ಕ್ರೈಂ

ಮರ್ಕಂಜ: ಗಣಿಗಾರಿಕೆ ಪರವಾನಿಗೆಯನ್ನು ರದ್ದುಗೊಳಿಸಬೇಕಾಗಿ ತಹಶೀಲ್ದಾರಿಗೆ ಮನವಿ

ಸಮಗ್ರ ನ್ಯೂಸ್:‌ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಅಕ್ರಮ ಮತ್ತು ಇದರಿಂದ ಹಲವು ಜನ ಸಾಮನ್ಯರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನಲೆ ಗಣಿಗಾರಿಕೆ ಪರವಾನಿಗೆಯನ್ನು ರದ್ದುಗೊಳಿಸಬೇಕಾಗಿ ತಹಶೀಲ್ದಾರಿಗೆ ಮರ್ಕಂಜ ಗ್ರಾಮಸ್ಥರು ಜೂ.09 ರಂದು ಮನವಿ ಸಲ್ಲಿಸಿದರು. ಮರ್ಕಂಜ ಪ್ರದೇಶದಲ್ಲಿ ಈಗಾಗಲೇ ಗಣಿ ಇಲಾಖೆಯು ಗಣಿಗಾರಿಕೆಗೆ ಪರವಾನಿಗೆ ನೀಡಿದ್ದು ಈ ಪ್ರದೇಶದ ಆತೀ ಸಮೀಪದಲ್ಲಿ ಸರಕಾರಿ ಶಾಲೆ, ದೇವಸ್ಥಾನ, ಪೋಸ್ಟ್ ಆಫೀಸ್, ಸೊಸೈಟಿ, ಪರಿಶಿಷ್ಟ ಕಾಲೊನಿ, ಜನವಸತಿ, ಮತ್ತು ಸಮೃದ್ಧ ಕೃಷಿ ಪ್ರದೇಶವನ್ನು […]

ಮರ್ಕಂಜ: ಗಣಿಗಾರಿಕೆ ಪರವಾನಿಗೆಯನ್ನು ರದ್ದುಗೊಳಿಸಬೇಕಾಗಿ ತಹಶೀಲ್ದಾರಿಗೆ ಮನವಿ Read More »

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ ವಾಹನ ಸವಾರನ ಮೇಲೆ ದಾಳಿ ಮಾಡಿ ಬೈಕ್ ಜಖಂ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ತಮಿಳುನಾಡಿನಿಂದ ಕರ್ನಾಟಕಕ್ಕೆ ಆಗಮಿಸುತ್ತಿದ್ದ ಬೈಕ್ ಸವಾರನ ಮೇಲೆ ಮರಿ ಆನೆಯೊಂದು ದಾಳಿ ಮಾಡಲು ಮುಂದಾಗಿದೆ. ಭಯಭೀತರಾದ ಬೈಕ್ ಸವಾರ ತಮ್ಮ ವಾಹನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆನೆ ಬೈಕ್ ತುಳಿಯುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಬಳಿಕ, ಜನರ ಕಿರುಚಾಟ ಕೇಳಿ ಕಾಡಿಗೆ

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್ Read More »

ಪುತ್ತೂರಿನಲ್ಲಿ ಝಳಪಿಸಿದ ತಲ್ವಾರ್|ಶಾಪಿಂಗ್‌ ಮಾಲ್‌ ಸಿಬ್ಬಂದಿಗಳಿಗೆ ಯುವಕನಿಂದ ತಲ್ವಾರ್‍ ತೋರಿಸಿ ಬೆದರಿಕೆ

ಸಮಗ್ರ ನ್ಯೂಸ್ : ಪ್ರತಿಷ್ಟಿತ ಶಾಪಿಂಗ್‌ ಮಾಲ್‌ ಸಿಬ್ಬಂದಿಗೆ ಯುವಕನೋರ್ವ ತಲ್ವಾರ್‍ ತೋರಿಸಿ ಬೆದರಿಕೆ ಹಾಕಿರುವ ಘಟನೆ ಪುತ್ತೂರಿನ ದರ್ಬೆ ಬಳಿ ಬಾರ್‌ ಒಂದರ ಮುಂಭಾಗ ನಡೆದಿದೆ. ತಲ್ವಾರ್ ಝಳಪಿಸಿದ ಯುವಕನನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಶಾಪಿಂಗ್ ಮಾಲ್‌ನಲ್ಲಿ ಕಾರ್ಯ ನಿರ್ವಹಿಸುವ 8 ರಿಂದ 10 ಮಂದಿ ಸಿಬ್ಬಂದಿ ಜೂನ್ 9 ರಂದು ರಾತ್ರಿ ಕೆಲಸ ಮುಗಿಸಿ ಹೋಗುತ್ತಿದ್ದ ವೇಳೆ ಸಿಬ್ಬಂದಿ ಜೊತೆ ಫೋನ್‌ನಲ್ಲಿ ಆರೋಪಿ ಪ್ರಜ್ವಲ್ ಮಾತನಾಡುತ್ತಿದ್ದ. ‌ನಂತರ ಮಾತಿಗೆ ಮಾತು ಬೆಳೆದು ಕ್ಷುಲ್ಲಕ ಕಾರಣಕ್ಕೆ

ಪುತ್ತೂರಿನಲ್ಲಿ ಝಳಪಿಸಿದ ತಲ್ವಾರ್|ಶಾಪಿಂಗ್‌ ಮಾಲ್‌ ಸಿಬ್ಬಂದಿಗಳಿಗೆ ಯುವಕನಿಂದ ತಲ್ವಾರ್‍ ತೋರಿಸಿ ಬೆದರಿಕೆ Read More »

ಬಿಫೋರ್ ಲೀವಿಂಗ್ ಟುಗೆದರ್ ಆಫ್ಟರ್ ಮರ್ಡರ್| ರಾಜ್ಯ ರಾಜಧಾನಿಯಲ್ಲಿ ಹೆಚ್ಚುತ್ತಿದೆ ಸಾಲು ಸಾಲು ಪ್ರಕರಣ!!

ಸಮಗ್ರ ನ್ಯೂಸ್ : ಲೀವಿಂಗ್ ಟುಗೆದರ್ ಇದ್ದು ಬಳಿಕ ಕೊಲೆ ಮಾಡುತ್ತಿರುವ ಸಾಲು ಸಾಲು ಕ್ರೈಂ ಕೇಸ್ ಗಳ ಸಂಖ್ಯೆ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ. ಕಳೆದ ಎಂಟು ತಿಂಗಳಲ್ಲಿ 7 ಲಿವಿಂಗ್ ಕೊಲೆ ಕೇಸ್ ಗಳು ಬೆಂಗಳೂರಿನಲ್ಲಿ ದಾಖಲಾಗಿವೆ. ಏಳು ಪ್ರಕರಣದಲ್ಲಿ ನಡೆದ ಬಹುತೇಕ ಕೊಲೆಗಳು ಮಾರಕಾಸ್ತ್ರಗಳಿಂದ ಎನ್ನುವುದು ಬೆಚ್ಚಿ ಬೀಳಿಸಿದೆ. ಪ್ರಕರಣ ನಂ.1 : ಅಶೋಕನಗರ ಪೊಲೀಸ್ ಠಾಣಾವ್ಯಾಪ್ತಿಕೊಲೆ ವಿಧಾನ : ಚಾಕುವಿನಿಂದ ಇರಿದು ಕೊಲೆ:ಕಾರಣ : ಬರ್ತ್ ಡೇ ಗಿಫ್ಟ್ ವಿಚಾರಕ್ಕೆ ಜಗಳ ಪ್ರೇಯಸಿಯ

ಬಿಫೋರ್ ಲೀವಿಂಗ್ ಟುಗೆದರ್ ಆಫ್ಟರ್ ಮರ್ಡರ್| ರಾಜ್ಯ ರಾಜಧಾನಿಯಲ್ಲಿ ಹೆಚ್ಚುತ್ತಿದೆ ಸಾಲು ಸಾಲು ಪ್ರಕರಣ!! Read More »

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ದಾರುಣ ಸಾವು| 10 ವರ್ಷಗಳ ಬಳಿಕ ಜನಿಸಿದ ಕಂದಮ್ಮನ ಕಳೆದುಕೊಂಡ ದಂಪತಿ

ಸಮಗ್ರ ನ್ಯೂಸ್: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್​ನ ಇಂದಿರಾನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗಳ ಪುತ್ರಿ ಪ್ರಿಯದರ್ಶಿನಿ ಮೃತಪಟ್ಟ ದುರ್ದೈವಿ. ಆಟವಾಡುತ್ತಿದ್ದಾಗ ಕೈಗೆ ಸಿಕ್ಕಿದ ಮೆಂಥೋಪ್ಲಸ್​​ನ ಚಿಕ್ಕ ಡಬ್ಬಿಯನ್ನು ಮಗು ನುಂಗಿದೆ. ಇದಾದ ನಂತರ ಮಗುವಿಗೆ ಉಸಿರಾಟ ತೊಂದರೆ ಹೆಚ್ಚಾಗಿದ್ದು ಖಾಸಗಿ ವೈದ್ಯರ ಬಳಿಗೆ ಪೋಷಕರು ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು, ಮಾರ್ಗ ಮಧ್ಯೆಯೇ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ದಾರುಣ ಸಾವು| 10 ವರ್ಷಗಳ ಬಳಿಕ ಜನಿಸಿದ ಕಂದಮ್ಮನ ಕಳೆದುಕೊಂಡ ದಂಪತಿ Read More »

ಗಾಳಿಪಟದ ದಾರಕ್ಕೆ ಯುವಕ ಬಲಿ

ಸಮಗ್ರ ನ್ಯೂಸ್: ಗಾಳಿಪಟದ ದಾರ ಯುವಕನೋರ್ವನ ಕುತ್ತಿಗೆ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ಗದಗ ನಗರದ ಡಂಬಳ ನಾಕಾ ಬಳಿ ನಡೆದಿದೆ. ಪಿ ರವಿ ಮೃತ ದುರ್ದೈವಿ. ಆರು ದಿನಗಳ ಹಿಂದೆ ಗಾಳಿಪಟದ ದಾರ ಸಿಲುಕಿ ಕುತ್ತಿಗೆ ಸೀಳಿಹೋಗಿತ್ತು. ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆರುದಿನಗಳಿಂದ ಸಾವುಬದುಕಿನೊಂದಿಗೆ ಹೋರಾಟ ನಡೆಸಿದ್ದ ರವಿ. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿಯಾಗಿರುವ ರವಿ. ಗದಗ ನಗರದ ಬಾರ್ ಒಂದರಲ್ಲಿ ಕೆಲಸ

ಗಾಳಿಪಟದ ದಾರಕ್ಕೆ ಯುವಕ ಬಲಿ Read More »

ಬಂಟ್ವಾಳ: ಅಡಿಕೆ ಕೀಳುವ ವೇಳೆ‌ ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ ಮೃತ ಯುವಕ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಅವರ ತೋಟದಲ್ಲಿ ಅಡಿಕೆ ತೆಗೆಯುತ್ತಿದ್ದಾಗ ಘಟನೆ ನಡೆದಿದೆ. ರಸ್ತೆಯ ಬದಿಯಲ್ಲಿ ಹಾದು ಹೋಗಿದ್ದ ಎಲ್.ಟಿ. ವಯರಿಗೆ ಫೈಬರ್ ದೋಟಿ ತಾಗಿ, ವಿದ್ಯುತ್ ಶಾಕ್ ಹೊಡೆದಿದೆ ಎಂದು ಹೇಳಲಾಗಿದೆ. ಅಡಿಕೆ ವ್ಯಾಪಾರಿಯಾಗಿರುವ ಶಾಫಿ, ಗಿಡದಿಂದಲೇ ಅಡಿಕೆಯನ್ನು ಕ್ರಯಕ್ಕೆ ಪಡೆದುಕೊಳ್ಳುತ್ತಿದ್ದರು.

ಬಂಟ್ವಾಳ: ಅಡಿಕೆ ಕೀಳುವ ವೇಳೆ‌ ವಿದ್ಯುತ್ ಶಾಕ್ ತಗುಲಿ ಯುವಕ ಸಾವು Read More »

ಜೊತೆಯಾಗಿ ಹಿತವಾಗಿ ನಡೆಯೋಣ ಎಂದ ಪ್ರಿಯಕರ ಕಾಮುಕನಾದ| ನೀನೇ ನನ್ನ ಪ್ರಾಣ ಎಂದವ ಗೆಳೆಯನ ಜೊತೆ ಸೇರಿ ಅತ್ಯಾಚಾರ ಮಾಡಿದ| ಏನಿದು ತುಮಕೂರು TO ಬೆಂಗಳೂರು ಸ್ಟೋರಿ.!?

ಸಮಗ್ರ ನ್ಯೂಸ್: ಪ್ರೀತಿಸಿದ ಹುಡುಗನನ್ನು ನಂಬಿಕೊಂಡು ತುಮಕೂರಿನಿಂದ ಬೆಂಗಳೂರಿಗೆ ಬಂದ ಹುಡುಗಿಯ ಮೇಲೆ ಪ್ರೀತಿಸಿದ ಯುವಕ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಮಾಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಪ್ರೇಮಿಗಳು “ಜೊತೆಯಾಗಿ ಹಿತವಾಗಿ ಸೇರಿ ನಡೆವಾ ಸೇರಿ ನುಡಿವ” ಎಂಬ ಹಾಡಿನಂತೆ ತಮ್ಮ ಜೀವನವನ್ನು ಗುರಿ ತಲುಪಿಸಲು ಹಾತೊರೆಯುತ್ತಾರೆ. ಆದರೆ ಇಲ್ಲೊಬ್ಬ ಭೂಪ ಜೀವನಪೂರ್ತಿ ನಿನ್ನ ಜೊತೆಗಿರ್ತೀನಿ ಎಂದು ಭರವಸೆ ನೀಡಿ ಪ್ರೀತಿಸಿದ ಯುವಕನನ್ನು ನಂಬಿಕೊಂಡು ಬಂದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ

ಜೊತೆಯಾಗಿ ಹಿತವಾಗಿ ನಡೆಯೋಣ ಎಂದ ಪ್ರಿಯಕರ ಕಾಮುಕನಾದ| ನೀನೇ ನನ್ನ ಪ್ರಾಣ ಎಂದವ ಗೆಳೆಯನ ಜೊತೆ ಸೇರಿ ಅತ್ಯಾಚಾರ ಮಾಡಿದ| ಏನಿದು ತುಮಕೂರು TO ಬೆಂಗಳೂರು ಸ್ಟೋರಿ.!? Read More »

ದ.ಕ ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ದ.ಕ.ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಾಲಾಡಿ ಕೋರ್ಟ್‌ ಬಳಿಯ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಾಲಕೃಷ್ಣ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಅವರು ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ದ.ಕ ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ಆತ್ಮಹತ್ಯೆಗೆ ಶರಣು Read More »

ಮಗಳನ್ನೇ ಬರ್ಬರವಾಗಿ ಹತ್ಯೆಗೈದ ತಂದೆ

ಸಮಗ್ರ ನ್ಯೂಸ್: ಕೇರಳದ ಆಲಪ್ಪುಳದಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಮಗಳನ್ನೇ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ‌. ಆರೋಪಿಯ ಪತ್ನಿಯು ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದಾಗಿ ಖಿನ್ನತೆಗೆ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆಲಪ್ಪುಳದ ಪುನ್ನಮೂಡು, ಮಾವೇಲಿಕ್ಕರ ಮೂಲದ ಶ್ರೀಮಹೇಶ್ ಎಂಬಾತ ತನ್ನ ಮಗಳು ನಕ್ಷತ್ರಾಳನ್ನು ಕೈ ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಅವರ ಮನೆಯಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ

ಮಗಳನ್ನೇ ಬರ್ಬರವಾಗಿ ಹತ್ಯೆಗೈದ ತಂದೆ Read More »