ಕ್ರೈಂ

ಗೂನಡ್ಕ: ಸಾರಿಗೆ ಬಸ್ ನ ಹಿಂಭಾಗಕ್ಕೆ ಗುದ್ದಿದ ಆಲ್ಟೊ ಕಾರು

ಸಮಗ್ರ ನ್ಯೂಸ್: ಮೇ 28, ಸಾರಿಗೆ ಬಸ್ ಹಿಂಭಾಗಕ್ಕೆ ಎಲ್‌ ಬೋರ್ಡ್‌ ಕಾರು ಡಿಕ್ಕಿ ಆದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸಂಪಾಜೆಯ ಗೂನಡ್ಕ ಸಮೀಪದಲ್ಲಿ ಸಂಭವಿಸಿದೆ. ಗುದ್ದಿದ ರಭಸಕ್ಕೆ ಆಲ್ಟೋ ಕಾರು ಬಸ್ಸಿನ ಹಿಂಭಾಗದಡಿಗೆ ನುಗ್ಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಸುಳ್ಯದಿಂದ ಕೊಯನಾಡಿಗೆ ಸಂಚರಿಸುತ್ತಿದ್ದ ಬಸ್‌ ನ ಹಿಂಭಾಗಕ್ಕೆ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿಯಾಗಿ,ಕಾರಿನ ಮುಂಭಾಗ ಬಸ್ಸಿನಡಿಗೆ ಸಿಲುಕಿಕೊಂಡಿದೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಗೂನಡ್ಕ: ಸಾರಿಗೆ ಬಸ್ ನ ಹಿಂಭಾಗಕ್ಕೆ ಗುದ್ದಿದ ಆಲ್ಟೊ ಕಾರು Read More »

ಹಾಸನ: ಸಬ್‌ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳಿಂದ ಬೆಂಕಿ

ಲಕ್ಷಾಂತರ ಮೌಲ್ಯದ ವಸ್ತುಗಳು ನಷ್ಟ ಸಮಗ್ರ ನ್ಯೂಸ್: ಸಬ್‌ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ಸಂಧರ್ಭದಲ್ಲಿ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಶೋಭಾ ಅವರು ರಜೆ ಮುಗಿಸಿ

ಹಾಸನ: ಸಬ್‌ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳಿಂದ ಬೆಂಕಿ Read More »

ಬಂಟ್ವಾಳ: ಬಸ್ ನಲ್ಲಿ ಮಹಿಳೆಯ ಮುಡಿಗೆ ಕೈ ಹಾಕಿದ ಮುಸ್ಲಿಂ ವೃದ್ದ; ವಿಡಿಯೋ ವೈರಲ್| ಹಿಂ.ಜಾ.ವೇ ಯಿಂದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸರ್ಕಾರಿ ಬಸ್ ನಲ್ಲಿ ಕುಳಿತಿದ್ದ ಮಹಿಳೆಯ ಜಡೆಗೆ ಕೈ ಹಾಕಿದ ಆರೋಪದಲ್ಲಿ ಮುಸ್ಲಿಂ ವೃದ್ದನೋರ್ವನ ಮೇಲೆ ಹಿಂ.ಜಾ.ವೇ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದೆ. ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಮಣಿಹಳ್ಳ ಸಮೀಪ ಮಹಿಳೆಯ ಜಡೆಗೆ ಕೈ ಹಾಕಿದ್ದು, ಈ ಕಾಮುಕ ವೃದ್ದನ ಅಸಹ್ಯ ವರ್ತನೆಯ ವಿಡಿಯೋ ಸಹ ಪ್ರಯಾಣಿಕರಿಂದ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ವತಿಯಿಂದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿದೆ. ದೂರಿನಲ್ಲಿ

ಬಂಟ್ವಾಳ: ಬಸ್ ನಲ್ಲಿ ಮಹಿಳೆಯ ಮುಡಿಗೆ ಕೈ ಹಾಕಿದ ಮುಸ್ಲಿಂ ವೃದ್ದ; ವಿಡಿಯೋ ವೈರಲ್| ಹಿಂ.ಜಾ.ವೇ ಯಿಂದ ಪ್ರಕರಣ ದಾಖಲು Read More »

ಯುವಕನ ಕಿರುಕುಳಕ್ಕೆ ಯುವತಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಕಾಸರಗೋಡು, ಮೇ, 26 ಯುವಕನೊರ್ವನ ಕಿರುಕುಳ ತಾಳಲಾರದೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಅವರ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಿವ್ಯ ಬಂದಡ್ಕ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಮೇ 25ರಂದು ದಿವ್ಯ ಅವರ ಮೃತದೇಹ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ದಿವ್ಯ ಮಂಗಳವಾರ ರಾತ್ರಿ ಲ್ಯಾಬ್ ನಲ್ಲಿ ಕೆಲಸ

ಯುವಕನ ಕಿರುಕುಳಕ್ಕೆ ಯುವತಿ ನೇಣಿಗೆ ಶರಣು Read More »

ಕಡಬ: ಚಲಿಸುತ್ತಿರುವ ಬಸ್ ನಿಂದ ಬಿದ್ದು ಮಹಿಳೆ ಜಖಂ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದು ಜಖಂಗೊಂಡಿರುವ ಘಟನೆ ಕಡಬ ತಾಲೂಕಿನ ಆಲಂಕಾರು ಎಂಬಲ್ಲಿ ನಡೆದಿದೆ. ಮಹಿಳೆಯನ್ನು ಇಲ್ಲಿನ ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ. ಬಸ್ ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟಿದ್ದು, ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್ ಗೆ ಹತ್ತಿದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಅವರಿಗೆ ಹತ್ತಿರದ ಕ್ಲಿನಿಕ್ ನಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಸ್ಸಿನ

ಕಡಬ: ಚಲಿಸುತ್ತಿರುವ ಬಸ್ ನಿಂದ ಬಿದ್ದು ಮಹಿಳೆ ಜಖಂ Read More »

ಕಾಂಗ್ರೆಸ್ ಕಾರ್ಯಕರ್ತನ ಕೊಚ್ಚಿ ಕಗ್ಗೊಲೆ

ಸಮಗ್ರ ನ್ಯೂಸ್: ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಚೌಡೇಶ್ವರಿ ನಗರದಲ್ಲಿ ನಡೆದಿದೆ. ಬೆಂಗಳೂರಿನ ಚೌಡೇಶ್ವರಿ ನಗರದ ಹಳ್ಳಿ ರುಚಿ ಬಳಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿ ರವಿ (42) ಎಂಬಾತನೇ ಕೊಲೆಯಾದ ದುರ್ದೈವಿ. ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ರವಿ ಹತ್ಯೆಗೂ ಮುನ್ನ ಏರಿಯಾಗಳಲ್ಲಿ ಹಾಕಿದ್ದ ಬ್ಯಾನರ್ ಹರಿದು ಹಾಕಿದ್ದಾರೆ. ಬಳಿಕ ರವಿಯನ್ನು ಸಿಎಂಹೆಚ್ ಬಾರ್ ನಿಂದ ಅಟ್ಟಾಡಿಸಿಕೊಂಡು ಬಂದು ಹಳ್ಳಿ ರುಚಿ ಹೋಟೆಲ್ ಮುಂಭಾಗ ಮಾರಕಾಸ್ತ್ರಗಳಿಂದ

ಕಾಂಗ್ರೆಸ್ ಕಾರ್ಯಕರ್ತನ ಕೊಚ್ಚಿ ಕಗ್ಗೊಲೆ Read More »

ಕರಾವಳಿಯಲ್ಲಿ ಮತ್ತೆ ಝಳಪಿಸಿದ ತಲವಾರ್| ಬಂಟ್ವಾಳದ ಮಾಣಿ ಬಳಿ ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಅಪರಿಚಿತ ಗುಂಪೊಂದರಿಂದ ತಲಾವಾರು ದಾಳಿ ನಡೆದಿದೆ. ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಭಯಾನಕ ತಲ್ವಾರ್ ದಾಳಿ ನಡೆದಿದ್ದು ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಬಜರಂಗದಳ ಪೆರಾಜೆ ಸಂಚಾಲಕ ಮಹೇಂದ್ರ ಮೇಲೆ ಮತ್ತು ಪ್ರಶಾಂತ್ ನಾಯಕ್ ಎಂಬವರ ಹಲ್ಲೆ ನಡೆದಿದೆ. ಈ ಹುಡುಗರು ಕೆಲಸ ಮುಗಿಸಿ ಮನೆಗೆ ಹೋಗುತ್ತಾ ಇರುವಾಗ ಅಟ್ಯಾಕ್ ನಡೆದಿದೆ. ಮೊದಲು ಇವರು ಸಾಗುತ್ತಿದ್ದ ವಾಹನಕ್ಕೆ ಓಮ್ನಿ ಗಾಡಿಯಲ್ಲಿ ಡಿಕ್ಕಿ

ಕರಾವಳಿಯಲ್ಲಿ ಮತ್ತೆ ಝಳಪಿಸಿದ ತಲವಾರ್| ಬಂಟ್ವಾಳದ ಮಾಣಿ ಬಳಿ ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ Read More »

ಪುತ್ತೂರು: ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್| ಗಂಭೀರ ಸ್ವರೂಪ ಪಡೆದ ಪ್ರಕರಣ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸುದ್ದಿ ಮಾಡಿದ ಪುತ್ತೂರು ಹಿಂದೂ ಕಾರ್ಯಕರ್ತರ ಮೇಲೆ ಪೋಲೀಸರ ದೌರ್ಜನ್ಯಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದ್ದು, ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಹಿಂದೂ ಕಾರ್ಯಕರ್ತನ ಕಿವಿಯ ತಮಟೆ ಹರಿದು ಹೋಗಿದ್ದಾಗಿ ಸ್ಕ್ಯಾನಿಂಗ್ ರಿಪೋರ್ಟ್‌ನಲ್ಲಿ ಉಲ್ಲೇಖಗೊಂಡಿದೆ. ಇದರಿಂದ ಪ್ರಕರಣ ಮತ್ತಷ್ಟು ಗಂಭೀರತೆಯನ್ನು ಪಡೆದುಕೊಂಡಿದೆ. ವಿಷಯ ತಿಳಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿ ಭೇಟಿಯಾಗಿ ಡಿವೈಎಸ್ಪಿಯನ್ನು ಅಮಾನತುಗೊಳಿಸಿ ಐದು ಲಕ್ಷ ಪರಿಹಾರ ನೀಡದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ. ಬಿಜೆಪಿ ನಾಯಕರಾದ

ಪುತ್ತೂರು: ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್| ಗಂಭೀರ ಸ್ವರೂಪ ಪಡೆದ ಪ್ರಕರಣ Read More »

ಸುಳ್ಯ: ಸಾರಿಗೆ ಬಸ್ ಗೆ ಗುದ್ದಿ ಲಾರಿ ಡ್ರೈವರ್ ಪರಾರಿ

ಸಮಗ್ರ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ಬಸ್ ಗೆ ಲಾರಿಯೊಂದು ಹಿಂದಿನಿಂದ ಬಂದು ಗುದ್ದಿದ್ದು ಲಾರಿ ಡ್ರೈವರ್ ಪರಾರಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ಸಮೀಪದ ಪರಿವಾರಕಾನ ಬಳಿ ನಡೆದಿದೆ. ಸುಳ್ಯದಿಂದ ಕೊಯನಾಡಿಗೆ ತೆರಳುತ್ತಿದ್ದ ಬಸ್ ಗೆ ಅದರ ಹಿಂದಿನಿಂದ ವೇಗವಾಗಿ ಬಂದ ಲಾರಿ(KA 51 AH 9126) ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ನ ಹಿಂಭಾಗ ಜಖಂಗೊಂಡಿದ್ದು, ಲಾರಿ ಚಾಲಕ ಹೆದರಿ ಪರಾರಿಯಾಗಿದ್ದಾನೆ. ಸುಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಸಾರಿಗೆ ಬಸ್ ಗೆ ಗುದ್ದಿ ಲಾರಿ ಡ್ರೈವರ್ ಪರಾರಿ Read More »

ಸುಳ್ಯ:ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಸ್ಕೂಟಿ‌ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿಯ ಅರಂತೋಡು ಮರ್ಕಂಜ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಸ್ಕೂಟಿ ಸವಾರನನ್ನು ಸುಳ್ಯದ ಕುಕ್ಕುಜಡ್ಕ ಮೂಲದ ನವೀನ್(30) ಎಂದು ಹೇಳಲಾಗಿದೆ. ಕಾರು ಮಂಡ್ಯ ಮೂಲದ್ದಾಗಿದ್ದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು.ಈ ವೇಳೆ ಅರಂತೋಡು ಮರ್ಕಂಜ ಕ್ರಾಸ್ ಬಳಿ ಕಲ್ಲುಗುಂಡಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಘಟನೆ ಪರಿಣಾಮ ಸ್ಕೂಟಿ ನಜ್ಜುಗುಜ್ಜಾಗಿದ್ದು ಸವಾರ ಸ್ಥಳದಲ್ಲಿ

ಸುಳ್ಯ:ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು Read More »