ಕ್ರೈಂ

ಸುಬ್ರಹ್ಮಣ್ಯ: ಮರದಿಂದ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರಾಮಪತ್ರೆ ಕೊಯ್ಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಬಳ್ಪದಲ್ಲಿ ನಡೆದಿದೆ. ಇಲ್ಲಿನ ಬಳ್ಪ ಗ್ರಾಮದ ಕುಂಜತ್ತಾಡಿ ಮನೆ ದಾಮೋದರ ಗೌಡ (57) ಮೃತ ದುರ್ದೈವಿ. ಇವರು ಮನೆಯ ಬಳಿಯಿದ್ದ ರಾಮಪತ್ರೆ ಕೊಯ್ಯಲು ಮರವನ್ನು ಹತ್ತಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಅಂಬುಲೆನ್ಸ್ ಮೂಲಕ ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತು. ಈ ವೇಳೆ ವೈದ್ಯರು ಪರೀಕ್ಷಿಸಿ […]

ಸುಬ್ರಹ್ಮಣ್ಯ: ಮರದಿಂದ ಬಿದ್ದು ವ್ಯಕ್ತಿ ಸಾವು Read More »

ನಿಮ್ಮನ್ನು ನಂಬಿ ಇನ್ನೂ ಕೋರ್ಟ್ ಗೆ ಅಲೆಯುತ್ತಿದ್ದೇವೆ| ಪರೇಶ್ ಮೇಸ್ತಾ ಪ್ರಕರಣ ಸಂಬಂಧ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಪರೇಶ್‌ ಮೇಸ್ತಾ ಸಾವು ಪ್ರಕರಣಕ್ಕೆ ಸಿಬಿಐ ಬಿ ರಿಪೋರ್ಟ್‌ ಸಲ್ಲಿಸಿದ್ದರೂ ಅದರ ಕಾವು ಮಾತ್ರ ಇನ್ನೂ ಆರಿಲ್ಲ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಇನ್ನೂ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದು, ಈಗ ಕುಮಟಾ ಶಾಸಕ ದಿನಕರ ಶೆಟ್ಟಿ ವಿರುದ್ಧ ತಿರುಗಿಬಿದ್ದಿದ್ದಾರೆ. ಹೊನ್ನಾವರದ ಶರಾವತಿ ಸರ್ಕಲ್‌ನಲ್ಲಿ‌ ಸೇರಿದ ಹಿಂದು ಕಾರ್ಯಕರ್ತರು, ಬಿಜೆಪಿ ವಿರುದ್ಧ ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ. ಇಲ್ಲಿನ ಮೀನುಗಾರರು, ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ವಿವಿಧ ಧರ್ಮದ, ಜಾತಿಗಳ ಯುವಕರು

ನಿಮ್ಮನ್ನು ನಂಬಿ ಇನ್ನೂ ಕೋರ್ಟ್ ಗೆ ಅಲೆಯುತ್ತಿದ್ದೇವೆ| ಪರೇಶ್ ಮೇಸ್ತಾ ಪ್ರಕರಣ ಸಂಬಂಧ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು Read More »

ಶಿಲ್ಪಕಲೆಯಲ್ಲೂ ಬಿಂಬಿತವಾದ ಧರ್ಮ! ಗಾಂಧಿಪ್ರತಿಮೆ ವಿರೂಪ; ಅನಾವರಣ ಕಾರ್ಯಕ್ರಮ ರದ್ದು

ಸಮಗ್ರ ನ್ಯೂಸ್: ನೂತನವಾಗಿ ನಿರ್ಮಿಸಲಾದ ಗಾಂಧಿ ಪ್ರತಿಮೆಯೇ ವಿರೂಪಗೊಂಡಿದ್ದರಿಂದ ಇಂದು(ಜ.26) ನಡೆಯಬೇಕಿದ್ದ ಗಾಂಧಿಭವನ ಉದ್ಘಾಟನೆ ಕಾರ್ಯಕ್ರಮ ರದ್ದುಗೊಂಡಿದೆ. ಹಾಸನ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಲವು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡುತ್ತಿದ್ದು, ಹಾಸನದಲ್ಲಿ ಸುಮಾರು 23 ಲಕ್ಷ ರೂ.ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣಗೊಂಡಿದೆ. ಅಲ್ಲಿ ಗಾಂಧಿ ಪ್ರತಿಮೆಯನ್ನೂ ಸ್ಥಾಪಿಸಲಾಗಿದೆ. ಆದರೆ ಈ ಪ್ರತಿಮೆ ವಿರೂಪಗೊಂಡಿರುವುದು ವಿವಾದಾತ್ಮಕವಾಗಿ ಪರಿಣಮಿಸಿದ್ದು, ನಾಳೆ ನಡೆಯಬೇಕಿದ್ದ ಉದ್ಘಾಟನೆ ಕಾರ್ಯಕ್ರಮ ರದ್ದುಗೊಂಡಿದೆ. ಶಿಲ್ಪಕಲೆಯ ತವರು ಎನ್ನಲಾಗಿರುವ

ಶಿಲ್ಪಕಲೆಯಲ್ಲೂ ಬಿಂಬಿತವಾದ ಧರ್ಮ! ಗಾಂಧಿಪ್ರತಿಮೆ ವಿರೂಪ; ಅನಾವರಣ ಕಾರ್ಯಕ್ರಮ ರದ್ದು Read More »

ಕೊಟ್ಟಿಗೆಹಾರ:ಬಸ್ಸು , ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕಾಲೇಜು ಬಸ್ಸು ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ73 ಮೂಡಿಗೆರೆ ತಾಲೂಕಿನ ಚಕ್ ಮಕ್ಕಿ ಬಳಿ ಸಂಭವಿಸಿದೆ. ಉಡುಪಿಯಿಂದಾ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್ ಹಾಗೂ ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ಮುಖಮರವಖಿನಡಿಕ್ಕಿಯಾಗಿದೆ. ಈ ವೇಳೆ ಬಸ್ಸಿನ ಚಾಲಕನಿಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಉಡುಪಿಯ ದಂತ ಕಾಲೇಜು ವಿದ್ಯಾರ್ಥಿಗಳಾಗಿದ್ದು ಅವರು ಸಣ್ಣ ಪುಟ್ಟ ಗಾಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೊಟ್ಟಿಗೆಹಾರ:ಬಸ್ಸು , ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿ Read More »

ಹವಾಮಾನ ವೈಪರೀತ್ಯ; ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಕಾಪ್ಟರ್ ತುರ್ತು ಭೂಸ್ಪರ್ಶ

ಸಮಗ್ರ ನ್ಯೂಸ್: ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಈರೋಡ್’ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರವಿ ಶಂಕರ್ ಗುರೂಜಿ ಹಾಗೂ ಇತರ ಮೂವರಿದ್ದ ಹೆಲಿಕಾಪ್ಟರ್ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಬುಡಕಟ್ಟು ಕುಗ್ರಾಮ ಉಕಿನಿಯಂನಲ್ಲಿ ಬುಧವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಅನ್ನು ಪೈಲಟ್ ಸೇಫ್ ಆಗಿ ಲ್ಯಾಂಡ್ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. ಹೆಲಿಕಾಪ್ಟರ್ ನಲ್ಲಿ ಗುರೂಜಿ

ಹವಾಮಾನ ವೈಪರೀತ್ಯ; ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಕಾಪ್ಟರ್ ತುರ್ತು ಭೂಸ್ಪರ್ಶ Read More »

ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಪಲ್ಟಿ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ತಮಿಳುನಾಡಿನಿಂದ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರಿದ್ದ ಬಸ್ ಪಾಲರ್ ಬಳಿ ಬುಧವಾರ ಬೆಳಿಗ್ಗೆ ಉರುಳಿ ಬಿದ್ದಿದ್ದು, 15 ಜನರು ಗಾಯಗೊಂಡಿದ್ದಾರೆ. ತಮಿಳುನಾಡಿನಿಂದ ಪ್ರವಾಸ ಮುಗಿಸಿಕೊಂಡು ಪಾಲಾರ್ ಮೂಲಕ ರಾಜ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಪಾಲಾರ್ ರಸ್ತೆಯ ಎರಡನೇ ತಿರುವು ಬಳಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಒಟ್ಟು 50 ಜನರಿದ್ದು, ಈ ಪೈಕಿ 15 ಜನರಿಗೆ ಗಾಯಗಳಾಗಿವೆ.

ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಪಲ್ಟಿ; ಹಲವರಿಗೆ ಗಾಯ Read More »

ಧರ್ಮಸ್ಥಳ: ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ ಧರ್ಮಸ್ಥಳದಲ್ಲಿ ಜ.25ರಂದು ಬೆಳಗ್ಗೆ ನಡೆದಿದೆ. ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಖಾಸಗಿ ಲಾಡ್ಜ್ ಗಳಲ್ಲಿ ಐಡಿ ಕಾರ್ಡ್ ನೀಡಿ ರೂಂ ಪಡೆಯಲು ಯತ್ನಿಸುತ್ತಿದ್ದು ಆದ್ರೆ ಯಾವ ಲಾಡ್ಜ್ ಮಾಲೀಕರು ಕೂಡ ಅನ್ಯಕೋಮಿನ ಜೋಡಿ ಅಗಿದ್ದರಿಂದ ರೂಂ ನೀಡದೆ ವಾಪಸ್ ಕಳುಹಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಜ.25 ರಂದು ಬೆಳಗ್ಗೆ ಇಬ್ಬರನ್ನು ಹಿಡಿದು

ಧರ್ಮಸ್ಥಳ: ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ Read More »

ತಾಯಿ-ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಟ್ವೀಸ್ಟ್|ಮಗಳನ್ನೇ ಹತ್ಯೆ ಮಾಡಿದ ತಾಯಿ

ಸಮಗ್ರ ನ್ಯೂಸ್: ರವಿವಾರ ರಾತ್ರಿ ತಾಯಿ ಹಾಗೂ ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಿಗೂಢ ಘಟನೆಯನ್ನು ಭಾಗಶ: ಬೇಧಿಸುವಲ್ಲಿ ಬೇಡಡ್ಕ ಪೊಲೀಸರು ಸಫಲರಾಗಿದ್ದು, ತಾಯಿ ಮಗಳನ್ನು ಹತ್ಯೆ ಮಾಡಿದ ಬಳಿಕ ಆಕೆ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸ್‌ ತನಿಖೆಯಲ್ಲಿ ಮೇಲ್ನೋಟಕ್ಕೆ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಕಾಸರಗೋಡಿನ ಕುಂಡಂಕುಳಿ ನೀರ್ಕಯದ ಟೂರಿಸ್ಟ್ ಚಾಲಕ ಚಂದ್ರನ್‌ರ ಪತ್ನಿ ನಾರಾಯಣಿ (45) ಮತ್ತು ಅವರ ಪುತ್ರಿ ಏಳನೇ ತರಗತಿ ವಿದ್ಯಾರ್ಥಿನಿ ಶ್ರೀನಂದ (12)ಳ ಮೃತ ದೇಹ ನೇಣು ಬಿಗಿದ

ತಾಯಿ-ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಟ್ವೀಸ್ಟ್|ಮಗಳನ್ನೇ ಹತ್ಯೆ ಮಾಡಿದ ತಾಯಿ Read More »

ದೆಹಲಿಯಲ್ಲಿ ಪ್ರಬಲ ಭೂಕಂಪ; ಮನೆ ಬಿಟ್ಟು ಹೊರಗೋಡಿದ ಜನ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ದೆಹಲಿ ಹಾಗೂ ಉತ್ತರಾಖಂಡ್​ನ ಹಲವೆಡೆ 35 ಸೆಕೆಂಡ್​ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 5.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಇದರಿಂದ ದೆಹಲಿಯಲ್ಲಿ ಜನರು ಭಯ ಭಯಗೊಂಡು ಮನೆ, ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿಗಳು ಹೊರಬರಬೇಕಿದ್ದು, ಪರಿಶೀಲನೆ ಪ್ರಗತಿಯಲ್ಲಿದೆ.

ದೆಹಲಿಯಲ್ಲಿ ಪ್ರಬಲ ಭೂಕಂಪ; ಮನೆ ಬಿಟ್ಟು ಹೊರಗೋಡಿದ ಜನ Read More »

ಕಾಸರಗೋಡು: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ| ಚಾಲಕರಿಬ್ಬರು ಗಂಭೀರ

ಸಮಗ್ರ ನ್ಯೂಸ್: ಎರಡು ಲಾರಿಗಳ ನಡುವೆ ಉಂಟಾದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ಸಂಭವಿಸಿದೆ. ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ

ಕಾಸರಗೋಡು: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ| ಚಾಲಕರಿಬ್ಬರು ಗಂಭೀರ Read More »