ಕ್ರೈಂ

ಜಾಮೀನು‌ ಸಿಕ್ಕಿದ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್| ಶಸ್ತ್ರಚಿಕಿತ್ಸೆ ಇಲ್ಲದೇ ಹೊರಬಂದ ನಟ!!

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಯಾವುದೇ ಆಪರೇಷನ್ ಮಾಡಿಸಿಕೊಳ್ಳದೇ ಕೇವಲ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ. ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆದುಕೊಂಡಿದ್ದ ದರ್ಶನ್ ಫಿಜಿಯೋಥೆರಪಿ ಮಾಡಿಸಿದ್ದು, ಸದ್ಯ ವಿಶ್ರಾಂತಿ ಪಡೆಯಲು ವೈದ್ಯರು ದರ್ಶನ್ ಗೆ ಸಲಹೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ನಟ […]

ಜಾಮೀನು‌ ಸಿಕ್ಕಿದ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್| ಶಸ್ತ್ರಚಿಕಿತ್ಸೆ ಇಲ್ಲದೇ ಹೊರಬಂದ ನಟ!! Read More »

ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಬೆಂಕಿ ದುರಂತ: ಒಂದೇ ಕುಟುಂಬದ 6 ಜನರು ಸಾವು

ಸಮಗ್ರ ನ್ಯೂಸ್ : ನಸುಕಿನಜಾವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಜಮ್ಮು-ಕಾಶ್ಮೀರದ ಕಥುವಾದಲ್ಲಿ ಈ ದುರಂತ ಸಂಭವಿಸಿದೆ. ಮುಂಜಾನೆ 2:30ರ ಸುಮಾರಿಗೆ ಮನೆಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದರೆ, ಉಳಿದ ನಾಲ್ವವರು ಮನೆಯಿಂದ ಹೊರಬರಲಾಗದೇ ಮೃತಪಟ್ಟಿದ್ದಾನೆ.ನಾಲ್ವರ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಕಥುವಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಬೆಂಕಿ ದುರಂತ: ಒಂದೇ ಕುಟುಂಬದ 6 ಜನರು ಸಾವು Read More »

ಪತ್ನಿಯೊಡನೆ ಸಿಕ್ಕಿಬಿದ್ದ ಲವರ್ – ಅಮಾನುಷವಾಗಿ ಹೊಡೆದು ಕೊಂದ ಪತಿ!

ಸಮಗ್ರ ನ್ಯೂಸ್ : ಇಲ್ಲಿನ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಡೀ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ.ಮೃತನನ್ನು ಹೃತಿಕ್ ವರ್ಮಾ ಎಂದು ಗುರುತಿಸಲಾಗಿದೆ. ಮಹಿಳೆಯೊಂದಿಗೆ ಸಿಕ್ಕಿಬಿದ್ದ ಪರಿಣಾಮ ಆಕೆಯ ಪತಿಯೇ ಹೃತಿಕ್‌ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಕೇಶ್ ಪವೇರಿಯಾ ಪ್ರಕಾರ, ಆರೋಪಿಗಳು ಹೃತಿಕ್ ನನ್ನು ಅತ್ಯಂತ ಅಮಾನುಷವಾಗಿ ಥಳಿಸಿದ್ದಾರೆ. ಹೃತಿಕ್‌ನ ಉಗುರುಗಳನ್ನು ಹೊರತೆಗೆದು ಅವನನ್ನು ಕೆಟ್ಟದಾಗಿ ಹಿಂಸಿಸಿದ್ದಾನೆ. ಆತನ ದೇಹದ ಎಲ್ಲಾ ಭಾಗಗಳಲ್ಲಿ ಗಂಭೀರ ಗಾಯದ ಗುರುತುಗಳಿದ್ದವು. ಆತನ ಸ್ಥಿತಿ ನೋಡಿದರೆ ಒಬ್ಬರಿಗಿಂತ

ಪತ್ನಿಯೊಡನೆ ಸಿಕ್ಕಿಬಿದ್ದ ಲವರ್ – ಅಮಾನುಷವಾಗಿ ಹೊಡೆದು ಕೊಂದ ಪತಿ! Read More »

ಲಾರಿ ಪಲ್ಟಿ: ರಸ್ತೆ ಬದಿಯಲ್ಲಿ ನಿಂತಿದ್ದ ಮೂವರು ಪಿಡಬ್ಲ್ಯೂಡಿ ಅಧಿಕಾರಿಗಳು ಸಾವು

ಸಮಗ್ರ ನ್ಯೂಸ್ : ಲಾರಿಯೊಂದು ರಸ್ತೆ ಬದಿ ನಿಂತಿದ್ದ ಲೋಕೋಪಯೋಗಿ ಇಲಾಖೆಯ ಮೂವರು ಅಧಿಕಾರಿಗಳ ಮೇಲೆ ಪಲ್ಟಿಯಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಡಾಲರ್ಸ್ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಮಲ್ಲಿಕಾರ್ಜುನ (29), ಶಿವರಾಜು (28), ಮೆಹಬೂಬ್ (30) ಎಂದು ಗುರುತಿಸಲಾಗಿದೆ.ಲೋಕೋಪಯೋಗಿ ಇಲಾಖೆಯಲ್ಲಿ ಜೂನಿಯರ್ ಇಂಜಿನಿಯರ್‌ಗಳಾಗಿದ್ದ ಮಲ್ಲಿಕಾರ್ಜುನ, ಶಿವರಾಜು ಮತ್ತು ಕಂಪ್ಯೂಟರ್ ಆಪರೇಟರ್ ಆಗಿದ್ದ ಮೆಹಬೂಬ್ ಕೆನಲ್ ಡ್ಯೂಟಿ ಮುಗಿಸಿಕೊಂಡು ಮನೆಗೆ ಹೊರಟಿದ್ದರು. ಈ ವೇಳೆ ಮೂವರು ರಸ್ತೆ ಬದಿಯಲ್ಲಿ ಮಾತನಾಡುತ್ತ ನಿಂತಿದ್ದರು. ಅದೇ ಮಾರ್ಗವಾಗಿ ಬಂದ

ಲಾರಿ ಪಲ್ಟಿ: ರಸ್ತೆ ಬದಿಯಲ್ಲಿ ನಿಂತಿದ್ದ ಮೂವರು ಪಿಡಬ್ಲ್ಯೂಡಿ ಅಧಿಕಾರಿಗಳು ಸಾವು Read More »

ಕೊಕ್ಕಡ: ಖಾಸಗಿ ಬಸ್ ನಡಿಗೆ ಬಿದ್ದು ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎನ್ನುವಲ್ಲಿ ಬಸ್ಸಿನಡಿಗೆ ಬೈಕ್‌ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಡಿ. 15ರ ಸಂಜೆ ಸಂಭವಿಸಿದೆ. ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಮೃತ ಬೈಕ್‌ ಸವಾರ. ಖಾಸಗಿ ಬಸ್ಸಿನಲ್ಲಿ ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು. ಬಸ್‌, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯ ಅವರ ಬೈಕಿಗೆ ಕಾಪಿನಬಾಗಿಲು ಸಪ್ತಗಿರಿ ಕಾಂಪ್ಲೆಕ್ಸ್‌ ಸಮೀಪ ಮುಖಾಮುಖಿ ಢಿಕ್ಕಿ ಆಗಿದೆ.

ಕೊಕ್ಕಡ: ಖಾಸಗಿ ಬಸ್ ನಡಿಗೆ ಬಿದ್ದು ಬೈಕ್ ಸವಾರ ಸಾವು Read More »

ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕು ತಿಟ್ಟು ಯಕ್ಷಗಾನದ ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾದ ಲೀಲಾವತಿ ಬೈಪಾಡಿತ್ತಾಯರು ಶನಿವಾರ(ಡಿ.14) ಸಂಜೆ ನಿಧನರಾದರು. ಅವರು ಪತಿ, ಖ್ಯಾತ ಹಿಮ್ಮೇಳ ವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ ಬೈಪಾಡಿತ್ತಾಯ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಲೀಲಾವತಿ ಬೈಪಾಡಿತ್ತಾಯರು ಸರಿ ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಮನೆಮಾತಾದವರು. ಸಾಮಾಜಿಕ ಪ್ರೋತ್ಸಾಹವಾಗಲೀ, ಮಾಧ್ಯಮಗಳ ಪ್ರಚಾರವಾಗಲೀ ಇಲ್ಲದ ಕಾಲದಲ್ಲೇ ಅವರು ಬೆಳೆದ ಬಗೆ ಅದ್ಭುತ. ಲೀಲಾವತಿ ಬೈಪಾಡಿತ್ತಾಯರ

ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ Read More »

ಮಂಡ್ಯದಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಎಂಜಿನಿಯ‌ರ್ ಆತ್ಮಹತ್ಯೆ!

ಸಮಗ್ರ ನ್ಯೂಸ್ : ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಪೋಲೀಸ್ ಠಾಣಾ ವ್ಯಾಪ್ತಿಯ ಕುರುಬರದೊಡ್ಡಿ ಗ್ರಾಮದಲ್ಲಿ ಜ್ಞಾನೇಷ್ (30) ಎಂಬ ಎಂಜಿನಿಯರ್ ಹೆಬ್ಬೆರಳು ಏತ ನೀರಾವರಿ ಬಳಿ ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜ್ಞಾನೇಷ್ ಶಿಂಷಾ ಏತ ನೀರಾವರಿ ಯೋಜನೆಯ ಬಾಪೂಜಿ ಕನ್ಸೆಕ್ಷನ್ ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಎಂದು ತಿಳಿದು ಬಂದಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ

ಮಂಡ್ಯದಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಎಂಜಿನಿಯ‌ರ್ ಆತ್ಮಹತ್ಯೆ! Read More »

ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ತೀರ್ಥಹಳ್ಳಿ ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್‌ ಪೇದೆ ಪರಶುರಾಮ್ (43) ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ. 2005 ರ ಬ್ಯಾಚ್ ನಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದರು. ತೀರ್ಥಹಳ್ಳಿಯಲ್ಲಿ ಹೈವೇ ಪೆಟ್ರೋಲ್ ವಾಹನದ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.ಇವರ ನಿಧನಕ್ಕೆ ಡಿವೈಎಸ್‌ಪಿ ಗಜಾನನ ವಾಮನ ಸುತಾರ ಸೇರಿ ಪೊಲೀಸ್ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ Read More »

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಗಳ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ‘ಟೀಮ್ ಕಲ್ಲೇಗ ಟೈಗರ್ಸ್‌’ ಹುಲಿ ವೇಷ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗಳಿಬ್ಬರು ಜಾಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. 2023ರ ನ.6ರಂದು ರಾತ್ರಿ ನಡೆದಿದ್ದ ಅಕ್ಷಯ್ ಕಲ್ಲೇಗ (24) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಕ್ಷಯ್ ಅವರ ಸ್ನೇಹಿತ ಚಿಕ್ಕಮೂಡ್ನೂರಿನ ವಿಖ್ಯಾತ್ ಬಿ. ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪುತ್ತೂರು ನಗರ ಪೊಲೀಸರು ಆರೋಪಿಗಳಾದ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಗಳ ಜಾಮೀನು ಅರ್ಜಿ ವಜಾ Read More »

ಬಸ್ಸುಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಲಾರಿ ಪಲ್ಟಿ – ನಾಲ್ವರು ಸ್ಥಳದಲ್ಲೇ ಸಾವು.!

ಸಮಗ್ರ ನ್ಯೂಸ್ : ಶಾಲಾ ಮುಗಿಸಿ ಮನೆಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಬೃಹತ್ ಲಾರಿಯೊಂದು ಪಲ್ಟಿಯಾಗಿರುವ ದಾರುಣ ಘಟನೆ ಕೇರಳ ಪಾಲಕ್ಕಾಡ್‌ನಲ್ಲಿ ನಡೆದಿದೆ.ಮೃತರನ್ನು 14 ವರ್ಷ ವಯಸ್ಸಿನ ಇರ್ಫಾನಾ, ಮಿತಾ, ರಿಯಾ ಮತ್ತು ಆಯೇಶಾ ಎಂದು ಗುರುತಿಸಲಾಗಿದೆ.ಕೋಝಿಕ್ಕೋಡ್-ಪಾಲಕ್ಕಾಡ್ ರಾಜ್ಯ ಹೆದ್ದಾರಿ ಪನಯಂಪದಂನ ಕಲ್ಲಡಿಕೋಡ್ ನಲ್ಲಿ ಸಂಜೆ 4 ಗಂಟೆಗೆ ಈ ಘಟನೆಯಾಗಿದೆ. ಶಾಲೆ ಮುಗಿಸಿ ನಾಲ್ವರು ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಆಗಲು ಬಸ್ ಗಾಗಿ ಕಾಯುತ್ತಿದ್ದರು, ಈ ವೇಳೆ ಸಿಮೆಂಟ್ ಸಾಗಿಸುತ್ತಿದ್ದ

ಬಸ್ಸುಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಲಾರಿ ಪಲ್ಟಿ – ನಾಲ್ವರು ಸ್ಥಳದಲ್ಲೇ ಸಾವು.! Read More »