ಕ್ರೈಂ

ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದಲೇ‌ ಮನೆಯವರ ಕೊಲೆಗೆ ಯತ್ನ| ಇಬ್ಬರು ಆರೋಪಿಗಳು ಅಂದರ್

ಸಮಗ್ರ ನ್ಯೂಸ್: ಮನೆ ಕೆಲಸಕ್ಕೆಂದು ಬಂದ ಇಬ್ಬರು ವ್ಯಕ್ತಿಗಳು ಮನೆಯನ್ನೇ ದರೋಡೆ ಮಾಡಿ ಮನೆಯವರನ್ನು ಕೊಲೆಗೈಯಲು ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ‌ ನಡೆದಿದೆ. ಪಂಬೆತ್ತಾಡಿ‌ ಗ್ರಾಮದ ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಕೊಲೆಗೆ ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯತ್ರಿಯವರ ಕುತ್ತಿಗೆಗೆ ಇರಿದ ಗಾಯವಾಗಿದ್ದು ಅವರು ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮನೆ […]

ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದಲೇ‌ ಮನೆಯವರ ಕೊಲೆಗೆ ಯತ್ನ| ಇಬ್ಬರು ಆರೋಪಿಗಳು ಅಂದರ್ Read More »

ಐದು ಮದುವೆಯಾದವ ಐದನೇ ಪತ್ನಿಯಿಂದ ಬರ್ಬರವಾಗಿ ಹತನಾದ| ಮರ್ಮಾಂಗವನ್ನೇ ಕತ್ತರಿಸಿ ಎಸೆದ ಪತ್ನಿ!!

ಸಮಗ್ರ ನ್ಯೂಸ್: ಐದು ಮದ್ವೆಯಾದ ವ್ಯಕ್ತಿಯನ್ನು ಆತನ 5ನೇ ಹೆಂಡತಿಯೊಬ್ಬಳು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಿಂಗ್ರೂಲಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಿರೇಂದರ್ ಗುರ್ಜರ್ ಎಂದು ಗುರುತಿಸಲಾಗಿದೆ. ಐದು ಮದುವೆಯಾಗಿದ್ದ ಈತನನ್ನು ಈತನ 5ನೇ ಪತ್ನಿ ಕಾಂಚನಾ ಗುರ್ಜರ್ ಕೊಡಲಿಯಿಂದ ಕೊಚ್ಚಿ ಹಲ್ಲೆ ಮಾಡಿದ್ದಲ್ಲದೇ ಆತನ ದೇಹವನ್ನು ದೂರ ಎಸೆಯುವ ಮೊದಲು ಆತನ ಮರ್ಮಾಂಗವನ್ನು ಕತ್ತರಿಸಿ ಎಸೆದಿದ್ದಾಳೆ. ಕೊಲೆಯಾದ ಬಿರೇಂದ್ರ ಗುರ್ಜರ್ ಶವ ಫೆಬ್ರವರಿ 21ರಂದು ಪತ್ತೆಯಾಗಿದ್ದು, ಈ ವೇಳೆ ಆತನ

ಐದು ಮದುವೆಯಾದವ ಐದನೇ ಪತ್ನಿಯಿಂದ ಬರ್ಬರವಾಗಿ ಹತನಾದ| ಮರ್ಮಾಂಗವನ್ನೇ ಕತ್ತರಿಸಿ ಎಸೆದ ಪತ್ನಿ!! Read More »

ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು| ಹೃದಯ ವಿದ್ರಾವಕ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಯುವಕನೊಬ್ಬ ಕುಸಿದು ಬಿದ್ದು ಹೃದಯಾಘಾತಗೊಂಡು ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದ್ದು, ಹೃದಯ ವಿದ್ರಾವಕ ವಿಡಿಯೋ ವೈರಲ್‌ ಆಗಿದೆ. ಸಿಕಂದರಾಬಾದ್ ನ ಲಾಲಾಪೇಟ್ ಪ್ರೊಫೆಸರ್ ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಬ್ಯಾಡ್ಮಿಂಟನ್ ಆಡುತ್ತಿದ್ದ 39 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತನನ್ನು ಮಲ್ಕಾಜ್ಗಿರಿ ಮೂಲದ ಪರಮೇಶ್ ಯಾದವ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಯಾದವ್ ತಮ್ಮ ಕಚೇರಿಯಿಂದ ಹಿಂದಿರುಗಿದ ನಂತರ ನಿಯಮಿತವಾಗಿ ಬ್ಯಾಡ್ಮಿಂಟನ್ ಆಡುತ್ತಿದ್ದರು. ನಿನ್ನೆ ಕೂಡ ಅವರು ತಮ್ಮ ದಿನಚರಿಯಂತೆ

ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು| ಹೃದಯ ವಿದ್ರಾವಕ ವಿಡಿಯೋ ವೈರಲ್ Read More »

ಕಾರು ಡಿಕ್ಕಿ ಹೊಡೆದು ಮೂವರು ಮಕ್ಕಳು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಚೆನ್ನೈನ ತಿರುಪತ್ತೂರ್ ನ ವಾಣಿಯಂಬಾಡಿನಲ್ಲಿ ನಡೆದಿದೆ. ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಮೃತಪಟ್ಟ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ- ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು ಸೈಕಲ್ ನಲ್ಲಿ ಸಾಗುತ್ತಿತ್ತು. ಈ ವೇಳೆ ವೆಲ್ಲೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿ ಹೊಡೆದು ಮೂವರು ಮಕ್ಕಳು ಸ್ಥಳದಲ್ಲೇ ದುರ್ಮರಣ Read More »

7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ MBBS ಟಾಪರ್

ಸಮಗ್ರ ನ್ಯೂಸ್: ಏಳು ಅಂತಸ್ತಿನ ಕಟ್ಟಡದಿಂದ ಬಿದ್ದು MBBS ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬೀದರ್​ನ ಬ್ರೀಮ್ಸ್ ಆಸ್ಪತ್ರೆ ಆವರಣದಲ್ಲಿರುವ MBBS ಹಾಸ್ಟೆಲ್ ಟೆರಸ್ ಮೇಲಿಂದ ವಿದ್ಯಾರ್ಥಿ ಹಾರಿ ಸಾವನ್ನಪ್ಪಿದ್ದಾನೆ. MBBS ನಲ್ಲಿ ಅಂತಿಮ ವರ್ಷದ ವ್ಯಾಸಂಗ ಶ್ರೀರಾಮ್ ಕಾಡಗಿ(22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಕಲಿಕೆಯಲ್ಲಿ ಈತ ಟಾಪರ್ ಕೂಡ ಆಗಿದ್ದು, ಕೆಲವು ದಿನಗಳಿಂದ ಶ್ರೀರಾಮ ಕಾಡಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಬೆಳಗ್ಗಿನ ಜಾವ 7;30ಕ್ಕೆ ಹಾಸ್ಟೆಲ್​ ಟೆರೆಸ್​ ಮೇಲಿಂದ ಹಾರಿ ಸಾವನ್ನಪ್ಪಿದ್ದಾನೆ.

7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ MBBS ಟಾಪರ್ Read More »

ಕೊಟ್ಟಿಗೆಹಾರ: ಮುಳ್ಳು ಹಂದಿ ಶಿಕಾರಿಗೆ ತೆರಳಿದ ಯುವಕರು ಸಾವು

ಸಮಗ್ರ ನ್ಯೂಸ್: ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಸಂಭವಿಸಿದೆ. ತಮಿಳುನಾಡು ಮೂಲದ ವಿಜಯ್ (28), ಶರತ್ (26) ಸಾವನ್ನಪ್ಪಿದ ಕೂಲಿಕಾರ್ಮಿಕರು. ಇವರು ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಮುಳ್ಳು ಹಂದಿ ಶಿಕಾರಿ ಮಾಡಲು ಗುಡ್ಡಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಹಂದಿ ಸುರಂಗದ ಒಳಗೆ ಹೊಗಿದ್ದು ತಕ್ಷಣ ಯುವಕರು ಸುರಂಗದ ಒಳಗೆ ಹೊಗೆ ಹಾಕಿ

ಕೊಟ್ಟಿಗೆಹಾರ: ಮುಳ್ಳು ಹಂದಿ ಶಿಕಾರಿಗೆ ತೆರಳಿದ ಯುವಕರು ಸಾವು Read More »

ಮಡಿಕೇರಿ: ರೈತಮಹಿಳೆ‌ ಮೇಲೆ ಕಾರ್ಮಿಕನಿಂದ ಮನಬಂದಂತೆ‌ ಹಲ್ಲೆ‌..!

ಸಮಗ್ರ ನ್ಯೂಸ್: ರೈತಮಹಿಳೆ‌ ಮೇಲೆ ಕಾರ್ಮಿಕನಿಂದ ಮನಬಂದಂತೆ‌ ಹಲ್ಲೆ‌ ನಡೆಸಿದ ಘಟನೆ ಶ್ರೀಮಂಗಲನಪೊಲೀಸ್ ಠಾಣೆ ವ್ಯಾಪ್ತಿಯ ಕಾಕೂರು ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ‌ ಕೂಲಿ‌ ಕಾರ್ಮಿಕ ರಾಜು ಪ್ರಕರಣದ ಆರೋಪಿ. ಈತ ‌ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು ಇದನ್ನು ಖಂಡಿಸಿದ್ದಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆ‌ ಆರೋಪಿ ಶ್ರೀಮಂಗಲ‌ ಠಾಣೆ ಪೊಲೀಸರ ವಶಕ್ಕೆ ಪಡೆದಿದ್ದು ಗಾಯಾಳು ಮಹಿಳೆ ಆಸ್ಪತ್ರೆ ದಾಖಲು ಮಾಡಲಾಗಿದೆ.

ಮಡಿಕೇರಿ: ರೈತಮಹಿಳೆ‌ ಮೇಲೆ ಕಾರ್ಮಿಕನಿಂದ ಮನಬಂದಂತೆ‌ ಹಲ್ಲೆ‌..! Read More »

ಗೆಳೆಯನ ಜೊತೆ ಸೇರಿ ಪತಿಯ‌ ಕಥೆಯನ್ನೇ ಮುಗಿಸಿದ ಪತ್ನಿ| ವಿಟ್ಲದಲ್ಲಿ‌ ನಡೆಯಿತೊಂದು ಭಯಾನಕ ಘಟನೆ

ಸಮಗ್ರ ನ್ಯೂಸ್: ಕೋಣೆಯಲ್ಲಿ ಮಲಗಿದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರವಿಂದ ಅವರ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳೆಂದು ಗುರುತಿಸಲಾಗಿದೆ. ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳ ಹಿಂದೆ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್‌ ಕೆಲಸವನ್ನು

ಗೆಳೆಯನ ಜೊತೆ ಸೇರಿ ಪತಿಯ‌ ಕಥೆಯನ್ನೇ ಮುಗಿಸಿದ ಪತ್ನಿ| ವಿಟ್ಲದಲ್ಲಿ‌ ನಡೆಯಿತೊಂದು ಭಯಾನಕ ಘಟನೆ Read More »

ಮಡಿಕೇರಿ: ಹೆಜ್ಜೇನು ದಾಳಿಗೆ ಇಬ್ಬರು ಬಲಿ

ಸಮಗ್ರ ನ್ಯೂಸ್: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೆಜ್ಜೇನು ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಮರಗೋಡು ಗ್ರಾಮದ ಹುಲಿತಾಳದ ಅಶ್ವಿನ್ ಕುಮಾರ್ (45) ಹಾಗೂ ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದ ಕಾರ್ಮಿಕ ವೇಲು ಅವರುಗಳು ಮೃತಪಟ್ಟವರು. ಅಶ್ವಿನ್ ಕುಮಾರ್ ಅವರು ತನ್ನ ತಂಗಿ ಅಪರ್ಣ ಅವರೊಂದಿಗೆ ತೋಟಕ್ಕೆ ಹೋಗಿದ್ದಾಗ ಇಬ್ಬರ ಮೇಲೆ ದಿಢೀರ್ ಆಗಿ ಹೆಜ್ಜೇನು ದಾಳಿ ಮಾಡಿದೆ. ಈ ಸಂದರ್ಭ ದಾಳಿಯಿಂದ ತಪ್ಪಿಸಿಕೊಳ್ಳಲು ಮನೆಯೊಳಗೆ ಬಂದು ಸೇರಿಕೊಂಡರಾದರೂ ಅಶ್ವಿನ್ ಕುಮಾರ್ ತೀವ್ರ ಅಸ್ವಸ್ಥಗೊಂಡರು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರು ಅವರು

ಮಡಿಕೇರಿ: ಹೆಜ್ಜೇನು ದಾಳಿಗೆ ಇಬ್ಬರು ಬಲಿ Read More »

ಎರಡು ಎಲೆಕ್ಟ್ರಿಕ್ ಬಸ್ ಗಳು ಬೆಂಕಿಗಾಹುತಿ| ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಪಿಎಸ್​​​ಆರ್​ಟಿಸಿ)ಯ ಎರಡು ಸ್ಲೀಪರ್ ಲಕ್ಸುರಿ ಬಸ್​​ಗಳಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ತೆಲಂಗಾಣದ ಸೂರ್ಯಪೇಟ್​ ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್​ ಬಸ್​​ಗಳಲ್ಲಿ ಯಾವುದೇ ಪ್ರಯಾಣಿಕರು ಇದರ ಕಾರಣದಿಂದ ಭಾರಿ ದುರಂತ ತಪ್ಪಿದಂತಾಗಿದೆ. ಹೈದರಾಬಾದ್ – ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಿವ್ವೆನ್ಲಾ ಮಂಡಲದ ಗುಂಪೂಲ ಗ್ರಾಮದ ಹೊರವಲಯದ ಈ ಘಟನೆ ಜರುಗಿದೆ. ಮೊದಲು ಒಂದು ಬಸ್​ನಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಪಕ್ಕದಲ್ಲೇ ನಿಂತಿದ್ದ

ಎರಡು ಎಲೆಕ್ಟ್ರಿಕ್ ಬಸ್ ಗಳು ಬೆಂಕಿಗಾಹುತಿ| ತಪ್ಪಿದ ಭಾರೀ ಅನಾಹುತ Read More »