ಕ್ರೈಂ

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಕೆಂಪಿಮಜಲು ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬಲ್ಲಿ ಸಂಬಂಧಿಕನ ಜೊತೆ ಮೀನು ಹಿಡಿಯಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಬಜತ್ತೂರು ನಿವಾಸಿ ಓಡಿಯಪ್ಪ ಮತ್ತು ಗೋಪಿ ಎಂಬವರ ಪುತ್ರ ರೂಪೇಶ್ (17) ಎಂದು ಗುರುತಿಸಲಾಗಿದೆ. ರೂಪೇಶ್ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ. ಕಟ್ಟೆಚ್ಚಾರ್ ಎಂಬಲ್ಲಿನ ತನ್ನ ಸಂಬಂಧಿಕರ ಮನೆಗೆ ಹೋಗಿದ್ದ ರೂಪೇಶ್, ಅಲ್ಲಿಂದ ಭಾನುವಾರ ಸಂಬಂಧಿಕ ಅಖಿಲೇಶ್ ಎಂಬಾತನೊಂದಿಗೆ ನೇತ್ರಾವತಿ […]

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು Read More »

ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಮಗ್ರ ನ್ಯೂಸ್: ಮನೆಯ ಮಹಡಿಯಿಂದ ಬಿದ್ದು ಯುವಕನರ‍್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್ (೩೦) ಎಂದು ಗುರುತಿಸಲಾಗಿದೆ. ಹರೀಶ್ ಅವರು ಏಪ್ರಿಲ್ ೨೧ ರಂದು ನಾರಾಯಣ ಕುಂಬಾರ ಅವರ ಮನೆಯ ಮಹಡಿ ಮೇಲೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಜಿರೆ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ

ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »

ನಡೆದುಕೊಂಡು ಹೋಗುತ್ತಿದ್ದಾತ ಸಿಡಿಲು ಬಡಿದು ಸಾವು| ಇಲ್ಲಿದೆ ವೈರಲ್ ವಿಡಿಯೋ

ಸಮಗ್ರ ನ್ಯೂಸ್: ಸಿಡಿಲು ಎಷ್ಟು ಅಪಾಯಕಾರಿ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಚಂದ್ರಾಪುರ ಜಿಲ್ಲೆಯ ಭದ್ರಾವತಿ ತಾಲೂಕಿನ ಮಜ್ರಿ ಪ್ರದೇಶದಲ್ಲಿನ ಪಶ್ಚಿಮ ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ಕೆಲಸದ ಸ್ಥಳದಿಂದ ದೂರ ಹೋಗುತ್ತಾರೆ. ಪ್ರಕಾಶಮಾನವಾದ ಮಿಂಚು, ಸಿಡಿಲು ಅವನ ಮೇಲೆ ಬಿದ್ದಿದೆ ಅಷ್ಟೇ. ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಇದೆಲ್ಲ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ

ನಡೆದುಕೊಂಡು ಹೋಗುತ್ತಿದ್ದಾತ ಸಿಡಿಲು ಬಡಿದು ಸಾವು| ಇಲ್ಲಿದೆ ವೈರಲ್ ವಿಡಿಯೋ Read More »

ಹಾಡುಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ| ಯೋಗಿ ನಾಡಲ್ಲೊಂದು ಅಮಾನವೀಯ ಘಟನೆ

ಕಾಲೇಜೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ನಡೆದಿದೆ ಎನ್ನಲಾಗಿದೆ. ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಜಾಲತಾಣ ಬಳಕೆದಾರರಾದ ಅರುಣೇಶ್ ಯಾದವ್ ಅವರು “ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ ಘಟನೆ. ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನ ಈ ವೀಡಿಯೊ ವೈರಲ್ ಆಗುತ್ತಿದೆ. ಶಿಕ್ಷಕರೊಬ್ಬರು ಬಲವಂತವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಿಡಿಯೋವನ್ನು ಉತ್ತರಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ

ಹಾಡುಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ| ಯೋಗಿ ನಾಡಲ್ಲೊಂದು ಅಮಾನವೀಯ ಘಟನೆ Read More »

ಮಲೆಯಾಳಂನ ಹಿರಿಯ ನಟ ಮಾಮುಕೋಯ ನಿಧನ

ಸಮಗ್ರ ನ್ಯೂಸ್: ಮಲಯಾಳಂ ಸಿನಿಮಾ ರಂಗದ ದಿಗ್ಗಜ ನಟ ಮಾಮುಕೋಯ (76) ಬುಧವಾರ ಮಧ್ಯಾಹ್ನ ( ಎ.26 ರಂದು) ನಿಧನರಾಗಿದ್ದಾರೆ. ಇತ್ತೀಚೆಗೆ ಮಲಪ್ಪುರಂಗೆ ಫುಟ್‌ ಬಾಲ್ ಪಂದ್ಯಾಕೂಟವೊಂದನ್ನು ಉದ್ಘಾಟನೆ ಮಾಡಲು ಬಂದಿದ್ದ ವೇಳೆ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಮೊದಲಿಗೆ ಸ್ಥಿರವಾಗಿತ್ತು. ಆದರೆ ಆ ಬಳಿಕ ಆರೋಗ್ಯ ಮತ್ತಷ್ಟು ಹದಗೆಟ್ಟು, ಬೇರೊಂದು ಆಸ್ಪತ್ರಗೆ ದಾಖಲು ಮಾಡಲಾಗಿತ್ತು, ಅಲ್ಲಿ ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಮಧ್ಯಾಹ್ನ

ಮಲೆಯಾಳಂನ ಹಿರಿಯ ನಟ ಮಾಮುಕೋಯ ನಿಧನ Read More »

ಛತ್ತೀಸ್ ಗಡದಲ್ಲಿ ನಕ್ಸಲರ ಅಟ್ಟಹಾಸ| 11 ಯೋಧರು ಹುತಾತ್ಮ

ಸಮಗ್ರ ನ್ಯೂಸ್: ದಾಂತೇವಾಡದಲ್ಲಿ ಅರನಪುರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಯೋಧರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಂತೇವಾಡದಲ್ಲಿ ನಕ್ಸಲರು ಸುಧಾರಿತ ಸ್ಪೋಟಕ ಬಳಸಿ ದುಷ್ಕೃತ್ಯ ನಡೆಸಿದ್ದಾರೆ. ನಕ್ಸಲರು ಡಿಆರ್ ಜಿ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ನೆಲ ಬಾಂಬ್ ಮೂಲಕ ಸ್ಪೋಟಿಸಿದ್ದಾರೆ. ನಕ್ಸಲರ ಸುಧಾರಿತ ಸ್ಪೋಟಕದಲ್ಲಿ ಡಿಆರ್ ಜಿ ಸಿಬ್ಬಂದಿ ವಾಹನದ ಚಾಲಕ, 10 ಯೋಧರು ಹುತಾತ್ಮರಾಗಿದ್ದಾರೆ. ಎಡಪಂಥೀಯ ಉಗ್ರವಾದದ ಕೇಂದ್ರವಾಗಿರುವ ಬಸ್ತಾರ್’ನಲ್ಲಿ ಬಂಡುಕೋರರ ವಿರುದ್ಧ ಹಲವಾರು ಯಶಸ್ವಿ ಕಾರ್ಯಾಚರಣೆಗಳಲ್ಲಿ ಡಿಆರ್ಜಿ ಪ್ರಮುಖ ಪಾತ್ರ ವಹಿಸಿದೆ. ದಾಳಿ

ಛತ್ತೀಸ್ ಗಡದಲ್ಲಿ ನಕ್ಸಲರ ಅಟ್ಟಹಾಸ| 11 ಯೋಧರು ಹುತಾತ್ಮ Read More »

ಸುಳ್ಯ: ಹಿರಿಯ ರಾಜಕೀಯ ಧುರೀಣ ಚಂದ್ರಶೇಖರ ಮೇಲ್ನಾಡು ಇನ್ನಿಲ್ಲ

ಸಮಗ್ರ‌ ನ್ಯೂಸ್: ಅವಿಭಜಿತ ಸುಳ್ಯ ತಾಲೂಕಿನ ಹಿರಿಯ ರಾಜಕೀಯ ಧುರೀಣ ಚಂದ್ರಶೇಖರ ಮೇಲ್ನಾಡುರವರು ಇಂದು(ಎ.26) ಬೆಳಿಗ್ಗೆ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮುಂಜಾನೆ ಎಂದಿನಂತೆ ಚಹಾ ತಿಂಡಿ ಸೇವಿಸಿ, ಸ್ವಲ್ಪ ಹೊತ್ತಲ್ಲಿ ತೀವ್ರ ಹೃದಯಘಾತದಿಂದ ಕುಸಿದ ಅವರನ್ನು ಅವರ ಪುತ್ರ ಗುರುಪ್ರಸಾದ್ ಮೇಲ್ನಾಡುರವರು ಕಡಬ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಬಗ್ಗೆ ಅವರು ಕೊನೆಯುಸಿರೆಳೆದರು. ಚಂದ್ರಶೇಖರ ಮೇಲ್ನಾಡುರವರು ಏನೆಕಲ್ಲು ಪ್ರಾಥಮಿಕ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ, ಗುತ್ತಿಗಾರು ತಾಲೂಕು ಪಂಚಾಯಿತ್ ನ ಸದಸ್ಯರಾಗಿ,

ಸುಳ್ಯ: ಹಿರಿಯ ರಾಜಕೀಯ ಧುರೀಣ ಚಂದ್ರಶೇಖರ ಮೇಲ್ನಾಡು ಇನ್ನಿಲ್ಲ Read More »

ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ| ಎರಡು ದಿನ ಶೋಕಾಚರಣೆ

ಸಮಗ್ರ ನ್ಯೂಸ್: ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ಮಂಗಳವಾರ ರಾತ್ರಿ ವಿಧಿವಶರಾಗಿದ್ದು, ಅವರ ಗೌರವಾರ್ಥ ಕೇಂದ್ರ ಸರ್ಕಾರ 2 ದಿನ ಶೋಕಾಚರಣೆ ಘೋಷಣೆ ಮಾಡಿದೆ. ಕೆಲ ದಿನಗಳಿಂಗ ಅನಾರೋಗ್ಯದಿಂದ ಬಳಲುತ್ತಿದ್ದ ಬಾದಲ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರಣ ಅವರನ್ನು ಒಂದು ವಾರದ ಹಿಂದೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೇ ಇಂದು ರಾತ್ರಿ 8 ಗಂಟೆಗೆ ನಿಧನರಾಗಿದ್ದಾರೆ. ಅವರ

ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ| ಎರಡು ದಿನ ಶೋಕಾಚರಣೆ Read More »

ಕಡಬ: ಬೈಕ್ ಸ್ಕಿಡ್ ಆಗಿ ದಾವಣಗೆರೆ ಮೂಲದ ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ದಾವಣಗೆರೆ ಮೂಲದ ಪ್ರಸ್ತುತ ಕೋಡಿಂಬಾಳದಲ್ಲಿ ವಾಸವಿರುವ ಮಂಜು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಮಂಜು ಬೈಕಿನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಡಬ: ಬೈಕ್ ಸ್ಕಿಡ್ ಆಗಿ ದಾವಣಗೆರೆ ಮೂಲದ ಕಾರ್ಮಿಕ ಸಾವು Read More »

ಪುತ್ತೂರು: ಫೇಸ್‌ಬುಕ್‌ನಲ್ಲಿ ಅಪ್ರಾಪ್ತೆಯ ಪರಿಚಯ| ಜಾತ್ರೆಯಂದು ಅತ್ಯಾಚಾರ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಅಪ್ರಾಪ್ತೆಯನ್ನು ಪರಿಚಯವಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿ ಅತ್ಯಾಚಾರ ನಡೆಸಿದ ಬಗ್ಗೆ ಅಪ್ರಾಪ್ತೆಯೋರ್ವಳು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಕೆಯ್ಯೂರು ಗ್ರಾಮದ ಮಾಡವು ನಿವಾಸಿ ನವೀನ್ ಪ್ರಕರಣದ ಆರೋಪಿ. ನವೀನ್ ಫೇಸ್‌ಬುಕ್‌ನಲ್ಲಿ ಪರಿಚಯವಾದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಎ.೧೬ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿದ್ದ. ಬಳಿಕ ಆಕೆಯನ್ನು ಪುಸಲಾಯಿಸಿ ರಾತ್ರಿ ಸ್ಕೂಟರ್‌ನಲ್ಲಿ ಕೆಯ್ಯೂರಿನ ಮಾಡಾವು ಅಂಗನವಾಡಿ ಬಳಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು

ಪುತ್ತೂರು: ಫೇಸ್‌ಬುಕ್‌ನಲ್ಲಿ ಅಪ್ರಾಪ್ತೆಯ ಪರಿಚಯ| ಜಾತ್ರೆಯಂದು ಅತ್ಯಾಚಾರ Read More »