ಕ್ರೈಂ

ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ಕಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್| ಖಾತೆಯಲ್ಲಿದ್ದ 4.15 ಲಕ್ಷ ರೂ. ಗುಳುಂ

ಸಮಗ್ರ ನ್ಯೂಸ್: ಮೊಬೈಲ್ ಗೆ ಬಂದ ಪ್ಯಾನ್ (PAN)ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜ.21ರಂದು ಘಟನೆ ನಡೆದಿದ್ದು, ಬುಧವಾರ ಸಿಇಎನ್(CEN) ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್‌ಎಂಎಸ್ ಬಂದಿದೆ. ಎಸ್‌ಬಿಐ ಯೋನೋ ಅಪ್ಲಿಕೇಷನ್ ನಲ್ಲಿ […]

ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ಕಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್| ಖಾತೆಯಲ್ಲಿದ್ದ 4.15 ಲಕ್ಷ ರೂ. ಗುಳುಂ Read More »

ಬಹುಭಾಷಾ ನಟಿ, ಟಾಪ್ ಹೀರೋಯಿನ್ ಜಮುನಾ ಇನ್ನಿಲ್ಲ

ಸಮಗ್ರ ನ್ಯೂಸ್: 60-70ರ ದಶಕದಲ್ಲಿ ಟಾಪ್ ಹೀರೋಯಿನ್ ಆಗಿದ್ದ ಹಿರಿಯ ನಟಿ ಜಮುನಾ ವಿಧಿವಶರಾಗಿದ್ದಾರೆ. ಜಮುನಾ ಅವರಿಗೆ 86 ವರ್ಷ ವಯಸ್ಸಾಗಿತ್ತು, ವರದಿಗಳ ಪ್ರಕಾರ, ಜಮುನಾ ಇಂದು ತನ್ನ ನಿವಾಸದಲ್ಲಿ ಕೊನೆಯುಸಿರೆಳೆದರು. ಜಮುನಾ ಅವರಿಗೆ ಪುತ್ರ ವಂಶಿ ಜುಲೂರಿ ಮತ್ತು ಮಗಳು ಶ್ರವಂತಿ ಇದ್ದಾರೆ. ಅವರ ಪತಿ ಜುಲೂರಿ ರಮಣರಾವ್ ಪ್ರಾಧ್ಯಾಪಕರಾಗಿದ್ದರು ಮತ್ತು ಅವರು 2014 ರಲ್ಲಿ ನಿಧನರಾಗಿದ್ದರು. ಜಮುನಾ ಎನ್ಟಿಆರ್, ಎಎನ್‌ಆರ್, ಕೃಷ್ಣ, ಶೋಭನ್ ಬಾಬು ಮತ್ತು ಇತರ ಅನೇಕ ಸ್ಟಾರ್ ನಟರೊಂದಿಗೆ ನಟಿಸಿದ್ದಾರೆ. ಅವರು

ಬಹುಭಾಷಾ ನಟಿ, ಟಾಪ್ ಹೀರೋಯಿನ್ ಜಮುನಾ ಇನ್ನಿಲ್ಲ Read More »

ಕಾಂಗ್ರೆಸ್ ಅಮಾಯಕ ಕಾರ್ಯಕರ್ತರ ಮೇಲಿನ ಕೇಸು ಹಿಂಪಡೆಯಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಧರಣಿ

ಸಮಗ್ರ ನ್ಯೂಸ್: ಇತ್ತೀಚೆಗೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಬುಧವಾರ ರಾತ್ರಿ ತೀರ್ಥಹಳ್ಳಿಯ ಡಿವೈಎಸ್ಪಿ ಕಚೇರಿ ಎದುರು ಧರಣಿ ನಡೆಸಿದರು. ಮೂವರು ಅಮಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ ರತ್ನಾಕರ್ ಅವರು, ಪ್ರಕರಣ ಹಿಂಪಡೆಯುವಂತೆ ಹಾಗೂ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಮಂಗಳವಾರ ರಾತ್ರಿ ನಡೆದ ದಾಳಿಯಲ್ಲಿ ಭಾಗಿಯಾಗದ ಮೂವರಿಗೆ ಪೊಲೀಸರು ಬಿ-ರಿಪೋರ್ಟ್ ನೀಡಬೇಕು ಎಂದು ರತ್ನಾಕರ್ ಒತ್ತಾಯಿಸಿದರು.

ಕಾಂಗ್ರೆಸ್ ಅಮಾಯಕ ಕಾರ್ಯಕರ್ತರ ಮೇಲಿನ ಕೇಸು ಹಿಂಪಡೆಯಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಧರಣಿ Read More »

ಸುಳ್ಯ: ಎರಡು ಪ್ರತ್ಯೇಕ ಪ್ರಕರಣ| ವೃದ್ಧ ಮತ್ತು ಗರ್ಭಿಣಿ ಮಹಿಳೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಓರ್ವ ವೃದ್ಧ ಹಾಗೂ ಗರ್ಭಿಣಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ-1: ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರತ್ ಎಂಬವರ ಪತ್ನಿ ಮಲ್ಲಿಕಾ (26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಗರ್ಭಿಣಿ. ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದು, ಗಣರಾಜ್ಯೋತ್ಸವ ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ

ಸುಳ್ಯ: ಎರಡು ಪ್ರತ್ಯೇಕ ಪ್ರಕರಣ| ವೃದ್ಧ ಮತ್ತು ಗರ್ಭಿಣಿ ಮಹಿಳೆ ಆತ್ಮಹತ್ಯೆ Read More »

ಅಮೇರಿಕಾದಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಭಾರತೀಯ ಮಹಿಳೆ ಸಾವು

ಸಮಗ್ರ ನ್ಯೂಸ್: ಅಮೆರಿಕದ ಸೌತ್ ಲೇಕ್ ಯೂನಿಯನ್‌ನಲ್ಲಿ ಸಿಯಾಟಲ್ ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದು 23 ವರ್ಷದ ಭಾರತೀಯ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಸಿಯಾಟಲ್ ಪೊಲೀಸ್ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಸೋಮವಾರ ರಾತ್ರಿ ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಹಾರ್ಬರ್‌ವ್ಯೂ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.ಕಿಂಗ್ ಕೌಂಟಿ ಮೆಡಿಕಲ್ ಎಕ್ಸಾಮಿನರ್ ಕಚೇರಿಯು ಮಹಿಳೆಯನ್ನು ಜಾಹ್ನವಿ ಕಂದುಲಾ ಎಂದು ಗುರುತಿಸಿದೆ ಎಂದು ದಿ ಸಿಯಾಟಲ್ ಟೈಮ್ಸ್ ವರದಿ ಮಾಡಿದೆ. ತೀವ್ರ

ಅಮೇರಿಕಾದಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಭಾರತೀಯ ಮಹಿಳೆ ಸಾವು Read More »

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಗ್ ಶಾಕ್| ಬಿಜೆಪಿ ಕಾರ್ಯಕರ್ತರಿಂದಲೇ ”ಗೋ ಬ್ಯಾಕ್ ಆರ್. ಅಶೋಕ್” ಅಭಿಯಾನ|

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕಗೊಳಿಸಲಾಗಿದ್ದು, ಸಚಿವರ ಬದಲಾವಣೆಗೆ ಇದೀಗ ಜಿಲ್ಲೆಯ ಬಿಜೆಪಿ ಮುಖಂಡರಿಂದ ಆಕ್ರೋಶ ವ್ಯಕ್ತವಾಗಿದೆ. ಸಚಿವ ಗೋಪಾಲಯ್ಯ ಅವರನ್ನು ಬದಲಿಸಿ ಆರ್.ಅಶೋಕ್ ಅವರಿಗೆ ಮಂಡ್ಯ ಉಸ್ತುವಾರಿಯನ್ನು ನೀಡಲಾಗಿದೆ. ಅಶೋಕ್ ಅವರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಅಲ್ಲದೇ, ಜಿಲ್ಲೆಯವರೇ ಆದ ನಾರಾಯಣ ಗೌಡ ಅವರನ್ನ ಉಸ್ತುವಾರಿ ಸಚಿವರನ್ನಾಗಿ ಮಾಡುವಂತೆ ಕೆಲವು ಬಿಜೆಪಿ ಮುಖಡರು

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಗ್ ಶಾಕ್| ಬಿಜೆಪಿ ಕಾರ್ಯಕರ್ತರಿಂದಲೇ ”ಗೋ ಬ್ಯಾಕ್ ಆರ್. ಅಶೋಕ್” ಅಭಿಯಾನ| Read More »

ಸ್ವಪಕ್ಷೀಯ ಕಾರ್ಯಕರ್ತನ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ| ಆರೋಪಿ ಹಾಗೂ ಕಾರು ಚಾಲಕ ಅರೆಸ್ಟ್

ಸಮಗ್ರ ನ್ಯೂಸ್: ಬಿಜೆಪಿ ಮುಖಂಡರೊಬ್ಬರು ಸ್ವಪಕ್ಷೀಯ ಕಾರ್ಯಕರ್ತನನ್ನು ಅಟ್ಟಾಡಿಸಿಕೊಂಡು ಹೊಡೆದಿರುವಂತಹ ಘಟನೆ ನಿನ್ನೆ(ಜ.25) ಅರಸೀಕೆರೆಯಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಅರಸೀಕೆರೆ ಪೊಲೀಸರಿಂದ ಬಿಜೆಪಿ ಘಟಕದ ಉಪಾಧ್ಯಕ್ಷ ವಿಜಯ್ ಕುಮಾರ್​ ಹಾಗೂ ಕಾರು ಚಾಲಕನನ್ನು ಬಂಧಿಸಿದ್ದಾರೆ. ಕೊಲೆ ಯತ್ನ ಆರೋಪದಡಿ ಐಪಿಸಿ ಸೆಕ್ಷನ್​ 307ರಡಿ ಕೇಸ್ ದಾಖಲು ಮಾಡಲಾಗಿದೆ. ನಿನ್ನೆ(ಜ.25) ಸಂಜೆ ನಡುರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತ ಕುಮಾರ್​ ಮೇಲೆ ದೊಣ್ಣೆಯಿಂದ ವಿಜಯ್ ಕುಮಾರ್​ ಮಾರಣಾಂತಿಕ ಹಲ್ಲೆ ಮಾಡಿದ್ದ. ಬಿಜೆಪಿ ಕಾರ್ಯಕರ್ತ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಕುಮಾರ್​ಗೆ

ಸ್ವಪಕ್ಷೀಯ ಕಾರ್ಯಕರ್ತನ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ| ಆರೋಪಿ ಹಾಗೂ ಕಾರು ಚಾಲಕ ಅರೆಸ್ಟ್ Read More »

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹರಿಪ್ರಿಯಾ- ವಸಿಷ್ಠ ಸಿಂಹ

ಸಮಗ್ರ ನ್ಯೂಸ್: ಚಲನಚಿತ್ರ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಮದುವೆ ನಗರದ ಊಟಿ ರಸ್ತೆಯಲ್ಲಿರುವ ಸಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗುರುವಾರ ಅದ್ಧೂರಿಯಾಗಿ ನೆರವೇರಿತು. ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿಗೆ ಬಂಧುಗಳು, ಕಲಾವಿದರು, ರಾಜಕಾರಣಿಗಳು ಶುಭ ಹಾರೈಸಿದರು. ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್ ನವ ದಂಪತಿಗೆ ಶುಭ ಕೋರಿದರು. ನಟರಾದ ಧನಂಜಯ್, ಕೃಷ್ಣ, ಮಾಸ್ಟರ್ ಆನಂದ್, ನಟಿ ಅಮೃತಾ ಅಯ್ಯಂಗಾರ್, ಸಂಗೀತ ನಿರ್ದೇಶಕ ಗುರುಕಿರಣ್ ಮೊದಲಾದವರು ಶುಭಾಶಯ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್,

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹರಿಪ್ರಿಯಾ- ವಸಿಷ್ಠ ಸಿಂಹ Read More »

ತಂದೆಯ ಸಾವಿನ ಬಳಿಕ ತಾಯಿಗೆ ಮರುಮದುವೆ ಮಾಡಿಸಿದ ಮಗ!!

ಸಮಗ್ರ ನ್ಯೂಸ್: ಸಮಾಜದ ಕಟ್ಟುಪಾಡುಗಳಿಗೆ ಸೆಡ್ಡು ಹೊಡೆದು ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿಗೆ ಮರುಮದುವೆ ಮಾಡಿಸಿದ್ದಾನೆ. ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕೊಲ್ಹಾಪುರ ಜಿಲ್ಲೆಯ ಯುವರಾಜ್ ಶೆಲೆ ಎಂಬಾತ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ತುಂಬಾ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. 45 ವರ್ಷ ವಯಸ್ಸಿನ ತಾಯಿಗೆ ಸಂಗಾತಿಯ ಅಗತ್ಯವನ್ನು ಅರಿತ ಯುವರಾಜ್‌ ವರನನ್ನು ಹುಡುಕಿ ತಾನೇ ಮುಂದೆ ನಿಂತು ಮರು ಮದುವೆ

ತಂದೆಯ ಸಾವಿನ ಬಳಿಕ ತಾಯಿಗೆ ಮರುಮದುವೆ ಮಾಡಿಸಿದ ಮಗ!! Read More »

ಸೊಸೆಯ ವೈಧವ್ಯ ಸಹಿಸದ ಮರುಮದುವೆ ಮಾಡಿಸಿದ ಮಾಜಿ ಶಾಸಕ

ಸಮಗ್ರ ನ್ಯೂಸ್: ಮದುವೆಯಾದ ಕೆಲವೇ ವರ್ಷಗಳಲ್ಲಿ ಕಾಯಿಲೆಯಿಂದ ಮಗ ತೀರಿಕೊಂಡ ಬಳಿಕ ಸೊಸೆಗೆ ಬೇರೊಬ್ಬನ ಜೊತೆ ಮರುವಿವಾಹ ಮಾಡಿಸುವ ಮೂಲಕ ಒಡಿಶಾದ ಮಾಜಿ ಶಾಸಕರೊಬ್ಬರು ಮಾದರಿಯಾಗಿದ್ದಾರೆ. ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಶಾಸಕರಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಒಡಿಶಾದ ಧೆನಂಕನಲ್​ ಜಿಲ್ಲೆಯ ಗಂಡಿಯಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಬಿನ್ ನಂದಾ ಅವರ ಪುತ್ರ ಸಂಬಿತ್​ ಜೊತೆ ಮಧುಸ್ಮಿತಾ ಎಂಬ ಯುವತಿಗೆ ಮದುವೆ ನಿಶ್ಚಯ ಮಾಡಿ, ಅದ್ಧೂರಿಯಾಗಿ ಮದುವೆ ಮಾಡಿದ್ದರು. ಆದರೆ, ಕರೊನಾದಿಂದ

ಸೊಸೆಯ ವೈಧವ್ಯ ಸಹಿಸದ ಮರುಮದುವೆ ಮಾಡಿಸಿದ ಮಾಜಿ ಶಾಸಕ Read More »