ಕ್ರೈಂ

ಕುಕ್ಕೆಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ. ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ […]

ಕುಕ್ಕೆಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಮಡಿಕೇರಿ: ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ತೀವ್ರ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿದೆ. 12 ವರ್ಷದ ಬಾಲಕ ಕೀರ್ತನ್​ ಮೃತ ವಿದ್ಯಾರ್ಥಿ. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಬಾಲಕ ಕಿರುಚಿಕೊಂಡಿದ್ದು, ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಪುತ್ರನನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

ಮಡಿಕೇರಿ: ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿ ಬಲಿ Read More »

ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷನ ಮೇಲೆ ಗುಂಡಿನ ದಾಳಿ| ಚುರುಕುಗೊಂಡ ತನಿಖೆ; ಜಿಲ್ಲೆಯಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಬೆಳಗಾವಿ ಸಮೀಪದ ಹಿಂಡಲಗಾ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್‌ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್‌ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಶ್ರೀರಾಮ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ ಪ್ರಕರಣದ ತನಿಖೆಗೆ 4 ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ

ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷನ ಮೇಲೆ ಗುಂಡಿನ ದಾಳಿ| ಚುರುಕುಗೊಂಡ ತನಿಖೆ; ಜಿಲ್ಲೆಯಲ್ಲಿ ಕಟ್ಟೆಚ್ಚರ Read More »

ಉಡುಪಿಯಲ್ಲಿ ನಡೆಯಿತು ರಿಯಲ್ ಕಾಂತಾರ ಕಥೆ| ‘ಭೂತಕೋಲ’ ವಿರುದ್ಧ ಕೋರ್ಟ್ ಗೆ ಹೋಗಿದ್ದ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕಾಂತಾರ ಚಿತ್ರದಲ್ಲಿ ‘ಭೂತ ಕೋಲ’ದ ವಿರುದ್ಧ ನಡೆದವನ ಪಾತ್ರಧಾರಿ ರಕ್ತಕಾರಿ ಸಾಯುವ ದೃಶ್ಯ ಎಲ್ಲರನ್ನೂ ಕಾಡುತ್ತದೆ. ಚಿತ್ರದಲ್ಲಿ ಬರುವ ಈ ದೃಶ್ಯ ರೀಲ್, ಆದರೆ ಉಡುಪಿಯ ಪಡುಬಿದ್ರೆ ತಾಲೂಕಿನ ಪಡುಹಿತ್ಲು ಬಳಿ ರಿಯಲ್ ಆಗಿ ಇಂತಹ ಘಟನೆಯೊಂದು ನಡೆದಿದ್ದು, ಇದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ಮತ್ತೊಮ್ಮೆ ತುಳುನಾಡಿನ ದೈವಾರಾಧನೆ ಮುನ್ನೆಲೆಗೆ ಬಂದಿದೆ. ಉಡುಪಿ ಜಿಲ್ಲೆಯ ಪಡುಹಿತ್ಲು ಜಾರಂದಾಯ ದೈವಸ್ಥಾನದ ದೈವಕೋಲದ ವಿಚಾರದಲ್ಲಿ ಸ್ಥಳೀಯ ಎರಡು ಗುಂಪುಗಳ ಮಧ್ಯೆ ತಗಾದೆ ಇತ್ತು ಎನ್ನಲಾಗಿದೆ.

ಉಡುಪಿಯಲ್ಲಿ ನಡೆಯಿತು ರಿಯಲ್ ಕಾಂತಾರ ಕಥೆ| ‘ಭೂತಕೋಲ’ ವಿರುದ್ಧ ಕೋರ್ಟ್ ಗೆ ಹೋಗಿದ್ದ ವ್ಯಕ್ತಿ ಸಾವು Read More »

ಏರ್ ಇಂಡಿಯಾದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದಾತ ಬೆಂಗಳೂರಿನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ನವೆಂಬರ್ 26ರಂದು ನ್ಯೂಯಾರ್ಕ್ – ದೆಹಲಿ ಮಧ್ಯೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಿರಿಯ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಹೊತ್ತಿದ್ದ ಮುಂಬೈ ಮೂಲದ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ನವೆಂಬರ್ 26ರಂದು ಈ ಘಟನೆ ನಡೆದಿತ್ತಾದರೂ ತಡವಾಗಿ ಬೆಳಕಿಗೆ ಬಂದಿತ್ತು. ಇದರ ಬಳಿಕ ಶಂಕರ್ ಮಿಶ್ರಾ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಸೋಶಿಯಲ್ ಮೀಡಿಯಾದ ಮೂಲಕ ತಮ್ಮ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದ್ದರು. ಆದರೆ

ಏರ್ ಇಂಡಿಯಾದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದಾತ ಬೆಂಗಳೂರಿನಲ್ಲಿ ಅರೆಸ್ಟ್ Read More »

ಯುವತಿಗೆ ಬೆತ್ತಲೆ ಚಿತ್ರತೋರಿಸಿ ಬ್ಲಾಕ್ ಮೇಲ್ ಮಾಡಿದಾತನ ಕೊಲೆಗೈದ ಸಹೋದರ

ಸಮಗ್ರ‌ ನ್ಯೂಸ್: ಬೆತ್ತಲೆ ಚಿತ್ರ ತೋರಿಸಿ ಯುವತಿಯನ್ನು ಬ್ಲಾಕ್ ಮೇಲ್ ಮಾಡಿದ ಯುವಕನನ್ನು ಆಕೆಯ ಸೋದರ ತನ್ನ ಸ್ನೇಹಿತನೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಹಳ್ಳಿ ಗ್ರಾಮದ ಚಂದ್ರಗೌಡ(25) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಬಿಳಿಗೆರೆ ಹುಂಡಿ ಗ್ರಾಮದ ಲಿಂಗರಾಜು ಮತ್ತು ಆತನ ಸ್ನೇಹಿತ ಎರಗನಹುಂಡಿ ಗ್ರಾಮದ ಕಿರಣ್ ಅವರನ್ನು ಪೊಲೀಸರು

ಯುವತಿಗೆ ಬೆತ್ತಲೆ ಚಿತ್ರತೋರಿಸಿ ಬ್ಲಾಕ್ ಮೇಲ್ ಮಾಡಿದಾತನ ಕೊಲೆಗೈದ ಸಹೋದರ Read More »

ಕುಕ್ಕೆ ಸುಬ್ರಹ್ಮಣ್ಯ: ತಿರುವು ಪಡೆದುಕೊಂಡ ನೈತಿಕ ಪೊಲೀಸ್ ಗಿರಿ ಪ್ರಕರಣ| ಪೊಲೀಸರ ವಿರುದ್ದವೇ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು| ಇಂದು(ಜ.7) ಬೃಹತ್ ಪ್ರತಿಭಟನೆಗೆ ನಿರ್ಧಾರ

ಸಮಗ್ರ ನ್ಯೂಸ್: ಅಪ್ರಾಪ್ತ ಹಿಂದೂ ಬಾಲಕಿಯನ್ನು ಭೇಟಿಯಾಗಲು ಬಂದ ಮುಸ್ಲಿಂ ಹುಡುಗನಿಗೆ ಥಳಿಸಿರುವ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಥಳಿತಕ್ಕೆ ಒಳಗಾದ ಮುಸ್ಲಿಂ ಹುಡುಗ‌ ಹಾಗೂ ದೌರ್ಜನ್ಯಕ್ಕೆ ಒಳಗಾದ ಹಿಂದೂ ಹುಡುಗಿಯ ಕಡೆಯಿಂದಲೂ ದೂರು -ಪ್ರತಿದೂರು ದಾಖಲಾಗಿದೆ. ಇಂದು (ಜ.7) ಬೆಳಗ್ಗೆ ೧೦ಕ್ಕೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯೆದುರು ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಹಿಂದೂ ಕಾರ್ಯಕರ್ತರನ್ನೇ ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು

ಕುಕ್ಕೆ ಸುಬ್ರಹ್ಮಣ್ಯ: ತಿರುವು ಪಡೆದುಕೊಂಡ ನೈತಿಕ ಪೊಲೀಸ್ ಗಿರಿ ಪ್ರಕರಣ| ಪೊಲೀಸರ ವಿರುದ್ದವೇ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು| ಇಂದು(ಜ.7) ಬೃಹತ್ ಪ್ರತಿಭಟನೆಗೆ ನಿರ್ಧಾರ Read More »

ಬೆಳ್ತಂಗಡಿ: ಮನೆಯೊಳಗೆ ಕಾಳಿಂಗನ ಕಾರುಬಾರು| ಟೇಬಲ್ ಮೇಲೆ ಬೆಚ್ಚನೆ ಮಲಗಿದ ನಾಗರಾಜ!!

ಸಮಗ್ರ ನ್ಯೂಸ್: ಕಾಳಿಂಗ ಸರ್ಪವೊಂದು ಮನೆಯ ಟೇಬಲ್ ಪ್ಯಾನ್ ಕಳೆಗೆ ಹಾಯಾಗಿ ಮಲಗಿರುವ ಘಟನೆ ಬೆಳ್ತಂಗಡಿ‌ ತಾಲೂಕಿ‌ನ ಹತ್ಯಡ್ಕ ಎಂಬಲ್ಲಿ ನಡೆದಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಅರಸಿನಮಕ್ಕಿ ಹತ್ಯಡ್ಕ ನಿವಾಸಿಯಾಗಿರುವ ಉಮೇಶ್ ಎಂಬವರ ಮನೆಯ ರೂಂನ ಟೇಬಲ್ ಫ್ಯಾನ್ ಪಕ್ಕದಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮಲಗಿರುವುದನ್ನು ಗಮನಿಸಿದ ಮನೆಯ ಸದಸ್ಯರು ಕ್ಷಣ ಕಾಲ ಗಾಬರಿಗೊಂಡು, ಸ್ಥಳೀಯ ಉರಗ ತಜ್ಞರಾದ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದರು.

ಬೆಳ್ತಂಗಡಿ: ಮನೆಯೊಳಗೆ ಕಾಳಿಂಗನ ಕಾರುಬಾರು| ಟೇಬಲ್ ಮೇಲೆ ಬೆಚ್ಚನೆ ಮಲಗಿದ ನಾಗರಾಜ!! Read More »

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ; ಹೊನ್ನಾಳಿಯಲ್ಲಿ ಮತ್ತೊಬ್ಬ ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ಶಿವಮೊಗ್ಗ ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ಹಾಗೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚುರುಕುಗೊಳಿಸಿದ್ದು, ನಿನ್ನೆ ಶಿವಮೊಗ್ಗ ಮತ್ತು ಮಂಗಳೂರಿನಲ್ಲಿ ತಲಾ ಒಬ್ಬರನ್ನು ವಶಕ್ಕೆ ಪಡೆದಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು, ಇಂದು ಹೊನ್ನಾಳಿಯಲ್ಲಿ ಮತ್ತೋರ್ವ ಯುವಕನೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ತುಂಗಾ ತೀರದಲ್ಲಿ ನಡೆದಂತ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ನಿನ್ನೆ ರಾಜ್ಯಾದ್ಯಂತ 6

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ; ಹೊನ್ನಾಳಿಯಲ್ಲಿ ಮತ್ತೊಬ್ಬ ಎನ್ಐಎ ವಶಕ್ಕೆ Read More »

ಕುಕ್ಕೆಯಲ್ಲಿ ನೈತಿಕ‌ ಪೊಲೀಸ್ ಗಿರಿ| ಹಿಂದೂ ಹುಡುಗಿಯೊಂದಿಗೆ ತಿರುಗಾಟದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಹಲ್ಲೆ

ಸಮಗ್ರ ನ್ಯೂಸ್: ಹಿಂದೂ ಹುಡುಗಿ ಜೊತೆ ತಿರುಗಾಡುತ್ತಿದ್ದಾನೆಂದು ಆರೋಪಿಸಿ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿ ಪೊಲೀಸ್ ದೂರು ನೀಡಿದ್ದಾನೆ. ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡ್ ನಲ್ಲಿ ಹುಡುಗ ಮತ್ತು ಹುಡುಗಿ ಕಂಡು ಬಂದಿದ್ದು, ಬಳಿಕ ಈ ಜೋಡಿ ಕುಮಾರಧಾರ ಬಳಿ ಬಂದಾಗ ಯುವಕರ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ. ಹಲ್ಲೆಗೊಳಗಾದ ಯುವಕ ಸುಳ್ಯ ತಾಲೂಕಿನ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಗಂಭೀರ ಗಾಯಗೊಂಡ ಈತ ಸುಳ್ಯ ಆಸ್ಪತ್ರೆಯಲ್ಲಿ

ಕುಕ್ಕೆಯಲ್ಲಿ ನೈತಿಕ‌ ಪೊಲೀಸ್ ಗಿರಿ| ಹಿಂದೂ ಹುಡುಗಿಯೊಂದಿಗೆ ತಿರುಗಾಟದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಹಲ್ಲೆ Read More »