ಕ್ರೈಂ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಸಮಗ್ರ ನ್ಯೂಸ್: ಯುವಕನೊಬ್ಬ ನಡುರಸ್ತೆಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಅಮ್ಮೋಹಾದಲ್ಲಿ ನಡೆದಿದೆ. ಹಾಡಹಗಲೇ ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಕುತ್ತಿಗೆಗೆ ದುಪಟ್ಟಾ ಸುತ್ತಿ ಕೆಳಗೆ ಬೀಳಿಸಿ ಹತ್ಯೆ ಮಾಡಲು ಯತ್ನಿಸಿದ್ದ, ದಾರಿಯಲ್ಲಿ ಹೋಗುವವರು ಕೂಡಲೇ ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ.ಸಲಾಂಪುರ್ ಗೋಸಾಯಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾಹುಲ್ ಸ್ಥಳೀಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾನೆ.ಆತ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ, ಆದರೆ ಆಕೆಗೆ ಇಷ್ಟವಿರಲಿಲ್ಲ, […]

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ Read More »

ಕೋಲಾರದಲ್ಲಿ ಯುವಕನನ್ನು ಅಟ್ಟಾಡಿಸಿ ಕೊಂದ ಪ್ರಕರಣ; ನಾಲ್ವರು ಆರೋಪಿಗಳು

ಸಮಗ್ರ ನ್ಯೂಸ್ : ಪ್ರೇಯಸಿಯ ಮನೆಗೆ ಹೋಗಿ ಹಿಂದಿರುಗುವಾಗ ಯುವಕನನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ (28) ಎನ್ನುವ ಯುವಕ ಇದೀಗ ಸಾವನ್ನಪ್ಪಿದ ಘಟನೆ ಕೋಲಾರದ ನೂರ್ ನಗರದಲ್ಲಿ ಜ.4ರಂದು ಮಧ್ಯರಾತ್ರಿ ನಡೆದಿದೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಗಲ್ ಪೇಟೆ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಆಫ್ರೀದ್, ಜಮೀರ್, ನಜೀ‌ರ್ ಹಾಗೂ ಸಲ್ಮಾನ್ ಪಾಷ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಪ್ರಿಯತಮೆ

ಕೋಲಾರದಲ್ಲಿ ಯುವಕನನ್ನು ಅಟ್ಟಾಡಿಸಿ ಕೊಂದ ಪ್ರಕರಣ; ನಾಲ್ವರು ಆರೋಪಿಗಳು Read More »

ಮದುವೆಯಾದ 6 ತಿಂಗಳಿಗೇ ಶೀಲ ಶಂಕಿಸಿ ನಿತ್ಯ ಕಿರುಕುಳ; ತವರಿಗೆ ಹೋಗಿದ್ದ ಪತ್ನಿಯನ್ನ ಕರೆತಂದು ಕತೆ ಮುಗಿಸಿದ ಪಾಪಿ ಗಂಡ!

ಸಮಗ್ರ ನ್ಯೂಸ್: ಕೊಪ್ಪಳ ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಕತ್ತು ಹಿಸುಕಿ ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ಜ.5 ರಂದು ನಡೆದಿದೆ. ರೇಣುಕಾ(25) ಮೃತ ಗೃಹಿಣಿ. ಪತಿ ಅನಿಲ್ ಸಂಗಟಿ, ಪತ್ನಿಯನ್ನ ಕೊಂದ ಆರೋಪಿ. ಕಳೆದ ನಾಲ್ಕು ವರ್ಷಗಳ ಹಿಂದೆ ಭಾಗ್ಯನಗರದ ಅನಿಲ್ ಸಂಗಟಿ ಹಾಗೂ ಗದಗ ಜಿಲ್ಲೆಯ ತಿಮ್ಮಾಪುರದ ರೇಣುಕಾ ಮದುವೆಯಾಗಿದ್ದರು.ಮದುವೆ ಬಳಿಕ ಚೆನ್ನಾಗಿಯೇ ನೋಡಿಕೊಂಡ ಪತಿ ಆರು ತಿಂಗಳ ನಂತರ ನಿತ್ಯ ಕುಡಿದು ಬಂದು ಪತ್ನಿಯೊಂದಿಗೆ ಜಗಳ ಮಾಡಲು

ಮದುವೆಯಾದ 6 ತಿಂಗಳಿಗೇ ಶೀಲ ಶಂಕಿಸಿ ನಿತ್ಯ ಕಿರುಕುಳ; ತವರಿಗೆ ಹೋಗಿದ್ದ ಪತ್ನಿಯನ್ನ ಕರೆತಂದು ಕತೆ ಮುಗಿಸಿದ ಪಾಪಿ ಗಂಡ! Read More »

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ

ಸಮಗ್ರ ನ್ಯೂಸ್: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ 4 ತಂಡಗಳನ್ನು ರಚಿಸಿದೆ. ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ಕೈಗೊಂಡಿದ್ದು, ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ. ದಕ್ಷಿಣ ಕನ್ನಡ

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ Read More »

120 ಕೋಟಿ‌ ವೆಚ್ಚದ ರಸ್ತೆ ಕಾಮಗಾರಿ ಅವ್ಯವಹಾರ ಬಯಲಿಗೆಳೆದ ಪತ್ರಕರ್ತ ಹೆಣವಾಗಿ ಪತ್ತೆ

ಸಮಗ್ರ ನ್ಯೂಸ್: 120 ಕೋಟಿ ರಸ್ತೆ ಕಾಮಗಾರಿ ವೇಳೆ ನಡೆಸಲಾಗಿದ್ದ ಅಕ್ರಮವನ್ನ ಬಯಲಿಗೆಳೆದಿದ್ದ ಪತ್ರಕರ್ತನನ್ನ ಕೊಲೆ ಮಾಡಲಾಗಿದೆ. ಮುಕೇಶ್ ಚಂದ್ರಾಕರ್ ಎಂಬಾತನ ಶವ ಪತ್ತೆಯಾಗಿದ್ದು , ಕಂಟ್ರಾಕ್ಟರ್ ಮಾಫಿಯಾಗೆ ಜರ್ನಲಿಸ್ಟ್ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಚಂಡೀಘಡ ಬಿಜಾಪುರ ಜಿಲ್ಲೆಯ ಬಾಸ್ಟರ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಯುವ ಪತ್ರಕರ್ತ ಮುಕೇಶ್ ಚಂದ್ರಾಕರ್ ಸ್ಥಳೀಯ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದರು . ಅಲ್ಲದೆ ಇತ್ತೀಚೆಗೆ ಕಂಟ್ರಾಕ್ಟರ್ ಸುರೇಶ್ ಚಂದ್ರಾಕರ್ ಎಂಬುವರ ಮೇಲೆ ವರದಿ ಮಾಡಿ ರಸ್ತೆ ಕಾಮಗಾರಿಯಲ್ಲಿ ನಡೆದಿರುವ 120 ಕೋಟಿ

120 ಕೋಟಿ‌ ವೆಚ್ಚದ ರಸ್ತೆ ಕಾಮಗಾರಿ ಅವ್ಯವಹಾರ ಬಯಲಿಗೆಳೆದ ಪತ್ರಕರ್ತ ಹೆಣವಾಗಿ ಪತ್ತೆ Read More »

ತುಮಕೂರು: ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಜೊತೆ ಸರಸವಾಡಿದ ಡಿವೈಎಸ್ಪಿ| ವಿಡಿಯೋ ವೈರಲ್ ಬೆನ್ನಲ್ಲೇ ಪೋಲಿ ಪೊಲೀಸ್ ನಾಪತ್ತೆ

ಸಮಗ್ರ ನ್ಯೂಸ್: ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ

ತುಮಕೂರು: ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಜೊತೆ ಸರಸವಾಡಿದ ಡಿವೈಎಸ್ಪಿ| ವಿಡಿಯೋ ವೈರಲ್ ಬೆನ್ನಲ್ಲೇ ಪೋಲಿ ಪೊಲೀಸ್ ನಾಪತ್ತೆ Read More »

ಹಾಸನ: ಪತ್ನಿ ಕಿರುಕುಳಕ್ಕೆ ಇಂಜಿನಿಯರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲೂಕಿನ ಗೊರೂರು ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಇಂದಿರಾನಗರದ ನಿವಾಸಿ ಜೆಜೆ ಪ್ರಮೋದ್ ಎಂಬುವವರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಮೋದ್ ಹಾಗೂ ಅವರ ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿಯ ತಮ್ಮಂದಿರು ಕೂಡ ಪ್ರಮೋದ್ ಗೆ ಕಿರುಕುಳ ನೀಡುತ್ತಿದ್ದರು ಎಂಬ

ಹಾಸನ: ಪತ್ನಿ ಕಿರುಕುಳಕ್ಕೆ ಇಂಜಿನಿಯರ್ ಆತ್ಮಹತ್ಯೆ Read More »

ಮಂಗಳೂರು: ತನ್ನ ಮೂವರು ಮಕ್ಕಳ ಕೊಂದ ಪಾಪಿಗೆ ಶಿಕ್ಷೆ ಪ್ರಕಟ

ಸಮಗ್ರ ನ್ಯೂಸ್: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ ಹಾಗೂ ಪತ್ನಿಯನ್ನೂ ಬಾವಿಗೆ ದೂಡಿ ಕೊಲ್ಲಲು ಯತ್ನಿಸಿದ್ದ ಪ್ರಕರಣದಲ್ಲಿ ಮಂಗಳೂರು ತಾಲ್ಲೂಕಿನ ತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ಮನೆಯ ಹಿತೇಶ್‌ ಶೆಟ್ಟಿಗಾರ್‌ಗೆ ಇಲ್ಲಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಮರಣ ದಂಡನೆ ಶಿಕ್ಷೆಯನ್ನು ಮಂಗಳವಾರ ವಿಧಿಸಿದೆ. ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು ಸಂಜೆ 5:15ಕ್ಕೆ ಹಿತೇಶ್ ಶೆಟ್ಟಿಗಾರ್ ತನ್ನ ಮಕ್ಕಳಾದ ರಶ್ಮೀತಾ (13), ಉದಯ ಕುಮಾರ (11),

ಮಂಗಳೂರು: ತನ್ನ ಮೂವರು ಮಕ್ಕಳ ಕೊಂದ ಪಾಪಿಗೆ ಶಿಕ್ಷೆ ಪ್ರಕಟ Read More »

ಕಾಸರಗೋಡು: ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಸೇರಿ ನಾಲ್ಕು ಮಕ್ಕಳು ದುರ್ಮರಣ

ಸಮಗ್ರ ನ್ಯೂಸ್: ಮನೆಯ ಹೊರಗಿನ ಅರ್ತ್‌ ತಂತಿಯಿಂದ ವಿದ್ಯುತ್‌ ಶಾಕ್‌ ತಗುಲಿ ಮೂರೂವರೆ ವರ್ಷದ ಮಗು ಸಾವಿಗೀಡಾದ ಘಟನೆ ಕಾಸರಗೋಡು ಜಿಲ್ಲೆಯ ಗಾಳಿಮುಖದಲ್ಲಿ ನಡೆದಿದೆ. ಗಾಳಿಮುಖ ನಿವಾಸಿ ಶಿನ್ಸಾದ್‌ ಅವರ ಪುತ್ರ ಮುಹಮ್ಮದ್‌ ಶಿನ್ಸಾದ್‌ ಸಾವಿಗೀಡಾದ ಬಾಲಕ. ಡಿ.29 ರಂದು ಸಂಜೆ 4 ಗಂಟೆಗೆ ಮನೆಯ ಹೊರಗೆ ಆಟ ಆಡುತ್ತಿದ್ದಾಗ ಅರ್ತ್‌ ತಂತಿಯನ್ನು ಸ್ಪರ್ಶಿಸಿದಾಗ ವಿದ್ಯುತ್‌ ಶಾಕ್‌ ತಗುಲಿದೆ. ವಿಷಯ ತಿಳಿದು ಮಗುವಿನ ಅಜ್ಜ ಮುಹಮ್ಮದ್‌ ಶಾಫಿ ಮನೆಯ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಮಗುವನ್ನು

ಕಾಸರಗೋಡು: ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಸೇರಿ ನಾಲ್ಕು ಮಕ್ಕಳು ದುರ್ಮರಣ Read More »

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು ಮಹಾವಂಚನೆ| ಪುತ್ತೂರಿನ ವ್ಯಕ್ತಿ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ನಕಲಿ ಚಿನ್ನ ಅಡವಿಟ್ಟ ವ್ಯಕ್ತಿಯೋರ್ವ ಎರಡು ಕೋಟಿ ರೂ ಅಧಿಕ ಸಾಲ ಪಡೆದು ವಂಚನೆ ಮಾಡಿರುವ ಪ್ರಕರಣವೊಂದರ ಆರೋಪ ಕೇಳಿ ಬಂದಿದೆ. ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ 500 ನಕಲಿ ಚಿನ್ನದ ಬಳೆ ಅಡವಿಟ್ಟು ವಂಚನೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್‌ ಸಿದ್ದಿಕ್‌ ಎಂಬಾತನೇ ಆರೋಪಿ. ನಕಲಿ ಚಿನ್ನದ ಬಳೆಗಳನ್ನಿಟ್ಟ ಅಬೂಬಕ್ಕರ್‌ ಸಿದ್ದಿಕ್‌ ಸರಿಸುಮಾರು 2,11,89,800 ರೂ. ಸಾಲ ಪಡೆದಿರುವುದಾಗಿ ವರದಿಯಾಗಿದೆ. ಈ ವಂಚನೆ ಕುರಿತು ಅಬೂಬಕ್ಕರ್‌ ಸಿದ್ದಿಕ್‌,

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು ಮಹಾವಂಚನೆ| ಪುತ್ತೂರಿನ ವ್ಯಕ್ತಿ ವಿರುದ್ಧ ದೂರು ದಾಖಲು Read More »