ಕ್ರೈಂ

ಸುರತ್ಕಲ್: ಶಾಲೆಗೆ ಹೊರಡುತ್ತಿದ್ದ ಬಾಲಕ ಹೃದಯಾಘಾತದಿಂದ ವಿಧಿವಶ

ಸಮಗ್ರ ನ್ಯೂಸ್: ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸುರತ್ಕಲ್ ನಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅದಾಗಲೇ ಆತ ಮೃತಪಟ್ಟ […]

ಸುರತ್ಕಲ್: ಶಾಲೆಗೆ ಹೊರಡುತ್ತಿದ್ದ ಬಾಲಕ ಹೃದಯಾಘಾತದಿಂದ ವಿಧಿವಶ Read More »

ಸುಬ್ರಹ್ಮಣ್ಯ: ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪ್ರಿಯಕರನೊಂದಿಗೆ ಠಾಣೆಗೆ ಹಾಜರ್!!

ಸಮಗ್ರ ನ್ಯೂಸ್: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ದ.ಕ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಭಾರತಿ ಮೂಕಮಲೆ ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ ತೆರಳಿದ್ದಾರೆ. ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್‌ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ನಂದನ್‌ನೊಂದಿಗೆ ಜೀವನ ಮುಂದುವರೆಸುವ ನಿರ್ಧಾರ ಪ್ರಕಟಿಸಿದ್ದಾರೆ. ಠಾಣೆಯಲ್ಲಿ ತನ್ನ ನಿರ್ಧಾರವನ್ನು ಲಿಖೀತ ರೂಪದಲ್ಲಿ ಬರೆದು ಕೊಟ್ಟು ನಂದನ್‌ನೊಂದಿಗೆ ತೆರಳಿದ್ದಾರೆ. ತನ್ನಿಬ್ಬರು ಸಣ್ಣ ಹೆಣ್ಣು

ಸುಬ್ರಹ್ಮಣ್ಯ: ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪ್ರಿಯಕರನೊಂದಿಗೆ ಠಾಣೆಗೆ ಹಾಜರ್!! Read More »

5 ವರ್ಷದ ಮಗುವಿನ ಮೇಲೆ‌ 15ರ ಬಾಲಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: 15 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿಯ ಮೇಲೆ ಆತ್ಯಾಚಾರ ಮಾಡಿದ್ದಾನೆ. ಇದೀಗ ತಪ್ಪೊಪ್ಪಿಕೊಂಡಿರುವ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನ ವಿರುದ್ಧ ಐಪಿಸಿ ಮತ್ತು ಪೋಕ್ಸೋ ಕಾಯ್ದೆ ಸಂಬಂಧಿತ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ, ಶಾಲೆಯ ವಠಾರದಲ್ಲಿ ಕುಳಿತು ಅಳುತ್ತಿರುವುದನ್ನು ದಾರಿ ಹೋಕರೊಬ್ಬರು ಗಮನಿಸಿದ್ದಾರೆ. ಕೂಡಲೇ ಅವರು ಬಂದು ವಿಚಾರಿಸಿ ಆಕೆಯನ್ನು ಮನೆಗೆ ಕರೆ ತಂದು ಬಿಟ್ಟಿದ್ದಾರೆ. ಘಟನೆಯ ಬಗ್ಗೆ ಬಾಲಕಿ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಕೂಡಲೇ ಎಚ್ಚೆತ್ತ

5 ವರ್ಷದ ಮಗುವಿನ ಮೇಲೆ‌ 15ರ ಬಾಲಕನಿಂದ ಅತ್ಯಾಚಾರ Read More »

ಉಡುಪಿ: ಬ್ರೈನ್ ಟ್ಯೂಮರ್ ಗೆ ಬಲಿಯಾದ ರಾಜ್ಯಮಟ್ಟದ ಕ್ರಿಕೆಟರ್

ಸಮಗ್ರ ನ್ಯೂಸ್: ಬ್ರೈನ್ ಟ್ಯೂಮರ್‌ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ಹೆಬ್ರಿಯ ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ರಕ್ಷಿತ್ ಶೆಟ್ಟಿ ಕ್ರಿಕೆಟ್ ಆಟವನ್ನು ಪ್ರಾರಂಭಿಸಿದ್ದರು. ಬಳಿಕ ವಿವಿಧ ಜಿಲ್ಲಾ ಮಟ್ಟದ ತಂಡಗಳಲ್ಲಿ ಆಡಿ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ರಾಜ್ಯ ಮಟ್ಟದಲ್ಲಿಯೂ ರಕ್ಷಿತ್ ಗುರುತಿಸಿಕೊಂಡಿದ್ದರು. ಬೌಲಿಂಗ್‌ನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಅವರು, ತಮ್ಮ ಆಕರ್ಷಕ ಶೈಲಿಯ

ಉಡುಪಿ: ಬ್ರೈನ್ ಟ್ಯೂಮರ್ ಗೆ ಬಲಿಯಾದ ರಾಜ್ಯಮಟ್ಟದ ಕ್ರಿಕೆಟರ್ Read More »

ಬೆಳಗಾವಿ: ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿಕ್ಕಿದ ಪ್ರಕರಣ| ಮೂವರನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಶ್ರೀರಾಮಸೇನೆಯ ಬೆಳಗಾವಿ ಅಧ್ಯಕ್ಷ ರವಿ ಕೋಕಿಟ್ಕರ್ ಅವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಜಿತ್ ಭಟ್ಖಂಡೆ, ರಾಹುಲ್ ಕೊಡಚವಾಡ ಮತ್ತು ಜ್ಯೋತಿಬಾ ಮುಟಗೇಕರ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರು ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎಂ.ಬಿ.ಬೋರಲಿಂಗಯ್ಯ ತಿಳಿಸಿದ್ದಾರೆ. ಅಭಿಜಿತ್ ಪರವಾನಗಿ ಇಲ್ಲದ ಬಂದೂಕನ್ನು ಬಳಸಿ ಒಂದು ಸುತ್ತು ಗುಂಡು ಹಾರಿಸಿದ್ದನು. ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಜನವರಿ 7 ರ ಶನಿವಾರ ಹಿಂಡಲಗಾ ಗ್ರಾಮದಲ್ಲಿ ಕೋಕಿಟ್ಕರ್ ಮತ್ತು ಅವರ

ಬೆಳಗಾವಿ: ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿಕ್ಕಿದ ಪ್ರಕರಣ| ಮೂವರನ್ನು ಬಂಧಿಸಿದ ಪೊಲೀಸರು Read More »

ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ| ಹೊತ್ತಿ ಉರಿದ ಬಸ್| ಯೋಧ ಸೇರಿ ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕೆಎಸ್’ಆರ್’ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ತಮಿಳುನಾಡಿನ ಕೃಷ್ಣಗಿರಿಯ ಗುರುಪರಪಲ್ಲಿ ಬಳಿ ನಡೆದಿದೆ. ಗುರುಪರಪಲ್ಲಿಯ ಒಟ್ಟೆರ್ ಗ್ರಾಮ ನಿವಾಸಿಗಳಾದ ಯೋಧ ಸುಂದರೇಶನ್ ಹಾಗೂ ರೈತ ಗಣೇಶನ್ ಮೃತಪಟ್ಟವರು. ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಇಬ್ಬರೂ ಬೈಕ್ ನಲ್ಲಿ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಬೆಂಗಳೂರಿನಿಂದ ತಿರುಕೋವಿಲೂರು ಮಾರ್ಗವಾಗಿ ಬರುತ್ತಿದ್ದ ಕೆಎಸ್’ಆರ್’ಟಿಸಿ ಬಸ್

ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ| ಹೊತ್ತಿ ಉರಿದ ಬಸ್| ಯೋಧ ಸೇರಿ ಇಬ್ಬರು ದುರ್ಮರಣ Read More »

ರಾಜಕಾರಣಿಗಳ‌ ಜೊತೆಗೆ ಖಾಸಾ ಸಂಬಂಧ| ಹೆಣ್ಮಕ್ಕಳ ಬಾಳಿನ ಕಿರಾತಕ| ಬಗೆದಷ್ಟೂ ಹೊರಬರ್ತಿದೆ ಸ್ಯಾಂಟ್ರೋ ರವಿಯ ಕುಕೃತ್ಯ

ಸಮಗ್ರ ನ್ಯೂಸ್: ರಾಜಕಾರಣಿಗಳ ಜತೆ ಖಾಸಾ ಸಂಬಂಧ ಹೊಂದಿರುವ, ನೂರಾರು ಹೆಣ್ಮಕ್ಕಳ ಬಾಳಿನಲ್ಲಿ ಆಟವಾಡಿರುವ ಆರೋಪ ಹೊತ್ತಿರುವ ಮೈಸೂರಿನ ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಆತ ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಈ ನಡುವೆ, ಸ್ಯಾಂಟ್ರೋ ರವಿಯಿಂದ ದೌರ್ಜನ್ಯ ಮತ್ತು ವಂಚನೆಗೆ ಒಳಗಾಗಿರುವ ದಲಿತ ಮಹಿಳೆ ನ್ಯಾಯಾಧೀಶರ ಮುಂದೆ ಲೈಂಗಿಕ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್‌ ೧೬೪ರ ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಿದ್ದು, ಹಲವು ಅಂಶಗಳ ಮೇಲೆ

ರಾಜಕಾರಣಿಗಳ‌ ಜೊತೆಗೆ ಖಾಸಾ ಸಂಬಂಧ| ಹೆಣ್ಮಕ್ಕಳ ಬಾಳಿನ ಕಿರಾತಕ| ಬಗೆದಷ್ಟೂ ಹೊರಬರ್ತಿದೆ ಸ್ಯಾಂಟ್ರೋ ರವಿಯ ಕುಕೃತ್ಯ Read More »

ಮಂಗಳೂರು: ತಿಮಿಂಗಿಲ ವಾಂತಿ(ಅಂಬರ್ ಗ್ರೀಸ್) ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಂಬರ್-ಗ್ರೀಸ್ (ತಿಮಿಂಗಿಲ ವಾಂತಿ) ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಕೋಟ್ಯಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಪಡ್ಯಾರು ಮನೆ ನಿವಾಸಿ ನಿಮಿತ್ (26) ಹಾಗೂ ಪುಂಜಾಲಕಟ್ಟೆ ಕುಕ್ಕಳ ಮನೆ ನಿವಾಸಿ ಯೋಗೀಶ್ ಪೂಜಾರಿ(41) ಬಂಧಿತ ಆರೋಪಿಗಳು. ಬಂಧಿತರಿಂದ 3.2 ಕೆಜಿ ತೂಕದ ಅಂಬರ್ ಗ್ರೀಸ್ ಹಾಗೂ 2 ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದಕ್ಕೆ ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು

ಮಂಗಳೂರು: ತಿಮಿಂಗಿಲ ವಾಂತಿ(ಅಂಬರ್ ಗ್ರೀಸ್) ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಸಿಸಿಬಿ Read More »

ಚೆನ್ನೈ: ಇಂಡಿಯನ್ ನ್ಯಾಷನಲ್ ಕಾರ್ ರೇಸಿಂಗ್ ನಲ್ಲಿ ಭೀಕರ ಅಪಘಾತ| ಖ್ಯಾತ ರೇಸರ್ ಕೆ.ಇ ಕುಮಾರ್ ದುರ್ಮರಣ

ಸಮಗ್ರ ನ್ಯೂಸ್: ಚೆನ್ನೈನ ಮದ್ರಾಸ್ ಇಂಟರ್ನ್ಯಾಶನಲ್ ಸರ್ಕ್ಯೂಟ್ನಲ್ಲಿ ನಡೆಯುತ್ತಿರುವ ಎಂಆರ್ಎಫ್ ಎಂಎಂಎಸ್ಸಿ ಎಫ್ಎಂಎಸ್ಸಿಐ ಇಂಡಿಯನ್ ನ್ಯಾಶನಲ್ ಕಾರ್ ರೇಸಿಂಗ್ ಚಾಂಪಿಯನ್ಶಿಪ್ನ ಎರಡನೇ ಸುತ್ತಿನ ಪಂದ್ಯದಲ್ಲಿ ಖ್ಯಾತ ರೇಸರ್ ಕೆಇ ಕುಮಾರ್ ಭಾನುವಾರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 59 ವರ್ಷದ ಕೆಇ ಕುಮಾರ್ ದುರ್ಮರಣ ಹೊಂದಿದ್ದು ಇಂದು ಬೆಳಿಗ್ಗೆ ನಡೆದ ಸೆಲೂನ್ ಕಾರ್ ರೇಸ್ ವೇಳೆ ಕುಮಾರ್ ಅವರ ಕಾರಿಗೆ ಮತ್ತೊಂದು ಕಾರು ಅಡ್ಡ ಬಂದಿದ್ದರಿಂದ ಕಾರು ಟ್ರ್ಯಾಕ್ ನಲ್ಲಿ ಸ್ಕಿಡ್ ಆಗಿ ಬೇಲಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು.

ಚೆನ್ನೈ: ಇಂಡಿಯನ್ ನ್ಯಾಷನಲ್ ಕಾರ್ ರೇಸಿಂಗ್ ನಲ್ಲಿ ಭೀಕರ ಅಪಘಾತ| ಖ್ಯಾತ ರೇಸರ್ ಕೆ.ಇ ಕುಮಾರ್ ದುರ್ಮರಣ Read More »

ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ದಾಳಿ

ಸಮಗ್ರ ನ್ಯೂಸ್: ಭಜರಂಗ ದಳ ಕಾರ್ಯಕರ್ತರೊಬ್ಬರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಭಾನುವಾರ ಶಿವಮೊಗ್ಗದಲ್ಲಿ ನಡೆದಿದೆ. ಪ್ಲಂಬರ್ ಕೆಲಸ ಮಾಡುತ್ತಿರುವ ಭಜರಂಗದಳ ಕಾರ್ಯಕರ್ತ ಮನೋಜ್‌ ಅವರು ತುಂಗಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಆತನ ಮೇಲೆ ಹಲ್ಲೆ ನಡೆದಿದೆ. ಮನೋಜ್‌ ತಲೆಗೆ ಬಲವಾಗಿ ಹೊಡೆಯಲಾಗಿದ್ದು, ಗಾಯಗೊಂಡಿರುವ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೋಜ್‌ಗೆ ಹಲ್ಲೆಯಾಗಿರುವುದನ್ನು ತಿಳಿದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದರು. ಶಿವಮೊಗ್ಗದಲ್ಲಿ ಭಾನುವಾರ ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ

ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ದಾಳಿ Read More »