ಕ್ರೈಂ

ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿದ ಪುತ್ತೂರು ಮೂಲದ ಕೈದಿ

ಸಮಗ್ರ ನ್ಯೂಸ್: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಎನ್ನುವುದು ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ನಾಗ್ಪುರ ಪೊಲೀಸರು ತನಿಖೆ ಸಚಿವರಿಗೆ ಜೀವ ಬೆದರಿಕೆಯನ್ನು ಹಾಕಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ದಕ್ಷಿಣ ಕನ್ನಡ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ಅಕ್ರಮವಾಗಿ ಫೋನ್‌ ಬಳಸಿ ಜಯೇಶ್‌ ಕುಮಾರ್ ಈ ಕೃತ್ಯವನ್ನು ಎಸಗಿದ್ದಾನೆ. ನಾಗ್ಪುರ […]

ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿದ ಪುತ್ತೂರು ಮೂಲದ ಕೈದಿ Read More »

ಪಾದಯಾತ್ರೆ ವೇಳೆ‌ ಕುಸಿದು ಬಿದ್ದು‌ ಸಾವನ್ನಪ್ಪಿದ ಸಂಸದ| ಭಾರತ್ ಜೋಡೋ ಯಾತ್ರೆ ಸ್ಥಗಿತ

ಸಮಗ್ರ ನ್ಯೂಸ್: ಪಂಜಾಬ್​​ನ ಫಿಲ್ಲೌರ್​​​ನಲ್ಲಿ ಸಾಗುತ್ತಿದ್ದ ಭಾರತ್​ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿಯೊಟ್ಟಿಗೆ ನಡೆಯುತ್ತಿದ್ದ ಜಲಂಧರ್ ಕ್ಷೇತ್ರದ ಕಾಂಗ್ರೆಸ್​ ಸಂಸದ ಸಂತೋಖ್​ ಸಿಂಗ್​ ಚೌಧರಿ (76), ದಾರಿ ಮಧ್ಯೆಯೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಕಾಲ್ನಡಿಗೆ ಶುರುವಾದ ಕೆಲವೇ ಹೊತ್ತಲ್ಲಿ ಈ ದುರಂತ ನಡೆದಿದೆ. ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಚೌಧರಿ ಅಸ್ವಸ್ಥಗೊಂಡು ಕೆಳಗೆ ಬಿದ್ದರು. ಯಾತ್ರೆಯನ್ನು ಕೂಡಲೇ ಸ್ಥಗಿತಗೊಳಿಸಿ, ಅವರನ್ನು ಆಂಬುಲೆನ್ಸ್​​ ಮೂಲಕ ಪಾಗ್ವಾರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಪ್ರಯೋಜನವಾಗಲಿಲ್ಲ. ಅವರ ಜೀವ ಹೋಗಿತ್ತು

ಪಾದಯಾತ್ರೆ ವೇಳೆ‌ ಕುಸಿದು ಬಿದ್ದು‌ ಸಾವನ್ನಪ್ಪಿದ ಸಂಸದ| ಭಾರತ್ ಜೋಡೋ ಯಾತ್ರೆ ಸ್ಥಗಿತ Read More »

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ಶೌರ್ಯ ಪ್ರಶಸ್ತಿ

ಸಮಗ್ರ ನ್ಯೂಸ್ : ತಾಯಿಯ ಪ್ರಾಣ ಉಳಿಸಿದ ಮೂರನೇ ತರಗತಿಯ ಬಾಲಕ ದೀಕ್ಷಿತ್‌ ಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ ಗಳಿಸಿದ್ದಾನೆ. ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ದೀಕ್ಷಿತ್‌ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ತಿಳಿದುಬಂದಿದೆ‌. ದೀಕ್ಷಿತ್‌ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗಿರಣಿಯ ಬೆಲ್ಟ್ ಗೆ ಅವರ ತಲೆ ಸಿಲುಕಿಕೊಂಡು ಜೋರಾಗಿ ಕಿರುಚಿಕೊಂಡಿದ್ದರು. ಅಲ್ಲೇ

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ಶೌರ್ಯ ಪ್ರಶಸ್ತಿ Read More »

ಗೆಳೆಯನೊಂದಿಗಿದ್ದ ಕಾಲೇಜು ‌ವಿದ್ಯಾರ್ಥಿನಿಯ‌ ಮೇಲೆ ಐವರಿಂದ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತಮಿಳುನಾಡಿನ ಕಾಂಚಿಪುರಂನಲ್ಲಿ ನಡೆದಿದೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ ಖಾಸಗಿ ಶಾಲೆಯ ಬಳಿ ಮಾತನಾಡುತ್ತಿದ್ದಾಗ ಐದು ಜನರ ತಂಡವು ಅವರನ್ನು ಸುತ್ತುವರೆದು ಸಂತ್ರಸ್ತೆಯ ಸ್ನೇಹಿತನಿಗೆ ಚಾಕು ತೋರಿಸಿ ಬೆದರಿಸಿತ್ತು. ನಂತರ ಅವರು ಬಲಿಪಶುವಿನ ಮೇಲೆ ಸರದಿಯಲ್ಲಿ ಅತ್ಯಾಚಾರ ಮಾಡಿದರು. ಮಹಿಳೆ ಒಪ್ಪದಿದ್ದರೆ ಕೊಲೆ ಮಾಡಿ ಸಮಾಧಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ತಪ್ಪಿಸಿಕೊಂಡು

ಗೆಳೆಯನೊಂದಿಗಿದ್ದ ಕಾಲೇಜು ‌ವಿದ್ಯಾರ್ಥಿನಿಯ‌ ಮೇಲೆ ಐವರಿಂದ ಗ್ಯಾಂಗ್ ರೇಪ್ Read More »

ಊಟದ ವಿಚಾರಕ್ಕೆ ಜಗಳ| ತಾಯಿ ಮಗ ಆತ್ಮಹತ್ಯೆ

ಸಮಗ್ರ ನ್ಯೂಸ್: ಊಟದ ವಿಚಾರಕ್ಕೆ ಜಗಳ ಉಂಟಾಗಿ ತಾಯಿ , ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‍ನಲ್ಲಿ ನಡೆದಿದೆ. ಮೃತರನ್ನು ವಿಜಯಲಕ್ಷ್ಮಿ (50) ಹಾಗೂ ಹರ್ಷ (25) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ವಿಜಯಲಕ್ಷ್ಮಿ ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ತಾಯಿ ಮೃತಪಟ್ಟ ವಿಚಾರ ತಿಳಿದು

ಊಟದ ವಿಚಾರಕ್ಕೆ ಜಗಳ| ತಾಯಿ ಮಗ ಆತ್ಮಹತ್ಯೆ Read More »

ಬಸ್ ನಲ್ಲಿ ವಿದ್ಯಾರ್ಥಿನಿಗೆ “ಚಾಕಲೇಟು ಬೇಕಾ” ಕೇಳಿದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್‌ ಶಾಕೀರ್‌ ಎಂಬಾತ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನ ಬಲ್ಮಠದ ಪದವಿ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಶಾಕೀರ್ ಗುರುವಾರ ಕಾಲೇಜಿನಿಂದ ಮನೆಗೆ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಮನೆಗೆ ಮರಳುತ್ತಿದ್ದರು. ಪಕ್ಕದ ಸೀಟಿನಲ್ಲಿ ಕುಳಿತಿದ್ದ

ಬಸ್ ನಲ್ಲಿ ವಿದ್ಯಾರ್ಥಿನಿಗೆ “ಚಾಕಲೇಟು ಬೇಕಾ” ಕೇಳಿದ ಮುಸ್ಲಿಂ ಯುವಕನ ಮೇಲೆ ಹಲ್ಲೆ Read More »

ಉಳ್ಳಾಲ: ದರೋಡೆಗೆ ಹೊಂಚು – ಇಬ್ಬರ ಬಂಧನ

ಸಮಗ್ರ ನ್ಯೂಸ್: ಕತ್ತಲಲ್ಲಿ ಅಂಗಡಿಗಳ ಬಳಿ ರಾಡಿನ ಜೊತೆಗೆ ಕುಳಿತಿದ್ದ ಇಬ್ಬರನ್ನು ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮುಕ್ಕಚ್ಚೇರಿಯ ರಾಯಿಸ್ ಖಾನ್ (23) ಕುಂಪಲ ಯತೀಂ ಖಾನದ ಮಹಮ್ಮದ್ ಮುಜಾಂಬಿಲ್ (28) ಬಂಧಿತರು. ಇಬ್ಬರು ರಾ.ಹೆ66ರ ಕೋಟೆಕಾರು ಗ್ರಾಮದ ಬೀರಿ ಜಂಕ್ಷನ್ನಿನ ಬಳಿಯ ಅಂಗಡಿಗಳ ಬಾಗಿಲು ಬಳಿ ಕತ್ತಲಲ್ಲಿ ಕುಳಿತಿದ್ದರು. ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಅವರನ್ನು ಹಿಡಿದಾಗ ಸಮರ್ಪಕವಾಗಿ ಉತ್ತರಿಸದೇ ಇದ್ದಾಗ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ವೇಳೆ ರಾಡ್ ಪತ್ತೆಯಾಗಿದ್ದು, ಅಂಗಡಿ, ಎಟಿಎಂ,ಮನೆಗಳನ್ನು ದರೋಡೆ

ಉಳ್ಳಾಲ: ದರೋಡೆಗೆ ಹೊಂಚು – ಇಬ್ಬರ ಬಂಧನ Read More »

ಆಫ್ರಿಕನ್ ಹಂದಿ ಜ್ವರ ಹಿನ್ನೆಲೆ| ಫಾರ್ಮ್‌ ಹಂದಿಗಳ ಹತ್ಯೆ

ಸಮಗ್ರ ನ್ಯೂಸ್:ಆಫ್ರಿಕನ್ ಹಂದಿ ಜ್ವರ ದೃಢ ಪಟ್ಟ ಹಿನ್ನೆಲೆ ಕಾಸರಗೋಡಿನ ಕಾಟುಕುಕ್ಕೆಯಲ್ಲಿ ಫಾರ್ಮ್‌ ಹಂದಿಗಳನ್ನು ಕೊಲ್ಲಲಾಗುತ್ತಿದೆ. ಎಣ್ಮಕಜೆ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಾಟುಕುಕ್ಕೆಯ ಬಾಳೆಮೂಲೆ ಎಂಬಲ್ಲಿ ಕೆಲ ದಿನಗಳ ಹಿಂದಷ್ಟೇ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ರೋಗ ಹರಡದಂತೆ ತಡೆಯಲು ಮತ್ತು ರೋಗಬಾಧಿತ ಹಂದಿಗಳು ಆಹಾರ ರೂಪದಲ್ಲಿ ಮನುಷ್ಯನ ದೇಹ ಸೇರದಂತೆ ಜಾಗೃತಿ ವಹಿಸುವ ಸಲುವಾಗಿ ಫಾರ್ಮ್ ಹಂದಿಗಳನ್ನು ಕೊಲ್ಲಲು ಕ್ರಮ ಕೈಗೊಳ್ಳಲಾಗಿದೆ. ಫಾರ್ಮ್ ಹಂದಿಗಳನ್ನು ನಾಶಪಡಿಸಿ ಅವುಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಲಾಗುತ್ತದೆ. ಈ ನಿಟ್ಟಿನಲ್ಲಿ

ಆಫ್ರಿಕನ್ ಹಂದಿ ಜ್ವರ ಹಿನ್ನೆಲೆ| ಫಾರ್ಮ್‌ ಹಂದಿಗಳ ಹತ್ಯೆ Read More »

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ

ಸಮಗ್ರ ನ್ಯೂಸ್: ತಮ್ಮ ತನ್ನ ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ. ಪರಿಕ್ಷತ್ ತಾಜ್ (25) ಕೊಲೆಯಾದ ಯುವಕ. ನಿತ್ಯ ಕುಡಿದು ಹಣ ಕೊಡುವಂತೆ ಮನೆಯಲ್ಲಿ ಕಾಟ ಕೊಡುತ್ತಿದ್ದ. ಇದರಿಂದಅಣ್ಣನ ಕಿರುಕುಳ ತಾಳಲಾರದೆ ತಮ್ಮನೆ ಅಣ್ಣನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದ ಮಾನ್ವಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಭೀಮನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ Read More »

ಹಿಮಾಚಲದ ಹಲವೆಡೆ ಲಘು ಭೂಕಂಪನ

ಸಮಗ್ರ ನ್ಯೂಸ್: ಹಿಮಾಚಲ ಪ್ರದೇಶದ ಹಲವೆಡೆ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 5.17 ಕ್ಕೆ ಭೂಮಿ ಕಂಪಿಸಿದ ಅನುಭವ ಆಗಿದೆ. ಧರ್ಮಶಾಲಾ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದ್ದು, ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದ್ದಾಗಿ ವರದಿಗಳು ತಿಳಿಸಿವೆ. ಇಂದು ಮುಂಜಾನೆ 5:17 ಕ್ಕೆ ಹಿಮಾಚಲ ಪ್ರದೇಶದ ಧರ್ಮಶಾಲಾದಿಂದ 22 ಕಿಮೀ ಪೂರ್ವಕ್ಕೆ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅದು ಹೇಳಿದೆ.

ಹಿಮಾಚಲದ ಹಲವೆಡೆ ಲಘು ಭೂಕಂಪನ Read More »