ಕ್ರೈಂ

ಪೊಲೀಸ್ ಠಾಣೆಯೊಳಗೇ ಬಾಂಬ್ ಸ್ಪೋಟಿಸಿದ ಉಗ್ರರು| 12 ಮಂದಿ ಸಾವು; 40ಕ್ಕೂ ಹೆಚ್ಚು ಮಂದಿ ಗಂಭೀರ

ಸಮಗ್ರ ನ್ಯೂಸ್: ಪೊಲೀಸ್ ಠಾಣೆಯೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಜನ ಪೊಲೀಸರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಅಫ್ಘಾನಿಸ್ತಾನದ ನೆರೆಯ ಖೈಬರ್ ಪಖ್ತುನ್ಖ್ವಾದ ವಾಯುವ್ಯ ಪ್ರದೇಶದ ಸ್ವಾತ್ ಕಣಿವೆಯ ಕಬಾಲ್ ಪಟ್ಟಣದಲ್ಲಿನ ವಿಶೇಷ ಭಯೋತ್ಪಾದನಾ ನಿಗ್ರಹ ಕೇಂದ್ರವನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಬಾಂಬ್ ಸ್ಪೋಟಿಸಿದ್ದಾರೆ ಎನ್ನಲಾಗಿದೆ. ದೇಶೀಯ ತಾಲಿಬಾನ್ ಶಾಖೆಯೊಂದಿಗೆ ಸಂಪರ್ಕ ಹೊಂದಿರುವ ಪಾಕಿಸ್ತಾನದಲ್ಲಿ ಪೊಲೀಸರ ಮೇಲೆ ಹೆಚ್ಚಿನ ಸಂಖ್ಯೆಯ ಭಯೋತ್ಪಾದಕ ದಾಳಿಗಳ ನಡುವೆ ಈ ಘಟನೆ ನಡೆದಿದೆ […]

ಪೊಲೀಸ್ ಠಾಣೆಯೊಳಗೇ ಬಾಂಬ್ ಸ್ಪೋಟಿಸಿದ ಉಗ್ರರು| 12 ಮಂದಿ ಸಾವು; 40ಕ್ಕೂ ಹೆಚ್ಚು ಮಂದಿ ಗಂಭೀರ Read More »

ಪ್ರಸಿದ್ಧ ಬರಹಗಾರ ತಾರೆಕ್ ಫತಾಹ್ ಇನ್ನಿಲ್ಲ

ಸಮಗ್ರ ನ್ಯೂಸ್: ಪಾಕಿಸ್ತಾನ ಮೂಲದ ಕೆನಡಾದ ಬರಹಗಾರ ಮತ್ತು ಅಂಕಣಕಾರ ತಾರೆಕ್ ಫತಾಹ್ ಸೋಮವಾರ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿದ್ದು, ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತಾರೆಕ್ ಮಗಳು ನತಾಶಾ ತಾರಿಕ್ ತಂದೆಯ ಸಾವನ್ನು ದೃಢಪಡಿಸಿದ್ದಾರೆ. ತಾರಿಕ್ ಅವರ ಮಗಳು ನತಾಶಾ ಟ್ವೀಟ್ ಮಾಡಿ, ‘ಪಂಜಾಬಿನ ಸಿಂಹ, ಹಿಂದೂಸ್ತಾನದ ಮಗ, ಕೆನಡಾದ ಗೆಳೆಯ, ಸತ್ಯದ ಪ್ರತಿಪಾದಕ, ನ್ಯಾಯಕ್ಕಾಗಿ ಹೋರಾಡುವ ವ್ಯಕ್ತಿ, ತುಳಿತಕ್ಕೊಳಗಾದವರ ಧ್ವನಿ ತಾರೀಖ್ ಫತೇಹ್ ಇನ್ನಿಲ್ಲ. ಅವರನ್ನು ಬಲ್ಲ ಮತ್ತು ಪ್ರೀತಿಸುವ ಎಲ್ಲರೊಂದಿಗೂ ಕ್ರಾಂತಿ ಮುಂದುವರಿಯುತ್ತದೆ’

ಪ್ರಸಿದ್ಧ ಬರಹಗಾರ ತಾರೆಕ್ ಫತಾಹ್ ಇನ್ನಿಲ್ಲ Read More »

ವಿರಾಜಪೇಟೆ: ವರ್ತಕನಿಗೆ ಗುಂಡು ಹೊಡೆದ ನಿವೃತ ಎಸ್ಪಿ ಮಗ

Samagra news: ನಿವೃತ ಎಸ್ಪಿ ಮಗನೋರ್ವ ವರ್ತಕನಿಗೆ ಗುಂಡು ಹೊಡೆದ ಘಟನೆ ವಿರಾಜಪೇಟೆ ತಾಲೂಕು ಅಮ್ಮತ್ತಿಯಲ್ಲಿ ನಡೆದಿದೆ. ನಿವೃತ ಎಸ್ಪಿ ನೆಲ್ಲಮಕ್ಕಡ ಚಿನ್ನಪ್ಪ ಎಂಬುವವರ ಪುತ್ರ ರಂಜಿತ್ ಎಂಬಾತ ಪ್ರಕರಣ ಅರೋಪಿ. ಈತ ಬೋಪಣ್ಣ ಎಂಬ ವರ್ತಕ ಮೇಲೆ ಸರ್ವಿಸ್ ರಿವಾಲ್ವರ್ ನಿಂದ ಮೂರು ಸುತ್ತಿನ ಗುಂಡು ಹಾರಿಸಿದ್ದಾನೆ. ಈ ವೇಳೆ ಕೂದುಲೆಳೆಯಲ್ಲಿ ಪ್ರಾಣಾಪಾಯದಿಂದ ವರ್ತಕ ಬೋಪಣ್ಣ ಪಾರಾಗಿದ್ದಾರೆ. ಆರೋಪಿ ರಂಜಿತ್ ಸಣ್ಣಪುಟ್ಟ ಗಾಯಗೊಂಡಿದ್ದು ಅಮ್ಮತ್ತಿ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಆಸ್ಪತ್ರೆಯಲ್ಲೇ ಪೊಲೀಸರು ಬೀಡುಬಿಟ್ಟಿದ್ದಾರೆ

ವಿರಾಜಪೇಟೆ: ವರ್ತಕನಿಗೆ ಗುಂಡು ಹೊಡೆದ ನಿವೃತ ಎಸ್ಪಿ ಮಗ Read More »

ಸುಳ್ಯ: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಕಂದಮ್ಮ ಮೃತ್ಯು

ಸಮಗ್ರ ನ್ಯೂಸ್: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಪುಟ್ಟ ಕಂದಮ್ಮ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ಮಾ.22ರ ರಾತ್ರಿ ಸಂಭವಿಸಿದೆ. ಮೃತಪಟ್ಟ ಕಂದಮ್ಮನನ್ನು ಸುಳ್ಯ ಬೋರುಗುಡ್ಡೆ ನಿವಾಸಿ ಮುನಾಫರ್ ಶಾ ರ ಮಗಳು ಆಯಿಷಾ ಮಿಝಾ(3) ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿತ ಅನಾರೋಗ್ಯದಿಂದ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ಶುಕ್ರವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ. ಪವಿತ್ರ ಈದುಲ್ ಫಿತ್ರ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲೀಗ ಶೋಕ ಆವರಿಸಿದೆ.

ಸುಳ್ಯ: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಕಂದಮ್ಮ ಮೃತ್ಯು Read More »

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

Samagra news: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಿಂದ ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಮೃತಪಟ್ಟ ನವವಿವಾಹಿತೆ. ಇನ್ನು ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆತ್ಮ ಹತ್ಯೆಗೆ ನಿಖರ ಕಾರಣ

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ Read More »

ಸುಳ್ಯ: ಜ್ವರಕ್ಕೆ ಬಾಲಕಿ ಬಲಿ

ಸಮಗ್ರ ನ್ಯೂಸ್: 6ನೇ ತರಗತಿ ಬಾಲಕಿಯೋರ್ವಳು ಜ್ವರದಿಂದ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಜಯನಗರ ನಿವಾಸಿ ಸೈಯದ್ ಹಾಗೂ ಮಹಿಮುನಾ ದಂಪತಿ ಪುತ್ರಿ ಶಬ್ನಾಝ್ (12) ಮೃತ ಬಾಲಕಿ. ಸುಳ್ಯ ಸೈಂಟ್ ಬ್ರಿಜೆಡ್ಸ್ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದ ಶಬ್ನಾಝ್ ಗೆ ಕಳೆದ ಒಂದು ವಾರದ ಹಿಂದೆ ಜ್ವರ ಕಾಣಿಸಿಕೊಂಡು. ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಶನಿವಾರ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾಳೆ. ಬಾಲಕಿಯ ಅಗಲಕೆಯಿಂದ ರಂಜಾನ್ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸ್ಮಶಾನ

ಸುಳ್ಯ: ಜ್ವರಕ್ಕೆ ಬಾಲಕಿ ಬಲಿ Read More »

Serial actor Sampath suicide| ಕನ್ನಡದ ಕಿರುತೆರೆ ಖ್ಯಾತನಟ ಸಂಪತ್ ಜಯರಾಮ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿದ್ದ ಖ್ಯಾತ ನಟ ಸಂಪತ್​ ಜಯರಾಮ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್​ ಜಯರಾಮ್​ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ. ಅವರ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್​ ಜಯರಾಮ್​ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ. ಶನಿವಾರ (ಏಪ್ರಿಲ್​ 22) ನೆಲಮಂಗಲದಲ್ಲಿ

Serial actor Sampath suicide| ಕನ್ನಡದ ಕಿರುತೆರೆ ಖ್ಯಾತನಟ ಸಂಪತ್ ಜಯರಾಮ್ ಆತ್ಮಹತ್ಯೆ Read More »

ಕೊನೆಗೂ ಸಿಕ್ಕಿಬಿದ್ದ ಖಲಿಸ್ತಾನ್ ಉಗ್ರ ಅಮೃತ್ ಪಾಲ್ ಸಿಂಗ್| ಪಂಜಾಬ್ ನಲ್ಲಿ ಮೋಗಾದಲ್ಲಿ ಬಂಧನ

ಸಮಗ್ರ ನ್ಯೂಸ್: ತಲೆಮರೆಸಿಕೊಂಡಿದ್ದ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಖಲಿಸ್ತಾನ್ ಮುಖಂಡ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತೀಚೆಗಷ್ಟೇ ಅಮೃತ್ ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು.

ಕೊನೆಗೂ ಸಿಕ್ಕಿಬಿದ್ದ ಖಲಿಸ್ತಾನ್ ಉಗ್ರ ಅಮೃತ್ ಪಾಲ್ ಸಿಂಗ್| ಪಂಜಾಬ್ ನಲ್ಲಿ ಮೋಗಾದಲ್ಲಿ ಬಂಧನ Read More »

ಶಿವಮೊಗ್ಗ: ಹಿಂದೂ ಯುವಕನ ಇರಿದು ಬರ್ಬರ ಕೊಲೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಸಾಯಿ ನಗರದಲ್ಲಿ ಚಾಕು ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತನನ್ನು ನವೀನ್ ಕುಮಾರ್ (22) ಎಂದು ಗುರುತಿಸಲಾಗಿದೆ. ಸದ್ಯ ನವೀsನ್ ಮೃತದೇಹವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಆಸ್ಪತ್ರೆ ಮುಂಭಾಗ ಸಿಆರ್ ಪಿಎಫ್ ತುಕಡಿ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನವೀನ್ ಬೆನ್ನಿಗೆ ಎರಡು ಕಡೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಸಾದತ್, ಸುಹೇಲ್ ಅಲಿಯಾಸ್ ಕೊಲವೇರಿ, ಇತರರು ಸೇರಿ

ಶಿವಮೊಗ್ಗ: ಹಿಂದೂ ಯುವಕನ ಇರಿದು ಬರ್ಬರ ಕೊಲೆ Read More »

ಅತ್ಯಾಚಾರ ಪ್ರಕರಣದ ಪ್ರಮುಖ ಸಾಕ್ಷಿ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ| ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ಮೇಲಿನ ಕೇಸು‌ ರದ್ದು

ಸಮಗ್ರ ನ್ಯೂಸ್: ಪುತ್ತೂರಿನ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ರಾಮಕಥಾ ಗಾಯಕಿ ಪ್ರೇಮಲತಾ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಚಾರಣೆ ನಡೆಸಿದ್ದ

ಅತ್ಯಾಚಾರ ಪ್ರಕರಣದ ಪ್ರಮುಖ ಸಾಕ್ಷಿ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ| ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ಮೇಲಿನ ಕೇಸು‌ ರದ್ದು Read More »