ಕ್ರೈಂ

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಹಿನ್ನಲೆ ಖಾಸಗಿ‌ ಕಾಲೇಜಿನ ಮೇಲೆ ಎನ್ಐಎ ದಾಳಿ| ಓರ್ವ ವಿದ್ಯಾರ್ಥಿ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಪಿ.ಎ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದ್ದಾಗಿ ತಿಳಿದು ಬಂದಿದೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದ […]

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಹಿನ್ನಲೆ ಖಾಸಗಿ‌ ಕಾಲೇಜಿನ ಮೇಲೆ ಎನ್ಐಎ ದಾಳಿ| ಓರ್ವ ವಿದ್ಯಾರ್ಥಿ ವಶಕ್ಕೆ Read More »

ಪುತ್ತೂರು: ಚಿಗುರು ಮೀಸೆ ಹುಡುಗನಿಂದ ಅಮಾಯಕ ಹೆಣ್ಮಕ್ಕಳಿಗೆ ಕಿರುಕುಳ| ಕಾಮುಕನ ಮೇಲೆ ಫೋಕ್ಸೋ ದಾಖಲಿಸಿದ ಪೊಲೀಸರು

ಸಮಗ್ರ ನ್ಯೂಸ್: ಮೀಸೆ ಚಿಗುರುವ ಹೊತ್ತಿನಲ್ಲಿ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳುತ್ತಿದ್ದ ಕಾಮುಕ ಯುವಕನೋರ್ವನ ವಿರುದ್ಧ ಪುತ್ತೂರಿನ ಸಂಪ್ಯ ಹೊರಠಾಣೆ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರಿನಲ್ಲಿ ಖಾಸಗಿ ಕೆಲಸ ಮಾಡುತ್ತಿರುವ ನಿತೇಶ್ ರೈ ಎಂದು ಆರೋಪಿಯನ್ನು ಗುರುತಿಸಲಾಗಿದ್ದು ಈತನ ಕಾಮದ ವಿಚಾರ ಎರಡು ಮೂರು ತಿಂಗಳ ಹಿಂದೆ ಬಯಲಾಗಿತ್ತು. ಈತ ನೀಡಿದ ಕಿರುಕುಳದ ಬಗ್ಗೆ ಹಲವು ಹೆಣ್ಣು ಮಕ್ಕಳು ಆರೋಪವನ್ನು ಮಾಡಿದ್ದರು. ಈತ ತನ್ನ ಕೆಲಸದ ಸಂದರ್ಭಗಳಲ್ಲಿ ಹಲವು ಊರುಗಳಿಗೆ ತೆರಳುತ್ತಿದ್ದ. ಈ

ಪುತ್ತೂರು: ಚಿಗುರು ಮೀಸೆ ಹುಡುಗನಿಂದ ಅಮಾಯಕ ಹೆಣ್ಮಕ್ಕಳಿಗೆ ಕಿರುಕುಳ| ಕಾಮುಕನ ಮೇಲೆ ಫೋಕ್ಸೋ ದಾಖಲಿಸಿದ ಪೊಲೀಸರು Read More »

ಪ್ರವೀಣ್ ನೆಟ್ಟಾರು ಹಂತಕರ ಗುರುತು ಪತ್ತೆಗೆ ಮತ್ತೆ ಎನ್ಐಎ ಲುಕ್ ಓಟ್ ನೋಟೀಸ್| ಸುಳಿವು ನೀಡಿದವರಿಗೆ ಭಾರೀ ಬಹುಮಾನದ ಘೋಷಣೆ

ಸಮಗ್ರ ನ್ಯೂಸ್: ಇಡೀ ದೇಶದಲ್ಲಿ ಸಂಚಲನೆ ಸೃಷ್ಟಿಸಿದ್ದ‌ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತೆ ಲುಕ್ ಔಟ್ ನೋಟಿಸ್ ಬಿಡುಗಡೆ ಮಾಡಿದೆ. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರನ್ನು ಪಿಎಫ್‌ಐ ಕಾರ್ಯಕರ್ತರು ಹತ್ಯೆ ಮಾಡಿದ್ದರು ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿತ್ತು. ಪ್ರಕರಣ ಸಂಬಂಧ ರಾಜ್ಯ ಪೊಲೀಸ್ ಮತ್ತು ಎನ್‌ಐಎ ಅಧಿಕಾರಿಗಳ ತಂಡ ಒಟ್ಟು ಹತ್ತು ಜನ ಆರೋಪಿಗಳನ್ನು ಬಂಧನ ಮಾಡಿತ್ತು. ಈ ಪ್ರಕರಣ ರಾಜ್ಯದಲ್ಲಿ ತೀವ್ರ

ಪ್ರವೀಣ್ ನೆಟ್ಟಾರು ಹಂತಕರ ಗುರುತು ಪತ್ತೆಗೆ ಮತ್ತೆ ಎನ್ಐಎ ಲುಕ್ ಓಟ್ ನೋಟೀಸ್| ಸುಳಿವು ನೀಡಿದವರಿಗೆ ಭಾರೀ ಬಹುಮಾನದ ಘೋಷಣೆ Read More »

ಮಂಡ್ಯ: ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸಬ್ಬನಕುಪ್ಪೆ ಗ್ರಾಮದ ಜನರನ್ನು ಬಿಟ್ಟುಬಿಡದೆ ಕಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿನೊಳಗೆ ಸೆರೆಸಿಕ್ಕಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲದಿನಗಳಿಂದ ಈ ಭಾಗದಲ್ಲಿ ಆಗಾಗ್ಗೆ ಚಿರತೆ‌ ಕಾಣಿಸಿಕೊಳ್ಳುತ್ತಿದ್ದು, ಭೀತಿಗೊಂಡ ಜನರು ಚಿರತೆ ಸೆರೆಗೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ಅದರಂತೆ ಸಬ್ಬನಕುಪ್ಪೆ ನಿವಾಸಿ ಬಾಲು ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು. ಇಂದು ಬೆಳಿಗ್ಗೆ ಆಹಾರ ಅರಸಿಕೊಂಡು ಜಮೀನಿಗೆ ಬಂದ ಚಿರತೆ ಬೋನಿನೊಳಗಿದ್ದ ಅದರ ಆಹಾರ

ಮಂಡ್ಯ: ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು Read More »

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಬಂಧಿತರನ್ನು ಉಡುಪಿ ಕಾಪು ತೆಂಕ ಎರ್ಮಾಳ್ ನಿವಾಸಿ ಜಯಂತ್‌ ಸಾಲಿಯಾನ್‌ (46) ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್‌ ಎಸ್‌ (42) ಎಂದು ಗುರುತಿಸಲಾಗಿದೆ. ಇವರು ಉಡುಪಿ ಹಳೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಲಾಡ್ಜ್ ಗೆ ದಾಳಿ ನಡೆಸಿದ್ದು, ಸಂತ್ರಸ್ಥೆಯನ್ನು ರಕ್ಷಿಸಿ ಆರೋಪಿಗಳಾದ ಜಯಂತ್ ಸಾಲಿಯಾನ್ ಮತ್ತು ದಿನೇಶ್

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ; ಇಬ್ಬರ ಬಂಧನ Read More »

ಬೆಳಗಾವಿ: ಮರಕ್ಕೆ ಬೊಲೆರೋ ವಾಹನ ಡಿಕ್ಕಿ| 6 ಮಂದಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ಬೆಳಗಾವಿ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಮೃತರನ್ನು ಹನುಮವ್ವ, ದೀಪಾ, ಸವಿತಾ, ಸುಪ್ರಿತಾ, ಮಾರುತಿ, ಇಂದಿರವ್ವ ಎಂದು ಗುರುತಿಸಲಾಗಿದೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಎಸ್ ಪಿ ಡಾ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ: ಮರಕ್ಕೆ ಬೊಲೆರೋ ವಾಹನ ಡಿಕ್ಕಿ| 6 ಮಂದಿ ಸ್ಥಳದಲ್ಲೇ ಸಾವು Read More »

ರೈಲ್ವೇ ನಿಲ್ದಾಣದ ಪ್ಲಾಸ್ಟಿಕ್ ಡ್ರಮ್ ನಲ್ಲಿ ಯುವತಿಯ ಕೊಳೆತ ಶವ| ಬೆಚ್ಚಿಬಿದ್ದ ಪ್ರಯಾಣಿಕರು

ಸಮಗ್ರ ನ್ಯೂಸ್: ಯಶವಂತಪುರ ರೈಲ್ವೇ ನಿಲ್ದಾಣದ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಡ್ರಮ್‌ ಪರಿಶೀಲನೆ ಮಾಡಿದಾಗ ಕೊಳೆತ ಸ್ಥಿತಿಯಲ್ಲಿರುವ ಯುವತಿ ದೇಹ ಪತ್ತೆಯಾಗಿದೆ ಯಶವಂತಪುರ ರೈಲ್ವೇ ನಿಲ್ದಾಣದ ಗೂಡ್ಸ್ ಪ್ಲಾಟ್ ಫಾರ್ಮ್ ನ ಬಾಕ್ಸ್ ಒಂದರಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 23 ವರ್ಷದ ಯುವತಿ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಯುವತಿಯನ್ನು ಕೊಲೆ

ರೈಲ್ವೇ ನಿಲ್ದಾಣದ ಪ್ಲಾಸ್ಟಿಕ್ ಡ್ರಮ್ ನಲ್ಲಿ ಯುವತಿಯ ಕೊಳೆತ ಶವ| ಬೆಚ್ಚಿಬಿದ್ದ ಪ್ರಯಾಣಿಕರು Read More »

ಸುಳ್ಯ ಜಾತ್ರೋತ್ಸವದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ| ತುರ್ತುಸಭೆಯಲ್ಲಿ ಸಂಘಟನೆಗಳ ಒತ್ತಡಕ್ಕೆ ಮಣಿದ ಆಡಳಿತ ಮಂಡಳಿ

ಸಮಗ್ರ ನ್ಯೂಸ್: ಸುಳ್ಯ ಜಾತ್ರೋತ್ಸವದಲ್ಲಿ ಎಲ್ಲ ಧರ್ಮೀಯರಿಗೆ ಮುಕ್ತ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಸಭೆಯಲ್ಲಿ ಈ ಮೊದಲು ಘೋಷಿಸಲಾಗಿದ್ದು, ಇದನ್ನು ಹಿಂದೂ ಸಂಘಟನೆಗಳು ವಿರೋಧ ಮಾಡಿದ್ದವು. ಈ ಕುರಿತಂತೆ ಇಂದು ತುರ್ತು ಸಭೆ ನಡೆಸಿದ ಹಿಂದೂ ಸಂಘಟನೆಗಳ ಪ್ರಮುಖರು ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ|ಕೆ.ವಿ. ಚಿದಾನಂದ ಅವರಿಗೆ ಮನವಿ ಮಾಡಿದ್ದರು. ತಕ್ಷಣ ಇದಕ್ಕೆ ಸ್ಪಂದಿಸಿದ ಡಾ|ಕೆ.ವಿ. ಚಿದಾನಂದ ಅವರು ತುರ್ತು ಸಭೆಯನ್ನು ಕರೆದಿದ್ದರು. ಅದರಂತೆ

ಸುಳ್ಯ ಜಾತ್ರೋತ್ಸವದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ| ತುರ್ತುಸಭೆಯಲ್ಲಿ ಸಂಘಟನೆಗಳ ಒತ್ತಡಕ್ಕೆ ಮಣಿದ ಆಡಳಿತ ಮಂಡಳಿ Read More »

“ಬೇಕಾಬಿಟ್ಟಿ ರಸ್ತೆ ಅಗೆದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ”
-ಗೇಲ್ ಅಧಿಕಾರಿಗೆ ಶಾಸಕ ಭರತ್ ಶೆಟ್ಟಿ ಎಚ್ಚರಿಕೆ

ಸಮಗ್ರ ನ್ಯೂಸ್: “ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ” ಹೀಗೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು. ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು ಇದರಿಂದ ನೀರಿನ ಪೈಪ್ ಒಡೆದು

“ಬೇಕಾಬಿಟ್ಟಿ ರಸ್ತೆ ಅಗೆದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ”
-ಗೇಲ್ ಅಧಿಕಾರಿಗೆ ಶಾಸಕ ಭರತ್ ಶೆಟ್ಟಿ ಎಚ್ಚರಿಕೆ
Read More »

ರಾತ್ರಿ‌ ಮದ್ಯ ಸೇವಿಸಿ ಮಲಗಿದಾತ ಬೆಳಿಗ್ಗೆ ಹೆಣವಾದ| ಕುಟುಂಬಸ್ಥರಿಂದ‌ ಬಾರ್‌ ಮುಂದೆ ಪ್ರತಿಭಟನೆ

ಸಮಗ್ರ ನ್ಯೂಸ್: ರಾತ್ರಿ ಮದ್ಯ ಸೇವಿಸಿದ ಯುವಕನೋರ್ವ ಬೆಳಗ್ಗೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ‌ತರೀಕೆರೆ ತಾಲೂಕಿನ ಕರಕುಚ್ಚಿ ಕಾಲನಿಯಲ್ಲಿ ನಡೆದಿರುವುದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಜುನಾಥ(29) ಎಂದು‌‌ ಗುರುತಿಸಲಾಗಿದೆ. ಇಲ್ಲಿನ ಬಾರ್ ನಲ್ಲಿ ಮದ್ಯ ಸೇವಿಸಿದ್ದೇ ಅವರ ಸಾವಿಗೆ ಕಾರಣ ಎಂದು ಆರೋಪಿಸಿ ಮೃತಪಟ್ಟ ಯುವಕನ ಕುಟುಂಬಸ್ಥರು ಬಾರ್ ಎದುರು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು. ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಆದ್ದರಿಂದ ಕೂಡಲೇ ಬಾರ್ ಮುಚ್ಚುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ರಾತ್ರಿ‌ ಮದ್ಯ ಸೇವಿಸಿ ಮಲಗಿದಾತ ಬೆಳಿಗ್ಗೆ ಹೆಣವಾದ| ಕುಟುಂಬಸ್ಥರಿಂದ‌ ಬಾರ್‌ ಮುಂದೆ ಪ್ರತಿಭಟನೆ Read More »