ಕ್ರೈಂ

ರೈಲ್ವೇ ನಿಲ್ದಾಣದ ಪ್ಲಾಸ್ಟಿಕ್ ಡ್ರಮ್ ನಲ್ಲಿ ಯುವತಿಯ ಕೊಳೆತ ಶವ| ಬೆಚ್ಚಿಬಿದ್ದ ಪ್ರಯಾಣಿಕರು

ಸಮಗ್ರ ನ್ಯೂಸ್: ಯಶವಂತಪುರ ರೈಲ್ವೇ ನಿಲ್ದಾಣದ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಡ್ರಮ್‌ ಪರಿಶೀಲನೆ ಮಾಡಿದಾಗ ಕೊಳೆತ ಸ್ಥಿತಿಯಲ್ಲಿರುವ ಯುವತಿ ದೇಹ ಪತ್ತೆಯಾಗಿದೆ ಯಶವಂತಪುರ ರೈಲ್ವೇ ನಿಲ್ದಾಣದ ಗೂಡ್ಸ್ ಪ್ಲಾಟ್ ಫಾರ್ಮ್ ನ ಬಾಕ್ಸ್ ಒಂದರಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 23 ವರ್ಷದ ಯುವತಿ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಯುವತಿಯನ್ನು ಕೊಲೆ […]

ರೈಲ್ವೇ ನಿಲ್ದಾಣದ ಪ್ಲಾಸ್ಟಿಕ್ ಡ್ರಮ್ ನಲ್ಲಿ ಯುವತಿಯ ಕೊಳೆತ ಶವ| ಬೆಚ್ಚಿಬಿದ್ದ ಪ್ರಯಾಣಿಕರು Read More »

ಸುಳ್ಯ ಜಾತ್ರೋತ್ಸವದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ| ತುರ್ತುಸಭೆಯಲ್ಲಿ ಸಂಘಟನೆಗಳ ಒತ್ತಡಕ್ಕೆ ಮಣಿದ ಆಡಳಿತ ಮಂಡಳಿ

ಸಮಗ್ರ ನ್ಯೂಸ್: ಸುಳ್ಯ ಜಾತ್ರೋತ್ಸವದಲ್ಲಿ ಎಲ್ಲ ಧರ್ಮೀಯರಿಗೆ ಮುಕ್ತ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಸಭೆಯಲ್ಲಿ ಈ ಮೊದಲು ಘೋಷಿಸಲಾಗಿದ್ದು, ಇದನ್ನು ಹಿಂದೂ ಸಂಘಟನೆಗಳು ವಿರೋಧ ಮಾಡಿದ್ದವು. ಈ ಕುರಿತಂತೆ ಇಂದು ತುರ್ತು ಸಭೆ ನಡೆಸಿದ ಹಿಂದೂ ಸಂಘಟನೆಗಳ ಪ್ರಮುಖರು ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ|ಕೆ.ವಿ. ಚಿದಾನಂದ ಅವರಿಗೆ ಮನವಿ ಮಾಡಿದ್ದರು. ತಕ್ಷಣ ಇದಕ್ಕೆ ಸ್ಪಂದಿಸಿದ ಡಾ|ಕೆ.ವಿ. ಚಿದಾನಂದ ಅವರು ತುರ್ತು ಸಭೆಯನ್ನು ಕರೆದಿದ್ದರು. ಅದರಂತೆ

ಸುಳ್ಯ ಜಾತ್ರೋತ್ಸವದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ| ತುರ್ತುಸಭೆಯಲ್ಲಿ ಸಂಘಟನೆಗಳ ಒತ್ತಡಕ್ಕೆ ಮಣಿದ ಆಡಳಿತ ಮಂಡಳಿ Read More »

“ಬೇಕಾಬಿಟ್ಟಿ ರಸ್ತೆ ಅಗೆದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ”
-ಗೇಲ್ ಅಧಿಕಾರಿಗೆ ಶಾಸಕ ಭರತ್ ಶೆಟ್ಟಿ ಎಚ್ಚರಿಕೆ

ಸಮಗ್ರ ನ್ಯೂಸ್: “ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ” ಹೀಗೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು. ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು ಇದರಿಂದ ನೀರಿನ ಪೈಪ್ ಒಡೆದು

“ಬೇಕಾಬಿಟ್ಟಿ ರಸ್ತೆ ಅಗೆದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ”
-ಗೇಲ್ ಅಧಿಕಾರಿಗೆ ಶಾಸಕ ಭರತ್ ಶೆಟ್ಟಿ ಎಚ್ಚರಿಕೆ
Read More »

ರಾತ್ರಿ‌ ಮದ್ಯ ಸೇವಿಸಿ ಮಲಗಿದಾತ ಬೆಳಿಗ್ಗೆ ಹೆಣವಾದ| ಕುಟುಂಬಸ್ಥರಿಂದ‌ ಬಾರ್‌ ಮುಂದೆ ಪ್ರತಿಭಟನೆ

ಸಮಗ್ರ ನ್ಯೂಸ್: ರಾತ್ರಿ ಮದ್ಯ ಸೇವಿಸಿದ ಯುವಕನೋರ್ವ ಬೆಳಗ್ಗೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ‌ತರೀಕೆರೆ ತಾಲೂಕಿನ ಕರಕುಚ್ಚಿ ಕಾಲನಿಯಲ್ಲಿ ನಡೆದಿರುವುದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಜುನಾಥ(29) ಎಂದು‌‌ ಗುರುತಿಸಲಾಗಿದೆ. ಇಲ್ಲಿನ ಬಾರ್ ನಲ್ಲಿ ಮದ್ಯ ಸೇವಿಸಿದ್ದೇ ಅವರ ಸಾವಿಗೆ ಕಾರಣ ಎಂದು ಆರೋಪಿಸಿ ಮೃತಪಟ್ಟ ಯುವಕನ ಕುಟುಂಬಸ್ಥರು ಬಾರ್ ಎದುರು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು. ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಆದ್ದರಿಂದ ಕೂಡಲೇ ಬಾರ್ ಮುಚ್ಚುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ರಾತ್ರಿ‌ ಮದ್ಯ ಸೇವಿಸಿ ಮಲಗಿದಾತ ಬೆಳಿಗ್ಗೆ ಹೆಣವಾದ| ಕುಟುಂಬಸ್ಥರಿಂದ‌ ಬಾರ್‌ ಮುಂದೆ ಪ್ರತಿಭಟನೆ Read More »

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ

ಚಿತ್ರದುರ್ಗ: ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ. ಆದರೆ ಬಾಲಕಿಯರ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್​​​ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ. ಯಾವುದೇ ಗಾಯಗಳು ಇಲ್ಲ ಎಂದು

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ Read More »

ಅಪಘಾತದಲ್ಲಿ ಮೃತ ಮುಷರಫ್ ಸೋದರಿಯ ವಿದ್ಯಾಭ್ಯಾಸಕ್ಕೆ ಇನಾಯತ್ ಅಲಿ ನೆರವಿನ ಭರವಸೆ

ಸಮಗ್ರ ನ್ಯೂಸ್: ರವಿವಾರ ವೇಣೂರು ಸಮೀಪದ ಗರ್ಡಾಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರ್ಮಿಕ ಗುರು ನೌಶಾದ್‌ ಹಾಜಿ ಅವರ ಕಾರ್ ಚಾಲಕ ಮುಷರಫ್‌ ಉಳಾಯಿಬೆಟ್ಟು ಅವರ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮುಷರಫ್‌ ಅವರ ಅಗಲಿಕೆ ಅವರ ಕುಟುಂಬದವರಿಗೆ ಭರಿಸಲಾಗದ ನಷ್ಟವಾಗಿದೆ. ಅವರ ಕಷ್ಟ ಕಾಲದಲ್ಲಿ ನೆರವಾಗುವುದಾಗಿ ಭರವಸೆ ನೀಡಿದ ಇನಾಯತ್‌ ಅಲಿ ಅವರು, ಮುಷರಫ್‌ ಅವರ ಸಹೋದರಿಯ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸುವುದಾಗಿ

ಅಪಘಾತದಲ್ಲಿ ಮೃತ ಮುಷರಫ್ ಸೋದರಿಯ ವಿದ್ಯಾಭ್ಯಾಸಕ್ಕೆ ಇನಾಯತ್ ಅಲಿ ನೆರವಿನ ಭರವಸೆ Read More »

ಬೆಂಗಳೂರು ಯುವಕನ ಕಿಡ್ನಾಪ್ & ಕೊಲೆ ಪ್ರಕರಣ|ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ

ಸಮಗ್ರ ನ್ಯೂಸ್: ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ಐ ಮತ್ತು ಸಿಬ್ಬಂದಿ ಶವ ಪತ್ತೆಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ

ಬೆಂಗಳೂರು ಯುವಕನ ಕಿಡ್ನಾಪ್ & ಕೊಲೆ ಪ್ರಕರಣ|ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ Read More »

ಇಹಲೋಕದ ಯಾತ್ರೆ ಮುಗಿಸಿದ ನಡೆದಾಡುವ ದೇವರು| ಪಂಚಭೂತಗಳಲ್ಲಿ ಲೀನರಾದ ಸಿದ್ದೇಶ್ವರ ‌ಸ್ವಾಮೀಜಿ

ಸಮಗ್ರ ನ್ಯೂಸ್: ನಡೆದಾಡುವ ಸಂತ, ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ವಿಜಯಪುರದ ಜ್ಞಾನಯೋಗ ಆಶ್ರಮದ ಆವರಣದಲ್ಲಿ ನಡೆದಿದೆ. ಶ್ರೀಗಳು ವಿಲ್‌ನಲ್ಲಿ ಬರೆದಿರುವಂತೆ ಮಣ್ಣು ಮಾಡುವ ಬದಲು, ಅವರ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಗಿದೆ. ಈ ಮೂಲಕ ಶ್ರೀಗಳ ಇಹಲೋಕದ ಯಾತ್ರೆ ಮುಗಿದಿದ್ದು, ಪಂಚಭೂತಗಳಲ್ಲಿ ಸ್ವಾಮೀಜಿ ಲೀನರಾಗಿದ್ದಾರೆ. ವಿಜಯಪುರದ ಜ್ಞಾನ ಯೋಗಾಶ್ರಮದ ಆವರಣದಲ್ಲಿಯೇ ಸಿದ್ದೇಶ್ವರ ಸ್ವಾಮೀಜಿ ಅಂತ್ಯಸಂಸ್ಕಾರ ನಡೆಯಿತು. ಇಂದು(ಡಿ.3) ಬೆಳಗ್ಗೆಯಿಂದ ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಸಿಎಂ

ಇಹಲೋಕದ ಯಾತ್ರೆ ಮುಗಿಸಿದ ನಡೆದಾಡುವ ದೇವರು| ಪಂಚಭೂತಗಳಲ್ಲಿ ಲೀನರಾದ ಸಿದ್ದೇಶ್ವರ ‌ಸ್ವಾಮೀಜಿ Read More »

ಬೆಳ್ತಂಗಡಿ: ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಂದರಿ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. ಡಿ. 12ರಂದು ವಿಷ ಸೇವಿಸಿದ್ದ ಮಹಿಳೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದ ಬಳಿಕ ಡಿ 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಬೆಳ್ತಂಗಡಿ: ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು Read More »

ಸುಳ್ಯ: ರಬ್ಬರ್ ಸ್ಮೋಕ್ ಹೌಸ್ ನಿಂದ ಮನೆಗೆ ಹತ್ತಿಕೊಂಡ ಬೆಂಕಿ; ಅಪಾರ ನಷ್ಟ

ಸಮಗ್ರ ನ್ಯೂಸ್: ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿ ಸಮೀಪದಲ್ಲಿದ್ದ ಮನೆಗೂ ಬೆಂಕಿ ಹತ್ತಿಕೊಂಡ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿ ಎಂಬಲ್ಲಿ‌ ಸಂಭವಿಸಿದೆ. ಜ.2 ರಂದು ಘಟನೆ ನಡೆದಿದ್ದು ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂ. ಮೌಲ್ಯದ ಹಾನಿ ಸಂಭವಿಸಿದೆ. ರಬ್ಬರ್ ಶೀಟ್ ಒಣಗಿಸುವ ಸ್ಮೋಕ್ ಹೌಸ್ ಗೆ ಬೆಂಕಿ ಹೊತ್ತಿಕೊಂಡಿದ್ದು ಪರಿಣಾಮ ಬೆಂಕಿಯ ಕೆನ್ನಾಲಿಗೆಗಳು ಸುತ್ತಲಿಡೀ ವ್ಯಾಪಿಸಿ ಅಪಾರ ಪ್ರಮಾಣದ ಹಾನಿಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಕೃಷಿಕ ಸೂರಜ್ ಹೊಸೂರು ಎಂಬವರ ಮನೆಯಲ್ಲಿ ರಬ್ಬರ್ ಶೀಟನ್ನು

ಸುಳ್ಯ: ರಬ್ಬರ್ ಸ್ಮೋಕ್ ಹೌಸ್ ನಿಂದ ಮನೆಗೆ ಹತ್ತಿಕೊಂಡ ಬೆಂಕಿ; ಅಪಾರ ನಷ್ಟ Read More »