ಕ್ರೈಂ

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರತಿಷ್ಠಿತ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಡೆಂಡಲ್ ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿದ ಆರೋಪ ಕೇಳಿಬಂದಿದ್ದು, ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ, ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯೇ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಇವರು ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ. ಕೇರಳ ಮೂಲದ ಆರು ವಿದ್ಯಾರ್ಥಿಗಳ […]

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ Read More »

ಸೌದಿಯಲ್ಲಿ ಭೀಕರ ಅಪಘಾತ| ಸುರತ್ಕಲ್ ನ ಯುವಕ ದುರ್ಮರಣ

ಸಮಗ್ರ ನ್ಯೂಸ್: ಕಾರು ಹಾಗೂ ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ತಡಂಬೈಲ್ ನ ಯುವಕನೋರ್ವ ಮೃತಪಟ್ಟಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅದ್ದು ಎಂಬವರ ಪುತ್ರ ಫಾಝಿಲ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಫಾಝಿಲ್ ಅವರು ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದಾರೆ ಎಂದು ತಿಳಿದು ಬಂದಿದ್ದು, ಫಾಝಿಲ್ ತನ್ನ ಪತ್ನಿ ಮಗುವಿನೊಂದಿಗೆ ಸೌದಿ ಅರೇಬಿಯಾದಲ್ಲೇ ವಾಸವಾಗಿದ್ದರು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಫಾಝಿಲ್ ಕಳೆದ 5

ಸೌದಿಯಲ್ಲಿ ಭೀಕರ ಅಪಘಾತ| ಸುರತ್ಕಲ್ ನ ಯುವಕ ದುರ್ಮರಣ Read More »

ಉಡುಪಿ: ಕಂಠಪೂರ್ತಿ ಕುಡಿದು ಶಾಲಾ ಜಗಲಿಯಲ್ಲಿ ಮಲಗಿದ ಶಿಕ್ಷಕ

ಸಮಗ್ರ ನ್ಯೂಸ್: ಶಾಲೆಯ ಶಿಕ್ಷಕರೊಬ್ಬರು ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿಯೇ ಮಲಗಿದ ಪ್ರಕರಣವೊಂದು ಉಡುಪಿಯ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ. ಕೃಷ್ಣಮೂರ್ತಿ ಎಂಬವರೇ ಕಂಠಪೂರ್ತಿ ಕುಡಿದು ಜಗುಲಿಯಲ್ಲಿ ಮಲಗಿದ ಶಿಕ್ಷಕ. ಶಾಲೆಯ ಕೊಠಡಿಯಲ್ಲಿ ಮಕ್ಕಳು ಅವರ ಪಾಡಿಗೆ ಇದ್ದರೆ, ಈ ಶಿಕ್ಷಕ ಮಾತ್ರ ಮದ್ಯದ ಅಮಲಿನಲ್ಲಿ ತೇಲಾಡುತ್ತಾ ಶಾಲೆ ಆವರಣದ ಜಗುಲಿಯಲ್ಲಿಯೇ ಹೊರಳಾಡುತ್ತಾ ಮಲಗಿದ್ದರು. ಮದ್ಯ ಕುಡಿದು ಮಲಗಿರುವ ದೃಶ್ಯವನ್ನು ಸ್ಥಳೀಯರೊಬ್ಬರು ಚಿತ್ರೀಕರಿಸಿಕೊಂಡಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿಯೂ ಹರಿಬಿಟ್ಟಿದ್ದಾರೆ. ಈ ವಿಡಿಯೊ ಈಗ

ಉಡುಪಿ: ಕಂಠಪೂರ್ತಿ ಕುಡಿದು ಶಾಲಾ ಜಗಲಿಯಲ್ಲಿ ಮಲಗಿದ ಶಿಕ್ಷಕ Read More »

ಅಥಣಿ: ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಟ್ಟಣದಲ್ಲಿರುವ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಸುಮಾರು 35 ರಿಂದ 40ರ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವವನ್ನು ನೋಡಿದ ಸ್ಥಳೀಯರು ಅಥಣಿ ಪೋಲಿಸರಿಗೆ ಮಾಹಿತಿ ನೀಡಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಥಣಿ: ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ಹಾಡುಹಗಲೇ ಗುಂಡಿಕ್ಕಿ ನಟಿಯ ಹತ್ಯೆಗೈದ ಆಗಂತುಕರು| ಪತಿಯ ಮೇಲೆ ಪೊಲೀಸ್ ಕಣ್ಣು!!

ಸಮಗ್ರ ನ್ಯೂಸ್: ನಟಿಯೊಬ್ಬರನ್ನು ಹಾಡ ಹಗಲೆ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್‌ ರಾಜ್ಯದ ಜನಪ್ರಿಯ ನಟಿ ರಿಯಾ ಕುಮಾರಿ ಎಂಬುವರನ್ನು ಅಗಂತುಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ ಈ ಘಟನೆಯ ಹಿಂದೆ ರಿಯಾಳ ಪತಿ ಪ್ರಕಾಶ್ ಕುಮಾರ್‌ ನ ಕೈವಾಡವಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ರಿಯಾ ಕುಮಾರಿ ತಮ್ಮ ಎರಡು ವರ್ಷದ ಪುತ್ರಿ ಹಾಗೂ ನಟಿ ರಿಯಾ ಕುಮಾರಿ ಒಟ್ಟಿಗೆ ರಾಂಚಿಯಿಂದ ಕೊಲ್ಕತ್ತಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಗೆ

ಹಾಡುಹಗಲೇ ಗುಂಡಿಕ್ಕಿ ನಟಿಯ ಹತ್ಯೆಗೈದ ಆಗಂತುಕರು| ಪತಿಯ ಮೇಲೆ ಪೊಲೀಸ್ ಕಣ್ಣು!! Read More »

ಶಾಲಾ ಬಾಲಕಿಯೊಂದಿಗೆ ಓಡಿಹೋದ ಪಿಎಸ್ಐ!!

ಸಮಗ್ರ ನ್ಯೂಸ್: ಪೊಲೀಸ್ ಸಬ್ ಇನ್ಸ್‌ಪೆಕ್ಟರ್​​ವೊಬ್ಬರು ಶಾಲಾ ಬಾಲಕಿಯೊಂದಿಗೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ತಂದೆ ರಾಜಧಾನಿ ಲಖನೌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಜೋಗೇಂದ್ರ ಸಿಂಗ್ ಎಂಬುವವರೇ ಬಾಲಕಿಯೊಂದಿಗೆ ಪಲಾಯನ ಮಾಡಿರುವ ಎಸ್​ಐ. ಈ ಘಟನೆಯು ಬಾಲಕಿಯ ಕುಟುಂಬಸ್ಥರು, ಸಂಬಂಧಿಕರೂ ಸೇರಿದಂತೆ ಇಡೀ ಪ್ರದೇಶದಲ್ಲಿ ಆಘಾತ ಉಂಟುಮಾಡಿದೆ. ಇಲ್ಲಿನ ಪಲಿಯಾ ಚೌಕಿ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜೋಗೇಂದ್ರ ಸಿಂಗ್ ಎರಡು ದಿನಗಳ ಹಿಂದೆ ಬಾಲಕಿಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು

ಶಾಲಾ ಬಾಲಕಿಯೊಂದಿಗೆ ಓಡಿಹೋದ ಪಿಎಸ್ಐ!! Read More »

ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ| ಇಕ್ಬಾಲ್ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ, ಮೀನು ವ್ಯಾಪಾರಿ ಇಕ್ಬಾಲ್ ಎಂಬಾತನ ಮೇಲೆ ನಗರ ಪೊಲೀಸ್ ‌ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಯಶ್ವಿತ್ ಎಂಬಾತ ಮಾಲಾಧಾರಿಯಾಗಿದ್ದು, ಸ್ನೇಹಿತನ ಜೊತೆ ರಿಕ್ಷಾ ಟೆಂಪೋದಲ್ಲಿ ಪಾರ್ಸೆಲ್ ಸರ್ವೀಸ್ ಮಾಡುವ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗೂಡಿನ

ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ| ಇಕ್ಬಾಲ್ ವಿರುದ್ಧ ದೂರು ದಾಖಲು Read More »

ಸಾಗರದಲ್ಲಿ ಭೀಕರ ಅಪಘಾತ| ವಿದ್ಯಾರ್ಥಿನಿಯರ ಮೇಲೆ‌ ಹರಿದ ಜಲ್ಲಿ ಲಾರಿ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ಜಲ್ಲಿ ಲಾರಿಯೊಂದು ಹರಿದಿದೆ. ಅಪಘಾತಕ್ಕೊಳಗಾದ ಮೂವರಿಗೆ ಭಾರಿ ಪೆಟ್ಟಾಗಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಸಾಗರದ ಸಣ್ಣಮನೆ ಬಳಿ ನಡೆದ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ವಿದ್ಯಾರ್ಥಿನಿಯರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಇವರಾಗಿದ್ದು, ಅಂಕಿತಾ, ಪ್ರತಿಮಾ, ಐಶ್ವರ್ಯ ಗಾಯಗೊಂಡವರಾಗಿದ್ದಾರೆ. ಇವರಲ್ಲಿ

ಸಾಗರದಲ್ಲಿ ಭೀಕರ ಅಪಘಾತ| ವಿದ್ಯಾರ್ಥಿನಿಯರ ಮೇಲೆ‌ ಹರಿದ ಜಲ್ಲಿ ಲಾರಿ Read More »

ಚಿಕ್ಕಮಗಳೂರು: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ

ಸಮಗ್ರ ನ್ಯೂಸ್: ತನ್ನನ್ನು ಕಚ್ಚಿದ ಹಾವನ್ನೇ ಹಿಡಿದುಕೊಂಡು ಆಸ್ಪತ್ರೆಗೆ ಬಂದ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನಲ್ಲಿ ಸಂಭವಿಸಿದೆ. ಕೊಲ್ಕತ್ತಾ ಮೂಲದ ಆಸೀಫ್ ಹಾವಿನ ಸಮೇತ ಆಸ್ಪತ್ರೆಗೆ ಬಂದ ವ್ಯಕ್ತಿ. ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆಂದು ಬಂದಿದ್ದ ಆಸೀಫ್, ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ತೆರಳಿದ್ದ. ಈ ವೇಳೆ ಆಸೀಫ್​ಗೆ ಹಾವು ಕಚ್ಚಿದೆ. ಚಿಕಿತ್ಸೆ ಪಡೆಯಲು ಅನುಕೂಲವಾಗಲೆಂದು ಹಾಗೂ ತನಗೆ ಕಚ್ಚಿದ ಯಾವು ಯಾವುದೆಂದು ವೈದ್ಯರಿಗೆ ಗೊತ್ತಾಗಲೆಂದು ಆ ಹಾವನ್ನೇ ಕೈಯಲ್ಲಿ ಹಿಡಿದುಕೊಂದು ನೇರವಾಗಿ ಆಸ್ಪತ್ರೆಗೆ ತೆರಳಿದ್ದಾನೆ.

ಚಿಕ್ಕಮಗಳೂರು: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ Read More »

ಬೆಳ್ತಂಗಡಿ: ಬಸ್‌ಗಳ ನಡುವೆ ಅಪಘಾತ – ಇಬ್ಬರು ಗಂಭೀರ

ಬೆಳ್ತಂಗಡಿ: ಮಕ್ಕಳ ಪ್ರವಾಸದ ಬಸ್‌ ಹಾಗೂ ಕೆಎಸ್‌‌ಆರ್‌‌ಟಿಸಿ ಬಸ್‌ ನಡುವೆ ಅಪಘಾತದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಸಂಭವಿಸಿದೆ ಟೂರಿಸ್ಟ್‌ ಬಸ್‌ ಚಾಲಕ ಅಭಿಷೇಕ್‌ ಹಾಗೂ ಬಸ್‌ ಪ್ರಯಾಣಿಕ ದುಗೇಶ್‌ ಗಂಭೀರ ಗಾಯಗೊಂಡವರು. ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಟೂರಿಸ್ಟ್‌ ಬಸ್‌ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುವ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದಿದೆ. ಇನ್ನು ಚಾಲಕರ ಸಹಿತ ಬಸ್‌ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ

ಬೆಳ್ತಂಗಡಿ: ಬಸ್‌ಗಳ ನಡುವೆ ಅಪಘಾತ – ಇಬ್ಬರು ಗಂಭೀರ Read More »