ಕ್ರೈಂ

ಮದುವೆ ಮನೆಯಲ್ಲಿ ಡ್ಯಾನ್ಸ್‌ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು

ಸಮಗ್ರ ನ್ಯೂಸ್: ಮದುವೆ ಸಮಾರಂಭವೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದ 32 ವರ್ಷದ ಯುವಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ನಿವಾಸಿ ಅಭಯ್ ಸಚಿನ್ ಎಂಬಾತನ ಮದುವೆಗೆ ರೇವಾಗೆ ಬಂದಿದ್ದರು. ಮದುವೆಯ ವೀಡಿಯೋದಲ್ಲಿ, ಮದುವೆ ಸಂಭ್ರಮದಲ್ಲಿ ಡ್ರಮ್ ಸದ್ದು ಜೋರಾಗಿದ್ದು, ಕೆಲವರು ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಈ ವೇಳೆ, ಅಭಯ್ ಕೂಡ ಅವರೊಂದಿಗೆ ಡಾನ್ಸ್‌ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು ವಿಡಿಯೋ ತೋರಿಸಿದೆ.ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆಗೆ […]

ಮದುವೆ ಮನೆಯಲ್ಲಿ ಡ್ಯಾನ್ಸ್‌ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು Read More »

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಮನೆಯಿಂದಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ‌ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ. ಇಲ್ಲಿನ‌ ಸಮೀಪದ‌ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ವಾಪಾಸಾಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು. ಜ.19 ಕೂತ್ಕುಂಜ ಗ್ರಾಮದ ಸಂಪ ಎಂಬಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಮನೆಯವರು ‍ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ ಪಡಿಸಿ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ Read More »

ವ್ಯಕ್ತಿಯೋರ್ವನ ಪ್ರಾಣ ಉಳಿಸಿದ ನಟ ಸೋನು ಸೂದ್

ಸಮಗ್ರ ನ್ಯೂಸ್: ವಿಮಾನ ನಿಲ್ದಾಣದಲ್ಲಿ ನಟ ಸೋನು ಸೂದ್ ವ್ಯಕ್ತಿಯೋರ್ವನ ಪ್ರಾಣ ಉಳಿಸಿ ರಿಯಲ್ ಹೀರೋ ಆಗಿದ್ದಾರೆ. ಕೊರೊನಾ ಕರಾಳ ಸಮಯದಲ್ಲಿ ಸೋನು ಸೂದ್ ಅನೇಕ ಜನರಿಗೆ ಸಹಾಯ ಮಾಡಿದ್ದರು. ಆ ಟ್ರೆಂಡ್ ಈಗಲೂ ಮುಂದುವರಿದಿದೆ.ಇದೀಗ ಸೋನು ಸೂದ್ ಒಬ್ಬ ವ್ಯಕ್ತಿಯ ಜೀವ ಉಳಿಸಿದ್ದು, ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಆಗಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ, ಸೋನು ಸೂದ್ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಪ್ರಾಣ ಉಳಿಸಿದ್ದಾರೆ. ವಾಸ್ತವವಾಗಿ ಸೋನು ಸೂದ್ ದುಬೈನಿಂದ ಹಿಂದಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಇದ್ದಕ್ಕಿದ್ದಂತೆ ವ್ಯಕ್ತಿಯೊಬ್ಬ

ವ್ಯಕ್ತಿಯೋರ್ವನ ಪ್ರಾಣ ಉಳಿಸಿದ ನಟ ಸೋನು ಸೂದ್ Read More »

ಪುತ್ತೂರು: ಹಾಡುಹಗಲೇ ಯುವತಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಹಾಡುಹಗಲೇ ಮನೆಯಂಗಳದಲ್ಲಿ ಮುಂಡೂರು ಗ್ರಾಮದ ಕಂಪ ಬದಿಯಡ್ಕ ಎಂಬಲ್ಲಿನ ದಿ.ಗುರುವ ಎಂಬವರ ಪುತ್ರಿ ಜಯಶ್ರೀ (23ವ) ಅವರನ್ನು ಜ.17ರಂದು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಕನಕಮಜಲಿನ‌ ಉಮೇಶ್ ಎಂಬಾತನನ್ನು ಜ.18ರಂದು ಪೊಲೀಸರು ಬಂಧಿಸಿದ್ದಾರೆ. ಕನಕಮಜಲು ಗ್ರಾಮದ ಅಂಗಾರ ಎಂಬವರ ಪುತ್ರ ಉಮೇಶ್ (24ವ) ಬಂಧಿತ ಆರೋಪಿ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿ ಮತ್ತು ಆತ ಕೊಲೆ ಕೃತ್ಯಕ್ಕೆ ಬಳಸಿದ ಆಯುಧ ಮತ್ತು ಸ್ಕೂಟರ್ ವಶಕ್ಕೆ ಪಡೆದು ಕೊಂಡಿದ್ದಾರೆ.

ಪುತ್ತೂರು: ಹಾಡುಹಗಲೇ ಯುವತಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು Read More »

ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಣಂಬೂರಿನ ಐಎಂಸಿಯ ನಾಲ್ಕನೇ ಟರ್ಮಿನಲ್ ಉದ್ಯೋಗಿಯಾಗಿರುವ ಸುಜಿತ್‌ ರಾಜ್‌ (28) ಮಂಗಳವಾರ ಪಡೀಲ್‌ನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಾರಿಪಳ್ಳ ನಿವಾಸಿ ಸುಜಿತ್ ಅವರು ಜ.16ರಂದು ರಾತ್ರಿ ಪಾಳಿ ಕರ್ತವ್ಯ ಮುಗಿಸಿ ಪಣಂಬೂರಿನಿಂದ ಮನೆ ಕಡೆಗೆ ಹಿಂತಿರುಗುತ್ತಿದ್ದರು. ಆಗ ರಾಷ್ಟ್ರೀಯ ಹೆದ್ದಾರಿಯ ವಳಚ್ಚಿಲ್ ಸಮೀಪ ಇವರಿದ್ದ ಪಲ್ಸರ್‌ ಬೈಕ್ ಸ್ಕಿಡ್ ಆಗಿ ರಸ್ತೆಗೆ ಎಸೆಯಲ್ಪಟ್ಟ ಸುಜಿತ್ ರಾಜ್ ತಲೆ ಡಿವೈಡರ್‌ಗೆ

ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಯುವಕ ದಾರುಣ ಸಾವು Read More »

ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಸ್ಪೋಟ; ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ ಜ.18ರಂದು ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ

ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಸ್ಪೋಟ; ಕಾರ್ಮಿಕ ಸಾವು Read More »

ಮಡಿಕೇರಿ: ಯುವತಿಯ ಕೊಲೆ ಪ್ರಕರಣ| ಆರೋಪಿ ಶವ ಕೆರೆಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಭೀಕರವಾಗಿ ಯುವತಿಯನ್ನು ಹತ್ಯೆ ಮಾಡಿ ನಾಪತ್ತೆಯಾಗಿದ್ದ ಆರೋಪಿ ಎರಡು ದಿನಗಳ ಬಳಿಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ನಾಂಗಾಲ ಗ್ರಾಮದಲ್ಲಿ ಹತ್ಯೆ ಪ್ರಕರಣ ನಡೆದಿತ್ತು. ಗ್ರಾಮದ ಆರತಿ ಎಂಬಾಕೆಯನ್ನು ತಿಮ್ಮಯ್ಯ ಎಂಬಾತ ಹತ್ಯೆ ಮಾಡಿ ನಾಪತ್ತೆಯಾಗಿದ್ದ. ವಿರಾಜಪೇಟೆ ತಾಲ್ಲೂಕಿನ ಕಂಡಂಗಾಲ ಗ್ರಾಮದ ಆರೋಪಿ ಮನೆಯ ಸಮೀಪದ‌ ಕೆರೆಯಲ್ಲಿ ಶವ ಪತ್ತೆಯಾಗಿದ್ದು, ಕೆರೆಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆದಿತ್ತು. ಕೆರೆಯ ನೀರನ್ನು ಖಾಲಿ ಮಾಡಿಸಿ ಹುಡುಕಾಟ

ಮಡಿಕೇರಿ: ಯುವತಿಯ ಕೊಲೆ ಪ್ರಕರಣ| ಆರೋಪಿ ಶವ ಕೆರೆಯಲ್ಲಿ ಪತ್ತೆ Read More »

ಇಂಡಿಗೋ ವಿಮಾನದಲ್ಲಿ ತೇಜಸ್ವಿ ಸೂರ್ಯ ಪಜೀತಿ| ತುರ್ತು ನಿರ್ಗಮನ ಬಾಗಿಲು ತೆರೆದ ಸಂಸದ!!

ಸಮಗ್ರ ನ್ಯೂಸ್: ಬೆಂಗಳೂರು ದ.ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು 2022ರ ಡಿಸೆಂಬರ್ 10 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯನ್ನು ಸಹ ಪಡೆಯದೇ ವಿಮಾನದ ತುರ್ತು ನಿರ್ಗಮನವನ್ನು ತೆರೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂಸದನ ಈ ಎಡವಟ್ಟಿನಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಹೀಗಿದ್ದರೂ ವಿಮಾನಯಾನ ಸಂಸ್ಥೆ ಇಂಡಿಗೋ ಮಾತ್ರ ಈ ಬಗ್ಗೆ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಲು ನಿರಾಕರಿಸಿರುವುದು ದೊಡ್ಡ ಪ್ರಶ್ನೆಯಾಗಿದೆ. ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ನಾಗರಿಕ ವಿಮಾನಯಾನ

ಇಂಡಿಗೋ ವಿಮಾನದಲ್ಲಿ ತೇಜಸ್ವಿ ಸೂರ್ಯ ಪಜೀತಿ| ತುರ್ತು ನಿರ್ಗಮನ ಬಾಗಿಲು ತೆರೆದ ಸಂಸದ!! Read More »

ಉಡುಪಿ: ಲಾರಿ-ಬೈಕ್ ನಡುವೆ ಡಿಕ್ಕಿ| ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು

ಸಮಗ್ರ ನ್ಯೂಸ್: ಲಾರಿ ಹಾಗೂ ಬೈಕ್ ಮಧ್ಯೆ ಉಡುಪಿಯ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೋಟದ ಸಮಿತ್ ಕುಮಾರ್ ಹಾಗೂ ವಾಗೀಶ್ ಎಂದು ಗುರುತಿಸಲಾಗಿದೆ ಇವರು ಉಡುಪಿಯ ಪೂರ್ಣ ಪ್ರಜ್ಜ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕಿನಲ್ಲಿ ವಾಪಸ್ ಹೋಗುತ್ತಿದ್ದ ವೇಳೆ ಎದುರಿನಲ್ಲಿದ್ದ ಲಾರಿಯನ್ನು ಓವರ್ ಟೇಕ್

ಉಡುಪಿ: ಲಾರಿ-ಬೈಕ್ ನಡುವೆ ಡಿಕ್ಕಿ| ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು Read More »

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ರಾ.ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »