ಕ್ರೈಂ

ಬೆಂಗಳೂರಿನ ಲಾಡ್ಜ್ ನಲ್ಲಿ‌ ಸಾವನ್ನಪ್ಪಿದ ಪುತ್ತೂರಿನ ಯುವಕನ ಪ್ರಕರಣಕ್ಕೆ ರೋಚಕ ತಿರುವು| ಪೋಸ್ಟ್ ಮಾರ್ಟಂ ವರದಿಯಲ್ಲೇನಿದೆ ಗೊತ್ತಾ?

ಸಮಗ್ರ ನ್ಯೂಸ್: ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರು ಮೂಲದ ತಕ್ಷಿತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪ್ರಕರಣ ಹೊಸ ತಿರುವು ಪಡೆದಿದೆ. ಮರಣೋತ್ತರ ಪರೀಕ್ಷೆಯ ವರದಿ ಮಡಿವಾಳ ಠಾಣೆಯ ಪೊಲೀಸರ ಕೈ ಸೇರಿದೆ. ಪುತ್ತೂರು ಮೂಲದ ತಕ್ಷಿತ್ ಸಾವಿನ ಪ್ರಕರಣ ಹೊಸ ಆಯಾಮ ಪಡೆದುಕೊಂಡಿದೆ. ಬೆಂಗಳೂರು ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತನಾಗಿದ್ದ ತಕ್ಷಿತ್ ಮರಣೋತ್ತರ ಶವ ಪರೀಕ್ಷೆಯ ವರದಿ ಪೊಲೀಸರ ಕೈಗೆ ಸೇರಿದೆ. ವರದಿಯ ಕೆಲವೊಂದು ಅಂಶಗಳು ಲಭ್ಯವಾಗಿದೆ. ತಕ್ಷಿತ್ ಮತ್ತು ಯುವತಿ ಸುಮಾರು 20 ದಿನಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದರು. ಪದೇ […]

ಬೆಂಗಳೂರಿನ ಲಾಡ್ಜ್ ನಲ್ಲಿ‌ ಸಾವನ್ನಪ್ಪಿದ ಪುತ್ತೂರಿನ ಯುವಕನ ಪ್ರಕರಣಕ್ಕೆ ರೋಚಕ ತಿರುವು| ಪೋಸ್ಟ್ ಮಾರ್ಟಂ ವರದಿಯಲ್ಲೇನಿದೆ ಗೊತ್ತಾ? Read More »

ಸುಳ್ಯ: ಹೈಪರ್ ಐಜಿಇ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ನಿಧನ

ವಿರಳ ಹಾಗೂ ತೀರ ಅಪರೂಪದ ಖಾಯಿಲೆ Hyper IGE Mediated Mast cell activation syndromeನಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗಾಂಧಿನಗರ ನಿವಾಸಿ ಚಾಂದಿನಿ ಕೊನೆಗೂ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು ಬಹಳ ಅಪರೂಪದ ಕಾಯಿಲೆ ಎಂದು ಗೊತ್ತಾಗಿ, ಅದಕ್ಕೆ ಚಿಕಿತ್ಸೆ

ಸುಳ್ಯ: ಹೈಪರ್ ಐಜಿಇ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ನಿಧನ Read More »

ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪುಡಿ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ದಾಂಧಲೆ ನಡೆಸಿ, ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಅಟ್ಟಹಾಸದಿಂದ ಹೆಣ್ಣೂರು ಬಡಾವಣೆಯ ನಿವಾಸಿಗಳು ಬೆಚ್ಚಿಬಿದ್ದಿದ್ದು, ಸ್ಥಳೀಯರ ಧೈರ್ಯದಿಂದ ಮೂವರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಘಟನೆ ತಡರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಹೆಣ್ಣೂರು ಬಡಾವಣೆಯ ದೊಡ್ಡೆರಾಮಣ್ಣ ಬಡಾವಣೆ ಬಳಿ ನಡೆದಿದೆ. ಸರ್ವಜ್ಞನಗರ ನಿವಾಸಿಗಳೆನ್ನಲಾದ ಐವರು ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಈ ದಾಂಧಲೆಗೆ ಕಾರಣವಾದ

ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ Read More »

ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು!!

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನಪ್ಪಿದ್ದಾನೆ. ಗ್ರಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ತಕ್ಷಿತ್ (20) ಶವವಾಗಿ ಪತ್ತೆಯಾಗಿದ್ದಾನೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. 8 ದಿನದ ಹಿಂದೆ ಪ್ರೇಯಸಿಯ ಜೊತೆಗೆ ತಕ್ಷಿತ್ ಬೆಂಗಳೂರಿಗೆ ಬಂದಿದ್ದಾರೆ. 8 ದಿನಗಳ ಕಾಲ ಪ್ರೇಮಿಗಳು ಲಾಡ್ಜ್ ನಲ್ಲೆ ವಾಸವಿದ್ದರು. 8 ದಿನಗಳ ಕಾಲ ಊಟ ತಿಂಡಿಯನ್ನು ಪಾರ್ಸೆಲ್ ತರಿಸಿಕೊಂಡಿದ್ದರು. ಊಟ ಸೇವಿಸಿದ ಬಳಿಕ ಇಬ್ಬರಿಗೂ ಫುಡ್ ಪಾಯಿಸನ್ ಆಗಿತ್ತು ಈ ವೇಳೆ

ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು!! Read More »

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅ16) ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು. ಆ ಕಾಲದ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ Read More »

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ

ಸಮಗ್ರ ನ್ಯೂಸ್: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಈ ಮೇಲ್ ಸಂದೇಶ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಇಮೇಲ್ ಐಡಿಗೆ ಅಪರಿಚಿತ ಇ-ಮೇಲ್ ನಿಂದ ಬೆದರಿಕೆ ಸಂದೇಶ ಬಂದಿದ್ದು ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಇನ್ನು ಬೆಂಗಳೂರು ನಗರದಾದ್ಯಂತ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಬಾಂಬ್ ಬೆದರಿಕೆ ಸಂದೇಶ ಕುರಿತಂತೆ

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ Read More »

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ Read More »

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಶಾಂತಿಗೋಡು ಆನಡ್ಕ ಗ್ರಾಮದಲ್ಲಿ ನಡೆದಿದೆ. ವಾಮನ(40) ಮೃತಪಟ್ಟವರುಎಂದು ಹೇಳಲಾಗಿದೆ. ಶನಿವಾರ ಸಂಜೆ ಸುಮಾರು 5.30 ರ ವೇಳೆ ವಾಮನ ಅವರು ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ವಾಮನ ಮನೆಯಲ್ಲಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು Read More »

ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು

ಸಮಗ್ರ ನ್ಯೂಸ್: ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಇಬ್ಬರು ಶಾಲಾ ವಿಧ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ನಿನ್ನೆ ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ನಡೆದಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತರನ್ನು ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7ವ) ಎಂದು ಗುರುತಿಸಲಾಗಿದೆ. ಅಕ್ಟೋಬರ್ 10 ರಂದು ಸಂಜೆ ವಿದ್ಯಾರ್ಥಿಗಳಾದ ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7ವ) ಮತ್ತು

ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು Read More »

ಮೈಸೂರು ದಸರಾದಲ್ಲಿ ಬಲೂನು ಮಾರುತ್ತಿದ್ದ ಬಾಲಕಿಯ ಅಪಹರಿಸಿ ಅತ್ಯಾಚಾರಗೈದು ಕೊಲೆ| ಕಿರಾತಕನನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಅಂತರದಲ್ಲಿ ಒಂದೇ ಸ್ಥಳದಲ್ಲಿ ಎರಡು ಕೊಲೆ ಪ್ರಕರಣಗಳು ವರದಿಯಾಗಿದ್ದು, ಇದೀಗ 9 ವರ್ಷದ ಅಲೆಮಾರಿ ಬಾಲಕಿ ಅತ್ಯಾಚಾರ ಮತ್ತು ಕೊಲೆಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಸರಾ ಸಂಭ್ರಮದ ನಡುವೆಯೇ ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ಈ ನೀಚ ಕೃತ್ಯ ನಡೆದಿದೆ. ಮೃತ ಬಾಲಕಿಯನ್ನು ಗುಲ್ಬರ್ಗಾ ಮೂಲದ ಅಲೆಮಾರಿ ಜನಾಂಗಕ್ಕೆ ಸೇರಿದ ರಾಧಿಕಾ (9) ಎಂದು ಗುರುತಿಸಲಾಗಿದೆ. ತಂದೆ ದೇಸಿ ಹಾಗೂ ತಾಯಿ

ಮೈಸೂರು ದಸರಾದಲ್ಲಿ ಬಲೂನು ಮಾರುತ್ತಿದ್ದ ಬಾಲಕಿಯ ಅಪಹರಿಸಿ ಅತ್ಯಾಚಾರಗೈದು ಕೊಲೆ| ಕಿರಾತಕನನ್ನು ಬಂಧಿಸಿದ ಪೊಲೀಸರು Read More »