ಕ್ರೈಂ

ಅಂಬೇಡ್ಕರ್ ಗೆ ಅವಹೇಳನ| ಜೈನ್ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳ ಬಂಧನ

ಸಮಗ್ರ ನ್ಯೂಸ್: ಬೆಂಗಳೂರು ಜಯನಗರದ 9ನೆ ಬ್ಲಾಕ್ ಬಳಿ ಇರುವ ಜೈನ್ ವಿಶ್ವ ವಿದ್ಯಾಲಯದ ಮ್ಯಾನೇಜ್‍ಮೆಂಟ್ ಸ್ಟಡೀಸ್‍ನಲ್ಲಿ ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪರಿಶಿಷ್ಟ ಜಾತಿ ಸೇರಿದಂತೆ ದಲಿತ ಸಮುದಾಯ ಅವಹೇಳನ ಮಾಡಿದ ವಿವಾದಾತ್ಮಕ ಕಿರು ನಾಟಕ ಪ್ರದರ್ಶಿಸಿದ್ದು, ಈ ಸಂಬಂಧ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಸಿ, ಎಸ್‌ಟಿ ಆಯಕ್ಟ್ ಹಾಗೂ ಐಪಿಸಿ 153a, 295a, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿದ್ದಾಪುರ ಠಾಣೆ ಪೊಲೀಸರು ಮಾಹಿತಿ ನೀಡಿದರು. ಘಟನೆ […]

ಅಂಬೇಡ್ಕರ್ ಗೆ ಅವಹೇಳನ| ಜೈನ್ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳ ಬಂಧನ Read More »

ಚೆಕ್ ಬೌನ್ಸ್ ಪ್ರಕರಣ| ಮೂಡಿಗೆರೆ ಶಾಸಕ ಎಂ.ಪಿ‌ ಕುಮಾರಸ್ವಾಮಿಗೆ ಜೈಲು ಶಿಕ್ಷೆ

ಸಮಗ್ರ ನ್ಯೂಸ್: ಚೆಕ್‌ ಬೌನ್ಸ್‌ಗೆ ಸಂಬಂಧಿಸಿದ ಎಂಟು ಪ್ರತ್ಯೇಕ ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು ₹ 1.36 ಕೋಟಿಗೂ ಹೆಚ್ಚಿನ ಮೊತ್ತವನ್ನು ಫಿರ್ಯಾದುದಾರರಿಗೆ ಪಾವತಿಸುವಂತೆ ಘೋಷಿಸಿದೆ. ಇದಕ್ಕೆ ತಪ್ಪಿದಲ್ಲಿ ಪ್ರತಿ ಪ್ರಕರಣದಲ್ಲಿ ತಲಾ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ. ಈ ಕುರಿತ ಎಂಟು ಪ್ರತ್ಯೇಕ ಪ್ರಕರಣಗಳ ಮೇಲಿನ ಆದೇಶವನ್ನು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ

ಚೆಕ್ ಬೌನ್ಸ್ ಪ್ರಕರಣ| ಮೂಡಿಗೆರೆ ಶಾಸಕ ಎಂ.ಪಿ‌ ಕುಮಾರಸ್ವಾಮಿಗೆ ಜೈಲು ಶಿಕ್ಷೆ Read More »

ಕಡಬ: ಬಸ್ – ಕಾರು ಡಿಕ್ಕಿ ಪ್ರಕರಣ| ಅಪಘಾತದ ಸ್ಥಳದಲ್ಲೇ ಸಾವನ್ನಪ್ಪಿದ ಮಗು

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮಗುವೊಂದು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರ ನಡೆದಿದೆ. ಇಂದು ಮಧ್ಯಾಹ್ನ ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಮಗುವೊಂದು ಮೃತಪಟ್ಟಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಕಡಬ: ಬಸ್ – ಕಾರು ಡಿಕ್ಕಿ ಪ್ರಕರಣ| ಅಪಘಾತದ ಸ್ಥಳದಲ್ಲೇ ಸಾವನ್ನಪ್ಪಿದ ಮಗು Read More »

ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿ‌ ಶಾಫಿ‌ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ ಎಸ್ಡಿಪಿಐ| ಪುತ್ತೂರು ‌ಕ್ಷೇತ್ರದಿಂದ ವಿಧಾನಸಭೆಗೆ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್ಡಿಪಿಐ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್​ ಘೋಷಿಸಿದೆ. ಎಸ್​ಡಿಪಿಐನ ಈ ನಡೆ ವಿವಾದ ಕೂಡ ಉಂಟು ಮಾಡಿದೆ. ಸಾಕ್ಷ್ಯಾಧಾರ ಮುಂದಿಟ್ಟು ಎನ್​ಐಎ ಶಾಫಿ ಬೆಳ್ಳಾರೆಯನ್ನು ಬಂಧಿಸಿದೆ. ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ ವಶದಲ್ಲಿದ್ದು, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವುದಾಗಿ ಎಸ್​ಡಿಪಿಐ ಕಾರ್ಯಕರ್ತರ ಸಮಾವೇಶ ದಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯಾಧ್ಯಕ್ಷ

ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿ‌ ಶಾಫಿ‌ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ ಎಸ್ಡಿಪಿಐ| ಪುತ್ತೂರು ‌ಕ್ಷೇತ್ರದಿಂದ ವಿಧಾನಸಭೆಗೆ ಟಿಕೆಟ್ Read More »

ಕಡಬ: ಕೆಎಸ್ಸಾರ್ಟಿಸಿ ಬಸ್ – ಕಾರು ನಡುವೆ ಡಿಕ್ಕಿ ; ನಾಲ್ವರು ಗಂಭೀರ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರ (ಫೆ.13)ದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

ಕಡಬ: ಕೆಎಸ್ಸಾರ್ಟಿಸಿ ಬಸ್ – ಕಾರು ನಡುವೆ ಡಿಕ್ಕಿ ; ನಾಲ್ವರು ಗಂಭೀರ Read More »

ಮಡಿಕೇರಿ: ಹುಲಿ ದಾಳಿಗೆ ಬಾಲಕ ಬಲಿ

ಸಮಗ್ರ ನ್ಯೂಸ್: 12 ವರ್ಷದ ಬಾಲಕನ ಮೇಲೆ ಹುಲಿ ದಾಳಿ ಮಾಡಿದ್ದು, ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆದಿದೆ. ಚೇತನ್(12) ಮೃತ ಬಾಲಕ. ದಾಳಿ ಮಾಡಿದ ಹುಲಿ ಬಾಲಕನನ್ನು ಕೊಂದು ತೊಡೆ ಭಾಗವನ್ನು ತಿಂದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಡಿಕೇರಿ: ಹುಲಿ ದಾಳಿಗೆ ಬಾಲಕ ಬಲಿ Read More »

ತೋಟದ ಬಾವಿಗೆ ಆಯ ತಪ್ಪಿ ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ತೋಟದ ಬಾವಿಗೆ ಆಯತಪ್ಪಿ ಬಿದ್ದು ಮಗು ಮೃತಪಟ್ಟ ಧಾರುಣ ಘಟನೆ ಉ.ಕನ್ನಡ ಜಿಲ್ಲೆಯ ಹೊನ್ನಾವರದಿಂದ ವರದಿಯಾಗಿದೆ. ಹೊನ್ನಾವರ ತಾಲೂಕಿನ ಕಡ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಂದೂರಿನ ನಾಗಭೂಷಣ ದಯಾನಂದ ಹೆಗಡೆ ಎನ್ನುವ ಒಂದನೆ ತರಗತಿ ವಿದ್ಯಾರ್ಥಿ ತಮ್ಮ ಮನೆಯ ತೋಟದ ಸಮೀಪ ನಾಯಿಯೊಂದಿಗೆ ಆಟ ಆಡುತ್ತಾ ತೆರಳಿ ಆಕಸ್ಮಿಕವಾಗಿ ತೆರೆದ ಬಾವಿಯಲ್ಲಿ ಬಿದ್ದಿದ್ದಾನೆ. ಮಗುವನ್ನು ಕುಟುಂಬದವರು ತೋಟದಲ್ಲಿ ಹುಡುಕಿ ಬಾವಿಯ ಕಡೆ ನೋಡಿದಾಗ ದುರಂತ ಬೆಳಕಿಗೆ ಬಂದಿದೆ. ತೆರೆದ ಬಾವಿಯಾಗಿದ್ದು, ಬಾವಿಯಲ್ಲಿ ನೀರು ಇದ್ದ

ತೋಟದ ಬಾವಿಗೆ ಆಯ ತಪ್ಪಿ ಬಿದ್ದು ಬಾಲಕ ಸಾವು Read More »

ಪಾಂಗಾಳ‌ ಶರತ್ ಶೆಟ್ಟಿ ಮರ್ಡರ್| ಆರೋಪಿಗಳ ಪತ್ತೆಗಾಗಿ ದೈವದ ಮೊರೆ ಹೋದ ಕುಟುಂಬ

ಸಮಗ್ರ ನ್ಯೂಸ್: ಕಳೆದ ರವಿವಾರ ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನೂ ಶೀಘ್ರ ಪೊಲೀಸರ ಕೈಗೆ ಸಿಲುಕಿಸುವಂತೆ ಮೃತ ಶರತ್‌ ಶೆಟ್ಟಿ ಕುಟುಂಬದವರು ಶುಕ್ರವಾರ ರಾತ್ರಿ ದೈವದ ಮೊರೆ ಹೋಗಿದ್ದಾರೆ. ಪಾಂಗಾಳ ಪರಿಸರದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲನಾಗಿರುತ್ತಿದ್ದ ಶರತ್‌ ಶೆಟ್ಟಿ ರವಿವಾರ ಪಾಂಗಾಳ ಪಡ್ಪುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದು, ಆ ವೇಳೆ ಮಾತುಕತೆಗೆಂದು ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಕೊಲೆ ಪ್ರಕರಣದ

ಪಾಂಗಾಳ‌ ಶರತ್ ಶೆಟ್ಟಿ ಮರ್ಡರ್| ಆರೋಪಿಗಳ ಪತ್ತೆಗಾಗಿ ದೈವದ ಮೊರೆ ಹೋದ ಕುಟುಂಬ Read More »

ಟರ್ಕಿ‌ ಭೂಕಂಪ; ಮೂತ್ರ ಕುಡಿದು 94 ಗಂಟೆಗಳ ಕಾಲ ಅವಶೇಷಗಳ ಅಡಿಯಲ್ಲಿ ಬದುಕುಳಿದ ಬಾಲಕ

ಸಮಗ್ರ ನ್ಯೂಸ್: ಟರ್ಕಿಯ ಭೀಕರ ಭೂಕಂಪದಲ್ಲಿ ಸಿಲುಕಿರುವವರ ರಕ್ಷಣೆ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಹಲವರನ್ನು ರಕ್ಷಿಸಲಾಗುತ್ತಿದೆ. 94‌ ಗಂಟೆಗಳ ಕಾಲ ಅವಶೇಷಗಳಡಿಯಲ್ಲಿ ಸಿಲುಕಿದ್ದ ಅದ್ನಾನ್ ಮುಹಮ್ಮದ್ ಕೊರ್ಕುಟ್ ಎಂಬ 17 ವರ್ಷದ ಬಾಲಕನನ್ನು ರಕ್ಷಣಾ ತಂಡಗಳು ರಕ್ಷಿಸಿದ್ದು, ಆತನ ಕರುಣಾಜನಕ ಕತೆಯನ್ನು ಮಾಧ್ಯಮಗಳು ವರದಿ ಮಾಡಿದೆ. ಸುಮಾರು 94 ಗಂಟೆಗಳ ಕಾಲ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದ ಆತ ತನ್ನ ಕುಟುಂಬದ ಮನೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಭೂಕಂಪ ಸಂಭವಿಸಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಆತ ತನ್ನ ಸ್ವಂತ ಮೂತ್ರವನ್ನು ಕುಡಿದು ಬದುಕಿದ್ದೇನೆ

ಟರ್ಕಿ‌ ಭೂಕಂಪ; ಮೂತ್ರ ಕುಡಿದು 94 ಗಂಟೆಗಳ ಕಾಲ ಅವಶೇಷಗಳ ಅಡಿಯಲ್ಲಿ ಬದುಕುಳಿದ ಬಾಲಕ Read More »

ಸುಳ್ಯ: ನದಿಯಲ್ಲಿ ಮುಳುಗಿ ಯುವಕರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯ ನಗರ ಸಮೀಪದ ದೊಡ್ಡೇರಿಯಲ್ಲಿ ನಡೆದಿದೆ. ಸ್ಥಳೀಯರು ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರಾದರೂ ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದರು. ಮೃತದೇಹಗಳನ್ನು ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ. ಪುತ್ತೂರಿನ ಕೌಡಿಚ್ಚಾರು ಪರಿಸರದ ಆರು ಯುವಕರು ಕಾರಿನಲ್ಲಿ ಸುಳ್ಯಕ್ಕೆ ಬಂದು ಓಡಬಾಯಿ ತೂಗು ಸೇತುವೆ ಬಳಿ ಕಾರು ನಿಲ್ಲಿಸಿ ದೊಡ್ಡೇರಿಯವರೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಈಜಲೆಂದು ಇಳಿದಿದ್ದರು. ಅವರಲ್ಲೋರ್ವ ನೀರುಪಾಲಾದಾಗ ರಕ್ಷಿಸಲು ಹೋದ ಮತ್ತೊಬ್ಬ ಕೂಡಾ

ಸುಳ್ಯ: ನದಿಯಲ್ಲಿ ಮುಳುಗಿ ಯುವಕರಿಬ್ಬರು ದುರ್ಮರಣ Read More »