ಚಿಕ್ಕಮಗಳೂರು : ಸಿಡಿಲು ಬಡಿದು ಓರ್ವ ಸಾವು| ನಾಲ್ವರಿಗೆ ಗಾಯ
ಸಮಗ್ರ ನ್ಯೂಸ್: ಸಿಡಿಲು ಬಡಿದು ಓರ್ವ ಸಾವನಪ್ಪಿದ್ದು ನಾಲ್ವರಿಗೆ ಗಾಯವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಂಭವಿಸಿದೆ. ಮೃತರನ್ನು ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ವ್ಯಕ್ತಿ ಮುಖೇಶ್ (40) ಎಂದು ಗುರುತಿಸಲಾಗಿದೆ. ಈತ ದೇವಸ್ಥಾನಕ್ಕೆ ಆಗಮಿಸಿ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದೆ ಎನ್ನಲಾಗಿದೆ. ಈ ವೇಳೆ ಜೊತೆಗಿದ್ದ ನಾಲ್ವರಿಗೂ ಸಿಡಿಲು ಬಡಿದಿದ್ದ ಗಾಯಳುಗಳಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವಾಪಸ್ಸು ಕಳುಹಿಸಿದ್ದಾರೆ.
ಚಿಕ್ಕಮಗಳೂರು : ಸಿಡಿಲು ಬಡಿದು ಓರ್ವ ಸಾವು| ನಾಲ್ವರಿಗೆ ಗಾಯ Read More »










