ಕ್ರೈಂ

ಜಲೀಲ್ ಹತ್ಯೆ ಪ್ರಕರಣ| ಮೂವರು ಆರೋಪಿಗಳ ಬಂಧನ – ಶಶಿಕುಮಾರ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ. ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ […]

ಜಲೀಲ್ ಹತ್ಯೆ ಪ್ರಕರಣ| ಮೂವರು ಆರೋಪಿಗಳ ಬಂಧನ – ಶಶಿಕುಮಾರ್ Read More »

ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಬರ್ಬರ ಹತ್ಯೆ| ಬೆಚ್ಚಿಬಿದ್ದ ಬೆಳಗಾವಿ

ಸಮಗ್ರ‌ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ನಡೆದ ಯುವಕರಿಬ್ಬರ ಬರ್ಬರ ಹತ್ಯೆಯು ಬೆಳಗಾವಿ ಜನತೆಯನ್ನು ಬೆಚ್ಚಿಬೀಳಿಸಿದೆ. ನಗರದ ಹೊರ ವಲಯದಲ್ಲೇ ಈ ಘಟನೆ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ.ಬಸವರಾಜ್ ಬೆಳಗಾಂವ್ಕರ್ (22), ಗಿರೀಶ್​ ನಾಗಣ್ಣವರ (22) ಹತ್ಯೆಯಾದ ಯುವಕರು. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವಕರು ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ವಾಹನ ನುಗ್ಗಿಸಿದ್ದ. ಮೈದಾನದಲ್ಲಿ ವಾಹನ ನುಗ್ಗಿಸಿದಕ್ಕೆ ಯುವಕರು ಆಕ್ಷೇಪ

ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಬರ್ಬರ ಹತ್ಯೆ| ಬೆಚ್ಚಿಬಿದ್ದ ಬೆಳಗಾವಿ Read More »

ಉಪ್ಪಿನಂಗಡಿ: ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬಸ್ ಡಿಕ್ಕಿ| ಕುದುರೆ ಸಾವು, ಸವಾರ ಗಂಭೀರ

ಸಮಗ್ರ ನ್ಯೂಸ್: ಕುದುರೆಯೊಂದಕ್ಕೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದ್ದು, ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಡಿ.25 ರ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು

ಉಪ್ಪಿನಂಗಡಿ: ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬಸ್ ಡಿಕ್ಕಿ| ಕುದುರೆ ಸಾವು, ಸವಾರ ಗಂಭೀರ Read More »

ಸುರತ್ಕಲ್ ಕೊಲೆ ಪ್ರಕರಣ| ನಿನ್ನೆ ಸಂಜೆ ಆಗಿದ್ದೇನು? ಪೊಲೀಸ್ ಕಮಿಷನರ್ ಏನ್ ಹೇಳಿದ್ರು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಕಾಟಿಪಳ್ಳ ಎಂಬಲ್ಲಿ ಜಲೀಲ್​ ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಪ್ರಕರಣವನ್ನು ಕೋಮು ದ್ವೇಷದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ಜಲೀಲ್​ ಅವರು ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ಪ್ರಾವಿಷನ್​ ಸ್ಟೋರ್ ನಡೆಸುತ್ತಿದ್ದರು. ರಾತ್ರಿ ವೇಳೆ ಅವರ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಜಲೀಲ್​ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿದ್ದರೂ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ

ಸುರತ್ಕಲ್ ಕೊಲೆ ಪ್ರಕರಣ| ನಿನ್ನೆ ಸಂಜೆ ಆಗಿದ್ದೇನು? ಪೊಲೀಸ್ ಕಮಿಷನರ್ ಏನ್ ಹೇಳಿದ್ರು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಸುರತ್ಕಲ್ ಚೂರಿ ಇರಿತ ಪ್ರಕರಣ| ಗಾಯಾಳು ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಸುರತ್ಕಲ್ ಸಮೀಪದ ಕೃಷ್ಣ ಪುರ ನೈತಂಗಡಿ ಪ್ರದೇಶದಲ್ಲಿ ಯುವಕನೊಬ್ಬನಿಗೆ ಚೂರಿ ಇರಿತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಚೂರಿ ಇರಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕಳೆದ ಕೆಲ ತಿಂಗಳುಗಳ ಹಿಂದೆ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನೊಬ್ಬನನ್ನು ಸಂಜೆ ವೇಳೆಗೆ ಅಂಗಡಿಯೊಂದರ ಮುಂಭಾಗದಲ್ಲೇ ಕಾರಿನಲ್ಲಿ

ಸುರತ್ಕಲ್ ಚೂರಿ ಇರಿತ ಪ್ರಕರಣ| ಗಾಯಾಳು ಚಿಕಿತ್ಸೆ ಫಲಿಸದೆ ಸಾವು Read More »

ಮಂಗಳೂರು: ಯುವಕನ ಮೇಲೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಸುರತ್ಕಲ್ ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸಗೈದಿದ್ದು, ಯುವಕನೊಬ್ಬನಿಗೆ ಇಂದು ಸಂಜೆ ಚಾಕು ಇರಿದ ಘಟನೆ ಸುರತ್ಕಲ್ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ನಡೆದಿದೆ. ಕೃಷ್ಣಪುರ 4ನೇ ಬ್ಲಾಕ್ ನ ನಿವಾಸಿ ಜಲೀಲ್ ಚೂರಿ ಇರಿತಕ್ಕೊಳಗಾದ ಯುವಕ ಎಂದು ಗುರುತಿಸಲಾಗಿದೆ. ಯುವಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಚೂರಿ ಇರಿತಕ್ಕೆ ಒಳಗಾದ ಯುವಕನ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಮಂಗಳೂರು: ಯುವಕನ ಮೇಲೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು Read More »

ಬೆಳ್ತಂಗಡಿ: ಶಾಲಾ ವಾಹನ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕ ಸಾವು

ಸಮಗ್ರ ನ್ಯೂಸ್: ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಕೊಯ್ಯೂರು ಮಲೆಬೆಟ್ಟು ಸಮೀಪ ಶನಿವಾರ ನಡೆದಿರುವುದಾಗಿ ವರದಿಯಾಗಿದೆ. ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಸಾವನ್ನಪ್ಪಿದವರು. ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್ (48), ಪಣಕಜೆ ನಿವಾಸಿ ಕೆ.ಮುಹಮ್ಮದ್(57) ಗಂಭೀರ ಗಾಯಗೊಂಡವರು ಎಂದು ತಿಳಿದುಬಂದಿದೆ. ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಮುಖಾಮುಖಿಯಾಗಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ರಿಕ್ಷಾ ಸಂಪೂರ್ಣ ನುಜ್ಜು ಗುಜ್ಜಾಗಿದೆ.

ಬೆಳ್ತಂಗಡಿ: ಶಾಲಾ ವಾಹನ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕ ಸಾವು Read More »

ಮಂಗಳೂರು: ಅಕ್ರಮ ಕಸಾಯಿಖಾನೆಗೆ ಹಿಂಜಾವೇ ದಾಳಿ

ಸಮಗ್ರ ನ್ಯೂಸ್: ಅಕ್ರಮ ಕಸಾಯಿ ಖಾನೆಗೆ ಹಿಂದೂ ಜಾಗರಣಾ ವೇದಿಕೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಅಲಂಗಾರು ಬಳಿ ನಡೆದಿದೆ. ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆ ಮೇಲೆ ಬೆಳಿಗ್ಗೆ 4 ಗಂಟೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದು, ವಧೆ ಮಾಡಲು ತಂದಿದ್ದ 4 ಗೋವು ಮತ್ತು ಭಾರೀ ಪ್ರಮಾಣ ಮಾಂಸ, ದನದ ತಲೆ ಭಾಗಗಳು ಪತ್ತೆಯಾಗಿವೆ. ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು,

ಮಂಗಳೂರು: ಅಕ್ರಮ ಕಸಾಯಿಖಾನೆಗೆ ಹಿಂಜಾವೇ ದಾಳಿ Read More »

ಗರ್ಭಿಣಿಯಾದ 8ನೇ ತರಗತಿ ವಿದ್ಯಾರ್ಥಿನಿ| ಮೂವರಿಂದ ಅತ್ಯಾಚಾರ ಶಂಕೆ

ಸಮಗ್ರ ನ್ಯೂಸ್: ಎಂಟನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾಚಾರ ನಡೆದಿರುವ ಅನುಮಾನಗಳು ವ್ಯಕ್ತವಾಗಿವೆ. ಕೊಪ್ಪಳ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಆರು ತಿಂಗಳ ನಂತರ ಆಕೆ ಗರ್ಭಿಣಿಯಾಗಿದ್ದರಿಂದ ಈ ವಿಷಯ ಪೋಷಕರಿಗೆ ಗೊತ್ತಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಪೋಷಕರು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಅಡಿ ಪ್ರಕರಣ

ಗರ್ಭಿಣಿಯಾದ 8ನೇ ತರಗತಿ ವಿದ್ಯಾರ್ಥಿನಿ| ಮೂವರಿಂದ ಅತ್ಯಾಚಾರ ಶಂಕೆ Read More »

ಪ್ರಪಾತಕ್ಕೆ ಉರುಳಿದ ವಾಹನ| 8 ಮಂದಿ ಶಬರಿಮಲೆ ಯಾತ್ರಾರ್ಥಿಗಳು ದುರ್ಮರಣ

ಸಮಗ್ರ ನ್ಯೂಸ್: ಇರುಮುಡಿ ಹೊತ್ತು ಶಬರಿಮಲೆಗೆ ಸಾಗುತ್ತಿದ್ದ ಯಾತ್ರಾರ್ಥಿಗಳಿದ್ದ ವಾಹನ ಪ್ರಪಾತಕ್ಕೆ ಉರುಳಿ ಬಿದ್ದು 8 ಮಂದಿ ಭಕ್ತರು ಮೃತಪಟ್ಟ ಘಟನೆ ಕೇರಳದ‌ ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 11 ಗಂಟೆಗೆ ನಡೆದಿದೆ. ಶಬರಿಮಲೆಗೆ ಹೋಗುವ ಕುಮಿಲಿ- ಕಂಬಂ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಭಕ್ತರಿದ್ದ ವಾಹನ ರಾತ್ರಿ ವೇಳೆ ಸಂಚರಿಸುತ್ತಿದ್ದಾಗ ಅಚಾನಕ್ಕಾಗಿ ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ. ದುಘರ್ಟನೆಯಲ್ಲಿ 8 ಮಂದಿ ಈವರೆಗೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ವಿಷಯ

ಪ್ರಪಾತಕ್ಕೆ ಉರುಳಿದ ವಾಹನ| 8 ಮಂದಿ ಶಬರಿಮಲೆ ಯಾತ್ರಾರ್ಥಿಗಳು ದುರ್ಮರಣ Read More »