ಕ್ರೈಂ

ಸುಳ್ಯ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಆಸ್ಪತ್ರೆಯಲ್ಲಿ ಸಾವು

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ್ದ ಸುಳ್ಯದ ಕಾಂಗ್ರೆಸ್ ನಾಯಕ ಸುಧೀರ್ ರೈ ಮೇನಾಲ(48 ವರ್ಷ) ಅವರು ಇಂದು(ಜ.೧) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿಧಿವಶರಾದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯರಾಗಿದ್ದರು. ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಅಜ್ಜಾವರ ತೆರಳುವ ಮಾರ್ಗ ಮಧ್ಯೆ ವಿಷ ಸೇವನೆ ಮಾಡಿ ಮನೆಗೆ ಹೋಗಿದ್ದರು. ವಿಷ ಸೇವಿಸಿದ ವಿಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ತಕ್ಷಣ […]

ಸುಳ್ಯ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಆಸ್ಪತ್ರೆಯಲ್ಲಿ ಸಾವು Read More »

ಶಿರಾಡಿಯಲ್ಲಿ ಒಂಟಿಸಲಗ ದಾಳಿ| ತಂದೆ ಸಾವು; ಮಗ ಗಂಭೀರ

ಸಮಗ್ರ ನ್ಯೂಸ್: ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿಯಲ್ಲಿ ನಡೆದಿದೆ. ಇಲ್ಲಿನ ಗುಂಡ್ಯ ಹೊಳೆ ಬದಿಗೆ ತೆರಳಿದವರ ಮೇಲೆ ಒಂಟಿ ಸಲಗವೊಂದು ದಾಳಿ ನಡೆಸಿದ್ದು ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿಗಳಾದ ತಿಮ್ಮಪ್ಪ ( 45) ಮತ್ತು ಅವರ ಪುತ್ರ ಶರಣ್ (18) ಶನಿವಾರದಂದು ಗುಂಡ್ಯ ಹೊಳೆ ಬದಿಗೆ ತೆರಳಿದ್ದರು. ಈ ವೇಳೆ ಕಾಡಿನಿಂದ ಹೊಳೆಯತ್ತ ಆಗಮಿಸಿದ್ದ

ಶಿರಾಡಿಯಲ್ಲಿ ಒಂಟಿಸಲಗ ದಾಳಿ| ತಂದೆ ಸಾವು; ಮಗ ಗಂಭೀರ Read More »

ಕಾಸರಗೋಡು: ಬಸ್ ಡಿಕ್ಕಿ ಹೊಡೆದು ಮಗು ಸಾವು

ಸಮಗ್ರ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ತಾಯಿ ಜೊತೆ ಇದ್ದ ಮಗುವಿಗೆ ಖಾಸಗಿ ಬಸ್ಸು ಬಡಿದು ಮಗು ಮೃತಪಟ್ಟ ದುರಂತ ಘಟನೆ ಕಾಸರಗೋಡು ಜಿಲ್ಲೆಯ ಚೆರ್ಕಳದಲ್ಲಿ ನಡೆದಿದೆ. ಸೀತಾಂಗೋಳಿಯ ನಿವಾಸಿ ಆಶಿಕ್ ಮತ್ತು ಸುಬೈದಾ ದಂಪತಿ ಪುತ್ರ ವಾಹಿದ್(3) ಮೃತ ಮಗು. ಬಸ್ ಬಡಿಯುವಾಗ ಗಾಯಗೊಂಡು ಮಗುವಿನ ಜೊತೆಗಿದ್ದ ತಾಯಿ ಸುಬೈದಾ ಕೂಡ ಗಾಯಗೊಂಡಿದ್ದಾರೆ‌. ಮೃತ ಮಗುವಿನ ಮೃತದೇಹವನ್ನು ಕಾಸರಗೊಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರಿಸಲಾಯಿತು.

ಕಾಸರಗೋಡು: ಬಸ್ ಡಿಕ್ಕಿ ಹೊಡೆದು ಮಗು ಸಾವು Read More »

ವಿಟ್ಲ: ಆಡು ಕಳ್ಳರನ್ನು ಹಿಡಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಆಡುಗಳಿಗೆ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿಗಳಾದ ಅಜೀಮ್‌ (19), ಅನಸ್ (19) ಪೊಲೀಸ್ ವಶವಾದವರು. ಪೆರುವಾಯಿ, ಅಡ್ಯನಡ್ಕ, ಕೇಪು, ಮರಕ್ಕಿಣಿ, ಅಳಿಕೆ ಮುಂತಾದ ಪ್ರದೇಶಗಳಿಂದ ಗುಡ್ಡಕ್ಕೆ ಮೇಯಲೆಂದು ಬಿಡುತ್ತಿದ್ದ ಆಡುಗಳು ನಾಪತ್ತೆಯಾಗುತ್ತಿದ್ದವು. ಆಡುಗಳ ನಾಪತ್ತೆ ಹಿಂದೆ ಖದೀಮರ ಕೈಚಳಕವನ್ನು ಪತ್ತೆ ಹಚ್ಚುವ ಸಲುವಾಗಿ ಆಡು ಮಾಲಕರು ಕಾಯುತ್ತಿದ್ದರು. ಶುಕ್ರವಾರ ಮುಂಜಾನೆ ಕಳ್ಳರ ಪತ್ತೆಗಾಗಿ ಮಾಲಕರು ಕಾಯುತ್ತಿದ್ದ ವೇಳೆ ಕೇಪು ಕಲ್ಲಂಗಳ ದ್ವಾರದ

ವಿಟ್ಲ: ಆಡು ಕಳ್ಳರನ್ನು ಹಿಡಿದ ಸಾರ್ವಜನಿಕರು Read More »

ಚಾಲಕನಿಗೆ ಹೃದಯಾಘಾತದಿಂದ ಬಸ್, ಕಾರು ನಡುವೆ ಭೀಕರ ಅಪಘಾತ| 9 ಸಾವು, 28 ಮಂದಿಗೆ ಗಾಯ

ಗಾಂಧೀನಗರ:ಚಾಲಕನಿಗೆ ಹೃದಯಾಘಾತದಿಂದ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಜನರು ಸಾವನ್ನಪ್ಪಿ 28 ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೂರತ್‌ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ವೇಳೆ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೂ ಮುನ್ನ ಚಾಲಕನಿಗೆ ಹೃದಯಾಘಾತವಾಗಿದ್ದು, ಇದರಿಂದ ವಾಹನದ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ

ಚಾಲಕನಿಗೆ ಹೃದಯಾಘಾತದಿಂದ ಬಸ್, ಕಾರು ನಡುವೆ ಭೀಕರ ಅಪಘಾತ| 9 ಸಾವು, 28 ಮಂದಿಗೆ ಗಾಯ Read More »

ಬಸ್ ಟಾಪ್ ಮೇಲೆ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್: ಬಸ್ ನ ಟಾಪ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ . ಡಿಸೆಂಬರ್ 28 ರಂದು ಶಬರಿಮಲೆ ಯಾತ್ರೆ ಮುಗಿಸಿ ಬಂದು ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ನಿಲ್ಲಿಸಿದ ಬಸ್ಸಿನ ಟಾಪ್ ನಲ್ಲಿ ಮಲಗಿದ್ದರು. ಮೇಲಿಂದ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ತಲೆಗೆ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ

ಬಸ್ ಟಾಪ್ ಮೇಲೆ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು Read More »

ಪ್ರೇಯಸಿಯ ಬೈಕ್ ಟ್ಯಾಂಕ್ ಮೇಲೆ ಅಸಭ್ಯವಾಗಿ ಕುಳ್ಳಿರಿಸಿ ಯುವಕನ ಜಾಲಿ ರೈಡ್

ಸಮಗ್ರ ನ್ಯೂಸ್: ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಕೂರಿಸಿ ವಿಚಿತ್ರವಾಗಿ ಪ್ರೀತಿ ನಿವೇದನೆ ಮಾಡುವುದಕ್ಕೆ ಮುಂದಾಗ ವಿಚಿತ್ರವಾದ ವಿಡಿಯೋವೊಂದನ್ನು ಕಾರಿನಲ್ಲಿ ಹಾದುಹೋಗುವ ಜನರು ಚಿತ್ರೀಕರಿಸಿದ್ದಾರೆ. ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಘಟನೆ ನಡೆದ ಎರಡೇ ಗಂಟೆಗಳಲ್ಲಿ ಸ್ಟೀಲ್ ಪ್ಲಾಂಟ್ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾಹನವನ್ನು

ಪ್ರೇಯಸಿಯ ಬೈಕ್ ಟ್ಯಾಂಕ್ ಮೇಲೆ ಅಸಭ್ಯವಾಗಿ ಕುಳ್ಳಿರಿಸಿ ಯುವಕನ ಜಾಲಿ ರೈಡ್ Read More »

ಉಡುಪಿ: ಲಾರಿ ಡಿಕ್ಕಿ ಹೊಡೆದು ಸಬ್ ಇನ್ಸ್‌ಪೆಕ್ಟರ್ ಸಾವು

ಸಮಗ್ರ ನ್ಯೂಸ್: ಉಡುಪಿಯ ಹೊರ ವಲಯದ ಅಂಬಾಗಿಲಿನಲ್ಲಿ ಲಾರಿ ಡಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಸಾವನ್ನಪ್ಪಿರುವ ದುರ್ಘಟನೆ ಗುರುವಾರ(ಡಿ.29) ತಡರಾತ್ರಿ ನಡೆದಿದೆ. ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಶಂಕರ್(52) ಮೃತ ದುರ್ದೈವಿ. ಮಂಗಳೂರು ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ಮುಗಿಸಿ ಬಸ್ಸಿನಿಂದ ಉಡುಪಿಗೆ ಬಂದಿದ್ದ ಇವರು ತಮ್ಮ ಬೈಕ್ ನಲ್ಲಿ ಉಳ್ಳೂರು ಕಡೆ ಹೋಗುತ್ತಿದ್ದಾಗ ಅತೀ ವೇಗದಿಂದ ಆಗಮಿಸಿದ ಲಾರಿ ಬೈಕ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಶಂಕರ್

ಉಡುಪಿ: ಲಾರಿ ಡಿಕ್ಕಿ ಹೊಡೆದು ಸಬ್ ಇನ್ಸ್‌ಪೆಕ್ಟರ್ ಸಾವು Read More »

ಜೀವನ್ಮರಣ ಹೋರಾಟದಲ್ಲಿ ರಿಷಬ್ ಪಂತ್| ಏಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ

ಸಮಗ್ರ ನ್ಯೂಸ್: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ರಿಷಭ್ ಪಂತ್ ತೀವ್ರ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಕಾರು ಚಾಲನೆ ಮಾಡುವಾಗ ಕ್ರಿಕೆಟರ್ ನಿದ್ರೆಗೆ ಜಾರಿದ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡು ಬಿಎಂಡಬ್ಲ್ಯೂ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕ್ರಿಕೆಟಿಗ ಕಾರಿನಲ್ಲಿ ಒಬ್ಬರೇ ಇದ್ದರು ಮತ್ತು ಧಗಧಗನೇ ಹೊತ್ತಿಉರಿದ ಕಾರಿನ ಗಾಜು ಒಡೆದು ಹೊರ ಬಂದು ಇದೀಗ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ ಎಂದು ಉತ್ತರಾಖಂಡ್ ಪೊಲೀಸ್ ಡಿಜಿಪಿ

ಜೀವನ್ಮರಣ ಹೋರಾಟದಲ್ಲಿ ರಿಷಬ್ ಪಂತ್| ಏಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ Read More »

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾದ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ನಡೆದಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ. ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ Read More »