ಕ್ರೈಂ

ಕಾರ್ಕಳ: ಮರಕ್ಕೆ ಡಿಕ್ಕಿ ಹೊಡೆದ ಲಾರಿ| ಇಬ್ಬರು ಗಂಭೀರ ಗಾಯ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ನಲ್ಲೂರಿನ ಪರಪ್ಪಾಡಿಯಲ್ಲಿ ಮೀನು ಸಾಗಿಸುತ್ತಿದ್ದ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಲ್ಪೆಯಿಂದ ಬೆಂಗಳೂರಿನ ಕಡೆಗೆ ಮೀನು ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದ ರಭಸಕ್ಕೆ ಲಾರಿ ಜಖಂಗೊಂಡಿದ್ದು ಅದರಲ್ಲಿದ್ದ ಮೀನುಗಳು ಚೆಲ್ಲಾಪಿಲ್ಲಿಯಾಗಿ ಹೋಗಿದ್ದವು. ಲಾರಿ ಚಾಲಕ ಸೇರಿದಂತೆ ಮೂವರು ಇದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗ್ರಾಮ ಪಂಚಾಯತ್ ನ ಸದಸ್ಯರಾದ ಸುಮಿತ್‌ ನಲ್ಲೂರು […]

ಕಾರ್ಕಳ: ಮರಕ್ಕೆ ಡಿಕ್ಕಿ ಹೊಡೆದ ಲಾರಿ| ಇಬ್ಬರು ಗಂಭೀರ ಗಾಯ Read More »

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ?

ಸಮಗ್ರ ನ್ಯೂಸ್: ದಶಕಗಳಿಂದ ಈಚೆಗೆ ಅತ್ಯಂತ ಭೀಕರ ಎನಿಸಿದ ತ್ರಿವಳಿ ರೈಲು ದುರಂತ 233 ಮಂದಿಯ ಜೀವ ಬಲಿ ಪಡೆದಿದೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಮೂರು ರೈಲುಗಳು ಒಂದೇ ಕಡೆ ಹಳಿ ತಪ್ಪಿರುವ ಬಗ್ಗೆ ಒಡಿಶಾ ಸರ್ಕಾರ ತಡರಾತ್ರಿ ಸ್ಪಷ್ಟನೆ ನೀಡಿದೆ. ಮೊದಲು ಬೆಂಗಳೂರಿನಿಂದ ಹೌರಾಗೆ ತೆರಳುತ್ತಿದ್ದ ಸೂಪರ್‍ಫಾಸ್ಟ್ ರೈಲು ಹಳಿ ತಪ್ಪಿ ಪಕ್ಕದ ಹಳಿಗೆ ಬೋಗಿಗಳು ಬಿದ್ದಿವೆ. ಚೆನ್ನೈಗೆ ಬರುತ್ತಿದ್ದ ಶಾಲಿಮರ್-ಚೆನ್ನೈ ಸೆಂಟ್ರಲ್ ಕೋರಮಂಡಲ ಎಕ್ಸ್‍ಪ್ರೆಸ್

ಒಡಿಶಾ ತ್ರಿವಳಿ ರೈಲು ದುರಂತ| ಮೂರೂ ರೈಲುಗಳು ಒಂದೇ ಕಡೆ ಹಳಿ ತಪ್ಪಿದ್ದು ಹೇಗೆ? Read More »

ಪುತ್ತೂರು: ವಿಷ ಪದಾರ್ಥ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತ್ಯು

ಸಮಗ್ರ ನ್ಯೂಸ್: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ನಡೆದಿದೆ. ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತಪಟ್ಟ ವಿದ್ಯಾರ್ಥಿನಿ. ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು.ಈ ನಡುವೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು. ಈ ನಡುವೆ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ

ಪುತ್ತೂರು: ವಿಷ ಪದಾರ್ಥ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತ್ಯು Read More »

ಒಡಿಶಾ ರೈಲು ದುರಂತ| ಸಾವಿನ ಸಂಖ್ಯೆ 233 ಕ್ಕೆ ಏರಿಕೆ| ಸಾವಿರದ ಸನಿಹದಲ್ಲಿ ಗಾಯಾಳುಗಳು

ಸಮಗ್ರ ನ್ಯೂಸ್: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದು (ಜೂ.03) ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ. ಬಹನಾಗಾ ರೈಲು ನಿಲ್ದಾಣದ

ಒಡಿಶಾ ರೈಲು ದುರಂತ| ಸಾವಿನ ಸಂಖ್ಯೆ 233 ಕ್ಕೆ ಏರಿಕೆ| ಸಾವಿರದ ಸನಿಹದಲ್ಲಿ ಗಾಯಾಳುಗಳು Read More »

ಒಡಿಶಾ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ದುರಂತ| 50 ಜನ ದುರ್ಮರಣ; 200ರ ಸನಿಹದಲ್ಲಿ ಗಾಯಾಳುಗಳು| ಸಾವಿನ ಸಂಖ್ಯೆ ಮತ್ತಷ್ಟು‌ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಡಿಕ್ಕಿ ಹೊಡೆದಿವೆ. ಡಿಕ್ಕಿ ಎಷ್ಟು ತೀವ್ರವಾಗಿತ್ತೆಂದರೆ, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ ನ (12841) 7 ಬೋಗಿಗಳು ಹಳಿ ತಪ್ಪಿವೆ. ಮೂಲಗಳ ಪ್ರಕಾರ, ಅಪಘಾತದಲ್ಲಿ ಇದುವರೆಗೆ 179 ಜನರು ಗಾಯಗೊಂಡಿದ್ದಾರೆ ಮತ್ತು 50 ಜನರು ಸಾವನ್ನಪ್ಪಿದ್ದಾರೆ. ಆದರೆ ರೈಲ್ವೆ ಇಲಾಖೆ ಇನ್ನೂ ಯಾವುದೇ ಮಾಹಿತಿ ಬಿಡುಗಡೆ ಮಾಡಿಲ್ಲ. ಗಾಯಗೊಂಡವರನ್ನು ಸೊರೊ ಸಿಎಚ್ಸಿ, ಗೋಪಾಲ್ಪುರ ಸಿಎಚ್ಸಿ

ಒಡಿಶಾ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ದುರಂತ| 50 ಜನ ದುರ್ಮರಣ; 200ರ ಸನಿಹದಲ್ಲಿ ಗಾಯಾಳುಗಳು| ಸಾವಿನ ಸಂಖ್ಯೆ ಮತ್ತಷ್ಟು‌ ಹೆಚ್ಚಳ ಸಾಧ್ಯತೆ Read More »

ಸುಳ್ಯ: ಮರ್ಕಂಜದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ| ಬಂದ್ ಮಾಡಲು ಜಿಲ್ಲಾಧಿಕಾರಿ ಸೂಚನೆ..?

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಅಕ್ರಮವಾಗಿರುವ ಹಿನ್ನಲೆ ತಕ್ಷಣ ನಿಲ್ಲಿಸುವಂತೆ ಜಿಲ್ಲಾಧಿಕಾರಿಯ ಆದೇಶವಾಗಿರುವ ಬಗ್ಗೆ ತಿಳಿದು ಬಂದಿದೆ. ಕಳೆದ ಕೆಲ ವರ್ಷಗಳಿಂದ ಅಳವುಪಾರೆ ಎಂಬಲ್ಲಿ ಸ್ಥಳೀಯರ ವಿರೋಧದ ನಡುವೆಯೂ ನಡೆಯುತ್ತಿದ್ದ ಗಣಿಗಾರಿಕೆಯನ್ನು ಇದೀಗ ನಿಲ್ಲಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ. ಸುತ್ತಮುತ್ತ ನೂರಾರು ಮನೆಗಳು, ಹತ್ತಿರದಲ್ಲಿ ಸರ್ಕಾರಿ ಶಾಲೆ, ನೀರಿನ ಟ್ಯಾಂಕ್,ಸರ್ಕಾರಿ ಕಟ್ಟಗಳು, ದೇವಸ್ಥಾನ ಇದೆಲ್ಲಾ ಕಲ್ಲು ಗಣಿಗಾರಿಕೆ ನಡೆಯುವ ಸ್ಥಳದ ಹತ್ತಿರ

ಸುಳ್ಯ: ಮರ್ಕಂಜದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ| ಬಂದ್ ಮಾಡಲು ಜಿಲ್ಲಾಧಿಕಾರಿ ಸೂಚನೆ..? Read More »

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರ ಬಂಧನ

ಸಮಗ್ರ ನ್ಯೂಸ್:-ಕೆಂದ್ರ ಸರ್ಕಾರ 2000 ಮುಖಬೆಲೆಯ ನೋಟ ಬ್ಯಾನ್ ಮಾಡಿದ್ದ ಬೇನ್ನಲೇ ಕರ್ತನಾಕ ಖದೀಮರು ಜನರಿಗೆ ಪಂಗನಾಮ ಹಾಕಿದ ಘಟನೆಯೂಂದು ಕಾಗವಾಡದಲ್ಲಿ ಬೆಳಕಿಗೆ ಬಂದಿದೆ. 500 ಮುಖಬೆಲೆಯ 5 ಲಕ್ಷ ಕೋಟ್ಟು 2000 ಮುಖಬೆಲೆಯ ನೋಟನ್ನು 6 ಲಕ್ಷ ಪಡೆಯಿರಿ ಎಂದು ಹೇಳಿ ಮಹಾರಾಷ್ಟ್ರ ರಾಜ್ಯದ ಸಮೀರ ಭೋಸಲೆ ಎಂಬುವವರಿಗೆ ಖದೀಮರು ಪಂಗನಾಮ ಹಾಕಿದ್ದಾರೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ಸಮಿರ ಎಂಬುವರನ್ನು ಕರೆಸಿ ಅವರ ಕಡೆಯಿಂದ 500 ಮುಖಬೆಲೆಯ‌ 5 ಲಕ್ಷ ರೂಪಾಯಿ ಪಡೆದ ತಕ್ಷಣ

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರ ಬಂಧನ Read More »

ಧರ್ಮಸ್ಥಳ: ಸೌಜನ್ಯ ಕೊಲೆ ಪ್ರಕರಣ| ಜೂ.16ರಂದು ಸಿಬಿಐ ವಿಶೇಷ ಕೋರ್ಟ್ ನಿಂದ ತೀರ್ಪು ಪ್ರಕಟ

ಸಮಗ್ರ ನ್ಯೂಸ್: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಎರಡನೇ ಮಗಳು ಸೌಜನ್ಯ (17) ಕಾಲೇಜು ಮುಗಿಸಿ ಮನೆಗೆ ವಾಪಸ್ ಹೋಗುವಾಗ 2012ರ ಅಕ್ಟೋಬರ್ 9ರಂದು ಸಂಜೆ 4:15 ಕ್ಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ

ಧರ್ಮಸ್ಥಳ: ಸೌಜನ್ಯ ಕೊಲೆ ಪ್ರಕರಣ| ಜೂ.16ರಂದು ಸಿಬಿಐ ವಿಶೇಷ ಕೋರ್ಟ್ ನಿಂದ ತೀರ್ಪು ಪ್ರಕಟ Read More »

ಕಡಬ: ವಿದ್ಯುತ್ ಪ್ರವಹಿಸಿ‌ ಪವರ್ ಮ್ಯಾನ್ ಸಾವು ಪ್ರಕರಣ| ಮೆಸ್ಕಾಂ ಮೇಲಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ಪವರ್ ಮ್ಯಾನ್ ಗೆ ವಿದ್ಯುತ್ ಪ್ರವಹಿಸಿ ಗಂಭೀರ ಗಾಯಗೊಂಡು ಅಸುನೀಗಿದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ಗುರುವಾರ (ಜೂ 1) ನಡೆದಿದ್ದು, ಈ ಬಗ್ಗೆ ಮೃತಪಟ್ಟ ಯುವಕನ ತಂದೆ ನೀಡಿದ ದೂರಿನ ಅನ್ವಯ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಮೃತಪಟ್ಟ ಪವರ್ ಮ್ಯಾನ್. ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗಿತ್ತು. ಇದರ

ಕಡಬ: ವಿದ್ಯುತ್ ಪ್ರವಹಿಸಿ‌ ಪವರ್ ಮ್ಯಾನ್ ಸಾವು ಪ್ರಕರಣ| ಮೆಸ್ಕಾಂ ಮೇಲಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲು Read More »

ಕಡಬ: ಮನೆಯ ಮೇಲ್ಚಾವಣಿಯಿಂದ ಬಿದ್ದು ಯುವಕ ಸಾವು

ಸಮಗ್ರ ನ್ಯೂಸ್: ನಿರ್ಮಾಣ ಹಂತದಲ್ಲಿದ್ದ ಮನೆಯ ಮೇಲ್ಛಾವಣಿಯಿಂದ ಕಾರ್ಮಿಕನೋರ್ವ ಆಯ ತಪ್ಪಿ ಬಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ. 02 ರಂದು ನೆಟ್ಟಣ ಎಂಬಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಅವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ನೆಟ್ಟಣದ ಮೇರೊಂಜಿ ಎಂಬಲ್ಲಿ ಮನೆಯ ಮೇಲ್ಛಾವಣಿಯ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹರಿಪ್ರಸಾದ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಡಬ: ಮನೆಯ ಮೇಲ್ಚಾವಣಿಯಿಂದ ಬಿದ್ದು ಯುವಕ ಸಾವು Read More »