ಕ್ರೈಂ

ಚಾಲಕನಿಗೆ ಹೃದಯಾಘಾತದಿಂದ ಬಸ್, ಕಾರು ನಡುವೆ ಭೀಕರ ಅಪಘಾತ| 9 ಸಾವು, 28 ಮಂದಿಗೆ ಗಾಯ

ಗಾಂಧೀನಗರ:ಚಾಲಕನಿಗೆ ಹೃದಯಾಘಾತದಿಂದ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಜನರು ಸಾವನ್ನಪ್ಪಿ 28 ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೂರತ್‌ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ವೇಳೆ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೂ ಮುನ್ನ ಚಾಲಕನಿಗೆ ಹೃದಯಾಘಾತವಾಗಿದ್ದು, ಇದರಿಂದ ವಾಹನದ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ […]

ಚಾಲಕನಿಗೆ ಹೃದಯಾಘಾತದಿಂದ ಬಸ್, ಕಾರು ನಡುವೆ ಭೀಕರ ಅಪಘಾತ| 9 ಸಾವು, 28 ಮಂದಿಗೆ ಗಾಯ Read More »

ಬಸ್ ಟಾಪ್ ಮೇಲೆ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್: ಬಸ್ ನ ಟಾಪ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ . ಡಿಸೆಂಬರ್ 28 ರಂದು ಶಬರಿಮಲೆ ಯಾತ್ರೆ ಮುಗಿಸಿ ಬಂದು ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ನಿಲ್ಲಿಸಿದ ಬಸ್ಸಿನ ಟಾಪ್ ನಲ್ಲಿ ಮಲಗಿದ್ದರು. ಮೇಲಿಂದ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ತಲೆಗೆ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ

ಬಸ್ ಟಾಪ್ ಮೇಲೆ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು Read More »

ಪ್ರೇಯಸಿಯ ಬೈಕ್ ಟ್ಯಾಂಕ್ ಮೇಲೆ ಅಸಭ್ಯವಾಗಿ ಕುಳ್ಳಿರಿಸಿ ಯುವಕನ ಜಾಲಿ ರೈಡ್

ಸಮಗ್ರ ನ್ಯೂಸ್: ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಕೂರಿಸಿ ವಿಚಿತ್ರವಾಗಿ ಪ್ರೀತಿ ನಿವೇದನೆ ಮಾಡುವುದಕ್ಕೆ ಮುಂದಾಗ ವಿಚಿತ್ರವಾದ ವಿಡಿಯೋವೊಂದನ್ನು ಕಾರಿನಲ್ಲಿ ಹಾದುಹೋಗುವ ಜನರು ಚಿತ್ರೀಕರಿಸಿದ್ದಾರೆ. ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಘಟನೆ ನಡೆದ ಎರಡೇ ಗಂಟೆಗಳಲ್ಲಿ ಸ್ಟೀಲ್ ಪ್ಲಾಂಟ್ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾಹನವನ್ನು

ಪ್ರೇಯಸಿಯ ಬೈಕ್ ಟ್ಯಾಂಕ್ ಮೇಲೆ ಅಸಭ್ಯವಾಗಿ ಕುಳ್ಳಿರಿಸಿ ಯುವಕನ ಜಾಲಿ ರೈಡ್ Read More »

ಉಡುಪಿ: ಲಾರಿ ಡಿಕ್ಕಿ ಹೊಡೆದು ಸಬ್ ಇನ್ಸ್‌ಪೆಕ್ಟರ್ ಸಾವು

ಸಮಗ್ರ ನ್ಯೂಸ್: ಉಡುಪಿಯ ಹೊರ ವಲಯದ ಅಂಬಾಗಿಲಿನಲ್ಲಿ ಲಾರಿ ಡಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಸಾವನ್ನಪ್ಪಿರುವ ದುರ್ಘಟನೆ ಗುರುವಾರ(ಡಿ.29) ತಡರಾತ್ರಿ ನಡೆದಿದೆ. ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಶಂಕರ್(52) ಮೃತ ದುರ್ದೈವಿ. ಮಂಗಳೂರು ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ಮುಗಿಸಿ ಬಸ್ಸಿನಿಂದ ಉಡುಪಿಗೆ ಬಂದಿದ್ದ ಇವರು ತಮ್ಮ ಬೈಕ್ ನಲ್ಲಿ ಉಳ್ಳೂರು ಕಡೆ ಹೋಗುತ್ತಿದ್ದಾಗ ಅತೀ ವೇಗದಿಂದ ಆಗಮಿಸಿದ ಲಾರಿ ಬೈಕ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಶಂಕರ್

ಉಡುಪಿ: ಲಾರಿ ಡಿಕ್ಕಿ ಹೊಡೆದು ಸಬ್ ಇನ್ಸ್‌ಪೆಕ್ಟರ್ ಸಾವು Read More »

ಜೀವನ್ಮರಣ ಹೋರಾಟದಲ್ಲಿ ರಿಷಬ್ ಪಂತ್| ಏಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ

ಸಮಗ್ರ ನ್ಯೂಸ್: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ರಿಷಭ್ ಪಂತ್ ತೀವ್ರ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಕಾರು ಚಾಲನೆ ಮಾಡುವಾಗ ಕ್ರಿಕೆಟರ್ ನಿದ್ರೆಗೆ ಜಾರಿದ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡು ಬಿಎಂಡಬ್ಲ್ಯೂ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕ್ರಿಕೆಟಿಗ ಕಾರಿನಲ್ಲಿ ಒಬ್ಬರೇ ಇದ್ದರು ಮತ್ತು ಧಗಧಗನೇ ಹೊತ್ತಿಉರಿದ ಕಾರಿನ ಗಾಜು ಒಡೆದು ಹೊರ ಬಂದು ಇದೀಗ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ ಎಂದು ಉತ್ತರಾಖಂಡ್ ಪೊಲೀಸ್ ಡಿಜಿಪಿ

ಜೀವನ್ಮರಣ ಹೋರಾಟದಲ್ಲಿ ರಿಷಬ್ ಪಂತ್| ಏಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ Read More »

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾದ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ನಡೆದಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ. ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ Read More »

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರತಿಷ್ಠಿತ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಡೆಂಡಲ್ ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿದ ಆರೋಪ ಕೇಳಿಬಂದಿದ್ದು, ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ, ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯೇ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಇವರು ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ. ಕೇರಳ ಮೂಲದ ಆರು ವಿದ್ಯಾರ್ಥಿಗಳ

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ Read More »

ಸೌದಿಯಲ್ಲಿ ಭೀಕರ ಅಪಘಾತ| ಸುರತ್ಕಲ್ ನ ಯುವಕ ದುರ್ಮರಣ

ಸಮಗ್ರ ನ್ಯೂಸ್: ಕಾರು ಹಾಗೂ ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ತಡಂಬೈಲ್ ನ ಯುವಕನೋರ್ವ ಮೃತಪಟ್ಟಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅದ್ದು ಎಂಬವರ ಪುತ್ರ ಫಾಝಿಲ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಫಾಝಿಲ್ ಅವರು ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದಾರೆ ಎಂದು ತಿಳಿದು ಬಂದಿದ್ದು, ಫಾಝಿಲ್ ತನ್ನ ಪತ್ನಿ ಮಗುವಿನೊಂದಿಗೆ ಸೌದಿ ಅರೇಬಿಯಾದಲ್ಲೇ ವಾಸವಾಗಿದ್ದರು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಫಾಝಿಲ್ ಕಳೆದ 5

ಸೌದಿಯಲ್ಲಿ ಭೀಕರ ಅಪಘಾತ| ಸುರತ್ಕಲ್ ನ ಯುವಕ ದುರ್ಮರಣ Read More »

ಉಡುಪಿ: ಕಂಠಪೂರ್ತಿ ಕುಡಿದು ಶಾಲಾ ಜಗಲಿಯಲ್ಲಿ ಮಲಗಿದ ಶಿಕ್ಷಕ

ಸಮಗ್ರ ನ್ಯೂಸ್: ಶಾಲೆಯ ಶಿಕ್ಷಕರೊಬ್ಬರು ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿಯೇ ಮಲಗಿದ ಪ್ರಕರಣವೊಂದು ಉಡುಪಿಯ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ. ಕೃಷ್ಣಮೂರ್ತಿ ಎಂಬವರೇ ಕಂಠಪೂರ್ತಿ ಕುಡಿದು ಜಗುಲಿಯಲ್ಲಿ ಮಲಗಿದ ಶಿಕ್ಷಕ. ಶಾಲೆಯ ಕೊಠಡಿಯಲ್ಲಿ ಮಕ್ಕಳು ಅವರ ಪಾಡಿಗೆ ಇದ್ದರೆ, ಈ ಶಿಕ್ಷಕ ಮಾತ್ರ ಮದ್ಯದ ಅಮಲಿನಲ್ಲಿ ತೇಲಾಡುತ್ತಾ ಶಾಲೆ ಆವರಣದ ಜಗುಲಿಯಲ್ಲಿಯೇ ಹೊರಳಾಡುತ್ತಾ ಮಲಗಿದ್ದರು. ಮದ್ಯ ಕುಡಿದು ಮಲಗಿರುವ ದೃಶ್ಯವನ್ನು ಸ್ಥಳೀಯರೊಬ್ಬರು ಚಿತ್ರೀಕರಿಸಿಕೊಂಡಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿಯೂ ಹರಿಬಿಟ್ಟಿದ್ದಾರೆ. ಈ ವಿಡಿಯೊ ಈಗ

ಉಡುಪಿ: ಕಂಠಪೂರ್ತಿ ಕುಡಿದು ಶಾಲಾ ಜಗಲಿಯಲ್ಲಿ ಮಲಗಿದ ಶಿಕ್ಷಕ Read More »

ಅಥಣಿ: ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಟ್ಟಣದಲ್ಲಿರುವ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಸುಮಾರು 35 ರಿಂದ 40ರ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವವನ್ನು ನೋಡಿದ ಸ್ಥಳೀಯರು ಅಥಣಿ ಪೋಲಿಸರಿಗೆ ಮಾಹಿತಿ ನೀಡಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಥಣಿ: ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »