ಕ್ರೈಂ

ಏರ್ ಇಂಡಿಯಾದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದಾತ ಬೆಂಗಳೂರಿನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ನವೆಂಬರ್ 26ರಂದು ನ್ಯೂಯಾರ್ಕ್ – ದೆಹಲಿ ಮಧ್ಯೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಿರಿಯ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಹೊತ್ತಿದ್ದ ಮುಂಬೈ ಮೂಲದ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ನವೆಂಬರ್ 26ರಂದು ಈ ಘಟನೆ ನಡೆದಿತ್ತಾದರೂ ತಡವಾಗಿ ಬೆಳಕಿಗೆ ಬಂದಿತ್ತು. ಇದರ ಬಳಿಕ ಶಂಕರ್ ಮಿಶ್ರಾ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಸೋಶಿಯಲ್ ಮೀಡಿಯಾದ ಮೂಲಕ ತಮ್ಮ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದ್ದರು. ಆದರೆ […]

ಏರ್ ಇಂಡಿಯಾದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದಾತ ಬೆಂಗಳೂರಿನಲ್ಲಿ ಅರೆಸ್ಟ್ Read More »

ಯುವತಿಗೆ ಬೆತ್ತಲೆ ಚಿತ್ರತೋರಿಸಿ ಬ್ಲಾಕ್ ಮೇಲ್ ಮಾಡಿದಾತನ ಕೊಲೆಗೈದ ಸಹೋದರ

ಸಮಗ್ರ‌ ನ್ಯೂಸ್: ಬೆತ್ತಲೆ ಚಿತ್ರ ತೋರಿಸಿ ಯುವತಿಯನ್ನು ಬ್ಲಾಕ್ ಮೇಲ್ ಮಾಡಿದ ಯುವಕನನ್ನು ಆಕೆಯ ಸೋದರ ತನ್ನ ಸ್ನೇಹಿತನೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಹಳ್ಳಿ ಗ್ರಾಮದ ಚಂದ್ರಗೌಡ(25) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಬಿಳಿಗೆರೆ ಹುಂಡಿ ಗ್ರಾಮದ ಲಿಂಗರಾಜು ಮತ್ತು ಆತನ ಸ್ನೇಹಿತ ಎರಗನಹುಂಡಿ ಗ್ರಾಮದ ಕಿರಣ್ ಅವರನ್ನು ಪೊಲೀಸರು

ಯುವತಿಗೆ ಬೆತ್ತಲೆ ಚಿತ್ರತೋರಿಸಿ ಬ್ಲಾಕ್ ಮೇಲ್ ಮಾಡಿದಾತನ ಕೊಲೆಗೈದ ಸಹೋದರ Read More »

ಕುಕ್ಕೆ ಸುಬ್ರಹ್ಮಣ್ಯ: ತಿರುವು ಪಡೆದುಕೊಂಡ ನೈತಿಕ ಪೊಲೀಸ್ ಗಿರಿ ಪ್ರಕರಣ| ಪೊಲೀಸರ ವಿರುದ್ದವೇ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು| ಇಂದು(ಜ.7) ಬೃಹತ್ ಪ್ರತಿಭಟನೆಗೆ ನಿರ್ಧಾರ

ಸಮಗ್ರ ನ್ಯೂಸ್: ಅಪ್ರಾಪ್ತ ಹಿಂದೂ ಬಾಲಕಿಯನ್ನು ಭೇಟಿಯಾಗಲು ಬಂದ ಮುಸ್ಲಿಂ ಹುಡುಗನಿಗೆ ಥಳಿಸಿರುವ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಥಳಿತಕ್ಕೆ ಒಳಗಾದ ಮುಸ್ಲಿಂ ಹುಡುಗ‌ ಹಾಗೂ ದೌರ್ಜನ್ಯಕ್ಕೆ ಒಳಗಾದ ಹಿಂದೂ ಹುಡುಗಿಯ ಕಡೆಯಿಂದಲೂ ದೂರು -ಪ್ರತಿದೂರು ದಾಖಲಾಗಿದೆ. ಇಂದು (ಜ.7) ಬೆಳಗ್ಗೆ ೧೦ಕ್ಕೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯೆದುರು ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಹಿಂದೂ ಕಾರ್ಯಕರ್ತರನ್ನೇ ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು

ಕುಕ್ಕೆ ಸುಬ್ರಹ್ಮಣ್ಯ: ತಿರುವು ಪಡೆದುಕೊಂಡ ನೈತಿಕ ಪೊಲೀಸ್ ಗಿರಿ ಪ್ರಕರಣ| ಪೊಲೀಸರ ವಿರುದ್ದವೇ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು| ಇಂದು(ಜ.7) ಬೃಹತ್ ಪ್ರತಿಭಟನೆಗೆ ನಿರ್ಧಾರ Read More »

ಬೆಳ್ತಂಗಡಿ: ಮನೆಯೊಳಗೆ ಕಾಳಿಂಗನ ಕಾರುಬಾರು| ಟೇಬಲ್ ಮೇಲೆ ಬೆಚ್ಚನೆ ಮಲಗಿದ ನಾಗರಾಜ!!

ಸಮಗ್ರ ನ್ಯೂಸ್: ಕಾಳಿಂಗ ಸರ್ಪವೊಂದು ಮನೆಯ ಟೇಬಲ್ ಪ್ಯಾನ್ ಕಳೆಗೆ ಹಾಯಾಗಿ ಮಲಗಿರುವ ಘಟನೆ ಬೆಳ್ತಂಗಡಿ‌ ತಾಲೂಕಿ‌ನ ಹತ್ಯಡ್ಕ ಎಂಬಲ್ಲಿ ನಡೆದಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಅರಸಿನಮಕ್ಕಿ ಹತ್ಯಡ್ಕ ನಿವಾಸಿಯಾಗಿರುವ ಉಮೇಶ್ ಎಂಬವರ ಮನೆಯ ರೂಂನ ಟೇಬಲ್ ಫ್ಯಾನ್ ಪಕ್ಕದಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮಲಗಿರುವುದನ್ನು ಗಮನಿಸಿದ ಮನೆಯ ಸದಸ್ಯರು ಕ್ಷಣ ಕಾಲ ಗಾಬರಿಗೊಂಡು, ಸ್ಥಳೀಯ ಉರಗ ತಜ್ಞರಾದ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದರು.

ಬೆಳ್ತಂಗಡಿ: ಮನೆಯೊಳಗೆ ಕಾಳಿಂಗನ ಕಾರುಬಾರು| ಟೇಬಲ್ ಮೇಲೆ ಬೆಚ್ಚನೆ ಮಲಗಿದ ನಾಗರಾಜ!! Read More »

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ; ಹೊನ್ನಾಳಿಯಲ್ಲಿ ಮತ್ತೊಬ್ಬ ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ಶಿವಮೊಗ್ಗ ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ಹಾಗೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚುರುಕುಗೊಳಿಸಿದ್ದು, ನಿನ್ನೆ ಶಿವಮೊಗ್ಗ ಮತ್ತು ಮಂಗಳೂರಿನಲ್ಲಿ ತಲಾ ಒಬ್ಬರನ್ನು ವಶಕ್ಕೆ ಪಡೆದಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು, ಇಂದು ಹೊನ್ನಾಳಿಯಲ್ಲಿ ಮತ್ತೋರ್ವ ಯುವಕನೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ತುಂಗಾ ತೀರದಲ್ಲಿ ನಡೆದಂತ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ನಿನ್ನೆ ರಾಜ್ಯಾದ್ಯಂತ 6

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ; ಹೊನ್ನಾಳಿಯಲ್ಲಿ ಮತ್ತೊಬ್ಬ ಎನ್ಐಎ ವಶಕ್ಕೆ Read More »

ಕುಕ್ಕೆಯಲ್ಲಿ ನೈತಿಕ‌ ಪೊಲೀಸ್ ಗಿರಿ| ಹಿಂದೂ ಹುಡುಗಿಯೊಂದಿಗೆ ತಿರುಗಾಟದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಹಲ್ಲೆ

ಸಮಗ್ರ ನ್ಯೂಸ್: ಹಿಂದೂ ಹುಡುಗಿ ಜೊತೆ ತಿರುಗಾಡುತ್ತಿದ್ದಾನೆಂದು ಆರೋಪಿಸಿ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿ ಪೊಲೀಸ್ ದೂರು ನೀಡಿದ್ದಾನೆ. ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡ್ ನಲ್ಲಿ ಹುಡುಗ ಮತ್ತು ಹುಡುಗಿ ಕಂಡು ಬಂದಿದ್ದು, ಬಳಿಕ ಈ ಜೋಡಿ ಕುಮಾರಧಾರ ಬಳಿ ಬಂದಾಗ ಯುವಕರ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ. ಹಲ್ಲೆಗೊಳಗಾದ ಯುವಕ ಸುಳ್ಯ ತಾಲೂಕಿನ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಗಂಭೀರ ಗಾಯಗೊಂಡ ಈತ ಸುಳ್ಯ ಆಸ್ಪತ್ರೆಯಲ್ಲಿ

ಕುಕ್ಕೆಯಲ್ಲಿ ನೈತಿಕ‌ ಪೊಲೀಸ್ ಗಿರಿ| ಹಿಂದೂ ಹುಡುಗಿಯೊಂದಿಗೆ ತಿರುಗಾಟದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಹಲ್ಲೆ Read More »

ಜಿಮ್ ನಲ್ಲಿ ಕುಸಿದು ಬಿದ್ದು ಸಾವು| ಯುವಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸುದ್ದಿಗಳು

ಸಮಗ್ರ ನ್ಯೂಸ್: ಹೃದಯಾಘಾತದಿಂದ ಮೃತ ಪಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಈ ಕಾರಣಕ್ಕೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಇಂದೋರ್‌ನ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹೋಟೆಲ್ ಮಾಲೀಕರೊಬ್ಬರು ಜಿಮ್‌ನಲ್ಲಿ ಟ್ರೆಡ್‌ಮಿಲ್ ನಲ್ಲಿ ಕಸರತ್ತು ನಡೆಸುತ್ತಿದ್ದಾಗ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ. ಬಳಿಕ ಮೇಜಿನ ಮೇಲೆ ಒರಗಲು ಪ್ರಯತ್ನಿಸಿದ್ದಾರೆ. ಕೂಡಲೇ ಜಿಮ್‌ನಲ್ಲಿದ್ದ ಇತರರು ಓಡಿ ಬಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ಆಸ್ಪತ್ರೆಯ

ಜಿಮ್ ನಲ್ಲಿ ಕುಸಿದು ಬಿದ್ದು ಸಾವು| ಯುವಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸುದ್ದಿಗಳು Read More »

11 ಉಗ್ರರ ತಲೆ ಉರುಳಿಸಿದ ಪಾಕ್ ಭದ್ರತಾ ಪಡೆ

ಸಮಗ್ರ ನ್ಯೂಸ್: ಭಯೋತ್ಪಾದನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದ ಗಡಿಯಲ್ಲಿ 11 ಉಗ್ರರನ್ನು ಪಾಕಿಸ್ತಾನ ಕೊಂದು ಹಾಕಿದೆ. ಅಫ್ಘಾನಿಸ್ತಾನದ ಗಡಿಯ ಸಮೀಪವಿರುವ ದೂರದ ಪ್ರದೇಶದಲ್ಲಿ ಮಿಲಿಟರಿ ಭಯೋತ್ಪಾದನಾ ನಿಗ್ರಹ ದಾಳಿಯಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಕನಿಷ್ಠ 11 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಗುರುವಾರ ಹೇಳಿದೆ. ದಕ್ಷಿಣ ವಜಿರಿಸ್ತಾನ್ ಜಿಲ್ಲೆಯಲ್ಲಿನ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಉನ್ನತ ಮಟ್ಟದ ಭಯೋತ್ಪಾದಕ ಚಟುವಟಿಕೆಯನ್ನು ಯಶಸ್ವಿಯಾಗಿ ವಿಫಲಗೊಳಿಸಿದೆ. ಆತ್ಮಹತ್ಯಾ ಬಾಂಬರ್‌ ಗಳು ಮತ್ತು ಪ್ರಮುಖ ಕಮಾಂಡರ್ ಸೇರಿದಂತೆ ತೆಹ್ರಿಕ್-ಇ-ತಾಲಿಬಾನ್

11 ಉಗ್ರರ ತಲೆ ಉರುಳಿಸಿದ ಪಾಕ್ ಭದ್ರತಾ ಪಡೆ Read More »

ಹಿಂದೂ ಬಾಲಕಿ ಮೇಲೆ ಇಬ್ಬರು ಬಾಲಕರಿಂದ ನಿರಂತರ ಅತ್ಯಾಚಾರ| ಆರೋಪಿಗಳ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: 15 ವರ್ಷದ ಹಿಂದೂ ಬಾಲಕಿ ಮೇಲೆ ಇಬ್ಬರು ಮುಸ್ಲಿಮರು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ನೆರೆಮನೆಯವರೇ ಬಾಲಕಿಯ ಮೇಲೆ ಕಳೆದ ಆರು ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ. ತೆಲಂಗಾಣದಲ್ಲಿ ಈ ಘಟನೆ ನಡೆದಿದ್ದು, ವಾರಂಗಲ್‌ ಜಿಲ್ಲೆ ಮಿಲ್ಸ್‌ ಕಾಲೋನಿ ಪೊಲೀಸ್‌ ಠಾಣೆಯಲ್ಲಿ ಬಾಲಕಿಯ ಪೋಷಕರು ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿರುವ ಕುರಿತು ದೂರು ನೀಡಿದ್ದಾರೆ. ನೆರೆಮನೆಯವರಾದ, ಮುಸ್ಲಿಂ ಸಮುದಾಯಕ್ಕೆ ಸೇರಿದ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ’

ಹಿಂದೂ ಬಾಲಕಿ ಮೇಲೆ ಇಬ್ಬರು ಬಾಲಕರಿಂದ ನಿರಂತರ ಅತ್ಯಾಚಾರ| ಆರೋಪಿಗಳ ಬಂಧಿಸಿದ ಪೊಲೀಸರು Read More »

ಚಲಿಸುತ್ತಿದ್ದ ಬಸ್ ನಲ್ಲಿ ಯುವತಿ ಮುಂದೆ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ| ಸಿಕ್ಕಿಬಿದ್ದ ಮೇಲೆ ಆತನ ಅವಸ್ಥೆ ನೋಡಿ…!!

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯೊಬ್ಬ ಯುವತಿ ಮುಂದೆ ಹಸ್ತಮೈಥುನ ಮಾಡಿಕೊಂಡಿದ್ದು,ಈ ವೇಳೆ ಸಿಕ್ಕಿಬಿದ್ದಾಗ ಆತ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ರೋಹಿಣಿ ಪ್ರದೇಶದಲ್ಲಿ ಬಸ್‌ನಲ್ಲಿ ವ್ಯಕ್ತಿಯೊಬ್ಬ ಯುವತಿ ಮುಂದೆ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಡಿಟಿಸಿ ಮಾರ್ಷಲ್ ಆರೋಪಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಕುರಿತು ದೂರು ದಾಖಲಾಗದ ಕಾರಣ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವೈರಲ್ ವಿಡಿಯೋ ಪ್ರಕಾರ, ಆರೋಪಿ

ಚಲಿಸುತ್ತಿದ್ದ ಬಸ್ ನಲ್ಲಿ ಯುವತಿ ಮುಂದೆ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ| ಸಿಕ್ಕಿಬಿದ್ದ ಮೇಲೆ ಆತನ ಅವಸ್ಥೆ ನೋಡಿ…!! Read More »