ಕ್ರೈಂ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ..!! ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಪಾಣೆಮಂಗಳೂರು ಹಳೆಯ ಸೇತುವೆಯ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಶವ ಪತ್ತೆಯಾದ ಘಟನೆ ನಡೆದಿದೆ. ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತಪಟ್ಟ ಯುವಕ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರ ವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು […]

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ..!! ಸಾವಿನ ಸುತ್ತ ಅನುಮಾನದ ಹುತ್ತ Read More »

ಆಫ್ರಿಕನ್ ಹಂದಿ ಜ್ವರ ಪತ್ತೆ:ಮೂರು ತಿಂಗಳು ಹಂದಿ ಮಾಂಸ ನಿಷೇಧ

ಸಮಗ್ರ ನ್ಯೂಸ್: ಕಾಸರಗೋಡಿನ ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಇದೀಗ ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ. ಈ ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ ಮಾರಾಟ, ಮಾಂಸ ಉತ್ಪನ್ನ ಮೊದಲಾದವುಗಳ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲಾಗುವುದು. ಇದಕ್ಕಾಗಿ ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು

ಆಫ್ರಿಕನ್ ಹಂದಿ ಜ್ವರ ಪತ್ತೆ:ಮೂರು ತಿಂಗಳು ಹಂದಿ ಮಾಂಸ ನಿಷೇಧ Read More »

ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ‌ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸ್ ಪಿಎಸ್ಐ ಅಪ್ಪಾಜಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ವಿಮಾನ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ಮೂತ್ರವಿಸರ್ಜನೆ ಮಾಡಿದ ಯುವಕ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ದೆಹಲಿಯ ವಿಮಾನ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ಬಹಿರಂಗವಾಗಿ ಮೂತ್ರವಿಸರ್ಜನೆ ಮಾಡಿದ ಘಟನೆ ನಡೆದಿದೆ. ಜನವರಿ 8ರಂದು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಮೂತ್ರವಿಸರ್ಜನೆ ಮಾಡಿರುವುದಾಗಿ ವರದಿಯಾಗಿದೆ. ನಿಲ್ದಾಣದ ನಿರ್ಗಮನ ಗೇಟ್‌ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಪೊಲೀಸರು ಬಿಹಾರ ಮೂಲದ ಜೌಹರ್ ಅಲಿ ಖಾನ್‌ನನ್ನು ಬಂಧಿಸಿದ್ದರು. ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ವ್ಯಕ್ತಿ ದೆಹಲಿಯಿಂದ ಸೌದಿ ಅರೇಬಿಯಾದ ದಮಾಮ್‌ಗೆ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಆತ ವಿಮಾನ ನಿಲ್ದಾಣಕ್ಕೆ

ವಿಮಾನ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ಮೂತ್ರವಿಸರ್ಜನೆ ಮಾಡಿದ ಯುವಕ Read More »

ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ‌ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸ್ ಪಿಎಸ್ಐ ಅಪ್ಪಾಜಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಮೈಸೂರು ಹುಡುಗನ ಜೊತೆ ಗುಟ್ಟಾಗಿ ಮದುವೆಯಾದ ಬಾಲಿವುಡ್ ವಿವಾದಿತ ತಾರೆ

ಸಿನಿಮ ಸಮಾಚಾರ:ಬಾಲಿವುಡ್ ವಿವಾದಿತ ತಾರೆ ರಾಖಿ ಸಾವಂತ್ ಕದ್ದುಮುಚ್ಚಿ ಎರಡನೇ ಮದುವೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಮೈಸೂರು ಹುಡುಗ ಆದಿಲ್ ಜೊತೆ ಸುತ್ತುತ್ತಿದ್ದ ಅವರು, ಅದೇ ಆದಿಲ್ ಜೊತೆ ಸಿಂಪಲ್ ಆಗಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇತ್ತೀಚಿನ ದಿನಗಳಲ್ಲಿ ಬಾಯ್ ಫ್ರೆಂಡ್ ಆದಿಲ್ ದುರ್ರಾನಿ ಜೊತೆ ಸಾಕಷ್ಟು ಊರುಗಳನ್ನು ಸುತ್ತಿದ್ದರು ರಾಖಿ. ವಿದೇಶ ಪ್ರವಾಸಗಳನ್ನು ಮುಗಿಸಿ ಬಂದಿದ್ದಾರೆ. ಹುಡುಗನ ಊರಾದ ಮೈಸೂರಿಗೂ ಬಂದು ಹೋಗಿದ್ದಾರೆ. ಆದಿಲ್ ಕುಟುಂಬವನ್ನು ಭೇಟಿ ಮಾಡಿದ್ದ ಅವರು, ಆದಿಲ್ ಕುಟುಂಬಕ್ಕಾಗಿ ನಾನು

ಮೈಸೂರು ಹುಡುಗನ ಜೊತೆ ಗುಟ್ಟಾಗಿ ಮದುವೆಯಾದ ಬಾಲಿವುಡ್ ವಿವಾದಿತ ತಾರೆ Read More »

ಮಂಗಳೂರು:ಗಾಂಜಾ ಚಲಾವಣೆ, ಸೇವನೆ ಆರೋಪ|ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿ ಬಂಧನ

ಸಮಗ್ರ ನ್ಯೂಸ್ : ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು, ಒಬ್ಬರು ಸ್ಥಳೀಯರಾಗಿದ್ದಾರೆ. ಬಂಧಿತ ಒಂಬತ್ತು ಮಂದಿಯಲ್ಲಿ ವಿದ್ಯಾರ್ಥಿಗಳು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯರು ಇದ್ದಾರೆ. ನಾಲ್ವರು ಯುವತಿಯರು ಎಂಬಿಬಿಎಸ್ ಮತ್ತು ಬಿಡಿಎಸ್ ಅಂತಿಮ

ಮಂಗಳೂರು:ಗಾಂಜಾ ಚಲಾವಣೆ, ಸೇವನೆ ಆರೋಪ|ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿ ಬಂಧನ Read More »

ಮತ್ತೊಬ್ಬ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ| ಆತಂಕಗೊಂಡ ಪೋಷಕ ವಲಯ

ಸಮಗ್ರ ನ್ಯೂಸ್ 10 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಎಣ್ಣೆಕೊಪ್ಪ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎದ್ದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ

ಮತ್ತೊಬ್ಬ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ| ಆತಂಕಗೊಂಡ ಪೋಷಕ ವಲಯ Read More »

ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ‌ ಬಾಡಿಬಿಲ್ಡರ್ | ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಐಟಿಸಿಟಿ ಬೆಂಗಳೂರಿನಲ್ಲಿ ಕೋಲಾರದ ಬಾಡಿ ಬಿಲ್ಡರ್‌ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಡಿ ಬಿಲ್ಡರ್‌ ಎಂದು ಗುರುತಿಸಲಾಗಿದೆ. ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ. ಈ ಘಟನೆ ಸಂಬಂಧ

ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ‌ ಬಾಡಿಬಿಲ್ಡರ್ | ಸಾವಿನ ಸುತ್ತ ಅನುಮಾನದ ಹುತ್ತ Read More »

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ವಾಹನ – ಮೂರು ಯೋಧರು ಮೃತ್ಯು

ಸಮಗ್ರ ನ್ಯೂಸ್: ನಿಯಮಿತ ಕಾರ್ಯಾಚರಣೆ ಕಾರ್ಯ ನಡೆಸುತ್ತಿದ್ದಾಗ ಸೈನಿಕರಿದ್ದ ವಾಹನ ಕಂದಕಕ್ಕೆ ಉರುಳಿ ಮೂವರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಮುಂಚೂಣಿ ಪ್ರದೇಶದಲ್ಲಿ ಇಂದು ಬೆಳ್ಳಗ್ಗೆ ಸಂಭವಿಸಿದೆ. ಒಬ್ಬ ಜೂನಿಯರ್ ಕಮಿಷನ್ಡ್ ಆಫೀಸರ್ ಮತ್ತು ಇಬ್ಬರು ಇತರ ಶ್ರೇಣಿಯ ಅಧಿಕಾರಿಗಳನ್ನು ಹೊತ್ತ ವಾಹನವು ಹಿಮದಿಂದ ತುಂಬಿದ ಟ್ರ್ಯಾಕ್‌ನಿಂದ ಜಾರಿ ಆಳದ ಕಮರಿಗೆ ಬಿದ್ದು ಈ ಘಟನೆ ಸಂಭವಿಸಿದೆ ಎಂದು ಸೇನೆ ಮಾಹಿತಿ ನೀಡಿದೆ. ಇನ್ನು ಸೇನೆಯ ಚಿನಾರ್

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ವಾಹನ – ಮೂರು ಯೋಧರು ಮೃತ್ಯು Read More »