ಕ್ರೈಂ

ಪಾಕ್ ಕ್ರಿಕೆಟಿಗ ಬಾಬರ್ ಅಜಂ ವಿಡಿಯೋ ನಕಲಿ| ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ ಖಾತೆದಾರ

ಸಮಗ್ರ ನ್ಯೂಸ್: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಝಮ್ ಅವರ ‘ಸೆಕ್ಸ್ಟಿಂಗ್ ಹಗರಣ’ ಕ್ಕೆ ಮಹತ್ವದ ತಿರುವು ಸಿಕ್ಕಿದೆ. ಬಾಬರ್‌ ಅಝಮ್‌ ತನ್ನ ಸಹ ಆಟಗಾರನ ಗೆಳತಿಗೆ ಲೈಂಗಿಕ ವಿಷಯದ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದ ಟ್ವಿಟರ್‌ ಖಾತೆದಾರರೇ ತಾನು ಮೋಜಿಗಾಗಿ ಈ ಟ್ವೀಟ್‌ ಮಾಡಿದ್ದೆ, ಇದಕ್ಕೆ ಯಾವುದೇ ಆಧಾರ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಝಮ್‌ ಕುರಿತು ಟ್ವೀಟ್‌ ಮಾಡಿದ್ದ ಟ್ವಿಟರ್‌ ಖಾತೆಯೇ ಒಂದು ವಿಡಂಬನಾತ್ಮಕ ಖಾತೆಯಾಗಿದ್ದು, ಇದು ನೀರವ್‌ ಮೋದಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿದೆ. […]

ಪಾಕ್ ಕ್ರಿಕೆಟಿಗ ಬಾಬರ್ ಅಜಂ ವಿಡಿಯೋ ನಕಲಿ| ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ ಖಾತೆದಾರ Read More »

ಸ್ಯಾಂಟ್ರೋ ರವಿಯನ್ನು ವಶಕ್ಕೆ ಪಡೆದ ಸಿಐಡಿ; ತನಿಖೆ ಮತ್ತಷ್ಟು ಚುರುಕು

ಸಮಗ್ರ ನ್ಯೂಸ್: ಸ್ಯಾಂಟ್ರೋ ರವಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿದ ಸಿಐಡಿ ಪೊಲೀಸರು, ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಬೆಳಗ್ಗೆ ಮೈಸೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಎದುರು ಪೊಲೀಸರು ಆರೋಪಿಯನ್ನು ಹಾಜರು ಪಡಿಸಿದರು. ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ನೀಡುವಂತೆ ಸರ್ಕಾರಿ ಅಭಿಯೋಜಕರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಸರ್ಕಾರಿ ವಕೀಲರ ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ಜ.30 ರವರೆಗೆ ಸಿಐಡಿ ವಶಕ್ಕೆ ನೀಡಲು ಆದೇಶ

ಸ್ಯಾಂಟ್ರೋ ರವಿಯನ್ನು ವಶಕ್ಕೆ ಪಡೆದ ಸಿಐಡಿ; ತನಿಖೆ ಮತ್ತಷ್ಟು ಚುರುಕು Read More »

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ| ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪುತ್ತೂರುನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಮುಂಡೂರು ಕಂಪದ ದಿ.ಗುರುವ ಎಂಬವರ ಪುತ್ರಿ ಜಯಶ್ರೀ ಎಂಬಾಕೆಯನ್ನು ಜ.17ರಂದು ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಹಿನ್ನಲೆ ಸುಳ್ಯ ತಾಲೂಕಿನ ಕನಕಮಜಲಿನ ಉಮೇಶ ಎಂಬಾತನ ಕೃತ್ಯ ಎಂದು ಶಂಕೆ ವ್ಯಕ್ತವಾಗಿದ್ದು ಸಾವಿಗೀಡಾದ ಯುವತಿ ಮನೆಯವರು ಉಮೇಶ್ ಕನಕಮಜಲು ವಿರುದ್ದ ಸಂಶಯ ವ್ಯಕ್ತ ಪಡಿಸಿ ದೂರು ನೀಡಿದ್ದಾರೆ. ಈ ಪ್ರಕರ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ತನಿಖೆ ಮುಂದುವರಿದಿದೆ. ದೂರಿನಲ್ಲಿ

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ| ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲು Read More »

ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಿಯಕರನ ಬಂಧನ

ಸಮಗ್ರ ನ್ಯೂಸ್: ಪ್ರೇಮ ವೈಫಲ್ಯದಿಂದ ಮನನೊಂದು ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿತೇಶ್ ನನ್ನು ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನಿತೇಶ್ ನನ್ನು ತರುಣಿ ಪ್ರೀತಿಸುತ್ತಿದ್ದಳು.ಪ್ರೇಮಿಗಳ ಮಧ್ಯೆ ಜಗಳವಾಗಿ ಜನವರಿ 10ರಂದು ಆಕೆ ವಿಷ ಸೇವಿಸಿದ್ದಳು. ನಾಲ್ಕು ದಿನಗಳ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಕೆ ಸಾವನ್ನಪ್ಪಿದ್ದಳು. ವಿದ್ಯಾರ್ಥಿನಿ ಸಾಯುವ ಮುನ್ನ ಆಸ್ಪತ್ರೆ ಬೆಡ್ ನಲ್ಲಿ ಲಿಖಿತ ಹೇಳಿಕೆ ದಾಖಲಿಸಿದ್ದಳು. ಪ್ರಕರಣ ದಾಖಲಾಗುತ್ತಿದ್ದಂತೆ

ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಿಯಕರನ ಬಂಧನ Read More »

ಪುತ್ತೂರು: ಚೂರಿಯಿಂದ ಇರಿದು ಯುವತಿಯ ಹತ್ಯೆ

ಸಮಗ್ರ ನ್ಯೂಸ್: ಯುವತಿಯೋರ್ವಳನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಜ.17 ರಂದು ಪುತ್ತೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಇನ್ನೂ ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು: ಚೂರಿಯಿಂದ ಇರಿದು ಯುವತಿಯ ಹತ್ಯೆ Read More »

ಸಹ ಆಟಗಾರನ ಪ್ರೇಯಸಿ ಜೊತೆ ಸೆಕ್ಸೀ ಚಾಟ್| ಸಿಕ್ಕಿಬಿದ್ದ ಪಾಕ್ ಕ್ರಿಕೆಟಿಗ ಬಾಬರ್ ಅಜಮ್

ಸಮಗ್ರ ನ್ಯೂಸ್: ಸಹ ಆಟಗಾರನ ಪ್ರೇಯಸಿಯೊಬ್ಬಳ ಜೊತೆಗೆ ಸೆಕ್ಸೀ ಚಾಟ್ ಮಾಡಿ ಪಾಕ್ ಕ್ರಿಕೆಟಿಗ ಬಾಬರ್ ಅಜಮ್ ಸಿಕ್ಕಿ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಬಾಬರ್​ ಅಜಮ್​ ಮಹಿಳೆಯೊಬ್ಬಳ ಜತೆ ವಿಡಿಯೊ ಕಾಲ್​ ಮಾಡಿ ಮಾತನಾಡುವ ಹಾಗೂ ಅವರಿಗೆ ಸಂದೇಶಗಳನ್ನು ಕಳುಹಿಸುತ್ತಿರುವ ವಿಡಿಯೊ ವೈರಲ್​ ಆಗಿದೆ. ವಿಡಿಯೊದಲ್ಲಿರುವ ಮಹಿಳೆ ಪಾಕಿಸ್ತಾನ ಕ್ರಿಕೆಟ್​ ತಂಡದ ಆಟಗಾರನೊಬ್ಬನ ಪ್ರೇಯಸಿ ಎಂದೂ ಹೇಳಲಾಗಿದೆ. ಹಾಸಿಗೆ ಮೇಲೆ ಮಲಗಿಕೊಂಡಿರುವ ಬಾಬರ್ ಅಜಮ್​, ತಮ್ಮ ಜತೆ ಚಾಟ್​ ಮಾಡುವಂತೆ ಒತ್ತಾಯ ಮಾಡುತ್ತಿರುವುದು ಕಂಡು ಬಂದಿದೆ. ಅಲ್ಲದೆ, ವಿಡಿಯೊ

ಸಹ ಆಟಗಾರನ ಪ್ರೇಯಸಿ ಜೊತೆ ಸೆಕ್ಸೀ ಚಾಟ್| ಸಿಕ್ಕಿಬಿದ್ದ ಪಾಕ್ ಕ್ರಿಕೆಟಿಗ ಬಾಬರ್ ಅಜಮ್ Read More »

ಬಂಟ್ವಾಳ: ಬಿಜೆಪಿ ಪಾದಯಾತ್ರೆಯಲ್ಲಿ ಅವಘಡ; ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತ್ರತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ. ಬೈಕ್ ಮತ್ತು ಬಿಜೆಪಿ ರ‍್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಮೃತ ಬೈಕ್ ಸವಾರನನ್ನು ಗುರುವಾಯನಕೆರೆ ಮೂಲದ ತರಕಾರಿ ನಾರಾಯಣ ಎಂಬವರ ಪುತ್ರ ವಿಜಿತ್ (35) ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು,

ಬಂಟ್ವಾಳ: ಬಿಜೆಪಿ ಪಾದಯಾತ್ರೆಯಲ್ಲಿ ಅವಘಡ; ಬೈಕ್ ಸವಾರ ಸಾವು Read More »

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ; ಇಬ್ಬರು ಯುವಕರು ಸಾವು

ಸಮಗ್ರ ನ್ಯೂಸ್: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಈ ಘಟನೆ ನಡೆದಿದೆ. ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಶಿವಮೊಗ್ಗದ ಆಲ್ಕೊಳ ನಿವಾಸಿ ಲೋಕೇಶ್ (32) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ನಡೆದ ಅವಘಡದಲ್ಲಿ ರಂಗನಾಥ್ ಎಂಬುವವರು ಹೋರಿ ತಿವಿದು ಮೃತಪಟ್ಟಿದ್ದಾರೆ. ಮಾಳೂರಿನಲ್ಲಿ ಇನ್ನೂ ಇಬ್ಬರು

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ; ಇಬ್ಬರು ಯುವಕರು ಸಾವು Read More »

ಯುವತಿಯ ಬರ್ಬರ ಕೊಲೆ; ಬೆಚ್ಚಿಬಿದ್ದ ಕೊಡಗು

ಸಮಗ್ರ ನ್ಯೂಸ್: ಯುವತಿಯೋರ್ವಳನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಘಟನೆಯಿಂದ ಕೊಡಗಿನ ಜನರು ಬೆಚ್ಚಿಬಿದ್ದಿದ್ದಾರೆ. ಕೊಲೆಯಾದ ಯುವತಿಯನ್ನು ವಿರಾಜಪೇಟೆ ತಾಲ್ಲೂಕಿನ ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಬುಟ್ಟಿಯಂಡ ಆರತಿ (24) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯಿಂದ ಹೊರಗೆ ಕರೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಆರತಿ

ಯುವತಿಯ ಬರ್ಬರ ಕೊಲೆ; ಬೆಚ್ಚಿಬಿದ್ದ ಕೊಡಗು Read More »

68 ಮಂದಿಯ ಬಲಿಪಡೆದ ವಿಮಾನ ಪತನದ ಕೊನೆಕ್ಷಣದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕಠ್ಮಂಡುವಿನಿಂದ ಸುಮಾರು 72 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ನೇಪಾಳದ ಪೊಖರಾದಲ್ಲಿ ನಿನ್ನೆ ಬೆಳಿಗ್ಗೆ ಪತನಗೊಂಡಿದ್ದು, ಅದರಲ್ಲಿದ್ದ ಸುಮಾರು 68 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ನೇಪಾಳದಲ್ಲಿರುವ ನಗರದ ಹಳೆಯ ಮತ್ತು ಹೊಸ ವಿಮಾನ ನಿಲ್ದಾಣಗಳ ನಡುವೆ ಪತನಗೊಂಡ ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಯೇತಿ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ಅವಳಿ-ಎಂಜಿನ್ ಎಟಿಆರ್ 72 ವಿಮಾನವು ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಹೊರಟಿತ್ತು ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಯೇತಿ

68 ಮಂದಿಯ ಬಲಿಪಡೆದ ವಿಮಾನ ಪತನದ ಕೊನೆಕ್ಷಣದ ವಿಡಿಯೋ ವೈರಲ್ Read More »