ಕ್ರೈಂ

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ […]

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ Read More »

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಶಾಂತಿಗೋಡು ಆನಡ್ಕ ಗ್ರಾಮದಲ್ಲಿ ನಡೆದಿದೆ. ವಾಮನ(40) ಮೃತಪಟ್ಟವರುಎಂದು ಹೇಳಲಾಗಿದೆ. ಶನಿವಾರ ಸಂಜೆ ಸುಮಾರು 5.30 ರ ವೇಳೆ ವಾಮನ ಅವರು ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ವಾಮನ ಮನೆಯಲ್ಲಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು Read More »

ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು

ಸಮಗ್ರ ನ್ಯೂಸ್: ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಇಬ್ಬರು ಶಾಲಾ ವಿಧ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ನಿನ್ನೆ ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ನಡೆದಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತರನ್ನು ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7ವ) ಎಂದು ಗುರುತಿಸಲಾಗಿದೆ. ಅಕ್ಟೋಬರ್ 10 ರಂದು ಸಂಜೆ ವಿದ್ಯಾರ್ಥಿಗಳಾದ ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7ವ) ಮತ್ತು

ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು Read More »

ಮೈಸೂರು ದಸರಾದಲ್ಲಿ ಬಲೂನು ಮಾರುತ್ತಿದ್ದ ಬಾಲಕಿಯ ಅಪಹರಿಸಿ ಅತ್ಯಾಚಾರಗೈದು ಕೊಲೆ| ಕಿರಾತಕನನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಅಂತರದಲ್ಲಿ ಒಂದೇ ಸ್ಥಳದಲ್ಲಿ ಎರಡು ಕೊಲೆ ಪ್ರಕರಣಗಳು ವರದಿಯಾಗಿದ್ದು, ಇದೀಗ 9 ವರ್ಷದ ಅಲೆಮಾರಿ ಬಾಲಕಿ ಅತ್ಯಾಚಾರ ಮತ್ತು ಕೊಲೆಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಸರಾ ಸಂಭ್ರಮದ ನಡುವೆಯೇ ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ಈ ನೀಚ ಕೃತ್ಯ ನಡೆದಿದೆ. ಮೃತ ಬಾಲಕಿಯನ್ನು ಗುಲ್ಬರ್ಗಾ ಮೂಲದ ಅಲೆಮಾರಿ ಜನಾಂಗಕ್ಕೆ ಸೇರಿದ ರಾಧಿಕಾ (9) ಎಂದು ಗುರುತಿಸಲಾಗಿದೆ. ತಂದೆ ದೇಸಿ ಹಾಗೂ ತಾಯಿ

ಮೈಸೂರು ದಸರಾದಲ್ಲಿ ಬಲೂನು ಮಾರುತ್ತಿದ್ದ ಬಾಲಕಿಯ ಅಪಹರಿಸಿ ಅತ್ಯಾಚಾರಗೈದು ಕೊಲೆ| ಕಿರಾತಕನನ್ನು ಬಂಧಿಸಿದ ಪೊಲೀಸರು Read More »

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿ ಮಂಜು ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ‘ಕಲ್ಲೇಗ ಟೈಗರ್ಸ್’ ಹುಲಿ ವೇಷ ತಂಡದ ಅಕ್ಷಯ್ ಕಲ್ಲೇಗ (26) ಅವರ ಕೊಲೆ ಪ್ರಕರಣದ ಮೂರನೇ ಆರೋಪಿ, ಪುತ್ತೂರು ನಗರದ ಹೊರವಲಯದ ಪಡೀಲು ನಿವಾಸಿ ಮಂಜುನಾಥ್ ಅಲಿಯಾಸ್ ಮಂಜು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಅಕ್ಷಯ್ ಕಲ್ಲೇಗ ಅವರನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಮನೀಶ್, ಖಾಸಗಿ ಬಸ್ ಚಾಲಕನಾಗಿದ್ದ ಬನ್ನೂರು ಗ್ರಾಮದ ಕೃಷ್ಣನಗರ ನಿವಾಸಿ ಚೇತನ್, ಪಡೀಲು ನಿವಾಸಿ ಮಂಜುನಾಥ್ ಯಾನೆ

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿ ಮಂಜು ಜಾಮೀನು ಅರ್ಜಿ ವಜಾ Read More »

ಕಾಸರಗೋಡು: ಡಿವೈಎಫ್ಐ ನಾಯಕಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಡಿವೈಎಫ್‌ಐ ನಾಯಕಿ ಯುವ ವಕೀಲೆ ರಂಜಿತಾ(30) ಮಂಗಳವಾರ ಸಂಜೆ ತಮ್ಮ ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿವೈಎಫ್‌ಐ ಮಹಿಳಾ ಸಂಘದ ಪ್ರದೇಶ ಸಮಿತಿಯ ಅಧ್ಯಕ್ಷೆ ಮತ್ತು ವಕೀಲೆಯಾಗಿರುವ ರಂಜಿತಾ ಕುಂಬ್ಳದಲ್ಲಿರುವ ತಮ್ಮ ಕಚೇರಿ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಂದ್ರನ್ ಮತ್ತು ಕುಂಬ್ಳ ಬತ್ತೇರಿಯ ವಾರಿಜಾಕ್ಷಿ ದಂಪತಿಯ ಪುತ್ರಿ. ಅವರ ಪತಿ ಕೃತೇಶ್, ಅವರ ಎಂಟು ವರ್ಷದ ಮಗ ಮತ್ತು ಅವರ ಸಹೋದರ ಸುಜಿತ್ ಅವರನ್ನು ಅಗಲಿದ್ದಾರೆ. ಮೃತದೇಹದ ಬಳಿ

ಕಾಸರಗೋಡು: ಡಿವೈಎಫ್ಐ ನಾಯಕಿ ಆತ್ಮಹತ್ಯೆ Read More »

ಧರ್ಮಸ್ಥಳ: ಎಸ್ಐಟಿಯಿಂದ ಗ್ರಾ.ಪಂ ಮಾಜಿ ಅಧ್ಯಕ್ಷರುಗಳ ವಿಚಾರಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧಗಳು ನಡೆದಿವೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಸೋಮವಾರ ಗ್ರಾಮ ಪಂಚಾಯಿತಿ ನಾಲ್ವರು ಮಾಜಿ ಅಧ್ಯಕ್ಷರನ್ನು ವಿಚಾರಣೆಗೆ ಒಳಪಡಿಸಿತು. ಎಸ್‌ಐಟಿ ನೀಡಿದ್ದ ನೋಟಿಸ್‌ನಂತೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೇಶವ ಗೌಡ, ಪ್ರಭಾಕರ ಪೂಜಾರಿ, ಗೀತಾ,ಚಂದನ್ ಕಾಮತ್ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಇವರುಗಳು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಸಹಜ ಸಾವು ಪ್ರಕರಣದಲ್ಲಿ ಶವ ಹೂತಿರುವ ಸಂಬಂಧ ಬಿಲ್ ಪಾವತಿಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ

ಧರ್ಮಸ್ಥಳ: ಎಸ್ಐಟಿಯಿಂದ ಗ್ರಾ.ಪಂ ಮಾಜಿ ಅಧ್ಯಕ್ಷರುಗಳ ವಿಚಾರಣೆ Read More »

ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆಯ ಲೋಕದಲ್ಲಿ ವಿಶಿಷ್ಟ ಹೆಸರು ಪಡೆದ ಕಲಾವಿದ ಯಶವಂತ ಸರದೇಶಪಾಂಡೆ ಇನ್ನು ನೆನಪು ಮಾತ್ರ. ಹಾಸ್ಯನಟ, ನಿರ್ದೇಶಕ, ನಾಟಕಕಾರ, ರಚನೆಕಾರ, ಸಂಭಾಷಣಾಕಾರರಾಗಿ ತಮ್ಮ ಕಲೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದ ಯಶವಂತ ಸರದೇಶಪಾಂಡೆ ಅಲ್ಪಕಾಲದ ಅನಾರೋಗ್ಯದಿಂದ ಅಗಲಿದ್ದಾರೆ. ಇವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ಇವರ ಪತ್ನಿ ಮಾಲತಿ ಕೂಡ ಖ್ಯಾತ ಕಿರುತೆರೆ ನಟಿಯಾಗಿದ್ದಾರೆ. ಕನ್ನಡದ ರಿಯಾಲಿಟಿ ಶೋ ಜೋಡಿ ನಂ.1ನಲ್ಲಿ ಭಾಗವಹಿಸಿದ್ದರು. ಪತ್ನಿ ನಟಿ ಮಾಲತಿ,

ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಇನ್ನಿಲ್ಲ Read More »

ಉಡುಪಿ: ಬಸ್ ಮಾಲಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಆಘಾತಕಾರಿ ಘಟನೆಯೊಂದರಲ್ಲಿ, ರೌಡಿ ಶೀಟರ್ ಸೈಫುದ್ದೀನ್ ಸೆಪ್ಟೆಂಬರ್ 27 ರ ಶನಿವಾರ ಮಲ್ಪೆಯಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಮೃತಪಟ್ಟ ಘಟನೆ ನಡೆದಿದೆ. ಮಣಿಪಾಲ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದಾಗ ಹಲ್ಲೆ ನಡೆಸಲಾಯಿತು. ಗುಂಡಿನ ಮೇಲೆ ಗುಂಡು ಹಾರಿಸಿದ ನಂತರ, ದಾಳಿಕೋರರು ಅವರ ಮೇಲೆ ಮತ್ತಷ್ಟು ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ

ಉಡುಪಿ: ಬಸ್ ಮಾಲಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು Read More »

ಪುತ್ತೂರು: ಡಿಎನ್ಎ ನಲ್ಲಿ ಸಾಬೀತಾಯ್ತು ಕೃಷ್ಣ ಜೆ.ರಾವ್ ಕರ್ಮಕಾಂಡ| ಮಗು ಆತನದ್ದೇ ಎಂದು ವರದಿ

ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ಮದುವೆಯಾಗಲು ನಿರಾಕರಿಸಿದ್ದ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಪ್ರಕರಣ ಇದೀಗ ಮಹತ್ವದ ಘಟ್ಟ ತಲುಪಿದೆ. ಯುವತಿಗೆ ಜನಿಸಿದ್ದ ಮಗುವಿನ ತಂದೆ ಆರೋಪಿ ಕೃಷ್ಣ ಜೆ.ರಾವ್ ಎಂಬುದು ಡಿಎನ್​ಎ ಪರೀಕ್ಷೆಯಿಂದ ದೃಢಪಟ್ಟಿರುವುದಾಗಿ ಯುವತಿಯ ಕುಟುಂಬದವರು ಹಾಗೂ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆಪಿ ನಂಜುಂಡಿ ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ನ್ಯಾಯಕ್ಕಾಗಿ ಸಂತ್ರೆಸ್ತೆ ಕುಟುಂಬ ಕಾನೂನು ಹೋರಾಟ ನಡೆಸುತ್ತಿತ್ತು. ಇದೀಗ ಪ್ರಕರಣ

ಪುತ್ತೂರು: ಡಿಎನ್ಎ ನಲ್ಲಿ ಸಾಬೀತಾಯ್ತು ಕೃಷ್ಣ ಜೆ.ರಾವ್ ಕರ್ಮಕಾಂಡ| ಮಗು ಆತನದ್ದೇ ಎಂದು ವರದಿ Read More »