ಕ್ರೈಂ

ನೃತ್ಯ ‌ನಿರ್ದೇಶಕ‌ ರಾಜೇಶ್ ಮಾಸ್ಟರ್‌ ನಿಗೂಢ ಸಾವು

ಸಮಗ್ರ ನ್ಯೂಸ್: ನೃತ್ಯ ನಿರ್ದೇಶಕ ರಾಜೇಶ್ ಮಾಸ್ಟರ್ ನಿಗೂಢವಾಗಿ ಸಾವನ್ನಪ್ಪಿರುವ ಆಘಾತದ ಸುದ್ದಿ ಹೊರಬಿದ್ದಿದೆ. ಅವರ ಸಾವಿನ ಕಾರಣದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣಗಳಿಲ್ಲದಿದ್ದರೂ, ನಿಗೂಢ ಕಾರಣಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹಲವಾರು ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ರಾಜೇಶ್ ಮಾಸ್ಟರ್ ಸಾವಿನ ಸುದ್ದಿ ಬಗ್ಗೆ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರರಂಗದ ನಟಿ ದೇವಿ ಚಂದನಾ ಅವರು ಫೇಸ್‌ಬುಕ್‌ ನಲ್ಲಿ ರಾಜೇಶ್ ಮಾಸ್ಟರ್ ಅವರೊಂದಿಗಿನ ಕೆಲವು ಫೋಟೋಗಳನ್ನು ಹಂಚಿಕೊಂಡು ತಮ್ಮ ಆಘಾತವನ್ನು […]

ನೃತ್ಯ ‌ನಿರ್ದೇಶಕ‌ ರಾಜೇಶ್ ಮಾಸ್ಟರ್‌ ನಿಗೂಢ ಸಾವು Read More »

ಸಂಪಾಜೆ: ಜೇನು ತೆಗೆಯುತ್ತಿದ್ದ ವೇಳೆ ಮರದಿಂದ ಬಿದ್ದು ಯುವಕ ಮೃತ್ಯು

ಸಮಗ್ರ ನ್ಯೂಸ್: ಜೇನು ತೆಗಿಯಲೆಂದು ಮರ ಹತ್ತಿದ್ದ ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಎ.18 ರ ಸಂಜೆ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದದ್ದರು ಎಂದು ಹೇಳಲಾಗಿದ್ದು, ಈ ವೇಳೆ ವಿಜಯ್ ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೆ ಜೊತೆಗಿದ್ದವರು ಆತನನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದ ಎನ್ನಲಾಗಿದೆ. ಇದೀಗ ಮೃತದೇಹವನ್ನು ಸುಳ್ಯ

ಸಂಪಾಜೆ: ಜೇನು ತೆಗೆಯುತ್ತಿದ್ದ ವೇಳೆ ಮರದಿಂದ ಬಿದ್ದು ಯುವಕ ಮೃತ್ಯು Read More »

ವಿಧ್ಯಾರ್ಥಿಗಳೊಂದಿಗೆ ಶಿಕ್ಷಕಿಯರು ಲೈಂಗಿಕ ಸಂಪರ್ಕ– 6 ಮಂದಿ ಅರೆಸ್ಟ್

ನ್ಯೂಯಾರ್ಕ್‌: ಶಿಕ್ಷಕಲಿರು ತಾವು ಕಲಿಸುತ್ತಿರುವ ಶಾಲೆಯ ವಿಧ್ಯಾರ್ಥಿಗಳೊಂದಿಗೆ ಲೈಂಗಿಕ ಸಂಪರ್ಕಹೊಂದಿದ ಆರೋಪದ ಮೇಲೆ 6 ಮಂದಿಯನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಎಮಿಲಿ ಹ್ಯಾನ್‌ಕಾಕ್ (26), ಹೀದರ್ ಹೇರ್ (32), ಎಲೆನ್​ ಶೆಲ್​ (38), ಕ್ರಿಸ್ಟನ್ ಗ್ಯಾಂಟ್ (36), ಅಲಿಹ್ ಖೇರಾಡ್‌ಮಂಡ್ (33), ಹನ್ನಾ ಮಾರ್ತ್ (26) ಎನ್ನಲಾಗಿದ್ದು, ಕಳೆದ ಎರಡು ದಿನಗಳಲ್ಲಿ ಈ ಆರು ಮಂದಿ ಶಿಕ್ಷಕಿಯರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ. ಈ ಶಿಕ್ಷಕಿಯರು ವಿವಿಧ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದರು.

ವಿಧ್ಯಾರ್ಥಿಗಳೊಂದಿಗೆ ಶಿಕ್ಷಕಿಯರು ಲೈಂಗಿಕ ಸಂಪರ್ಕ– 6 ಮಂದಿ ಅರೆಸ್ಟ್ Read More »

ಅನ್ಯ ಜಾತಿಯ ಯುವಕರ ಪ್ರೀತಿ|ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿದ ತಂದೆ-ತಾಯಿ

ಪಾಟ್ನಾ: ಅನ್ಯ ಜಾತಿಯ ಯುವಕರನ್ನು ಪ್ರೀತಿ ಮಾಡಿದಕ್ಕೆ ಇಬ್ಬರು ಹೆಣ್ಣು ಮಕ್ಕಳನ್ನು ಪಾಲಕರು ಕೊಂದಿರುವ ಭಯಾನಕ ಘಟನೆ ಬಿಹಾರದ ಹಾಜಿಪುರದಲ್ಲಿ ನಡೆದಿದೆ. ತಾಯಿ ರಿಂಕು ದೇವಿ ಮತ್ತು ತಂದೆ ನರೇಶ್ ಕೊಲೆಗಾರರು.ಘಟನೆಯಲ್ಲಿ ರಿಂಕು ದೇವಿಯನ್ನು ಪೊಲೀಸರು ಬಂಧಿಸಿದ್ದು, ತಂದೆ ನರೇಶ್ ತಲೆಮರೆಸಿಕೊಂಡಿದ್ದಾನೆ. ಬಾಲಕಿಯರು ಗ್ರಾಮದ ಅನ್ಯ ಜಾತಿಯ ಯುವಕರೊಂದಿಗೆ ಆಪ್ತರಾಗಿದ್ದು ಪ್ರೀತಿಸುತ್ತಿದ್ದರು ಮತ್ತು ಅವರ ಪೋಷಕರ ವಿರೋಧವನ್ನು ಲೆಕ್ಕಿಸದೆ ಇಬ್ಬರೂ ಯುವಕರ ಜೊತೆ ಹೋಗುತ್ತಿದ್ದರು ಎಂದು ತಾಯಿ ಹೇಳಿದ್ದಾರೆ. ರೋಶನಿ ಕುಮಾರಿ ಮತ್ತು ತನು ಕುಮಾರಿ ಅವರು

ಅನ್ಯ ಜಾತಿಯ ಯುವಕರ ಪ್ರೀತಿ|ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿದ ತಂದೆ-ತಾಯಿ Read More »

ನಂಜನಗೂಡು: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

Samagra news: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ಶ್ರೀಕಂಠೇಶ್ವರನ ದೇವಸ್ಥಾನದ ಹದಿನಾರು ಕಾಲು ಮಂಟಪದ ಬಳಿಯಿಂದ ಚಾಮರಾಜನಗರಕ್ಕೆ ತೆರಳುವ ರಸ್ತೆ ಬದಿಯ ಹಳ್ಳದಲ್ಲಿ ಮೃತದೇಹ ಪತ್ತೆಯಾಗಿದೆ. ಸುಮಾರು 40 ರಿಂದ 45 ವರ್ಷ ವಯಸ್ಸಿನ ಮಹಿಳೆಯಾಗಿದ್ದ ಬಲಗೈ ಮೇಲೆ “ಭ” ಎಂಬ ಕನ್ನಡ ಅಕ್ಷರ ಟ್ಯಾಟೂ ಕಂಡುಬಂದಿದೆ. ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು , ಅತ್ಯಾಚಾರವೆಸಗಿ ಕೊಲೆ ಮಾಡಿ ನಂತರ ದುಷ್ಕರ್ಮಿಗಳು ಇಲ್ಲಿಗೆ ತಂದು

ನಂಜನಗೂಡು: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ Read More »

ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ| ಸಣ್ಣಪುಟ್ಟ ಗಾಯದಿಂದ ಪಾರು

ಸಮಗ್ರ ನ್ಯೂಸ್: ಗುರುಮಠಕಲ್‌ ಕ್ಷೇತ್ರದ‌ ಕಾಂಗ್ರೆಸ್​ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಾಬುರಾವ್​ ಚಿಂಚನಸೂರ್​ ಅವರಿದ್ದ ವಾಹನ ತಡರಾತ್ರಿ ಅಪಘಾತಕ್ಕೀಡಾಗಿದೆ.ಯಾದಗಿರಿಯಿಂದ ಬರುವಾಗ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆಯ ಮಧ್ಯೆ ಇರುವ ಗುಂಡಿಗೆ ಕಾರಿನ ಟೈರ್ ಬಿಳುತ್ತಿದ್ದ ಹಾಗೆ ಸ್ಕೀಡ್ ಆಗಿ ವಾಹನವೂ ಉರುಳಿದೆ. ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಸಿದ್ದೇ ಘಟನೆ ಕಾರಣ ಎನ್ನಲಾಗಿದೆ. ಸ್ಥಳೀಯರ ಸಹಕಾರದಿಂದ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ಚಿಂಚನಸೂರ್​ ಅವರನ್ನು ದಾಖಲಿಸಲಾಗಿದೆ. ಬಾಬುರಾವ್

ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ| ಸಣ್ಣಪುಟ್ಟ ಗಾಯದಿಂದ ಪಾರು Read More »

ಸಂಪಾಜೆ ಅಪಘಾತ; ಆರಕ್ಕೆ ಏರಿದ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ಕಾರು ಮತ್ತು ಬಸ್ ನಡುವೆ ಸಂಪಾಜೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪೈಕಿ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಹಾಗೂ ಓರ್ವ ಗಂಡಸು ಉಸಿರು ಚೆಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ನಾಲ್ವರು ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು

ಸಂಪಾಜೆ ಅಪಘಾತ; ಆರಕ್ಕೆ ಏರಿದ ಸಾವಿನ ಸಂಖ್ಯೆ Read More »

ಉತ್ತರಪ್ರದೇಶ: ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್ ಮಾಡಿದ ಯುಪಿ ಪೊಲೀಸ್

ಸಮಗ್ರ ನ್ಯೂಸ್: ಬಿಎಸ್‌ಪಿ ನಾಯಕ ರಾಜ್‌ಪಾಲ್‌ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅತೀಕ್‌ ಅಹ್ಮದ್‌ನ ಮಗ ಸೇರಿದಂತೆ ಇಬ್ಬರು ಆರೋಪಿಗಳನ್ನ ಯುಪಿ ಪೊಲೀಸರು ಅಲ್ಲಿನ ಝಾನ್ಸಿಯಲ್ಲಿ ಎನ್‌ಕೌಂಟರ್‌ ಮಾಡಿದ್ದಾರೆ. ಅಸಾದ್‌ ಅಹ್ಮದ್‌ ಹಾಗೂ ಗುಲಾಮ್‌ ಅನ್ನೊ ಆರೋಪಿಗಳು ಮೃತಪಟ್ಟಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಈವರೆಗೆ ಒಟ್ಟು 4 ಆರೋಪಿಗಳನ್ನ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದಂತಾಗಿದೆ. ಇತ್ತ ಇದೇ ಪ್ರಕರಣದಲ್ಲಿ ಅತೀಕ್‌ ಅಹ್ಮದ್‌ನನ್ನ ಪ್ರಯಾಗ್‌ರಾಜ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಉತ್ತರಪ್ರದೇಶ: ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್ ಮಾಡಿದ ಯುಪಿ ಪೊಲೀಸ್ Read More »

ಕೆಲಸ ಕೊಡಿಸುವ ಆಮಿಷ ಒಡ್ಡಿ ವಂಚನೆ| ಫ್ರೀಡಂ ಆ್ಯಪ್ ನ ಸಿಇಒ ಸುಧೀರ್ ಅರೆಸ್ಟ್

ಸಮಗ್ರ ನ್ಯೂಸ್: ಫಾರ್ಟ್ ಟೈಂ ಕೆಲಸದ ಆಮಿಷವೊಡ್ಡಿ ಹಣ ನೀಡದೆ ವಂಚಿಸಿರುವ ಆರೋಪದ ಮೇಲೆ ಇಂಡಿಯನ್ ಮನಿ ಮತ್ತು ಫೈನಾನ್ಸಿಯಲ್ ಫ್ರೀಡಂ ಆ್ಯಪ್‍ನ ಸಿಇಒ ಸಿ.ಎಸ್.ಸುಧೀರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾಗಿರುವ 21 ಮಂದಿ ನೀಡಿದ ದೂರಿನ ಅನ್ವಯ ಸಿ.ಎಸ್.ಸುಧೀರ್ ಸೇರಿದಂತೆ 23 ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಿರೀಕ್ಷಣಾ ಜಾಮೀನು ಪಡೆದಿದ್ದ ಸುಧೀರ್‍ನನ್ನು ಮತ್ತೊಂದು ಪ್ರಕರಣದಲ್ಲಿ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. 4 ಪ್ರತ್ಯೇಕ ವಂಚನೆ ಕೇಸ್ ದಾಖಲಾದ ಹಿನ್ನೆಲೆ ವಿಚಾರಣೆಗೆ ಬಂದಿದ್ದ ಸಿ.ಎಸ್.ಸುಧೀರ್ ನ್ನು ಪೊಲೀಸರು

ಕೆಲಸ ಕೊಡಿಸುವ ಆಮಿಷ ಒಡ್ಡಿ ವಂಚನೆ| ಫ್ರೀಡಂ ಆ್ಯಪ್ ನ ಸಿಇಒ ಸುಧೀರ್ ಅರೆಸ್ಟ್ Read More »

ಸುಳ್ಯ: ಹೊಳೆಗೆ ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು

ಸಮಗ್ರ ನ್ಯೂಸ್: ಮಕ್ಕಳಿಬ್ಬರು ಪೋಷಕರಿಗೆ ಗೊತ್ತಿಲ್ಲದೇ ಹೊಳೆಗೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ-ಕೇರಳ ಗಡಿಭಾಗದ ಅಡೂರು ಎಂಬಲ್ಲಿ ಸಂಭವಿಸಿದೆ. ಪೋಷಕರಿಗೆ ತಿಳಿಯದೇ ನದಿಗೆ ಹೋಗಿದ್ದು ನದಿ ನೀರಿನಲ್ಲಿ ಮುಳುಗಿ ಕಂದಮ್ಮಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅಡೂರು ದೇವರಡ್ಕದ ನಿವಾಸಿ ಶಾಫಿ ಎಂಬವರ ಪುತ್ರ ಮುಹಮ್ಮದ್ ಆಶೀಕ್ (7) ಮತ್ತು ಹಸೈನಾರ್ ರವರ ಪುತ್ರ ಮುಹಮ್ಮದ್ ಫಾಸಿಲ್(9) ನೀರಿನಲ್ಲಿ ಮುಳುಗಿ ಮೃತಪಟ್ಟವರು . ಮೃತದೇಹಗಳನ್ನು ಕಾಸರಗೋಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಸುಳ್ಯ: ಹೊಳೆಗೆ ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು Read More »