ಕ್ರೈಂ

ಬೆಳಗಾವಿ: ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿಕ್ಕಿದ ಪ್ರಕರಣ| ಮೂವರನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಶ್ರೀರಾಮಸೇನೆಯ ಬೆಳಗಾವಿ ಅಧ್ಯಕ್ಷ ರವಿ ಕೋಕಿಟ್ಕರ್ ಅವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಜಿತ್ ಭಟ್ಖಂಡೆ, ರಾಹುಲ್ ಕೊಡಚವಾಡ ಮತ್ತು ಜ್ಯೋತಿಬಾ ಮುಟಗೇಕರ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರು ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎಂ.ಬಿ.ಬೋರಲಿಂಗಯ್ಯ ತಿಳಿಸಿದ್ದಾರೆ. ಅಭಿಜಿತ್ ಪರವಾನಗಿ ಇಲ್ಲದ ಬಂದೂಕನ್ನು ಬಳಸಿ ಒಂದು ಸುತ್ತು ಗುಂಡು ಹಾರಿಸಿದ್ದನು. ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಜನವರಿ 7 ರ ಶನಿವಾರ ಹಿಂಡಲಗಾ ಗ್ರಾಮದಲ್ಲಿ ಕೋಕಿಟ್ಕರ್ ಮತ್ತು ಅವರ […]

ಬೆಳಗಾವಿ: ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿಕ್ಕಿದ ಪ್ರಕರಣ| ಮೂವರನ್ನು ಬಂಧಿಸಿದ ಪೊಲೀಸರು Read More »

ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ| ಹೊತ್ತಿ ಉರಿದ ಬಸ್| ಯೋಧ ಸೇರಿ ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕೆಎಸ್’ಆರ್’ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ತಮಿಳುನಾಡಿನ ಕೃಷ್ಣಗಿರಿಯ ಗುರುಪರಪಲ್ಲಿ ಬಳಿ ನಡೆದಿದೆ. ಗುರುಪರಪಲ್ಲಿಯ ಒಟ್ಟೆರ್ ಗ್ರಾಮ ನಿವಾಸಿಗಳಾದ ಯೋಧ ಸುಂದರೇಶನ್ ಹಾಗೂ ರೈತ ಗಣೇಶನ್ ಮೃತಪಟ್ಟವರು. ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಇಬ್ಬರೂ ಬೈಕ್ ನಲ್ಲಿ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಬೆಂಗಳೂರಿನಿಂದ ತಿರುಕೋವಿಲೂರು ಮಾರ್ಗವಾಗಿ ಬರುತ್ತಿದ್ದ ಕೆಎಸ್’ಆರ್’ಟಿಸಿ ಬಸ್

ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ| ಹೊತ್ತಿ ಉರಿದ ಬಸ್| ಯೋಧ ಸೇರಿ ಇಬ್ಬರು ದುರ್ಮರಣ Read More »

ರಾಜಕಾರಣಿಗಳ‌ ಜೊತೆಗೆ ಖಾಸಾ ಸಂಬಂಧ| ಹೆಣ್ಮಕ್ಕಳ ಬಾಳಿನ ಕಿರಾತಕ| ಬಗೆದಷ್ಟೂ ಹೊರಬರ್ತಿದೆ ಸ್ಯಾಂಟ್ರೋ ರವಿಯ ಕುಕೃತ್ಯ

ಸಮಗ್ರ ನ್ಯೂಸ್: ರಾಜಕಾರಣಿಗಳ ಜತೆ ಖಾಸಾ ಸಂಬಂಧ ಹೊಂದಿರುವ, ನೂರಾರು ಹೆಣ್ಮಕ್ಕಳ ಬಾಳಿನಲ್ಲಿ ಆಟವಾಡಿರುವ ಆರೋಪ ಹೊತ್ತಿರುವ ಮೈಸೂರಿನ ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಆತ ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಈ ನಡುವೆ, ಸ್ಯಾಂಟ್ರೋ ರವಿಯಿಂದ ದೌರ್ಜನ್ಯ ಮತ್ತು ವಂಚನೆಗೆ ಒಳಗಾಗಿರುವ ದಲಿತ ಮಹಿಳೆ ನ್ಯಾಯಾಧೀಶರ ಮುಂದೆ ಲೈಂಗಿಕ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್‌ ೧೬೪ರ ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಿದ್ದು, ಹಲವು ಅಂಶಗಳ ಮೇಲೆ

ರಾಜಕಾರಣಿಗಳ‌ ಜೊತೆಗೆ ಖಾಸಾ ಸಂಬಂಧ| ಹೆಣ್ಮಕ್ಕಳ ಬಾಳಿನ ಕಿರಾತಕ| ಬಗೆದಷ್ಟೂ ಹೊರಬರ್ತಿದೆ ಸ್ಯಾಂಟ್ರೋ ರವಿಯ ಕುಕೃತ್ಯ Read More »

ಮಂಗಳೂರು: ತಿಮಿಂಗಿಲ ವಾಂತಿ(ಅಂಬರ್ ಗ್ರೀಸ್) ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಂಬರ್-ಗ್ರೀಸ್ (ತಿಮಿಂಗಿಲ ವಾಂತಿ) ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಕೋಟ್ಯಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಪಡ್ಯಾರು ಮನೆ ನಿವಾಸಿ ನಿಮಿತ್ (26) ಹಾಗೂ ಪುಂಜಾಲಕಟ್ಟೆ ಕುಕ್ಕಳ ಮನೆ ನಿವಾಸಿ ಯೋಗೀಶ್ ಪೂಜಾರಿ(41) ಬಂಧಿತ ಆರೋಪಿಗಳು. ಬಂಧಿತರಿಂದ 3.2 ಕೆಜಿ ತೂಕದ ಅಂಬರ್ ಗ್ರೀಸ್ ಹಾಗೂ 2 ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದಕ್ಕೆ ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು

ಮಂಗಳೂರು: ತಿಮಿಂಗಿಲ ವಾಂತಿ(ಅಂಬರ್ ಗ್ರೀಸ್) ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಸಿಸಿಬಿ Read More »

ಚೆನ್ನೈ: ಇಂಡಿಯನ್ ನ್ಯಾಷನಲ್ ಕಾರ್ ರೇಸಿಂಗ್ ನಲ್ಲಿ ಭೀಕರ ಅಪಘಾತ| ಖ್ಯಾತ ರೇಸರ್ ಕೆ.ಇ ಕುಮಾರ್ ದುರ್ಮರಣ

ಸಮಗ್ರ ನ್ಯೂಸ್: ಚೆನ್ನೈನ ಮದ್ರಾಸ್ ಇಂಟರ್ನ್ಯಾಶನಲ್ ಸರ್ಕ್ಯೂಟ್ನಲ್ಲಿ ನಡೆಯುತ್ತಿರುವ ಎಂಆರ್ಎಫ್ ಎಂಎಂಎಸ್ಸಿ ಎಫ್ಎಂಎಸ್ಸಿಐ ಇಂಡಿಯನ್ ನ್ಯಾಶನಲ್ ಕಾರ್ ರೇಸಿಂಗ್ ಚಾಂಪಿಯನ್ಶಿಪ್ನ ಎರಡನೇ ಸುತ್ತಿನ ಪಂದ್ಯದಲ್ಲಿ ಖ್ಯಾತ ರೇಸರ್ ಕೆಇ ಕುಮಾರ್ ಭಾನುವಾರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 59 ವರ್ಷದ ಕೆಇ ಕುಮಾರ್ ದುರ್ಮರಣ ಹೊಂದಿದ್ದು ಇಂದು ಬೆಳಿಗ್ಗೆ ನಡೆದ ಸೆಲೂನ್ ಕಾರ್ ರೇಸ್ ವೇಳೆ ಕುಮಾರ್ ಅವರ ಕಾರಿಗೆ ಮತ್ತೊಂದು ಕಾರು ಅಡ್ಡ ಬಂದಿದ್ದರಿಂದ ಕಾರು ಟ್ರ್ಯಾಕ್ ನಲ್ಲಿ ಸ್ಕಿಡ್ ಆಗಿ ಬೇಲಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು.

ಚೆನ್ನೈ: ಇಂಡಿಯನ್ ನ್ಯಾಷನಲ್ ಕಾರ್ ರೇಸಿಂಗ್ ನಲ್ಲಿ ಭೀಕರ ಅಪಘಾತ| ಖ್ಯಾತ ರೇಸರ್ ಕೆ.ಇ ಕುಮಾರ್ ದುರ್ಮರಣ Read More »

ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ದಾಳಿ

ಸಮಗ್ರ ನ್ಯೂಸ್: ಭಜರಂಗ ದಳ ಕಾರ್ಯಕರ್ತರೊಬ್ಬರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಭಾನುವಾರ ಶಿವಮೊಗ್ಗದಲ್ಲಿ ನಡೆದಿದೆ. ಪ್ಲಂಬರ್ ಕೆಲಸ ಮಾಡುತ್ತಿರುವ ಭಜರಂಗದಳ ಕಾರ್ಯಕರ್ತ ಮನೋಜ್‌ ಅವರು ತುಂಗಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಆತನ ಮೇಲೆ ಹಲ್ಲೆ ನಡೆದಿದೆ. ಮನೋಜ್‌ ತಲೆಗೆ ಬಲವಾಗಿ ಹೊಡೆಯಲಾಗಿದ್ದು, ಗಾಯಗೊಂಡಿರುವ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೋಜ್‌ಗೆ ಹಲ್ಲೆಯಾಗಿರುವುದನ್ನು ತಿಳಿದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದರು. ಶಿವಮೊಗ್ಗದಲ್ಲಿ ಭಾನುವಾರ ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ

ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ದಾಳಿ Read More »

ಕುಕ್ಕೆಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ. ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ

ಕುಕ್ಕೆಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಮಡಿಕೇರಿ: ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ತೀವ್ರ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿದೆ. 12 ವರ್ಷದ ಬಾಲಕ ಕೀರ್ತನ್​ ಮೃತ ವಿದ್ಯಾರ್ಥಿ. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಬಾಲಕ ಕಿರುಚಿಕೊಂಡಿದ್ದು, ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಪುತ್ರನನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

ಮಡಿಕೇರಿ: ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿ ಬಲಿ Read More »

ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷನ ಮೇಲೆ ಗುಂಡಿನ ದಾಳಿ| ಚುರುಕುಗೊಂಡ ತನಿಖೆ; ಜಿಲ್ಲೆಯಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಬೆಳಗಾವಿ ಸಮೀಪದ ಹಿಂಡಲಗಾ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್‌ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್‌ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಶ್ರೀರಾಮ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ ಪ್ರಕರಣದ ತನಿಖೆಗೆ 4 ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ

ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷನ ಮೇಲೆ ಗುಂಡಿನ ದಾಳಿ| ಚುರುಕುಗೊಂಡ ತನಿಖೆ; ಜಿಲ್ಲೆಯಲ್ಲಿ ಕಟ್ಟೆಚ್ಚರ Read More »

ಉಡುಪಿಯಲ್ಲಿ ನಡೆಯಿತು ರಿಯಲ್ ಕಾಂತಾರ ಕಥೆ| ‘ಭೂತಕೋಲ’ ವಿರುದ್ಧ ಕೋರ್ಟ್ ಗೆ ಹೋಗಿದ್ದ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕಾಂತಾರ ಚಿತ್ರದಲ್ಲಿ ‘ಭೂತ ಕೋಲ’ದ ವಿರುದ್ಧ ನಡೆದವನ ಪಾತ್ರಧಾರಿ ರಕ್ತಕಾರಿ ಸಾಯುವ ದೃಶ್ಯ ಎಲ್ಲರನ್ನೂ ಕಾಡುತ್ತದೆ. ಚಿತ್ರದಲ್ಲಿ ಬರುವ ಈ ದೃಶ್ಯ ರೀಲ್, ಆದರೆ ಉಡುಪಿಯ ಪಡುಬಿದ್ರೆ ತಾಲೂಕಿನ ಪಡುಹಿತ್ಲು ಬಳಿ ರಿಯಲ್ ಆಗಿ ಇಂತಹ ಘಟನೆಯೊಂದು ನಡೆದಿದ್ದು, ಇದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ಮತ್ತೊಮ್ಮೆ ತುಳುನಾಡಿನ ದೈವಾರಾಧನೆ ಮುನ್ನೆಲೆಗೆ ಬಂದಿದೆ. ಉಡುಪಿ ಜಿಲ್ಲೆಯ ಪಡುಹಿತ್ಲು ಜಾರಂದಾಯ ದೈವಸ್ಥಾನದ ದೈವಕೋಲದ ವಿಚಾರದಲ್ಲಿ ಸ್ಥಳೀಯ ಎರಡು ಗುಂಪುಗಳ ಮಧ್ಯೆ ತಗಾದೆ ಇತ್ತು ಎನ್ನಲಾಗಿದೆ.

ಉಡುಪಿಯಲ್ಲಿ ನಡೆಯಿತು ರಿಯಲ್ ಕಾಂತಾರ ಕಥೆ| ‘ಭೂತಕೋಲ’ ವಿರುದ್ಧ ಕೋರ್ಟ್ ಗೆ ಹೋಗಿದ್ದ ವ್ಯಕ್ತಿ ಸಾವು Read More »