಕಿನ ವಾತಾವರಣ ಇರುವುದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.ಚಂಡ ಮಾರುತದ ವೈಪರೀತ್ಯದಿಂದ ಮಳೆಯಾಗುತ್ತಿದ್ದು ಜನರು

ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಜಡಿಮಳೆ Read More »

ಪುತ್ತೂರು: ಗುಜರಿ ವ್ಯವಹಾರ ಮಾಡುತ್ತಿದ್ದವರು ಮಂತ್ರವಾದಿಯ ಮುಖವಾಡ| ಬಿಸಿ ಬಿಸಿ ಕಜ್ಜಾಯ ನೀಡಿ ಮುಖವಾಡ ಕಳಚಿದ ಯುವಕರ ತಂಡ

ಸಮಗ್ರ ನ್ಯೂಸ್: ಗುಜರಿ ವ್ಯವಹಾರ ಮಾಡುತ್ತಿದ್ದವರು ಮಂತ್ರವಾದಿಯ ಮುಖವಾಡ ಹಾಕಿ ಜನರಿಗೆ ಮೋಸ ಮಾಡುತ್ತಿದ್ದ ಇಬ್ಬರಿಗೆ ಸ್ಥಳೀಯ ಯುವಕರು ಬಿಸಿ ಬಿಸಿ ಕಜ್ಜಾಯ ನೀಡಿ ಮುಖವಾಡ ಕಳಚಿದ ಘಟನೆ ಪುತ್ತೂರಿನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ವಳಾಲು ಪರಿಸರದಲ್ಲಿ ನಡೆದಿದೆ. ಈ ಬಗ್ಗೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಡಬ ಕೋಡಿಂಬಾಳ ಗ್ರಾಮದ ನಿವಾಸಿಗಳಾದ ಆಲಿ ಮತ್ತು ಮಮ್ಮು ಎಂಬವರು ಈ ಹಿಂದೆ ಗುಜರಿ ವ್ಯವಹಾರ ಮಾಡುತ್ತಿದ್ದರು. ಬಳಿಕ ಮಂತ್ರವಾದಿಯ ಮುಖವಾಡದಲ್ಲಿ ಹಲವೆಡೆ ಪರಿಚಿತರಾಗಿದ್ದರು. ಹೀಗಾಗಿ ಉಪ್ಪಿನಂಗಡಿ ಸಮೀಪದ

ಪುತ್ತೂರು: ಗುಜರಿ ವ್ಯವಹಾರ ಮಾಡುತ್ತಿದ್ದವರು ಮಂತ್ರವಾದಿಯ ಮುಖವಾಡ| ಬಿಸಿ ಬಿಸಿ ಕಜ್ಜಾಯ ನೀಡಿ ಮುಖವಾಡ ಕಳಚಿದ ಯುವಕರ ತಂಡ Read More »