ಕ್ರೈಂ

ಮೈಸೂರು: ಮತ್ತೆ ಅಟ್ಟಹಾಸ ಮೆರೆದ ನರಭಕ್ಷಕ| ರೈತನ ಮೇಲೆ ಏಕಾಏಕಿ ದಾಳಿ

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಚಿರತೆಯೊಂದು ಯುವತಿಯ ಮೇಲೆ ದಾಳಿ ನಡೆಸಿ ಯುವತಿ ಸಾವನ್ನು ಕೂಡ ಅಪ್ಪಿದ್ದ ಪ್ರಕರಣ ಹಸಿಯಾಗಿರುವಾಗಲೇ, ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ರೈತನ ಮೇಲೆ ಚಿರತೆ ಅಟ್ಟಹಾಸ ಮೆರೆದಿದೆ. ರೈತ ಚಿರತೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದ ನುಗ್ಗಳ್ಳಿಕೊಪ್ಪಲು ಗ್ರಾಮದ ರೈತ ಸತೀಶ್ ತನ್ನ ಕಬ್ಬಿನ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಹಿಂದಿನಿಂದ ಬಂದಿರುವಂತ ಚಿರತೆ ದಿಢೀರ್ ದಾಳಿ ನಡೆಸಿದೆ. ಏಕಾಏಕಿ ಚಿರತೆ ದಾಳಿಯಿಂದಾಗಿ […]

ಮೈಸೂರು: ಮತ್ತೆ ಅಟ್ಟಹಾಸ ಮೆರೆದ ನರಭಕ್ಷಕ| ರೈತನ ಮೇಲೆ ಏಕಾಏಕಿ ದಾಳಿ Read More »

ಬೆಳ್ತಂಗಡಿ: ದಲಿತನನ್ನು ಬರ್ಭರವಾಗಿ ಕೊಂದು ಬೆತ್ತಲೆಗೊಳಿಸಿ ದೋಚಿದ ದುಷ್ಕರ್ಮಿಗಳು| ನಾಲ್ವರ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ದಲಿತ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಮಾಡಿದಲ್ಲದೆ , ಹಲ್ಲೆಗೊಳಗಾಗಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಕೊಠಡಿಯಲ್ಲಿ ಕೊಲೆ ಮಾಡಿ ಬೆತ್ತಲೆಗೊಳಿಸಿ ನಂತರ ತೋಟದಲ್ಲಿ ಹಾಕಿ ಕೊಲೆಯಾದವನ ಬಳಿ ಇದ್ದ ಹಣವನ್ನು ದೋಚಿ ಪರಾರಿಯಾದ ಘಟನೆ ಶಿಬಾಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎಸಿ ಕುರಿಯನ್ ಮಾಲೀಕತ್ವದ ಸಾರ ಫಾರ್ಮ್ ತೋಟದಲ್ಲಿ ಮೇಲ್ವಿಚಾರನಾಗಿ ಕೆಲಸ ಮಾಡುತ್ತಿದ್ದ ಶ್ರೀಧರ (30) ಎಂಬಾತನನ್ನು ಡಿ17ರಂದು ಸಂಜೆ ತೋಟದ ಕಚೇರಿ ಎದುರು ಇರುವ ಸರ್ವಜನಿಕ ರಸ್ತೆಯ ಬದಿಯಲ್ಲಿ

ಬೆಳ್ತಂಗಡಿ: ದಲಿತನನ್ನು ಬರ್ಭರವಾಗಿ ಕೊಂದು ಬೆತ್ತಲೆಗೊಳಿಸಿ ದೋಚಿದ ದುಷ್ಕರ್ಮಿಗಳು| ನಾಲ್ವರ ವಿರುದ್ಧ ಪ್ರಕರಣ ದಾಖಲು Read More »

ಮಂಗಳೂರು: ಬಾಲಕಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಕಟ್ಟಿ‌ಹಾಕಿ ಥಳಿಸಿದ ಗ್ರಾಮಸ್ಥರು

ಸಮಗ್ರ‌ ನ್ಯೂಸ್: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಕೆಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಿಡಿದು ಪೋಷಕರು ಹಾಗೂ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕರೆನಾಡು ಪ್ರದೇಶದ ಯುವಕ ಪ್ರತಿದಿನ ಬಾಲಕಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ. ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದ. ಈ ಬಗ್ಗೆ ಬಾಲಕಿ ಪೋಷಕರಿಗೆ ಹೇಳಿದ್ದಳು. ಯುವಕನನ್ನು ಹಿಡಿದ ಪೋಷಕರು ಆತನನ್ನು ಕಂಬಕ್ಕೆ ಕಟ್ಟಿಹಾಕಿ ಮನ ಬಂದಂತೆ ಹೊಡೆದಿದ್ದಾರೆ. ಪೋಷಕರಿಗೆ ಸ್ಥಳೀಯರು ಸಾಥ್ ನೀಡಿದ್ದಾರೆ.

ಮಂಗಳೂರು: ಬಾಲಕಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಕಟ್ಟಿ‌ಹಾಕಿ ಥಳಿಸಿದ ಗ್ರಾಮಸ್ಥರು Read More »

ಬೆಳ್ತಂಗಡಿ: ಕದ್ದ ಬೈಕ್ ನಲ್ಲಿ ಯುವಜೋಡಿಯ ಜಾಲಿರೈಡ್

ಸಮಗ್ರ ನ್ಯೂಸ್: ಕದ್ದ ಬೈಕೊಂದರಲ್ಲಿ ಯುವ ಜೋಡಿಯೊಂದು ಜಾಲಿರೈಡ್ ನಡೆಸಿರುವ ಘಟನೆ ಬೆಳ್ಯಂಗಡಿ ತಾಲೂಕಿನ ಧರ್ಮಸ್ಥಳದಿಂದ ವರದಿಯಾಗಿದೆ. ಧರ್ಮಸ್ಥಳ ಗ್ರಾಮದ ಖಾಸಗಿ ಬಸ್‌ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿಯೋರ್ವ ನಿಲ್ಲಿಸಿದ್ದ ಬೈಕ್‌ ಕಳ್ಳತನ ಮಾಡಿದ ಘಟನೆ ಡಿ. 16ರಂದು ನಡೆದಿದೆ. ಮೂಡುಬಿದಿರೆ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಶಿಶಿಲ ಗ್ರಾಮದ ಕಂಚಿನಡ್ಕ ನಿವಾಸಿ ಜೀವನ್‌ ಅವರು ಸಂಬಂಧಿಕರ ಮನೆಯಾದ ಧರ್ಮಸ್ಥಳದಿಂದ ಕಾಲೇಜಿಗೆ ತೆರಳುತ್ತಿದ್ದರು. ಡಿ. 16ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ತನ್ನ ಬೈಕ್‌ ಅನ್ನು ನಿಲುಗಡೆಗೊಳಿಸಿ ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನ

ಬೆಳ್ತಂಗಡಿ: ಕದ್ದ ಬೈಕ್ ನಲ್ಲಿ ಯುವಜೋಡಿಯ ಜಾಲಿರೈಡ್ Read More »

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ವಿದ್ಯುತ್ ಸರಿಪಡಿಸುತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರು ತಾಲ್ಲೂಕಿನ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪಡುವನ್ನೂರು ಗ್ರಾಮದ ಪಡುಮಲೆ ಸರ್ಕಾರಿ ಶಾಲಾ ಸಮೀಪದ ನಿವಾಸಿ ಕೃಷ್ಣ ನಾಯ್ಕ್ ಮತ್ತು ಸರಸ್ವತಿ ದಂಪತಿ ಪುತ್ರ, ಪಟ್ಟೆಯ ಪ್ರತಿಭಾ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ರಂಜಿತ್ ಮೃತ ಪಟ್ಟವರು. ರಂಜಿತ್ ಅವರ ಪರಿಚಯದ ಹುಡುಗನೋರ್ವ ತನ್ನ ಮನೆಗೆ ವಿದ್ಯುತ್ ಇಲ್ಲ, ಹಾಗಾಗಿ ಅದನ್ನು ಸರಿಪಡಿಸುವಂತೆ ರಂಜಿತ್ ಅವರನ್ನು

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು Read More »

ಮಂಗಳೂರು: ಶಂಕಿತ ಉಗ್ರ ಶಾರೀಕ್‌ ಬೆಂಗಳೂರಿಗೆ ಶಿಫ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ನನ್ನು ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್‌ ಶಾರೀಕ್‌ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದಾರೆ. ಡಿ.17 ರ ಮುಂಜಾನೆ 6

ಮಂಗಳೂರು: ಶಂಕಿತ ಉಗ್ರ ಶಾರೀಕ್‌ ಬೆಂಗಳೂರಿಗೆ ಶಿಫ್ಟ್ Read More »

ಅಸ್ಸಾಂ ಕಾರ್ಮಿಕರಿಂದ ಕಾಫಿತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ

ಸಮಗ್ರ ನ್ಯೂಸ್: ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ‌ ಹಲ್ಲೆಗೆ ಯತ್ನಿಸಿದ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್ ನಲ್ಲಿ‌ ನಡೆದಿದೆ. ಹ್ಯಾರೀಸ್ ಎಸ್ಟೇಟ್ ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ ಮೇಲೆ ಅವರ ತೋಟದ ಅಸ್ಸಾಂ ಕಾರ್ಮಿಕರು ಹಲ್ಲೆ ನಡೆಸಲು ಮುಂದಾಗಿದ್ದರು. ಈ ಬಗ್ಗೆ ಅಜ್ಘರ್ ಅಹಮ್ಮದ್ ಅವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಬಣಕಲ್‌ ಪೊಲೀಸರು ಈ ಬಗ್ಗೆ ತನಿಖೆ‌ ಕೈಗೊಂಡಿದ್ದಾರೆ.

ಅಸ್ಸಾಂ ಕಾರ್ಮಿಕರಿಂದ ಕಾಫಿತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ Read More »

ಮಂಗಳೂರು: ಸಿನಿಮಾ ನೋಡಲು ಬಂದ ಭಿನ್ನಕೋಮಿನ ಜೋಡಿಗೆ ತಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ ಗಿರಿ ಮತ್ತೆ ಮುಂದುವರೆದಿದೆ. ಜಿಲ್ಲೆಯಲ್ಲಿ ಸಿನಿಮಾ ವೀಕ್ಷಿಸಲು ಬಂದಿದ್ದ ಅನ್ಯಕೋಮಿನ ಜೋಡಿಗೆ ತಡೆ ಹಿಡಿದಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಭಾತರ್‌ ಚಿತ್ರಮಂದಿರದ ಬಳಿ ಘಟನೆ ನಡೆದಿದೆ. ಅನ್ಯಕೋಮಿನ ಜೋಡಿಯನ್ನು ತಡೆದು ಬಜರಂಗದಳ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಹೀಗಾಗಿ ಉರ್ವಾ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಈ ವೇಳೆ ಮಂಗಳೂರಿನ ಉರ್ವಾ ಠಾಣೆ ಪೊಲೀಸರಿಂದ ಆ ಜೋಡಿಯ ರಕ್ಷಣೆ ಮಾಡಿದ್ದಾರೆ. ಕೂಡಲೇ ಆ

ಮಂಗಳೂರು: ಸಿನಿಮಾ ನೋಡಲು ಬಂದ ಭಿನ್ನಕೋಮಿನ ಜೋಡಿಗೆ ತಡೆ Read More »

ಬಂಟ್ವಾಳ: ಖಾಸಗಿ ಬಸ್ ಗಳ‌ ಮುಖಾಮುಖಿ ಡಿಕ್ಕಿ| 8 ಮಂದಿಗೆ ಗಾಯ

ಸಮಗ್ರ ನ್ಯೂಸ್: ಖಾಸಗಿ ಬಸ್ ಗಳು ಮುಖಾಮುಖಿ ಢಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿರೋಡಿನ ನೇತ್ರಾವತಿ ಸೇತುವೆ ಬಳಿ ಶನಿವಾರ (ಡಿ.17) ಬೆಳಿಗ್ಗೆ ನಡೆದಿದೆ. ಬಿ.ಸಿರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ.

ಬಂಟ್ವಾಳ: ಖಾಸಗಿ ಬಸ್ ಗಳ‌ ಮುಖಾಮುಖಿ ಡಿಕ್ಕಿ| 8 ಮಂದಿಗೆ ಗಾಯ Read More »

ಬೀದಿನಾಯಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ| ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಮೈದಾನವೊಂದರಲ್ಲಿ ಹೆಣ್ಣು ಬೀದಿ ನಾಯಿಯ ಮೇಲೆ ಅತ್ಯಾಚಾರ ನಡೆಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಘಟನೆ ನಾಗ್ಪುರದ ಶಾಹು ನಗರದಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಾಯಿಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದ ಆರೋಪಿ ಮಧ್ಯಪ್ರದೇಶ ರಾಜ್ಯದ ಬಾಲಘಾಟ್ ಜಿಲ್ಲೆಯವನಾಗಿದ್ದು, ನಾಗ್ಪುರದಲ್ಲಿ ಕೂಲಿ ಕೆಲಸವನ್ನು ಮಾಡುತ್ತಿದ್ದ ಎಂದು ಹುದಕೇಶ್ವರ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲಲಿತ್ ವರ್ಟಿಕರ್ ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಮೇಲಿನ ತಡೆ ಕಾಯ್ದೆಯಡಿ 377(ಅನೈಸರ್ಗಿಕ

ಬೀದಿನಾಯಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ| ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Read More »