ಕ್ರೈಂ

ಕರ್ತವ್ಯದ ವೇಳೆಯಲ್ಲಿ ಹೃದಯಾಘಾತ| ಉಪನ್ಯಾಸಕಿ ಸಾವು

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ 27 ವರ್ಷದ ಅತಿಥಿ ಉಪನ್ಯಾಸಕಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಅನುಷಾ ಶೆಟ್ಟಿ (27) ಹೃದಯಾಘಾತದಿಂದ ಮೃತಪಟ್ಟ ಯುವತಿ. ಈಕೆ ಕಾರವಾರ ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ 6 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಕರ್ತವ್ಯ ನಿರತ ವೇಳೆಯಲ್ಲಿಯೇ ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಕರ್ತವ್ಯದ ವೇಳೆಯಲ್ಲಿ ಹೃದಯಾಘಾತ| ಉಪನ್ಯಾಸಕಿ ಸಾವು Read More »

ದಟ್ಟ ಅಡವಿಯಲ್ಲಿ ವೃದ್ಧೆಯನ್ನು ಬಿಟ್ಟು ಹೋದ ಕುಟುಂಬಸ್ಥರು!!

ಸಮಗ್ರ ನ್ಯೂಸ್: ದಟ್ಟ ಅರಣ್ಯದಲ್ಲಿ 90 ವರ್ಷದ ವೃದ್ಧೆಯೊಬ್ಬರನ್ನು ಕುಟುಂಬಸ್ಥರು ಬಿಟ್ಟು ಹೋದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ನಿತ್ರಾಣ ಸ್ಥಿತಿಯಲ್ಲಿ ವೃದ್ಧೆ ಸೋಮವಾರ ಪತ್ತೆಯಾಗಿದ್ದು, ಕುಟುಂಬದವರೇ ಅವರನ್ನು ಅರಣ್ಯದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಗ್ರಾಮದ ಜನ ತಿಳಿಸಿದ್ದಾರೆ. ರುಮೇವಾಡಿ ಗ್ರಾಮದ ರೈತ ರಾಜು ಘಾಡಿ ಎನ್ನುವವರು ಸೋಮವಾರ ಕಾಡಿನ ದಾರಿಯಲ್ಲಿ ಹೊರಟಿದ್ದರು. ಆಗ ವೃದ್ಧೆ ನರಳುವುದು ಕೇಳಿಸಿತು. ಹತ್ತಿರ ಹೋಗಿ ನೋಡಿದ ಅವರು ಅಜ್ಜಿಗೆ ನೀರು ಕುಡಿಸಿ ಉಪಚರಿಸಿದರು. ತಮ್ಮ ಟ್ರ್ಯಾಕ್ಟರ್‌ನಲ್ಲಿ ಅವರನ್ನು

ದಟ್ಟ ಅಡವಿಯಲ್ಲಿ ವೃದ್ಧೆಯನ್ನು ಬಿಟ್ಟು ಹೋದ ಕುಟುಂಬಸ್ಥರು!! Read More »

ಕಾವೂರು ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಬೆಂಕಿಗಾಹುತಿ

ಸಮಗ್ರ ನ್ಯೂಸ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ಕಾವೂರು ಸಮೀಪದ ಪಳನೀರ್ ಎಂಬಲ್ಲಿ ಜರುಗಿದೆ. ಇಂದಿರಾ ಎಂಬವರ ಮನೆ ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿದ್ದು ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ಸೊತ್ತುಗಳ ಸಹಿತ ಬೆಲೆಬಾಳುವ ಸೊತ್ತುಗಳು ಸುಟ್ಟುಹೋಗಿದ್ದು ಅಂದಾಜು 5 ಲಕ್ಷ ರೂ. ನಷ್ಟ ಉಂಟಾಗಿದೆ. ಇಂದಿರಾ ಅವರು ಕೆಲಸಕ್ಕೆ ಹೋಗಿದ್ದು ಘಟನೆ ಸಂದರ್ಭದಲ್ಲಿ ಮನೆಯಲ್ಲಿರಲಿಲ್ಲ. ಆಕಸ್ಮಿಕ ದುರ್ಘಟನೆಯಿಂದಾಗಿ ಬಡಕುಟುಂಬ ತಲೆಮೇಲೆ ಕೈಹೊತ್ತು ಕೂತಿದೆ. ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ!ಬೆಂಕಿ ಅವಘಡಕ್ಕೆ

ಕಾವೂರು ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಬೆಂಕಿಗಾಹುತಿ Read More »

“ಬೆಂಕಿ ಆಕಸ್ಮಿಕಕ್ಕೆ ಮನೆ ಕಳೆದುಕೊಂಡವರಿಗೆ ಶೀಘ್ರವೇ ಮನೆ ನಿರ್ಮಾಣ”-ಭರತ್ ಶೆಟ್ಟಿ

ಸುರತ್ಕಲ್: ಕಳೆದ ವಾರ ಸುರತ್ಕಲ್ ಬಳಿಯ ಬಾಂಗ್ಲಾ ಕಾಲನಿಯಲ್ಲಿ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡಿರುವ ಉಮೇಶ್ ಆಚಾರ್ಯ ಹಾಗೂ ಕಾವೂರು ಪಳನೀರು ನಿವಾಸಿ ಇಂದಿರಾ ಅವರ ಕುಟುಂಬಕ್ಕೆ ಹೊಸ ಮನೆ ನಿರ್ಮಾಣಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವೈ. ಹೇಳಿದರು. ಮಾಧ್ಯಮಗಳ ಜೊತೆ ಮಾತಾಡಿದ ಅವರು, “ಬೇಸಿಗೆಯಲ್ಲಿ ಬೆಂಕಿ ಅನಾಹುತದ ಬಗ್ಗೆ ನಾಗರಿಕರು ಎಚ್ಚರಿಕೆಯಿಂದಿರಬೇಕು. ಬೆಂಕಿ ಅನಾಹುತಕ್ಕೆ ಮನೆಗಳನ್ನು ಕಳೆದುಕೊಂಡಿರುವ ಎರಡೂ ಕುಟುಂಬಗಳಿಗೆ ಕೂಡಲೇ ಹೊಸ ಮನೆ ಕಟ್ಟಿಕೊಡುವ ಬಗ್ಗೆ

“ಬೆಂಕಿ ಆಕಸ್ಮಿಕಕ್ಕೆ ಮನೆ ಕಳೆದುಕೊಂಡವರಿಗೆ ಶೀಘ್ರವೇ ಮನೆ ನಿರ್ಮಾಣ”-ಭರತ್ ಶೆಟ್ಟಿ Read More »

19 ವರ್ಷದ ಪಾಕಿಸ್ತಾನಿ ಯುವತಿ ಬೆಂಗಳೂರಿನಲ್ಲಿ ಬಂಧನ

ಸಮಗ್ರ ನ್ಯೂಸ್: ಭಾರತದಲ್ಲಿ ಅಕ್ರಮವಾಗಿ ನೆಲೆಸಲು ತನ್ನ ಗುರುತನ್ನು ನಕಲಿ ಮಾಡಿದ್ದ 19 ವರ್ಷದ ಪಾಕಿಸ್ತಾನಿ ಯುವತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಇಕ್ರಾ ಜೀವನಿ ಎಂಬಾಕೆಯನ್ನು ಬಂಧಿಸಿರುವ ಪೊಲೀಸರು, ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್‌ಆರ್‌ಆರ್‌ಒ) ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸದ್ಯ ಇಕ್ರಾ ಅವರನ್ನು ಮಹಿಳಾ ಪುನರ್ವಸತಿ ಕೇಂದ್ರದಲ್ಲಿರಿಸಲಾಗಿದೆ. ಪಾಕಿಸ್ತಾನದ ನಿವಾಸಿ ಇಕ್ರಾ, ಕೆಲ ತಿಂಗಳ ಹಿಂದೆ ಡೇಟಿಂಗ್ ಆ್ಯಪ್‌ ಮೂಲಕ ಉತ್ತರ ಪ್ರದೇಶದ ಮುಲಾಯಂ ಸಿಂಗ್ (25) ಅವರನ್ನು ಪರಿಚಯ ಮಾಡಿ ಕೊಂಡಿದ್ದರು.

19 ವರ್ಷದ ಪಾಕಿಸ್ತಾನಿ ಯುವತಿ ಬೆಂಗಳೂರಿನಲ್ಲಿ ಬಂಧನ Read More »

ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವು

ಸಮಗ್ರ ನ್ಯೂಸ್: ಟ್ರಾನ್ಸ್‌ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್​ ಶಾಕ್​ಗೆ ಒಳಗಾಗಿ ಪವರ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ‌ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗೌತಮ್(32) ಎಂದು ಗುರುತಿಸಲಾಗಿದೆ. ಜ.23ರ ಬೆಳಗ್ಗೆ 9 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಟ್ರಾನ್ಸ್‌ಫಾರ್ಮರ್ ದುರಸ್ಥಿ ವೇಳೆ ಕರೆಂಟ್​ ಶಾಕ್​ಗೆ ಒಳಗಾಗಿ ವಿದ್ಯುತ್ ಕಂಬದಿಂದ ಕೆಳಕ್ಕೆ ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಣೆಗೆ ಬಂದು, ಆತನನ್ನು ಸುಗುಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗೌತಮ್

ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವು Read More »

ಲಾರಿಗೆ ಡಿಕ್ಕಿ ಹೊಡೆದ ಕಾರು; ಐವರು ಸಾವು

ಸಮಗ್ರ ನ್ಯೂಸ್: ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ಸೋಮವಾರ ನಸುಕಿನ ವೇಳೆ ನಡೆದಿದೆ. ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು

ಲಾರಿಗೆ ಡಿಕ್ಕಿ ಹೊಡೆದ ಕಾರು; ಐವರು ಸಾವು Read More »

ಕಾಸರಗೋಡು: ತಾಯಿ ಹಾಗೂ 12 ಹರೆಯದ ಮಗಳ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು, ಬೇಡಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡಂಗುಯಿಯಲ್ಲಿ ನಡೆದಿದೆ. ಕುಂಡಂಗುಯಿ ನಿರ್ಕಾಯಿಯ ನಿವಾಸಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12) ಮೃತಪಟ್ಟವರು. ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಬಾಲಕಿ ಶ್ರಿನಂದಾರವರ ಮೃತದೇಹ ಕೋಣೆಯಲ್ಲಿ ಪತ್ತೆಯಾಗಿದೆ. ಶ್ರೀನಂದಾಳು ಕುಂಡ ಗುಯಿ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಭಾನುವಾರ ರಾತ್ರಿ ಕೃತ್ಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಮಿಸಿ

ಕಾಸರಗೋಡು: ತಾಯಿ ಹಾಗೂ 12 ಹರೆಯದ ಮಗಳ ಮೃತದೇಹ ಪತ್ತೆ Read More »

ಕುಂದಾಪುರ: ಮದ್ಯಪಾನ ಮಾಡಿ ವಾಹನ ಚಾಲನೆ| ಡಿವೈಡರ್ ಹಾರಿದ ಲಾರಿ

ಸಮಗ್ರ ನ್ಯೂಸ್: ಸಿಮೆಂಟ್ ತುಂಬಿದ್ದ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕೊಪ್ಪಳದಿಂದ ಸುಮಾರು 50 ಟನ್ ಗಿಂತಲೂ ಹೆಚ್ಚು ಸಿಮೆಂಟ್ ತುಂಬಿದ್ದ ಕಂಟೈನರ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಯಾರ್ಡ್ ಗೆ ಪ್ರಯಾಣಿಸುತ್ತಿತ್ತು. ಚಾಲಕ ರಾಹುಲ್ ಕುಡಿದು ಟೈಟಾಗಿ ವಾಹನ ಚಾಲನೆ ಮಾಡುತ್ತಿದ್ದ ಪರಿಣಾಮ ಸಂಗಂ ಜಂಕ್ಷನ್ ನಲ್ಲಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿಯಾಗಿ, ಸಿಸಿ ಕೆಮೆರಾ ಅಳವಡಿಸಲಾಗಿದ್ದ ಕಂಬವನ್ನು ಮುರಿದುಕೊಂಡು

ಕುಂದಾಪುರ: ಮದ್ಯಪಾನ ಮಾಡಿ ವಾಹನ ಚಾಲನೆ| ಡಿವೈಡರ್ ಹಾರಿದ ಲಾರಿ Read More »

ಸುಳ್ಯ: ನಾಪತ್ತೆಯಾಗಿದ್ದ ಮಹಿಳೆ ಪತ್ತೆ

ಸಮಗ್ರ ನ್ಯೂಸ್: ಜ.21 ರಂದು ಮರ್ಕಂಜದಿಂದ ಔಷಧಿಗೆಂದು ತೆರಳಿದ ವಿವಾಹಿತ ಮಹಿಳೆ ನಾಪತ್ತೆ ಯಾಗಿದ್ದು ಇದೀಗ ಇದೀಗ ಜ.22 ಪತ್ತೆಯಾದ ಬಗ್ಗೆ ವರದಿ ಯಾಗಿದೆ. ಕೀರ್ತಿಶ್ರೀ ಎಂಬಾಕೆ ಗಂಡನ ಮನೆಗೂ, ತಾಯಿ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ಪತಿ ರಾಜಶೇಖರ ಪೋಲೀಸರಿಗೆ ದೂರು ನೀಡಿದ್ದರು. ಆದರೆ ಜ.22 ರಂದು ಸಂಜೆ ಮಡಿಕೇರಿಯಲ್ಲಿ ಪತ್ತೆಯಾದ ಅವಳನ್ನು ಸುಳ್ಯ ಪೊಲೀಸ್ ಠಾಣೆಗೆ ಹಾಜರು ಪಡಿಸಿ ಬಳಿಕ ತಾಯಿ ಮನೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ: ನಾಪತ್ತೆಯಾಗಿದ್ದ ಮಹಿಳೆ ಪತ್ತೆ Read More »