ಕ್ರೈಂ

ಕೊರಿಯರ್ ಅಂಗಡಿಯಲ್ಲಿ ಬ್ಲಾಸ್ಟ್ ಪ್ರಕರಣ| ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್

ಸಮಗ್ರ ನ್ಯೂಸ್: ಡಿಟಿಡಿಸಿ ಕೊರಿಯರ್ ಆಫೀಸಿನಲ್ಲಿ ಮಿಕ್ಸಿ ಸ್ಫೋಟಗೊಂಡ ಘಟನೆ ಹಾಸನ ನಗರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಹಿಳೆ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನಾ ಸ್ಥಳದತ್ತ ಯಾರೂ ಪ್ರವೇಶ ಮಾಡದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದಾರೆ. ಸ್ಥಳಕ್ಕೆ ಆಂತರಿಕ ಭದ್ರತಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮಿಕ್ಸಿ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಫೋಟದ ರಭಸಕ್ಕೆ ಕೊರಿಯರ್ ಅಂಗಡಿ ಮಾಲೀಕ ಶಶಿ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. […]

ಕೊರಿಯರ್ ಅಂಗಡಿಯಲ್ಲಿ ಬ್ಲಾಸ್ಟ್ ಪ್ರಕರಣ| ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್ Read More »

ಮಗಳ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದನ್ನು ಪ್ರಶ್ನಿಸಿದ ತಂದೆಯ ಕಗ್ಗೊಲೆ

ಮಗಳ ಅಶ್ಲೀಲ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹುಡುಗನನ್ನು ಪ್ರಶ್ನಿಸಲು ಹೋದ ಬಿಎಸ್‌ಎಫ್‌ ಜವಾನನ್ನು ಹುಡುಗನ ಮನೆಯವರು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಬಿಎಸ್‌ಎಫ್ ಯೋಧನ ಮಗಳು ಹಾಗೂ ಆಕೆಯ ತರಗತಿಯಲ್ಲೇ ಓದುತ್ತಿದ್ದ 15 ವರ್ಷದ ಬಾಲಕ ಪರಸ್ಪರ ಸಂಬಂಧ ಹೊಂದಿದ್ದರು. ಇತ್ತೀಚೆಗೆ ಈ 15 ವರ್ಷದ ಯುವಕ ಸಾಮಾಜಿಕ ಜಾಲತಾಣದಲ್ಲಿ ಈ ಬಾಲಕಿಯ ಅಶ್ಲೀಲ ವಿಡಿಯೋವನ್ನು ಪೋಸ್ಟ್ ಮಾಡಿದ್ದ, ಇದು ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಿಸಲು ಆತನ ಮನೆಗೆ ಹೋದ ಯೋಧ

ಮಗಳ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದನ್ನು ಪ್ರಶ್ನಿಸಿದ ತಂದೆಯ ಕಗ್ಗೊಲೆ Read More »

ವಿಹಾರಕ್ಕೆಂದು ಬಂದಿದ್ದ ಯುವತಿಯ ಅತ್ಯಾಚಾರ; ಬಸ್ ಚಾಲಕನ ಬಂಧನ

ಸಮಗ್ರ ನ್ಯೂಸ್: ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಬಸ್ ಚಾಲಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಭಾನುವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈನಿಂದ ಇತ್ತೀಚೆಗೆ ಗೋವಾಕ್ಕೆ ಬಂದ 14 ಜನರ ಗುಂಪಿನ

ವಿಹಾರಕ್ಕೆಂದು ಬಂದಿದ್ದ ಯುವತಿಯ ಅತ್ಯಾಚಾರ; ಬಸ್ ಚಾಲಕನ ಬಂಧನ Read More »

ಹಾಸನ: ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್; ಮಾಲಿಕ ಗಂಭೀರ

ಸಮಗ್ರ ನ್ಯೂಸ್: ಕೊರಿಯರ್ ಅಂಗಡಿಯೊಂದರಲ್ಲಿ ಅನುಮಾನಾಸ್ಪದವಾಗಿ ಮಿಕ್ಸಿ ಬ್ಲಾಸ್ಟ್ ಆದ ಘಟನೆ ಹಾಸನ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಶಶಿ ಎಂಬುವವರ ಕೈಗೆ ಮತ್ತು ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಹಾಸನದ ಕುವೆಂಪುನಗರದ 16ನೇ ಕ್ರಾಸ್‍ನಲ್ಲಿರುವ ಡಿಟಿಡಿಸಿ ಕೊರಿಯರ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಡಿಟಿಡಿಸಿ ಅಂಗಡಿಗೆ ಮಿಕ್ಸಿ ಪಾರ್ಸಲ್ ಬಂದಿತ್ತು. ಈ ಪಾರ್ಸಲ್ ತೆಗೆದುಕೊಂಡು ಹೋಗಿದ್ದ ವ್ಯಕ್ತಿಯು, ಮಿಕ್ಸಿ, ಜಾರ್ ನಮಗೆ ಬೇಡ ಎಂದು ಅಂಗಡಿ ಮಾಲಕನಿಗೆ ವಾಪಸ್

ಹಾಸನ: ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್; ಮಾಲಿಕ ಗಂಭೀರ Read More »

ಸುಳ್ಯ: ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸೋನಿಯಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಬೆಂಗಳೂರು ರಾಮನಾಥ ಪುರದ, ಕೋರಮಂಗಲ ತಾಲೂಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದಳು. ಮದ್ಯಾಹ್ನ ಆಕೆಯ ರೂಂ ನಲ್ಲಿದ್ದ

ಸುಳ್ಯ: ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಚಾಮರಾಜನಗರ: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಸಾವು

ಸಮಗ್ರ ನ್ಯೂಸ್: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಕಾಗಲವಾಡಿ ಮೋಳೆ ಗ್ರಾಮದ ಶಿವರಾಜು ಹಾಗೂ ಕುಮಾರ್ ಮೃತ ದುರ್ದೈವಿಗಳು‌. ಸಿದ್ದರಾಜು ಎಂಬಾತ ಬಚಾವ್​ ಆದರೂ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ರೇಣುಕಾದೇವಿ ಎಂಬುವರ ಹೆಸರಿನಲ್ಲಿ ಈ ಬಿಳಿಕಲ್ಲು ಕ್ವಾರಿಯ ಪರವಾನಗಿ ಇತ್ತು. ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣ ಮಾಸುವ ಮುನ್ನವೇ ಈ ದುರಂತ ನಡೆದಿರುವುದು ವಿಪರ್ಯಾಸವಾಗಿದೆ. ಗಣಿಗಾರಿಕೆ ಅಧಿಕಾರಿಗಳ

ಚಾಮರಾಜನಗರ: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಸಾವು Read More »

ಜಲೀಲ್ ಹತ್ಯೆ ಪ್ರಕರಣ| ಮೂವರು ಆರೋಪಿಗಳ ಬಂಧನ – ಶಶಿಕುಮಾರ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ. ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ

ಜಲೀಲ್ ಹತ್ಯೆ ಪ್ರಕರಣ| ಮೂವರು ಆರೋಪಿಗಳ ಬಂಧನ – ಶಶಿಕುಮಾರ್ Read More »

ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಬರ್ಬರ ಹತ್ಯೆ| ಬೆಚ್ಚಿಬಿದ್ದ ಬೆಳಗಾವಿ

ಸಮಗ್ರ‌ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ನಡೆದ ಯುವಕರಿಬ್ಬರ ಬರ್ಬರ ಹತ್ಯೆಯು ಬೆಳಗಾವಿ ಜನತೆಯನ್ನು ಬೆಚ್ಚಿಬೀಳಿಸಿದೆ. ನಗರದ ಹೊರ ವಲಯದಲ್ಲೇ ಈ ಘಟನೆ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ.ಬಸವರಾಜ್ ಬೆಳಗಾಂವ್ಕರ್ (22), ಗಿರೀಶ್​ ನಾಗಣ್ಣವರ (22) ಹತ್ಯೆಯಾದ ಯುವಕರು. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವಕರು ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ವಾಹನ ನುಗ್ಗಿಸಿದ್ದ. ಮೈದಾನದಲ್ಲಿ ವಾಹನ ನುಗ್ಗಿಸಿದಕ್ಕೆ ಯುವಕರು ಆಕ್ಷೇಪ

ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಬರ್ಬರ ಹತ್ಯೆ| ಬೆಚ್ಚಿಬಿದ್ದ ಬೆಳಗಾವಿ Read More »

ಉಪ್ಪಿನಂಗಡಿ: ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬಸ್ ಡಿಕ್ಕಿ| ಕುದುರೆ ಸಾವು, ಸವಾರ ಗಂಭೀರ

ಸಮಗ್ರ ನ್ಯೂಸ್: ಕುದುರೆಯೊಂದಕ್ಕೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದ್ದು, ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಡಿ.25 ರ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು

ಉಪ್ಪಿನಂಗಡಿ: ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬಸ್ ಡಿಕ್ಕಿ| ಕುದುರೆ ಸಾವು, ಸವಾರ ಗಂಭೀರ Read More »

ಸುರತ್ಕಲ್ ಕೊಲೆ ಪ್ರಕರಣ| ನಿನ್ನೆ ಸಂಜೆ ಆಗಿದ್ದೇನು? ಪೊಲೀಸ್ ಕಮಿಷನರ್ ಏನ್ ಹೇಳಿದ್ರು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಕಾಟಿಪಳ್ಳ ಎಂಬಲ್ಲಿ ಜಲೀಲ್​ ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಪ್ರಕರಣವನ್ನು ಕೋಮು ದ್ವೇಷದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ಜಲೀಲ್​ ಅವರು ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ಪ್ರಾವಿಷನ್​ ಸ್ಟೋರ್ ನಡೆಸುತ್ತಿದ್ದರು. ರಾತ್ರಿ ವೇಳೆ ಅವರ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಜಲೀಲ್​ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿದ್ದರೂ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ

ಸುರತ್ಕಲ್ ಕೊಲೆ ಪ್ರಕರಣ| ನಿನ್ನೆ ಸಂಜೆ ಆಗಿದ್ದೇನು? ಪೊಲೀಸ್ ಕಮಿಷನರ್ ಏನ್ ಹೇಳಿದ್ರು? ಇಲ್ಲಿದೆ ಫುಲ್ ಡೀಟೈಲ್ಸ್ Read More »