ಕ್ರೈಂ

ಪ್ರತ್ಯೇಕ ಬೈಕ್ ಅಪಘಾತದಲ್ಲಿ ಮೂವರು ದುರ್ಮರಣ

ಸಮಗ್ರ ನ್ಯೂಸ್: ಪ್ರತ್ಯೇಕವಾಗಿ ಸಂಭವಿಸಿದ ಎರಡು ಅಪಘಾತಗಳಲ್ಲಿ ಒಬ್ಬ ಕಾಲೇಜು ವಿದ್ಯಾರ್ಥಿ ಸೇರಿದಂತೆ ಮೂವರು ದಾರುಣವಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸಾಗರ ತಾಲೂಕಿನ ಖೈರಾ ಸಮೀಪ ಬೈಕ್‌ ನಿಯಂತ್ರಣ ತಪ್ಪಿ ಉರುಳಿ ಬಿದ್ದು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಸಾಗರದ ಪಾಲಿಟೆಕ್ನಿಕ್ ಕಾಲೇಜ್ ವಿದ್ಯಾರ್ಥಿ ಎಲ್ಡ್ರನ್ ಫರ್ನಾಂಡಿಸ್ (17 ) ಮೃತ ದುರ್ದೈವಿ. ಈತ ಆನಂದಪುರ ಸಮೀಪದ ಯಡೆಹಳ್ಳಿಯ ನಿವಾಸಿ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಪ್ರತ್ಯೇಕ ಬೈಕ್ ಅಪಘಾತದಲ್ಲಿ ಮೂವರು ದುರ್ಮರಣ Read More »

ಶಾಲೆಗೆ ಚಕ್ಕರ್ ಹಾಕಿ ಶಿಕ್ಷಕರ ಎಣ್ಣೆ ಪಾರ್ಟಿ| ಶಿಸ್ತು ಕ್ರಮ ಕೈಗೊಳ್ಳಲು ಶಿಫಾರಸ್ಸು

ಸಮಗ್ರ ನ್ಯೂಸ್: ಶಾಲೆಗೆ ಚಕ್ಕರ್ ಹಾಕಿ ಶಿಕ್ಷಕರು ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಶಿಕ್ಷಕರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಕಾಲೇಜಿನ ಪ್ರಾಂಶುಪಾಲ ಮುರಳಿಧರ ಕುಲಕರ್ಣಿ, ಸಹ ಶಿಕ್ಷಕರಾದ ಲಿಂಗಪ್ಪ ಪೂಜಾರ್, ಕೇಶವಕುಮಾರ್, ಅಬ್ದುಲ್ ಅಜಿಜ್, ಚೆನ್ನಪ್ಪ ರಾಥೋಡ್ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ರಾಯಚೂರು ಡಿಡಿಪಿಐ ವೃಷಭೇಂದ್ರಯ್ಯ ಕಲಬುರ್ಗಿಯ ಶಿಕ್ಷಣ ಆಯುಕ್ತರಿಗೆ ಪತ್ರ ಬರೆದು ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಶಾಲಾ ಅವಧಿಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸುವ ಶಿಕ್ಷಕರು ಡಾಬಾದಲ್ಲಿ ಚಿಕನ್, ಮಟನ್

ಶಾಲೆಗೆ ಚಕ್ಕರ್ ಹಾಕಿ ಶಿಕ್ಷಕರ ಎಣ್ಣೆ ಪಾರ್ಟಿ| ಶಿಸ್ತು ಕ್ರಮ ಕೈಗೊಳ್ಳಲು ಶಿಫಾರಸ್ಸು Read More »

ಸುಳ್ಯ: ಗಂಡನ ಮನೆಯವರ ವಿರುದ್ಧ ಕಳ್ಳತನದ ದೂರು ನೀಡಿದ ಪತ್ನಿ

ಸಮಗ್ರ ನ್ಯೂಸ್: ಚಿನ್ನಾಭರಣ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಉದ್ಯಮಿ ನವೀನ್ ಪತ್ನಿ ಸ್ಪಂದನ ಅವರು ಬೆಳ್ಳಾರೆ ಕಾವಿನ ಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಪೊಲೀಸ್ ದೂರು ನೀಡಿದ್ದಾರೆ. ದೂರಿನಲ್ಲಿ ನವೀನ್ ಪತ್ನಿ ಸ್ಪಂದನ ತನ್ನ ಗಂಡ ಮದ್ಯವ್ಯಸನಿ ಎಂದು ಉಲ್ಲೇಖಿಸಿದ್ದಾರೆ.ಇದರಿಂದಾಗಿ ವೈವಾಹಿಕ ಜೀವನದಲ್ಲಿ ನೊಂದು ಬೇಸತ್ತಿದ್ದೇನೆ. ಕಳೆದ ಕೆಲವು ತಿಂಗಳುಗಳಿಂದ ಇವರ ಮದ್ಯವ್ಯಸನದಿಂದ ಸಹಿಸಲು

ಸುಳ್ಯ: ಗಂಡನ ಮನೆಯವರ ವಿರುದ್ಧ ಕಳ್ಳತನದ ದೂರು ನೀಡಿದ ಪತ್ನಿ Read More »

ಮಂಗಳೂರು: ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಬಂಧನ

ಸಮಗ್ರ ನ್ಯೂಸ್: ಮಾದಕ ನಿದ್ರಾಜನಕ ವಸ್ತುವಾದ ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಗುರುವಾರ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ಬಂಧಿಸಿದ್ದಾರೆ. ಬಿಕಸ್ಟಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್ (25) ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂಬಿಬ್ಬರು ಬಂಧಿತರು. ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ 5 ಗಂಟೆಯ ವೇಳೆಗೆ ಬಿ,ಮೂಡ

ಮಂಗಳೂರು: ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಬಂಧನ Read More »

ಚೀನಾ ಗಡಿಯಲ್ಲಿ ಭಾರೀ ದುರಂತ| 16 ವೀರ ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಭಾರತ-ಚೀನಾ ಗಡಿಯ ಸಮೀಪ ಉತ್ತರ ಸಿಕ್ಕಿಂನಲ್ಲಿ ಭಾರಿ ದುರಂತ ನಡೆದಿದ್ದು, ಸೇನಾ ವಾಹನವೊಂದು ಕಮರಿಗೆ ಬಿದ್ದು 16 ಜನ ಯೋಧರು ಸಾವನ್ನಪ್ಪಿದ್ದಾರೆ. ಅಲ್ಲದೇ, ಇತರ ನಾಲ್ವರು ಗಾಯಗೊಂಡಿದ್ದಾರೆ. ಸೇನಾ ವಾಹನವು 20 ಜನ ಯೋಧರೊಂದಿಗೆ ಗಡಿ ಭಾಗದ ಪೋಸ್ಟ್‌ಗಳತ್ತ ಸಾಗುತ್ತಿತ್ತು. ಈ ವೇಳೆ ಸ್ಕಿಡ್​ ಆಗಿ ನೂರಾರು ಅಡಿ ಆಳದ ಕಮರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಉತ್ತರ ಬಂಗಾಳದ ಸೇನಾಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ಸ್ಥಳದಿಂದ ಎಲ್ಲ

ಚೀನಾ ಗಡಿಯಲ್ಲಿ ಭಾರೀ ದುರಂತ| 16 ವೀರ ಯೋಧರು ಹುತಾತ್ಮ Read More »

ಕಾರ್ಕಳ: ಚಲಿಸುತ್ತಿದ್ದ ಸ್ಕೂಟರ್ ಬೆಂಕಿಗಾಹುತಿ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದರ ಇಂಜಿನ್ ಇದ್ದಕ್ಕಿದ್ದಂತೆ ಆಫ್ ಆಗಿ, ಇಡೀ ಸ್ಕೂಟರ್ ಬೆಂಕಿಗಾಹುತಿಯಾದ ಘಟನೆ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ನಡೆದಿದೆ. ಈ ವೇಳೆ ಸವಾರ ಸ್ಕೂಟರ್ ನಿಂದ ಇಳಿದು ಏನಾಗಿದೆ ಎಂದು ಪರಿಶೀಲಿಸುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕಾರ್ಕಳ ಮೂಲದವರಿಗೆ ಸೇರಿದ ಸ್ಕೂಟರ್ ಕ್ಷಣಾರ್ಧದಲ್ಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾರ್ಕಳ: ಚಲಿಸುತ್ತಿದ್ದ ಸ್ಕೂಟರ್ ಬೆಂಕಿಗಾಹುತಿ Read More »

ನಕಲಿ ದಾಖಲೆ ಸೃಷ್ಟಿಸಿ‌ ಆಸ್ತಿ ಕಬಳಿಕೆ ಸಂಚು| ಸಬ್ ರಿಜಿಸ್ಟ್ರಾರ್ ಸೇರಿ ನಾಲ್ವರು ಅರೆಸ್ಟ್

ಸಮಗ್ರ ನ್ಯೂಸ್: ನಕಲಿ ಮರಣ ಪತ್ರ ಸೃಷ್ಟಿಸಿ ಆಸ್ತಿ ಕಬಳಿಸಲು ಸಂಚು ರೂಪಿಸಿದ್ದ ಸಬ್ ರಿಜಿಸ್ಟ್ರಾರ್ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಆರ್ ಆರ್ ನಗರ ಜನನ ಮರಣ ಸಬ್ ರಿಜಿಸ್ಟ್ರಾರ್ ನವೀನ್, ಪುಟ್ಟಮ್ಮ, ಪ್ರಸಾದ್, ದಿವ್ಯಾ ಎಂದು ಗುರುತಿಸಲಾಗಿದೆ. ಒಟ್ಟು ಆರು ಮಂದಿ ಆರೋಪಿಗಳ ವಿರುದ್ಧ ಹಲಸೂರು ಗೇಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಮೇಲೆ ಆರ್ ಆರ್ ನಗರದ ಸಮೀಪ ಪಟ್ಟಣಗೆರೆಯಲ್ಲಿ ಕೋಟ್ಯಾಂತರ ಮೌಕ್ಯದ 3 ಎಕರೆ ಖಾಸಗಿ ಜಮೀನು ಗುಳುಂ

ನಕಲಿ ದಾಖಲೆ ಸೃಷ್ಟಿಸಿ‌ ಆಸ್ತಿ ಕಬಳಿಕೆ ಸಂಚು| ಸಬ್ ರಿಜಿಸ್ಟ್ರಾರ್ ಸೇರಿ ನಾಲ್ವರು ಅರೆಸ್ಟ್ Read More »

ರಂಗಸ್ಥಳದಲ್ಲೇ ಹೃದಯಾಘಾತ; ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಸಾವು

ಸಮಗ್ರ ನ್ಯೂಸ್: ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು (58) ರಂಗಸ್ಥಳದಲ್ಲೇ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಮೇಳದ ಕಲಾವಿದರಾಗಿದ್ದರು. ಕಟೀಲಿನ ಸರಸ್ವತೀ ಸದನದಲ್ಲಿ ʼತ್ರಿಜನ್ಮ ಮೋಕ್ಷʼ ಯಕ್ಷಗಾನ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ಹೃದಯಾಘಾತವಾಗಿದೆ. ಕಟೀಲು ದೇವಸ್ಥಾನದಲ್ಲಿ ಆರು ಯಕ್ಷಗಾನ ಮೇಳಗಳಿದ್ದು, ಇವರು ನಾಲ್ಕನೇ‌ ಮೇಳದ ಕಲಾವಿದರಾಗಿದ್ದಾರೆ. ʼತ್ರಿಜನ್ಮ ಮೋಕ್ಷʼ ಯಕ್ಷಗಾನದ ಅಂತಿಮ ಭಾಗದಲ್ಲಿ ಶಿಶುಪಾಲ- ದಂತವಕ್ತ್ರರ ವಧೆಯ ಪ್ರಸಂಗವಿದ್ದು, ಇದರಲ್ಲಿ ಗುರುವಪ್ಪ ಅವರು ಶಿಶುಪಾಲನ ಪಾತ್ರ ವಹಿಸಿದ್ದರು. ಕಾರ್ಯಕ್ರಮದ

ರಂಗಸ್ಥಳದಲ್ಲೇ ಹೃದಯಾಘಾತ; ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಸಾವು Read More »

ಸುಳ್ಯ: ಉದ್ಯಮಿ ನವೀನ್ ಕಾಮಧೇನುರನ್ನು ಹೊತ್ತೊಯ್ದ ಪ್ರಕರಣ| ನವೀನ್ ರನ್ನು ತಾಯಿಯ ವಶಕ್ಕೆ ಒಪ್ಪಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಿಕ ನವೀನ್ ಕಾಮಧೇನುರನ್ನು ಏಕಾಏಕಿ ಮನೆಗೆ ಬಂದು ಅಂಬ್ಯುಲೆನ್ಸ್ ನಲ್ಲಿ ಹೊತ್ತೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ನೀರಜಾಕ್ಷಿಯವರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ನವೀನರನ್ನು ತಾಯಿಯ ವಶಕ್ಕೆ ಒಪ್ಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ನವೀನ್ ಕುರಿತಂತೆ ಹೈಕೋರ್ಟ್ ವರದಿ ಕೇಳಿದ್ದು, ನವೀನ್ ರನ್ನು ಆಸ್ಪತ್ರೆಗೆ ದಾಖಲುಗೊಳಿಸಿರುವುದಾಗಿ ಪೋಲೀಸರಿಂದ ಹೈಕೋರ್ಟಿಗೆ ವರದಿ ಸಲ್ಲಿಕೆಯಾಗಿತ್ತು. ಇದರ ಬೆನ್ನಲ್ಲೇ ನವೀನರನ್ನು ದಾಖಲಿಸಲಾದ ಆಸ್ಪತ್ರೆಗೆ ನ್ಯಾಯಾಲಯವು ವಕೀಲರನ್ನು ಕಳುಹಿಸಿದೆ.

ಸುಳ್ಯ: ಉದ್ಯಮಿ ನವೀನ್ ಕಾಮಧೇನುರನ್ನು ಹೊತ್ತೊಯ್ದ ಪ್ರಕರಣ| ನವೀನ್ ರನ್ನು ತಾಯಿಯ ವಶಕ್ಕೆ ಒಪ್ಪಿಸಿದ ಹೈಕೋರ್ಟ್ Read More »

ವಿಟ್ಲ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ನಡೆದಿದೆ. ಸ್ಥಳೀಯರು ಗುಡ್ಡಕ್ಕೆ ಸೊಪ್ಪು ಸೌದೆ ತರಲು ಹೋದ ಸಂದರ್ಭ ಮೊಬೈಲ್ ಒಂದು ಪತ್ತೆಯಾಗಿದೆ. ಇದೇ ವೇಳೆ ಅಕ್ಕಪಕ್ಕದ ನೋಡಿ ಸಂದರ್ಭ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಪಕ್ಕದಲ್ಲಿರುವ ಮರದಲ್ಲಿ ಹಗ್ಗವೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದ್ದು, ಕೊಳೆತು ಅಸ್ಥಿಪಂಜರ ಮಾತ್ರ ಕಾಣುತ್ತಿದ್ದು ಸತ್ತು ಹಲವು ಸಮಯ ಕಳೆದಿದೆ ಎನ್ನಲಾಗಿದೆ.

ವಿಟ್ಲ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »